Homeಕರ್ನಾಟಕದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

ದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

- Advertisement -
- Advertisement -

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಪ್ರಕ್ರಿಯೆ ಪ್ರಸ್ತುತ ಒಂದು ಹಂತಕ್ಕೆ ಬಂದಿದೆ; ಈ ವಿಷಯ ಪರಿಹಾರದ ಬಳಿಕ ಹೊಸ ತಲೆಮಾರು ದಲಿತ ಚಳುವಳಿಯನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದು ಪ್ರೊ. ನಟರಾಜ್ ಹುಳಿಯಾರ್ ಕರೆಕೊಟ್ಟರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಪ್ರೊ. ಬಿ.ಕೃಷ್ಣಪ್ಪ ಅವರ 88ನೇ ಜನ್ಮದಿನದ ಪ್ರಯುಕ್ತ ನಡೆದ ‘ನಾಗರಿಕ ಹಕ್ಕು ರಕ್ಷಣಾ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ. ಬಿ.ಕೃಷ್ಣಪ್ಪ ಅವರು ಟೀಚರ್ ಆಗಿ ಚಳವಳಿ ಹೇಗೆ ನಡೆಸಬೇಕು ಎಂದು ಒಂದು ಮಾದರಿ ಹಾಕಿಕೊಟ್ಟರು. ಕನ್ನಡ ಸಾಹಿತ್ಯದಲ್ಲಿ ದಲಿತ ವಿಮರ್ಶೆ ಹೇಗಿರಬೇಕು? ವಿದ್ಯಾರ್ಥಿಗಳ ನಡುವೆ ಚಳವಳಿ ಹೇಗೆ ಕಟ್ಟಬೇಕು ಎಂದು ಹೇಳಿಕೊಟ್ಟರು. ಇಂದು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಕೃಷ್ಣಪ್ಪ ಅವರ ಮಾದರಿ ನಮ್ಮ ಎದುರಿಗಿದೆ. ದಲಿತ ಚಳವಳಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಅವರ ಮಾದರಿ ಹಬ್ಬಿದೆ ಎಂದರು.

ಭದ್ರಾವತಿಯಲ್ಲಿ ವಿಎಸ್ಎನ್ಎಲ್ ಕಾರ್ಖಾನೆಯಲ್ಲಿ ದಲಿತ ನೌಕರರಿಗೆ ಪ್ರತ್ಯೇಕ ಚಹಾ ನೀಡಲಾಗುತ್ತಿತ್ತು. ಪ್ರಬಲ ಜಾತಿ ನೌಕರರೊಬ್ಬರು ಬಂದು ಎಲ್ಲರಿಗೂ ಚಹಾ ನೀಡಬೇಕಾಗಿತ್ತು. ಅದನ್ನು ವಿರೋಧಿಸುವ ಮೂಲಕ  ಹೋರಾಟ ಕಟ್ಟಿದರು. ಅಲ್ಲಿಂದ ಅವರು ಅಸ್ಪೃಶ್ಯತೆ ವಿರೋಧಿ ಹೋರಾಟಕ್ಕೆ ಚಾಲನೆ ಕೊಟ್ಟರು. 70ರ ದಶಕದಲ್ಲಿ ಕೃಷ್ಣಪ್ಪ ಅವರು ಸಮಾಜ ಕಲ್ಯಾಣ ಇಲಾಖೆ ಕೆಲಸದ ಬಗ್ಗೆ ಹಾಗೂ ರಾಜ್ಯ ಬಜೆಟ್ ಬಗ್ಗೆ ಚರ್ಚೆ ಮಾಡುತ್ತಿದ್ದರು. ಸಮಾಜ ಕಲ್ಯಾಣ ಇಲಾಖೆ ಏನೆಲ್ಲಾ ಮಾಡಬೇಕು ಎಂದು ಸಲಹೆ ಕೊಡುತ್ತಿದ್ದರು. ಅಂದು ಕೃಷ್ಣಪ್ಪ ಅವರು ಮಾಡಿದ ಹೋರಾಟದ ಪರಿಣಾಮವಾಗಿ ಸರ್ಕಾರ ಈಗ ದಲಿತರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಹಣ ಮೀಸಲಿಟ್ಟಿದೆ ಎಂದು ಹೇಳಿದರು.

