Homeಮುಖಪುಟಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಸ್ಸಿ,ಎಸ್ಟಿ,ಹಿಂದುಳಿದ ವರ್ಗದ ಮಹಿಳೆಯರ ಖಾತೆಗೆ ವಾರ್ಷಿಕ 1 ಲಕ್ಷ ರೂ....

ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಸ್ಸಿ,ಎಸ್ಟಿ,ಹಿಂದುಳಿದ ವರ್ಗದ ಮಹಿಳೆಯರ ಖಾತೆಗೆ ವಾರ್ಷಿಕ 1 ಲಕ್ಷ ರೂ. ಜಮೆ: ರಾಹುಲ್‌ ಗಾಂಧಿ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಹೊಸ ಸರಕಾರದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರ ಖಾತೆಗಳಿಗೆ ವಾರ್ಷಿಕ 1 ಲಕ್ಷ ರೂಪಾಯಿಗಳನ್ನು ವರ್ಗಾಯಿಸುತ್ತೇವೆ ಎಂದು ಭರವಸೆಯನ್ನು ನೀಡಿದ್ದಾರೆ.

ಮಂಡ್ಲಾ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಸಿಯೋನಿ ಜಿಲ್ಲೆಯ ಧನೋರಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ನಿರುದ್ಯೋಗಿ ಯುವಕರಿಗೆ ಶಿಷ್ಯವೇತನ ನೀಡುವುದಾಗಿ ಕೂಡ ಭರವಸೆ ನಿಡಿದ್ದಾರೆ. ಪ್ರಣಾಳಿಕೆಯಲ್ಲಿ ಮೂರ್ನಾಲ್ಕು ಕ್ರಾಂತಿಕಾರಿ ಕ್ರಮಗಳನ್ನು ಉಲ್ಲೇಖಿಸಲಾಗಿದೆ. ಉದಾಹರಣೆಗೆ ಎಸ್‌ಸಿ ಮತ್ತು ಎಸ್‌ಟಿ ವರ್ಗಗಳ ಮಹಿಳೆಯರು, ಹಿಂದುಳಿದ ವರ್ಗಗಳು ಮತ್ತು ಬಡ ಕುಟುಂಬಗಳ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 1 ಲಕ್ಷ ರೂ.ಗಳನ್ನು ವರ್ಗಾಯಿಸುವುದಾಗಿದೆ. ಇದರ ಭಾಗವಾಗಿ ನಾವು ಮಹಿಳೆಯರ ಖಾತೆಗೆ ಸಾವಿರಾರು ರೂ. ಹಣ ವರ್ಗಾವಣೆ ಮಾಡುತ್ತೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ದೇಶದ ನಿರುದ್ಯೋಗಿ ಯುವ ಜನರಿಗೆ ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಒಂದು ವರ್ಷ ಶಿಷ್ಯ ವೃತ್ತಿ ಹಾಗೂ ಈ ಅವಧಿಯಲ್ಲಿ 1 ಲಕ್ಷ ರೂ. ಭತ್ತೆಯ ಖಾತರಿ ನೀಡುವ ನೂತನ ಕಾನೂನನ್ನು ನಾವು ಜಾರಿಗೆ ತರಲಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದರು.

ಕೇಂದ್ರದಲ್ಲಿ ಸರಕಾರ ರೂಪಿಸಿದ ಬಳಿಕ ನಾವು ಉದ್ಯೋಗದಲ್ಲಿ ಗುತ್ತಿಗೆ ವ್ಯವಸ್ಥೆಯನ್ನು ರದ್ದುಗೊಳಿಸುತ್ತೇವೆ. ಸಾರ್ವಜನಿಕ ವಲಯದಲ್ಲಿ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ರೂಪಿಸಲಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಬಿಜೆಪಿ ಬುಡಕಟ್ಟು ಜನರನ್ನು ಆದಿವಾಸಿ ಎಂದು ಕರೆಯುವ ಬದಲು ಉದ್ದೇಶಪೂರ್ವಕವಾಗಿ ‘ವನವಾಸಿ’ ಎಂದು ಕರೆಯುತ್ತಿದೆ. ಅವರನ್ನು ಭೂಮಿಯಿಂದ ಪ್ರತ್ಯೇಕಿಸಲು ಹಾಗೂ ನೀರು, ಅರಣ್ಯ, ಭೂಮಿಯ ಮೇಲಿನ ಅವರ ಹಕ್ಕನ್ನು ಕಿತ್ತುಕೊಳ್ಳುಲು ಬಿಜೆಪಿ ಅವರನ್ನು ವನವಾಸಿ ಎಂದು ಕರೆಯುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುತ್ತಿರುವ ಹಣವನ್ನು ದ್ವಿಗುಣಗೊಳಿಸಲಾಗುವುದು, ದೇಶದ ಪ್ರತಿಯೊಬ್ಬ ನಿರುದ್ಯೋಗಿ ಯುವಕರು ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಒಂದು ವರ್ಷದ ಅವಧಿಗೆ ಶಿಷ್ಯವೇತನ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ನಾವು ಹೊಸ ಕಾನೂನನ್ನು ತರುತ್ತೇವೆ, ಈ ಸಮಯದಲ್ಲಿ ಅವರು ಒಂದು ಲಕ್ಷ ರೂಪಾಯಿಗಳನ್ನು ಭತ್ಯೆಯಾಗಿ ಪಡೆಯಲಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ದೇಶದ ಜನತೆಗೆ ಪಂಚ ಗ್ಯಾರೆಂಟಿಯನ್ನು ಘೋಷಿಸಿದ್ದು, ಅದರಡಿಯಲ್ಲಿ ಒಟ್ಟು 15 ಭರವಸೆಗಳನ್ನು ನೀಡಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈ ಗ್ಯಾರೆಂಟಿ ಸೌಲಭ್ಯಗಳು ಜನರಿಗೆ ಲಭ್ಯವಾಗಲಿದೆ. ಕಾಂಗ್ರೆಸ್ ಈಗಾಗಲೇ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಉದ್ಯೋಗ ಸೃಷ್ಟಿ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ರಾಷ್ಟ್ರೀಯ ಜಾತಿ ಗಣತಿ ಸೇರಿದಂತೆ ಹಲವು ಗ್ಯಾರೆಂಟಿಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಇದನ್ನು ಓದಿ; ಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಹೆಚ್ಚಿದ ಪ್ರಾದೇಶಿಕ ಸಂಘರ್ಷದ ಭೀತಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...