Homeಮುಖಪುಟಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

- Advertisement -
- Advertisement -

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ ಮಾಡಿದೆ.

ಕುಕಿ ಝೋ ಮತ್ತು ಮೈತೇಯಿ ಗುಂಪುಗಳ ನಡುವಿನ ದೀರ್ಘಕಾಲ ಜನಾಂಗೀಯ ಸಂಘರ್ಷದ ಬಳಿಕ, ಫೆಬ್ರವರಿ 9,2025ರಂದು ಮಣಿಪುರದ ಮುಖ್ಯಮಂತ್ರಿ ಎನ್‌. ಬೀರೇನ್ ಸಿಂಗ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಫೆ.13ರಂದು ಕೇಂದ್ರ ಸರ್ಕಾರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿತು.

ಮಂಗಳವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಖೇಮ್ಚಂದ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಹೈಕಮಾಂಡ್ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದೆ. ಬುಧವಾರ (ಫೆ.4) ಸಂಜೆ ಅವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಯುಮ್ನಮ್ ಖೇಮ್ಚಂದ್ ಸಿಂಗ್ ಅವರು, ಈಗ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಇತರ ಎಲ್ಲಾ ಮಿತ್ರಪಕ್ಷಗಳ ಶಾಸಕರ ಬೆಂಬಲವನ್ನು ಪಡೆಯಬೇಕಾಗುತ್ತದೆ. ಈ ಒಕ್ಕೂಟದ ಎಲ್ಲಾ ಶಾಸಕರು ಒಟ್ಟಾಗಿ ಸೇರಿ ಅವರನ್ನು ತಮ್ಮ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಅಧಿಕೃತವಾಗಿ ಆಯ್ಕೆ ಮಾಡಲಿದ್ದಾರೆ. ಈ ಪ್ರಕ್ರಿಯೆಯು ಪೂರ್ಣಗೊಂಡ ನಂತರವೇ ಅವರು ರಾಜ್ಯದಲ್ಲಿ ಸರ್ಕಾರ ರಚಿಸಲು ಅರ್ಹರಾಗುತ್ತಾರೆ ಮತ್ತು ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗುತ್ತದೆ.

ಈ ಉದ್ದೇಶಕ್ಕಾಗಿ ಪ್ರತ್ಯೇಕ ಸಭೆ ನಡೆಯಲಿದೆ. 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಬಿಜೆಪಿಯ ಪ್ರಸ್ತುತ ಬಲ 37. ಆರಂಭದಲ್ಲಿ, 2022ರ ವಿಧಾನಸಭಾ ಚುನಾವಣೆಯಲ್ಲಿ ‘ಕೇಸರಿ ಪಕ್ಷದಿಂದ 32 ಮಂದಿ ಗೆದ್ದಿದ್ದರು. ಜೆಡಿಯು ಆರು ಸ್ಥಾನಗಳನ್ನು ಗೆದ್ದಿತ್ತು. ನಂತರ ಐವರು ಜೆಡಿಯು ಶಾಸಕರು ಬಿಜೆಪಿ ಸೇರಿದರು. ಇದಲ್ಲದೆ, ರಾಜ್ಯ ವಿಧಾನಸಭೆಯಲ್ಲಿ ಒಂದು ಸ್ಥಾನವು ಹಾಲಿ ಶಾಸಕರ ಮರಣದ ನಂತರ ಖಾಲಿಯಾಯಿತು.

ರಾಷ್ಟ್ರಪತಿ ಆಳ್ವಿಕೆಯ ನಿಗದಿತ ಅವಧಿ ಮುಗಿಯುವ 10 ದಿನಗಳ ಮೊದಲು ಖೇಮ್ಚಂದ್ ಸಿಂಗ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಘೋಷಿಸಲಾಗಿದೆ.

ಖೇಮ್ಚಂದ್ ಸಿಂಗ್ ರಾಜಕೀಯ ಹಿನ್ನೆಲೆ

ಮೈತೇಯಿ ಸಮುದಾಯಕ್ಕೆ ಸೇರಿದ ಖೇಮ್ಚಂದ್ ಸಿಂಗ್ ಎರಡು ಬಾರಿ ಶಾಸಕರಾಗಿದ್ದಾರೆ. 2017ರಲ್ಲಿ ಮತ್ತು 2022ರಲ್ಲಿ ಅವರು ಸಿಂಗ್ಜಮೇಯ್ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಮಾರ್ಚ್ 2017ರಲ್ಲಿ ಖೇಮ್ಚಂದ್ ಮಣಿಪುರ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾದರು. ನಂತರ ಐದು ವರ್ಷಗಳ ಪೂರ್ಣ ಅವಧಿಗೆ ಆ ಹುದ್ದೆಯನ್ನು ಅವರು ಅಲಂಕರಿಸಿದರು.

2022ರ ವಿಧಾನಸಭಾ ಚುನಾವಣೆಯ ಗೆಲುವು ಸಾಧಿಸಿದ ಖೇಮ್ಚಂದ್ ಅವರಿಗೆ ಎರಡನೇ ಬಿರೇನ್ ಸಿಂಗ್ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಪುರಸಭೆ ಆಡಳಿತ, ವಸತಿ ಅಭಿವೃದ್ಧಿ ಮತ್ತು ಶಿಕ್ಷಣ ಸೇರಿದಂತೆ ಹಲವಾರು ಖಾತೆಗಳ ಜವಾಬ್ದಾರಿಗಳನ್ನು ಅವರು ನಿರ್ವಹಿಸಿದ್ದಾರೆ. ರಾಷ್ಟ್ರಪತಿ ಆಳ್ವಿಕೆ ಹೇರುವವರೆಗೂ ಸಿಂಗ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಕುಕಿ ಮತ್ತು ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಮೈತೇಯಿ ಸಮುದಾಯದ ಖೇಮ್ಚಂದ್ ಮುಖ್ಯಮಂತ್ರಿಯಾಗಿ ಆಯ್ಕೆಯಾದರೆ, ಕುಕಿ ಸಮುದಾಯವನ್ನು ಪ್ರತಿನಿಧಿಸುವ ನೆಮ್ಚಾ ಕಿಪ್ಗೆನ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಇವರು ಮಣಿಪುರದ ಮೊದಲ ಮಹಿಳಾ ಉಪ ಮುಖ್ಯಮಂತ್ರಿಯಾಗಲಿದ್ದಾರೆ.

ನಾಗಾ ಸಮುದಾಯವನ್ನು ಪ್ರತಿನಿಧಿಸುವ ಲೋಸಿ ದಿಖೋ ಎರಡನೇ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಬಿಜೆಪಿಯ ಹಿರಿಯ ನಾಯಕ ಗೋವಿಂದದಾಸ್ ಕೊಂಥೌಜಮ್ ಅವರಿಗೆ ಗೃಹ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗುತ್ತದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...