Homeಕರ್ನಾಟಕದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

ದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

- Advertisement -
- Advertisement -

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಪ್ರಕ್ರಿಯೆ ಪ್ರಸ್ತುತ ಒಂದು ಹಂತಕ್ಕೆ ಬಂದಿದೆ; ಈ ವಿಷಯ ಪರಿಹಾರದ ಬಳಿಕ ಹೊಸ ತಲೆಮಾರು ದಲಿತ ಚಳುವಳಿಯನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದು ಪ್ರೊ. ನಟರಾಜ್ ಹುಳಿಯಾರ್ ಕರೆಕೊಟ್ಟರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಪ್ರೊ. ಬಿ.ಕೃಷ್ಣಪ್ಪ ಅವರ 88ನೇ ಜನ್ಮದಿನದ ಪ್ರಯುಕ್ತ ನಡೆದ ‘ನಾಗರಿಕ ಹಕ್ಕು ರಕ್ಷಣಾ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ. ಬಿ.ಕೃಷ್ಣಪ್ಪ ಅವರು ಟೀಚರ್ ಆಗಿ ಚಳವಳಿ ಹೇಗೆ ನಡೆಸಬೇಕು ಎಂದು ಒಂದು ಮಾದರಿ ಹಾಕಿಕೊಟ್ಟರು. ಕನ್ನಡ ಸಾಹಿತ್ಯದಲ್ಲಿ ದಲಿತ ವಿಮರ್ಶೆ ಹೇಗಿರಬೇಕು? ವಿದ್ಯಾರ್ಥಿಗಳ ನಡುವೆ ಚಳವಳಿ ಹೇಗೆ ಕಟ್ಟಬೇಕು ಎಂದು ಹೇಳಿಕೊಟ್ಟರು. ಇಂದು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಕೃಷ್ಣಪ್ಪ ಅವರ ಮಾದರಿ ನಮ್ಮ ಎದುರಿಗಿದೆ. ದಲಿತ ಚಳವಳಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಅವರ ಮಾದರಿ ಹಬ್ಬಿದೆ ಎಂದರು.

ಭದ್ರಾವತಿಯಲ್ಲಿ ವಿಎಸ್ಎನ್ಎಲ್ ಕಾರ್ಖಾನೆಯಲ್ಲಿ ದಲಿತ ನೌಕರರಿಗೆ ಪ್ರತ್ಯೇಕ ಚಹಾ ನೀಡಲಾಗುತ್ತಿತ್ತು. ಪ್ರಬಲ ಜಾತಿ ನೌಕರರೊಬ್ಬರು ಬಂದು ಎಲ್ಲರಿಗೂ ಚಹಾ ನೀಡಬೇಕಾಗಿತ್ತು. ಅದನ್ನು ವಿರೋಧಿಸುವ ಮೂಲಕ  ಹೋರಾಟ ಕಟ್ಟಿದರು. ಅಲ್ಲಿಂದ ಅವರು ಅಸ್ಪೃಶ್ಯತೆ ವಿರೋಧಿ ಹೋರಾಟಕ್ಕೆ ಚಾಲನೆ ಕೊಟ್ಟರು. 70ರ ದಶಕದಲ್ಲಿ ಕೃಷ್ಣಪ್ಪ ಅವರು ಸಮಾಜ ಕಲ್ಯಾಣ ಇಲಾಖೆ ಕೆಲಸದ ಬಗ್ಗೆ ಹಾಗೂ ರಾಜ್ಯ ಬಜೆಟ್ ಬಗ್ಗೆ ಚರ್ಚೆ ಮಾಡುತ್ತಿದ್ದರು. ಸಮಾಜ ಕಲ್ಯಾಣ ಇಲಾಖೆ ಏನೆಲ್ಲಾ ಮಾಡಬೇಕು ಎಂದು ಸಲಹೆ ಕೊಡುತ್ತಿದ್ದರು. ಅಂದು ಕೃಷ್ಣಪ್ಪ ಅವರು ಮಾಡಿದ ಹೋರಾಟದ ಪರಿಣಾಮವಾಗಿ ಸರ್ಕಾರ ಈಗ ದಲಿತರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಹಣ ಮೀಸಲಿಟ್ಟಿದೆ ಎಂದು ಹೇಳಿದರು.

