Homeಕರ್ನಾಟಕದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

ದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

- Advertisement -
- Advertisement -

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಪ್ರಕ್ರಿಯೆ ಪ್ರಸ್ತುತ ಒಂದು ಹಂತಕ್ಕೆ ಬಂದಿದೆ; ಈ ವಿಷಯ ಪರಿಹಾರದ ಬಳಿಕ ಹೊಸ ತಲೆಮಾರು ದಲಿತ ಚಳುವಳಿಯನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದು ಪ್ರೊ. ನಟರಾಜ್ ಹುಳಿಯಾರ್ ಕರೆಕೊಟ್ಟರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಪ್ರೊ. ಬಿ.ಕೃಷ್ಣಪ್ಪ ಅವರ 88ನೇ ಜನ್ಮದಿನದ ಪ್ರಯುಕ್ತ ನಡೆದ ‘ನಾಗರಿಕ ಹಕ್ಕು ರಕ್ಷಣಾ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ. ಬಿ.ಕೃಷ್ಣಪ್ಪ ಅವರು ಟೀಚರ್ ಆಗಿ ಚಳವಳಿ ಹೇಗೆ ನಡೆಸಬೇಕು ಎಂದು ಒಂದು ಮಾದರಿ ಹಾಕಿಕೊಟ್ಟರು. ಕನ್ನಡ ಸಾಹಿತ್ಯದಲ್ಲಿ ದಲಿತ ವಿಮರ್ಶೆ ಹೇಗಿರಬೇಕು? ವಿದ್ಯಾರ್ಥಿಗಳ ನಡುವೆ ಚಳವಳಿ ಹೇಗೆ ಕಟ್ಟಬೇಕು ಎಂದು ಹೇಳಿಕೊಟ್ಟರು. ಇಂದು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಕೃಷ್ಣಪ್ಪ ಅವರ ಮಾದರಿ ನಮ್ಮ ಎದುರಿಗಿದೆ. ದಲಿತ ಚಳವಳಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಅವರ ಮಾದರಿ ಹಬ್ಬಿದೆ ಎಂದರು.

ಭದ್ರಾವತಿಯಲ್ಲಿ ವಿಎಸ್ಎನ್ಎಲ್ ಕಾರ್ಖಾನೆಯಲ್ಲಿ ದಲಿತ ನೌಕರರಿಗೆ ಪ್ರತ್ಯೇಕ ಚಹಾ ನೀಡಲಾಗುತ್ತಿತ್ತು. ಪ್ರಬಲ ಜಾತಿ ನೌಕರರೊಬ್ಬರು ಬಂದು ಎಲ್ಲರಿಗೂ ಚಹಾ ನೀಡಬೇಕಾಗಿತ್ತು. ಅದನ್ನು ವಿರೋಧಿಸುವ ಮೂಲಕ  ಹೋರಾಟ ಕಟ್ಟಿದರು. ಅಲ್ಲಿಂದ ಅವರು ಅಸ್ಪೃಶ್ಯತೆ ವಿರೋಧಿ ಹೋರಾಟಕ್ಕೆ ಚಾಲನೆ ಕೊಟ್ಟರು. 70ರ ದಶಕದಲ್ಲಿ ಕೃಷ್ಣಪ್ಪ ಅವರು ಸಮಾಜ ಕಲ್ಯಾಣ ಇಲಾಖೆ ಕೆಲಸದ ಬಗ್ಗೆ ಹಾಗೂ ರಾಜ್ಯ ಬಜೆಟ್ ಬಗ್ಗೆ ಚರ್ಚೆ ಮಾಡುತ್ತಿದ್ದರು. ಸಮಾಜ ಕಲ್ಯಾಣ ಇಲಾಖೆ ಏನೆಲ್ಲಾ ಮಾಡಬೇಕು ಎಂದು ಸಲಹೆ ಕೊಡುತ್ತಿದ್ದರು. ಅಂದು ಕೃಷ್ಣಪ್ಪ ಅವರು ಮಾಡಿದ ಹೋರಾಟದ ಪರಿಣಾಮವಾಗಿ ಸರ್ಕಾರ ಈಗ ದಲಿತರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಹಣ ಮೀಸಲಿಟ್ಟಿದೆ ಎಂದು ಹೇಳಿದರು.