ಕೃಷ್ಣಪ್ಪ ಅವರ ಹೋರಾಟದ ಫಲದಿಂದ ಇಂದು ದಲಿತರ ಭೂಮಿ ಪರಭಾರೆ ಬಗ್ಗೆ ಕಾನೂನಾಗಿದೆ. ಕೃಷ್ಣಪ್ಪ ಅವರ ಗತಕಾಲವನ್ನು ನೆನೆಪಿಸಿಕೊಂಡು ನಾವು ಇಂದು ವಿಷಾದ ವ್ಯಕ್ತಪಡಿಸುತ್ತಿದ್ದೇವೆ. ದಲಿತ ಚಳವಳಿಗೆ ಸಾಹಿತಿಗಳು, ಬರಹಗಾರರು, ಶಿಕ್ಷಕರು, ರಾಜಕಾರಣಿಗಳು ಸೇರಿದಂತೆ ಎಲ್ಲ ವಲಯದಿಂದ ಪ್ರತಿನಿಧಿಗಳು ಇದ್ದರು. ಇಂದು ದಲಿತ ಚಳವಳಿಗೆ ಅವರೆಲ್ಲರ ಸಂಪರ್ಕ ಕಡಿಮೆಯಾಗಿದೆ. ದಲಿತ ಚಳವಳಿಗೆ ವಿವಿಧ ವಲಯಗಳಿಂದ ಬರುತ್ತಿದ್ದ ಬೆಂಬಲ ಕ್ಷೀಣಿಸಿದೆ. ದಲಿತ ಚಳವಳಿಗೆ ಕೃಷ್ಣಪ್ಪ ಅವರು ಕೊಟ್ಟ ನುಡಿಗಟ್ಟುಗಳು ಈಗಲೂ ನಮ್ಮ ಬಳಿಯಲ್ಲಿ ಇದೆ; ಎಲ್ಲ ವಲಯಗಳ ಬುದ್ದಿಜೀವಿಗಳು ದಲಿತ ಚಳವಳಿ ಜೊತೆಗೆ ಸೇರಬೇಕು. ಏಕೆಂದರೆ, ಅಮೆರಿಕದಲ್ಲಿ ಒಬಾಮ ಎರಡು ಅವಧಿಗೆ ಅಧ್ಯಕ್ಷರಾಗಲೂ ಇದೇ ಕಾರಣ. ಅಲ್ಲಿನ ಸಾಂಸ್ಕೃತಿಕ ಅಧಿಕಾರದಿಂದ ಇದು ಸಾಧ್ಯವಾಯಿತು. ಸಿನಿಮಾ, ಹಾಡುಗಾರರು, ಬರಹಗಾರರು ಸೇರಿದಂತೆ ಎಲ್ಲರೂ ಕಪ್ಪು ಜನರ ಬಗ್ಗೆ ಮಾತನಾಡಿದರು ಎಂದರು.

ನಾವು ಅಂಬೇಡ್ಕರ್‌ವಾದವನ್ನು ಪ್ರಚಾರ ಮಾಡಬೇಕು. ಅಂಬೇಡ್ಕರ್ ಅವರ ವೈಚಾರಿಕತೆ ಸಮಾಜದಲ್ಲಿ ಹಬ್ಬದ ಕಾರಣಕ್ಕೆ ಇಂದು ದೇಶದಲ್ಲಿ ಹಲವೆಡೆ ಕಾಲ್ತುಳಿತ ಆಗುತ್ತಿದೆ. ಅಂಬೇಡ್ಕರ್ ಅವರ ಜಾತಿ ವಿನಾಶದ ಮಾದರಿಯನ್ನು ಮರೆತಿರುವ ನಾವು, ಜಾತಿ ಉಪಜಾತಿಗಳನ್ನು ಪೋಷಿಸಿಕೊಂಡು ಹೋಗುತ್ತಿದ್ದೇವೆ. ಜಾತಿ ಪ್ರಜ್ಞೆಯನ್ನು ನಾವು ನಮ್ಮ ತಲೆಯಿಂದ ಹೋಗಲಾಡಿಸಬೇಕು. ಜಾತಿ ಇಂದು ಎಲ್ಲವನ್ನೂ ನಿಯಂತ್ರಣ ಮಾಡುತ್ತಿದೆ. ಊಳಿಗಮಾನ್ಯ ಜಾತಿ ಹಾಗೂ ಪಕ್ಷಗಳು ದಲಿತ ರಾಜಕಾರಣಿಗಳ ವಿರುದ್ಧ ಮಾತನಾಡಲು ದಲಿತ ರಾಜಕಾರಣಿಗೇ ಸುಪಾರಿ ನೀಡುತ್ತಿವೆ. ಅದಕ್ಕೆ ನಮ್ಮ ಮಾಧ್ಯಮಗಳೂ ಹೆಚ್ಚು ಪ್ರಚಾರ ಕೊಡುತ್ತಿವೆ ಎಂದು ಹೇಳಿದರು.