ಕೃಷ್ಣಪ್ಪ ಅವರ ಹೋರಾಟದ ಫಲದಿಂದ ಇಂದು ದಲಿತರ ಭೂಮಿ ಪರಭಾರೆ ಬಗ್ಗೆ ಕಾನೂನಾಗಿದೆ. ಕೃಷ್ಣಪ್ಪ ಅವರ ಗತಕಾಲವನ್ನು ನೆನೆಪಿಸಿಕೊಂಡು ನಾವು ಇಂದು ವಿಷಾದ ವ್ಯಕ್ತಪಡಿಸುತ್ತಿದ್ದೇವೆ. ದಲಿತ ಚಳವಳಿಗೆ ಸಾಹಿತಿಗಳು, ಬರಹಗಾರರು, ಶಿಕ್ಷಕರು, ರಾಜಕಾರಣಿಗಳು ಸೇರಿದಂತೆ ಎಲ್ಲ ವಲಯದಿಂದ ಪ್ರತಿನಿಧಿಗಳು ಇದ್ದರು. ಇಂದು ದಲಿತ ಚಳವಳಿಗೆ ಅವರೆಲ್ಲರ ಸಂಪರ್ಕ ಕಡಿಮೆಯಾಗಿದೆ. ದಲಿತ ಚಳವಳಿಗೆ ವಿವಿಧ ವಲಯಗಳಿಂದ ಬರುತ್ತಿದ್ದ ಬೆಂಬಲ ಕ್ಷೀಣಿಸಿದೆ. ದಲಿತ ಚಳವಳಿಗೆ ಕೃಷ್ಣಪ್ಪ ಅವರು ಕೊಟ್ಟ ನುಡಿಗಟ್ಟುಗಳು ಈಗಲೂ ನಮ್ಮ ಬಳಿಯಲ್ಲಿ ಇದೆ; ಎಲ್ಲ ವಲಯಗಳ ಬುದ್ದಿಜೀವಿಗಳು ದಲಿತ ಚಳವಳಿ ಜೊತೆಗೆ ಸೇರಬೇಕು. ಏಕೆಂದರೆ, ಅಮೆರಿಕದಲ್ಲಿ ಒಬಾಮ ಎರಡು ಅವಧಿಗೆ ಅಧ್ಯಕ್ಷರಾಗಲೂ ಇದೇ ಕಾರಣ. ಅಲ್ಲಿನ ಸಾಂಸ್ಕೃತಿಕ ಅಧಿಕಾರದಿಂದ ಇದು ಸಾಧ್ಯವಾಯಿತು. ಸಿನಿಮಾ, ಹಾಡುಗಾರರು, ಬರಹಗಾರರು ಸೇರಿದಂತೆ ಎಲ್ಲರೂ ಕಪ್ಪು ಜನರ ಬಗ್ಗೆ ಮಾತನಾಡಿದರು ಎಂದರು.

ನಾವು ಅಂಬೇಡ್ಕರ್‌ವಾದವನ್ನು ಪ್ರಚಾರ ಮಾಡಬೇಕು. ಅಂಬೇಡ್ಕರ್ ಅವರ ವೈಚಾರಿಕತೆ ಸಮಾಜದಲ್ಲಿ ಹಬ್ಬದ ಕಾರಣಕ್ಕೆ ಇಂದು ದೇಶದಲ್ಲಿ ಹಲವೆಡೆ ಕಾಲ್ತುಳಿತ ಆಗುತ್ತಿದೆ. ಅಂಬೇಡ್ಕರ್ ಅವರ ಜಾತಿ ವಿನಾಶದ ಮಾದರಿಯನ್ನು ಮರೆತಿರುವ ನಾವು, ಜಾತಿ ಉಪಜಾತಿಗಳನ್ನು ಪೋಷಿಸಿಕೊಂಡು ಹೋಗುತ್ತಿದ್ದೇವೆ. ಜಾತಿ ಪ್ರಜ್ಞೆಯನ್ನು ನಾವು ನಮ್ಮ ತಲೆಯಿಂದ ಹೋಗಲಾಡಿಸಬೇಕು. ಜಾತಿ ಇಂದು ಎಲ್ಲವನ್ನೂ ನಿಯಂತ್ರಣ ಮಾಡುತ್ತಿದೆ. ಊಳಿಗಮಾನ್ಯ ಜಾತಿ ಹಾಗೂ ಪಕ್ಷಗಳು ದಲಿತ ರಾಜಕಾರಣಿಗಳ ವಿರುದ್ಧ ಮಾತನಾಡಲು ದಲಿತ ರಾಜಕಾರಣಿಗೇ ಸುಪಾರಿ ನೀಡುತ್ತಿವೆ. ಅದಕ್ಕೆ ನಮ್ಮ ಮಾಧ್ಯಮಗಳೂ ಹೆಚ್ಚು ಪ್ರಚಾರ ಕೊಡುತ್ತಿವೆ ಎಂದು ಹೇಳಿದರು.

ದಲಿತ ಚಳವಳಿಯ ಯುಜನರಿಗೆ ನನ್ನದೊಂದು ಸಲಹೆ. ಒಳ ಮೀಸಲಾತಿ ಜಾರಿ ಪ್ರಕ್ರಿಯೆ ಒಂದು ಹಂತಕ್ಕೆ ಬಂದಿದೆ. ಅದು ಪರಿಹಾರ ಆದ ನಂತರ ಹೊಸ ತಲೆಮಾರು ದಲಿತ ಚಳುವಳಿಯನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದರು ಕಿವಿಮಾತು ಹೇಳಿದರು.

