Homeಮುಖಪುಟಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಸ್ಸಿ,ಎಸ್ಟಿ,ಹಿಂದುಳಿದ ವರ್ಗದ ಮಹಿಳೆಯರ ಖಾತೆಗೆ ವಾರ್ಷಿಕ 1 ಲಕ್ಷ ರೂ....

ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಸ್ಸಿ,ಎಸ್ಟಿ,ಹಿಂದುಳಿದ ವರ್ಗದ ಮಹಿಳೆಯರ ಖಾತೆಗೆ ವಾರ್ಷಿಕ 1 ಲಕ್ಷ ರೂ. ಜಮೆ: ರಾಹುಲ್‌ ಗಾಂಧಿ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಹೊಸ ಸರಕಾರದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರ ಖಾತೆಗಳಿಗೆ ವಾರ್ಷಿಕ 1 ಲಕ್ಷ ರೂಪಾಯಿಗಳನ್ನು ವರ್ಗಾಯಿಸುತ್ತೇವೆ ಎಂದು ಭರವಸೆಯನ್ನು ನೀಡಿದ್ದಾರೆ.

ಮಂಡ್ಲಾ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಸಿಯೋನಿ ಜಿಲ್ಲೆಯ ಧನೋರಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ನಿರುದ್ಯೋಗಿ ಯುವಕರಿಗೆ ಶಿಷ್ಯವೇತನ ನೀಡುವುದಾಗಿ ಕೂಡ ಭರವಸೆ ನಿಡಿದ್ದಾರೆ. ಪ್ರಣಾಳಿಕೆಯಲ್ಲಿ ಮೂರ್ನಾಲ್ಕು ಕ್ರಾಂತಿಕಾರಿ ಕ್ರಮಗಳನ್ನು ಉಲ್ಲೇಖಿಸಲಾಗಿದೆ. ಉದಾಹರಣೆಗೆ ಎಸ್‌ಸಿ ಮತ್ತು ಎಸ್‌ಟಿ ವರ್ಗಗಳ ಮಹಿಳೆಯರು, ಹಿಂದುಳಿದ ವರ್ಗಗಳು ಮತ್ತು ಬಡ ಕುಟುಂಬಗಳ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 1 ಲಕ್ಷ ರೂ.ಗಳನ್ನು ವರ್ಗಾಯಿಸುವುದಾಗಿದೆ. ಇದರ ಭಾಗವಾಗಿ ನಾವು ಮಹಿಳೆಯರ ಖಾತೆಗೆ ಸಾವಿರಾರು ರೂ. ಹಣ ವರ್ಗಾವಣೆ ಮಾಡುತ್ತೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ದೇಶದ ನಿರುದ್ಯೋಗಿ ಯುವ ಜನರಿಗೆ ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಒಂದು ವರ್ಷ ಶಿಷ್ಯ ವೃತ್ತಿ ಹಾಗೂ ಈ ಅವಧಿಯಲ್ಲಿ 1 ಲಕ್ಷ ರೂ. ಭತ್ತೆಯ ಖಾತರಿ ನೀಡುವ ನೂತನ ಕಾನೂನನ್ನು ನಾವು ಜಾರಿಗೆ ತರಲಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದರು.

ಕೇಂದ್ರದಲ್ಲಿ ಸರಕಾರ ರೂಪಿಸಿದ ಬಳಿಕ ನಾವು ಉದ್ಯೋಗದಲ್ಲಿ ಗುತ್ತಿಗೆ ವ್ಯವಸ್ಥೆಯನ್ನು ರದ್ದುಗೊಳಿಸುತ್ತೇವೆ. ಸಾರ್ವಜನಿಕ ವಲಯದಲ್ಲಿ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ರೂಪಿಸಲಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಬಿಜೆಪಿ ಬುಡಕಟ್ಟು ಜನರನ್ನು ಆದಿವಾಸಿ ಎಂದು ಕರೆಯುವ ಬದಲು ಉದ್ದೇಶಪೂರ್ವಕವಾಗಿ ‘ವನವಾಸಿ’ ಎಂದು ಕರೆಯುತ್ತಿದೆ. ಅವರನ್ನು ಭೂಮಿಯಿಂದ ಪ್ರತ್ಯೇಕಿಸಲು ಹಾಗೂ ನೀರು, ಅರಣ್ಯ, ಭೂಮಿಯ ಮೇಲಿನ ಅವರ ಹಕ್ಕನ್ನು ಕಿತ್ತುಕೊಳ್ಳುಲು ಬಿಜೆಪಿ ಅವರನ್ನು ವನವಾಸಿ ಎಂದು ಕರೆಯುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುತ್ತಿರುವ ಹಣವನ್ನು ದ್ವಿಗುಣಗೊಳಿಸಲಾಗುವುದು, ದೇಶದ ಪ್ರತಿಯೊಬ್ಬ ನಿರುದ್ಯೋಗಿ ಯುವಕರು ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಒಂದು ವರ್ಷದ ಅವಧಿಗೆ ಶಿಷ್ಯವೇತನ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ನಾವು ಹೊಸ ಕಾನೂನನ್ನು ತರುತ್ತೇವೆ, ಈ ಸಮಯದಲ್ಲಿ ಅವರು ಒಂದು ಲಕ್ಷ ರೂಪಾಯಿಗಳನ್ನು ಭತ್ಯೆಯಾಗಿ ಪಡೆಯಲಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ದೇಶದ ಜನತೆಗೆ ಪಂಚ ಗ್ಯಾರೆಂಟಿಯನ್ನು ಘೋಷಿಸಿದ್ದು, ಅದರಡಿಯಲ್ಲಿ ಒಟ್ಟು 15 ಭರವಸೆಗಳನ್ನು ನೀಡಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈ ಗ್ಯಾರೆಂಟಿ ಸೌಲಭ್ಯಗಳು ಜನರಿಗೆ ಲಭ್ಯವಾಗಲಿದೆ. ಕಾಂಗ್ರೆಸ್ ಈಗಾಗಲೇ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಉದ್ಯೋಗ ಸೃಷ್ಟಿ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ರಾಷ್ಟ್ರೀಯ ಜಾತಿ ಗಣತಿ ಸೇರಿದಂತೆ ಹಲವು ಗ್ಯಾರೆಂಟಿಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಇದನ್ನು ಓದಿ; ಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಹೆಚ್ಚಿದ ಪ್ರಾದೇಶಿಕ ಸಂಘರ್ಷದ ಭೀತಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...