ದಲಿತ ಚಳವಳಿಯ ಯುಜನರಿಗೆ ನನ್ನದೊಂದು ಸಲಹೆ. ಒಳ ಮೀಸಲಾತಿ ಜಾರಿ ಪ್ರಕ್ರಿಯೆ ಒಂದು ಹಂತಕ್ಕೆ ಬಂದಿದೆ. ಅದು ಪರಿಹಾರ ಆದ ನಂತರ ಹೊಸ ತಲೆಮಾರು ದಲಿತ ಚಳುವಳಿಯನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದರು ಕಿವಿಮಾತು ಹೇಳಿದರು.

ಸಿದ್ಧಾಂತಗಳಿಗೆ ಮಾತ್ರ ಜಗತ್ತು ಬದಲಿಸುವ ಶಕ್ತಿ ಇದೆ

ಯಾವ ಬಾಂಬು-ಬಂದೂಕಿಗೂ ಜಗತ್ತನ್ನು ಬದಲಾಯಿಸುವ ಶಕ್ತಿ ಇಲ್ಲ. ಗಟ್ಟಿ ಸಿದ್ಧಾಂತಗಳಿಗೆ ಮಾತ್ರ ಆ ಶಕ್ತಿ ಇದೆ ಎಂದು ಚಿಂತಕರು ಹಾಗೂ ಮುಖ್ಯಮಂತ್ರಿಗಳ ಆಪ್ತ ಕಾರ್ಯರ್ಶಿಗಳಾದ ಡಾ. ಎನ್.ವೆಂಕಟೇಶಯ್ಯ ಪ್ರತಿಪಾದಿಸಿದರು.

ಅಂಬೇಡ್ಕರ್‌ವಾದ ವಿಶೇಷಾಂಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, “ದಲಿತ ಚಳವಳಿಗೆ ಈಗ 51 ವರ್ಷ ತುಂಬುತ್ತಿದೆ. ಜಗತ್ತನ್ನು ಬದಲಾಯಿಸುವ ಶಕ್ತಿ ಗಟ್ಟಿ ಸಿದ್ಧಾಂತಗಳಿಗೆ ಮಾತ್ರ ಇದೆ. ಯಾವುದೇ ಬಾಂಬು-ಬಂದೂಕುಗಳಿಗೆ ಅಲ್ಲ. ಸಿದ್ಧಾಂತವು ಮನುಷ್ಯ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಸಿದ್ಧಾಂತವು ಸಮಾಜದ ಬದಲಾವಣೆಗೆ ಸದಾ ಶ್ರಮಿಸುತ್ತದೆ; ಇಲ್ಲದಿದ್ದರೆ ಆ ಸಿದ್ದಾಂತ ಜೀವಂತ ಇರುವುದಿಲ್ಲ ಎಂದರು.

