Homeಮುಖಪುಟಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

- Advertisement -
- Advertisement -

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ ಮಾಡಿದೆ.

ಕುಕಿ ಝೋ ಮತ್ತು ಮೈತೇಯಿ ಗುಂಪುಗಳ ನಡುವಿನ ದೀರ್ಘಕಾಲ ಜನಾಂಗೀಯ ಸಂಘರ್ಷದ ಬಳಿಕ, ಫೆಬ್ರವರಿ 9,2025ರಂದು ಮಣಿಪುರದ ಮುಖ್ಯಮಂತ್ರಿ ಎನ್‌. ಬೀರೇನ್ ಸಿಂಗ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಫೆ.13ರಂದು ಕೇಂದ್ರ ಸರ್ಕಾರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿತು.

ಮಂಗಳವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಖೇಮ್ಚಂದ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಹೈಕಮಾಂಡ್ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದೆ. ಬುಧವಾರ (ಫೆ.4) ಸಂಜೆ ಅವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಯುಮ್ನಮ್ ಖೇಮ್ಚಂದ್ ಸಿಂಗ್ ಅವರು, ಈಗ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಇತರ ಎಲ್ಲಾ ಮಿತ್ರಪಕ್ಷಗಳ ಶಾಸಕರ ಬೆಂಬಲವನ್ನು ಪಡೆಯಬೇಕಾಗುತ್ತದೆ. ಈ ಒಕ್ಕೂಟದ ಎಲ್ಲಾ ಶಾಸಕರು ಒಟ್ಟಾಗಿ ಸೇರಿ ಅವರನ್ನು ತಮ್ಮ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಅಧಿಕೃತವಾಗಿ ಆಯ್ಕೆ ಮಾಡಲಿದ್ದಾರೆ. ಈ ಪ್ರಕ್ರಿಯೆಯು ಪೂರ್ಣಗೊಂಡ ನಂತರವೇ ಅವರು ರಾಜ್ಯದಲ್ಲಿ ಸರ್ಕಾರ ರಚಿಸಲು ಅರ್ಹರಾಗುತ್ತಾರೆ ಮತ್ತು ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗುತ್ತದೆ.

ಈ ಉದ್ದೇಶಕ್ಕಾಗಿ ಪ್ರತ್ಯೇಕ ಸಭೆ ನಡೆಯಲಿದೆ. 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಬಿಜೆಪಿಯ ಪ್ರಸ್ತುತ ಬಲ 37. ಆರಂಭದಲ್ಲಿ, 2022ರ ವಿಧಾನಸಭಾ ಚುನಾವಣೆಯಲ್ಲಿ ‘ಕೇಸರಿ ಪಕ್ಷದಿಂದ 32 ಮಂದಿ ಗೆದ್ದಿದ್ದರು. ಜೆಡಿಯು ಆರು ಸ್ಥಾನಗಳನ್ನು ಗೆದ್ದಿತ್ತು. ನಂತರ ಐವರು ಜೆಡಿಯು ಶಾಸಕರು ಬಿಜೆಪಿ ಸೇರಿದರು. ಇದಲ್ಲದೆ, ರಾಜ್ಯ ವಿಧಾನಸಭೆಯಲ್ಲಿ ಒಂದು ಸ್ಥಾನವು ಹಾಲಿ ಶಾಸಕರ ಮರಣದ ನಂತರ ಖಾಲಿಯಾಯಿತು.

ರಾಷ್ಟ್ರಪತಿ ಆಳ್ವಿಕೆಯ ನಿಗದಿತ ಅವಧಿ ಮುಗಿಯುವ 10 ದಿನಗಳ ಮೊದಲು ಖೇಮ್ಚಂದ್ ಸಿಂಗ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಘೋಷಿಸಲಾಗಿದೆ.

ಖೇಮ್ಚಂದ್ ಸಿಂಗ್ ರಾಜಕೀಯ ಹಿನ್ನೆಲೆ

ಮೈತೇಯಿ ಸಮುದಾಯಕ್ಕೆ ಸೇರಿದ ಖೇಮ್ಚಂದ್ ಸಿಂಗ್ ಎರಡು ಬಾರಿ ಶಾಸಕರಾಗಿದ್ದಾರೆ. 2017ರಲ್ಲಿ ಮತ್ತು 2022ರಲ್ಲಿ ಅವರು ಸಿಂಗ್ಜಮೇಯ್ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಮಾರ್ಚ್ 2017ರಲ್ಲಿ ಖೇಮ್ಚಂದ್ ಮಣಿಪುರ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾದರು. ನಂತರ ಐದು ವರ್ಷಗಳ ಪೂರ್ಣ ಅವಧಿಗೆ ಆ ಹುದ್ದೆಯನ್ನು ಅವರು ಅಲಂಕರಿಸಿದರು.

2022ರ ವಿಧಾನಸಭಾ ಚುನಾವಣೆಯ ಗೆಲುವು ಸಾಧಿಸಿದ ಖೇಮ್ಚಂದ್ ಅವರಿಗೆ ಎರಡನೇ ಬಿರೇನ್ ಸಿಂಗ್ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಪುರಸಭೆ ಆಡಳಿತ, ವಸತಿ ಅಭಿವೃದ್ಧಿ ಮತ್ತು ಶಿಕ್ಷಣ ಸೇರಿದಂತೆ ಹಲವಾರು ಖಾತೆಗಳ ಜವಾಬ್ದಾರಿಗಳನ್ನು ಅವರು ನಿರ್ವಹಿಸಿದ್ದಾರೆ. ರಾಷ್ಟ್ರಪತಿ ಆಳ್ವಿಕೆ ಹೇರುವವರೆಗೂ ಸಿಂಗ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಕುಕಿ ಮತ್ತು ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಮೈತೇಯಿ ಸಮುದಾಯದ ಖೇಮ್ಚಂದ್ ಮುಖ್ಯಮಂತ್ರಿಯಾಗಿ ಆಯ್ಕೆಯಾದರೆ, ಕುಕಿ ಸಮುದಾಯವನ್ನು ಪ್ರತಿನಿಧಿಸುವ ನೆಮ್ಚಾ ಕಿಪ್ಗೆನ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಇವರು ಮಣಿಪುರದ ಮೊದಲ ಮಹಿಳಾ ಉಪ ಮುಖ್ಯಮಂತ್ರಿಯಾಗಲಿದ್ದಾರೆ.

ನಾಗಾ ಸಮುದಾಯವನ್ನು ಪ್ರತಿನಿಧಿಸುವ ಲೋಸಿ ದಿಖೋ ಎರಡನೇ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಬಿಜೆಪಿಯ ಹಿರಿಯ ನಾಯಕ ಗೋವಿಂದದಾಸ್ ಕೊಂಥೌಜಮ್ ಅವರಿಗೆ ಗೃಹ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗುತ್ತದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...