ಸಿದ್ಧಾಂತಗಳಿಗೆ ಮಾತ್ರ ಜಗತ್ತು ಬದಲಿಸುವ ಶಕ್ತಿ ಇದೆ

ಯಾವ ಬಾಂಬು-ಬಂದೂಕಿಗೂ ಜಗತ್ತನ್ನು ಬದಲಾಯಿಸುವ ಶಕ್ತಿ ಇಲ್ಲ. ಗಟ್ಟಿ ಸಿದ್ಧಾಂತಗಳಿಗೆ ಮಾತ್ರ ಆ ಶಕ್ತಿ ಇದೆ ಎಂದು ಚಿಂತಕರು ಹಾಗೂ ಮುಖ್ಯಮಂತ್ರಿಗಳ ಆಪ್ತ ಕಾರ್ಯರ್ಶಿಗಳಾದ ಡಾ. ಎನ್.ವೆಂಕಟೇಶಯ್ಯ ಪ್ರತಿಪಾದಿಸಿದರು.

ಅಂಬೇಡ್ಕರ್‌ವಾದ ವಿಶೇಷಾಂಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, “ದಲಿತ ಚಳವಳಿಗೆ ಈಗ 51 ವರ್ಷ ತುಂಬುತ್ತಿದೆ. ಜಗತ್ತನ್ನು ಬದಲಾಯಿಸುವ ಶಕ್ತಿ ಗಟ್ಟಿ ಸಿದ್ಧಾಂತಗಳಿಗೆ ಮಾತ್ರ ಇದೆ. ಯಾವುದೇ ಬಾಂಬು-ಬಂದೂಕುಗಳಿಗೆ ಅಲ್ಲ. ಸಿದ್ಧಾಂತವು ಮನುಷ್ಯ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಸಿದ್ಧಾಂತವು ಸಮಾಜದ ಬದಲಾವಣೆಗೆ ಸದಾ ಶ್ರಮಿಸುತ್ತದೆ; ಇಲ್ಲದಿದ್ದರೆ ಆ ಸಿದ್ದಾಂತ ಜೀವಂತ ಇರುವುದಿಲ್ಲ ಎಂದರು.

ಕೃಷ್ಣಪ್ಪ ಅವರ ಹೋರಾಟದ ಮಾರ್ಗಗಳು ಭೂಮಿ, ವಸತಿ ಶಾಲೆ, ಮೂಢನಂಬಿಕೆ ಮತ್ತು ಅಸ್ಪೃಶ್ಯತೆ ವಿರೊಧಿಯಾಗಿತ್ತು. ಅವರು ಪ್ರಮುಖವಾಗಿ ನಾಲ್ಕೈದು ಹೋರಾಟಗಳನ್ನು ರೂಪಿಸಿದರು. 70ರ ದಶಕದಲ್ಲಿ ಅವರು ನಡೆಸಿದ ಭೂಮಿ ಹೋರಾಟದಿಂದ ಇಂದು ಲಕ್ಷಾಂತರ ಜನ ಭೂ ಹಿಡುವಳಿದಾರರಾಗಿದ್ದಾರೆ; ಅದರಲ್ಲಿ ಬಹುತೇಕರು ದಲಿತರಿದ್ದಾರೆ. ‘ಹೆಂಡ ಬೇಡ, ವಸತಿ ಶಾಲೆ ಕೊಡಿ’ ಎಂಬ ಚಳವಳಿಯಿಂದ ಇಂದು ಇಡೀ ದೇಶದಲ್ಲೇ ಕರ್ನಾಟಕದಲ್ಲಿ ಮಾತ್ರ 8.35 ಲಕ್ಷ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿ ಕಲಿಯುತ್ತಿದ್ದಾರೆ. ವಿಶೇಷವೆಂದರೆ ಈ ಶಾಲೆಗಳಲ್ಲಿ ಫಲಿತಾಂಶ ಕೂಡ ಉತ್ತಮವಾಗಿದೆ. ವಸತಿ ಶಾಲೆಗಳಲ್ಲಿ ಓದಿದ ಮಕ್ಕಳು ಇಂದು ಐಎಎಸ್-ಐಪಿಎಸ್ ಆಗಿದ್ದಾರೆ. ಶೇ.98ರಷ್ಟು ಮಕ್ಕಳು ಪ್ರತಿವರ್ಷ ಉತ್ತೀರ್ಣರಾಗುತ್ತಿದ್ದಾರೆ. ದಲಿತ ಚಳವಳಿ ಮತ್ತು ಕೃಷ್ಣಪ್ಪ ಅವರ ಮುಂದಾಲೋಚನೆಗಳೇ ಇದಕ್ಕೆಲ್ಲಾ ಕಾರಣ. ಅಂದರೆ ಒಂದು ಗಟ್ಟಿ ಸಿದ್ಧಾಂತದಿಂದ ಮಾತ್ರ ಇದೆಲ್ಲ ಸಾಧ್ಯ” ಎಂದರು.

ಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...