ಕೃಷ್ಣಪ್ಪ ಅವರ ಹೋರಾಟದ ಮಾರ್ಗಗಳು ಭೂಮಿ, ವಸತಿ ಶಾಲೆ, ಮೂಢನಂಬಿಕೆ ಮತ್ತು ಅಸ್ಪೃಶ್ಯತೆ ವಿರೊಧಿಯಾಗಿತ್ತು. ಅವರು ಪ್ರಮುಖವಾಗಿ ನಾಲ್ಕೈದು ಹೋರಾಟಗಳನ್ನು ರೂಪಿಸಿದರು. 70ರ ದಶಕದಲ್ಲಿ ಅವರು ನಡೆಸಿದ ಭೂಮಿ ಹೋರಾಟದಿಂದ ಇಂದು ಲಕ್ಷಾಂತರ ಜನ ಭೂ ಹಿಡುವಳಿದಾರರಾಗಿದ್ದಾರೆ; ಅದರಲ್ಲಿ ಬಹುತೇಕರು ದಲಿತರಿದ್ದಾರೆ. ‘ಹೆಂಡ ಬೇಡ, ವಸತಿ ಶಾಲೆ ಕೊಡಿ’ ಎಂಬ ಚಳವಳಿಯಿಂದ ಇಂದು ಇಡೀ ದೇಶದಲ್ಲೇ ಕರ್ನಾಟಕದಲ್ಲಿ ಮಾತ್ರ 8.35 ಲಕ್ಷ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿ ಕಲಿಯುತ್ತಿದ್ದಾರೆ. ವಿಶೇಷವೆಂದರೆ ಈ ಶಾಲೆಗಳಲ್ಲಿ ಫಲಿತಾಂಶ ಕೂಡ ಉತ್ತಮವಾಗಿದೆ. ವಸತಿ ಶಾಲೆಗಳಲ್ಲಿ ಓದಿದ ಮಕ್ಕಳು ಇಂದು ಐಎಎಸ್-ಐಪಿಎಸ್ ಆಗಿದ್ದಾರೆ. ಶೇ.98ರಷ್ಟು ಮಕ್ಕಳು ಪ್ರತಿವರ್ಷ ಉತ್ತೀರ್ಣರಾಗುತ್ತಿದ್ದಾರೆ. ದಲಿತ ಚಳವಳಿ ಮತ್ತು ಕೃಷ್ಣಪ್ಪ ಅವರ ಮುಂದಾಲೋಚನೆಗಳೇ ಇದಕ್ಕೆಲ್ಲಾ ಕಾರಣ. ಅಂದರೆ ಒಂದು ಗಟ್ಟಿ ಸಿದ್ಧಾಂತದಿಂದ ಮಾತ್ರ ಇದೆಲ್ಲ ಸಾಧ್ಯ” ಎಂದರು.

ಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...

ಮಹಾರಾಷ್ಟ್ರವು ಪ್ರಧಾನಿ ಮೋದಿಯನ್ನು ಹೆಚ್ಚು ಅವಲಂಬಿಸಿದೆ: ಸಿಎಂ ಫಡ್ನವೀಸ್

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಯುತಿ ಭರ್ಜರಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ಜನರಿಗೆ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಜಯವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅರ್ಪಿಸಿದರು. ರಾಜ್ಯವು ಪ್ರಧಾನಿ...

ಮೆಹುಲ್ ಚೋಕ್ಸಿ ಪುತ್ರ ಕೂಡ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ: ಜಾರಿ ನಿರ್ದೇಶನಾಲಯ

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ, ಅವರ ಮಗ ರೋಹನ್ ಚೋಕ್ಸಿ ಕೂಡ ಈ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲ ಬಾರಿಗೆ ಹೇಳಿಕೊಂಡಿದೆ....

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ..’; ಬಿಎಂಸಿ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಎಣಿಕೆ ವೇಗ ಪಡೆಯುತ್ತಿದ್ದಂತೆ, ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ತಮ್ಮ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....

ಪುನರಾಭಿವೃದ್ಧಿ ಹೆಸರಿನಲ್ಲಿ ಮಣಿಕರ್ಣಿಕಾ ಘಾಟ್ ಬಳಿ ದೇಗುಲಗಳ ಧ್ವಂಸ: ಮೋದಿ ವಿರುದ್ಧ ಖರ್ಗೆ ಆಕ್ರೋಶ!

ನವದೆಹಲಿ: ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಪುನರಾಭಿವೃದ್ಧಿ ಕಾರ್ಯದ ಭಾಗವಾಗಿ ಬುಲ್ಡೋಜರ್‌ಗಳನ್ನು ಏಕೆ ಓಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಮತ್ತು ಐತಿಹಾಸಿಕ ಪರಂಪರೆಯ ಅನೇಕ ಸ್ಥಳಗಳನ್ನು ಈ...