ಕೃಷ್ಣಪ್ಪ ಅವರ ಹೋರಾಟದ ಫಲದಿಂದ ಇಂದು ದಲಿತರ ಭೂಮಿ ಪರಭಾರೆ ಬಗ್ಗೆ ಕಾನೂನಾಗಿದೆ. ಕೃಷ್ಣಪ್ಪ ಅವರ ಗತಕಾಲವನ್ನು ನೆನೆಪಿಸಿಕೊಂಡು ನಾವು ಇಂದು ವಿಷಾದ ವ್ಯಕ್ತಪಡಿಸುತ್ತಿದ್ದೇವೆ. ದಲಿತ ಚಳವಳಿಗೆ ಸಾಹಿತಿಗಳು, ಬರಹಗಾರರು, ಶಿಕ್ಷಕರು, ರಾಜಕಾರಣಿಗಳು ಸೇರಿದಂತೆ ಎಲ್ಲ ವಲಯದಿಂದ ಪ್ರತಿನಿಧಿಗಳು ಇದ್ದರು. ಇಂದು ದಲಿತ ಚಳವಳಿಗೆ ಅವರೆಲ್ಲರ ಸಂಪರ್ಕ ಕಡಿಮೆಯಾಗಿದೆ. ದಲಿತ ಚಳವಳಿಗೆ ವಿವಿಧ ವಲಯಗಳಿಂದ ಬರುತ್ತಿದ್ದ ಬೆಂಬಲ ಕ್ಷೀಣಿಸಿದೆ. ದಲಿತ ಚಳವಳಿಗೆ ಕೃಷ್ಣಪ್ಪ ಅವರು ಕೊಟ್ಟ ನುಡಿಗಟ್ಟುಗಳು ಈಗಲೂ ನಮ್ಮ ಬಳಿಯಲ್ಲಿ ಇದೆ; ಎಲ್ಲ ವಲಯಗಳ ಬುದ್ದಿಜೀವಿಗಳು ದಲಿತ ಚಳವಳಿ ಜೊತೆಗೆ ಸೇರಬೇಕು. ಏಕೆಂದರೆ, ಅಮೆರಿಕದಲ್ಲಿ ಒಬಾಮ ಎರಡು ಅವಧಿಗೆ ಅಧ್ಯಕ್ಷರಾಗಲೂ ಇದೇ ಕಾರಣ. ಅಲ್ಲಿನ ಸಾಂಸ್ಕೃತಿಕ ಅಧಿಕಾರದಿಂದ ಇದು ಸಾಧ್ಯವಾಯಿತು. ಸಿನಿಮಾ, ಹಾಡುಗಾರರು, ಬರಹಗಾರರು ಸೇರಿದಂತೆ ಎಲ್ಲರೂ ಕಪ್ಪು ಜನರ ಬಗ್ಗೆ ಮಾತನಾಡಿದರು ಎಂದರು.

ನಾವು ಅಂಬೇಡ್ಕರ್‌ವಾದವನ್ನು ಪ್ರಚಾರ ಮಾಡಬೇಕು. ಅಂಬೇಡ್ಕರ್ ಅವರ ವೈಚಾರಿಕತೆ ಸಮಾಜದಲ್ಲಿ ಹಬ್ಬದ ಕಾರಣಕ್ಕೆ ಇಂದು ದೇಶದಲ್ಲಿ ಹಲವೆಡೆ ಕಾಲ್ತುಳಿತ ಆಗುತ್ತಿದೆ. ಅಂಬೇಡ್ಕರ್ ಅವರ ಜಾತಿ ವಿನಾಶದ ಮಾದರಿಯನ್ನು ಮರೆತಿರುವ ನಾವು, ಜಾತಿ ಉಪಜಾತಿಗಳನ್ನು ಪೋಷಿಸಿಕೊಂಡು ಹೋಗುತ್ತಿದ್ದೇವೆ. ಜಾತಿ ಪ್ರಜ್ಞೆಯನ್ನು ನಾವು ನಮ್ಮ ತಲೆಯಿಂದ ಹೋಗಲಾಡಿಸಬೇಕು. ಜಾತಿ ಇಂದು ಎಲ್ಲವನ್ನೂ ನಿಯಂತ್ರಣ ಮಾಡುತ್ತಿದೆ. ಊಳಿಗಮಾನ್ಯ ಜಾತಿ ಹಾಗೂ ಪಕ್ಷಗಳು ದಲಿತ ರಾಜಕಾರಣಿಗಳ ವಿರುದ್ಧ ಮಾತನಾಡಲು ದಲಿತ ರಾಜಕಾರಣಿಗೇ ಸುಪಾರಿ ನೀಡುತ್ತಿವೆ. ಅದಕ್ಕೆ ನಮ್ಮ ಮಾಧ್ಯಮಗಳೂ ಹೆಚ್ಚು ಪ್ರಚಾರ ಕೊಡುತ್ತಿವೆ ಎಂದು ಹೇಳಿದರು.

ದಲಿತ ಚಳವಳಿಯ ಯುಜನರಿಗೆ ನನ್ನದೊಂದು ಸಲಹೆ. ಒಳ ಮೀಸಲಾತಿ ಜಾರಿ ಪ್ರಕ್ರಿಯೆ ಒಂದು ಹಂತಕ್ಕೆ ಬಂದಿದೆ. ಅದು ಪರಿಹಾರ ಆದ ನಂತರ ಹೊಸ ತಲೆಮಾರು ದಲಿತ ಚಳುವಳಿಯನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದರು ಕಿವಿಮಾತು ಹೇಳಿದರು.

ಸಿದ್ಧಾಂತಗಳಿಗೆ ಮಾತ್ರ ಜಗತ್ತು ಬದಲಿಸುವ ಶಕ್ತಿ ಇದೆ

ಯಾವ ಬಾಂಬು-ಬಂದೂಕಿಗೂ ಜಗತ್ತನ್ನು ಬದಲಾಯಿಸುವ ಶಕ್ತಿ ಇಲ್ಲ. ಗಟ್ಟಿ ಸಿದ್ಧಾಂತಗಳಿಗೆ ಮಾತ್ರ ಆ ಶಕ್ತಿ ಇದೆ ಎಂದು ಚಿಂತಕರು ಹಾಗೂ ಮುಖ್ಯಮಂತ್ರಿಗಳ ಆಪ್ತ ಕಾರ್ಯರ್ಶಿಗಳಾದ ಡಾ. ಎನ್.ವೆಂಕಟೇಶಯ್ಯ ಪ್ರತಿಪಾದಿಸಿದರು.

ಅಂಬೇಡ್ಕರ್‌ವಾದ ವಿಶೇಷಾಂಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, “ದಲಿತ ಚಳವಳಿಗೆ ಈಗ 51 ವರ್ಷ ತುಂಬುತ್ತಿದೆ. ಜಗತ್ತನ್ನು ಬದಲಾಯಿಸುವ ಶಕ್ತಿ ಗಟ್ಟಿ ಸಿದ್ಧಾಂತಗಳಿಗೆ ಮಾತ್ರ ಇದೆ. ಯಾವುದೇ ಬಾಂಬು-ಬಂದೂಕುಗಳಿಗೆ ಅಲ್ಲ. ಸಿದ್ಧಾಂತವು ಮನುಷ್ಯ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಸಿದ್ಧಾಂತವು ಸಮಾಜದ ಬದಲಾವಣೆಗೆ ಸದಾ ಶ್ರಮಿಸುತ್ತದೆ; ಇಲ್ಲದಿದ್ದರೆ ಆ ಸಿದ್ದಾಂತ ಜೀವಂತ ಇರುವುದಿಲ್ಲ ಎಂದರು.

ಕೃಷ್ಣಪ್ಪ ಅವರ ಹೋರಾಟದ ಮಾರ್ಗಗಳು ಭೂಮಿ, ವಸತಿ ಶಾಲೆ, ಮೂಢನಂಬಿಕೆ ಮತ್ತು ಅಸ್ಪೃಶ್ಯತೆ ವಿರೊಧಿಯಾಗಿತ್ತು. ಅವರು ಪ್ರಮುಖವಾಗಿ ನಾಲ್ಕೈದು ಹೋರಾಟಗಳನ್ನು ರೂಪಿಸಿದರು. 70ರ ದಶಕದಲ್ಲಿ ಅವರು ನಡೆಸಿದ ಭೂಮಿ ಹೋರಾಟದಿಂದ ಇಂದು ಲಕ್ಷಾಂತರ ಜನ ಭೂ ಹಿಡುವಳಿದಾರರಾಗಿದ್ದಾರೆ; ಅದರಲ್ಲಿ ಬಹುತೇಕರು ದಲಿತರಿದ್ದಾರೆ. ‘ಹೆಂಡ ಬೇಡ, ವಸತಿ ಶಾಲೆ ಕೊಡಿ’ ಎಂಬ ಚಳವಳಿಯಿಂದ ಇಂದು ಇಡೀ ದೇಶದಲ್ಲೇ ಕರ್ನಾಟಕದಲ್ಲಿ ಮಾತ್ರ 8.35 ಲಕ್ಷ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿ ಕಲಿಯುತ್ತಿದ್ದಾರೆ. ವಿಶೇಷವೆಂದರೆ ಈ ಶಾಲೆಗಳಲ್ಲಿ ಫಲಿತಾಂಶ ಕೂಡ ಉತ್ತಮವಾಗಿದೆ. ವಸತಿ ಶಾಲೆಗಳಲ್ಲಿ ಓದಿದ ಮಕ್ಕಳು ಇಂದು ಐಎಎಸ್-ಐಪಿಎಸ್ ಆಗಿದ್ದಾರೆ. ಶೇ.98ರಷ್ಟು ಮಕ್ಕಳು ಪ್ರತಿವರ್ಷ ಉತ್ತೀರ್ಣರಾಗುತ್ತಿದ್ದಾರೆ. ದಲಿತ ಚಳವಳಿ ಮತ್ತು ಕೃಷ್ಣಪ್ಪ ಅವರ ಮುಂದಾಲೋಚನೆಗಳೇ ಇದಕ್ಕೆಲ್ಲಾ ಕಾರಣ. ಅಂದರೆ ಒಂದು ಗಟ್ಟಿ ಸಿದ್ಧಾಂತದಿಂದ ಮಾತ್ರ ಇದೆಲ್ಲ ಸಾಧ್ಯ” ಎಂದರು.

ಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...