Homeಮುಖಪುಟಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

ಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’

- Advertisement -
- Advertisement -

ಆನ್‌ಲೈನ್ ಸುದ್ದಿ ಮಾಧ್ಯಮಗಳ ಸಂಪೂರ್ಣ ಚಿತ್ರಣವನ್ನು ಪಡೆಯಲು ಸರ್ಕಾರ ಪ್ರಯತ್ನಿಸುತ್ತಿರುವುದರಿಂದ, ಡಿಜಿಟಲ್ ನ್ಯೂಸ್ ಪೋರ್ಟಲ್‌ಗಳು ತಮ್ಮ ಸಂಪಾದಕೀಯ ಮುಖ್ಯಸ್ಥರು, ಮಾಲೀಕತ್ವ, ವಿಳಾಸ ಮತ್ತು ಗೊತ್ತು ಪಡಿಸಿದ ಕುಂದುಕೊರತೆ ಅಧಿಕಾರಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿವರಗಳನ್ನು ಮಾಹಿತಿ ಮತ್ತು ಪ್ರಸಾರ (ಐ&ಬಿ) ಸಚಿವಾಲಯಕ್ಕೆ ಶೀಘ್ರದಲ್ಲೇ ಒದಗಿಸಬೇಕಾಗುತ್ತದೆ ಎಂದು ಐ&ಬಿ ಕಾರ್ಯದರ್ಶಿ ಅಮಿತ್ ಖರೆ ತಿಳಿಸಿದ್ದಾರೆ.

“ಪ್ರಸ್ತುತ, ಈ ವಲಯದಲ್ಲಿ ಎಷ್ಟು ಸಂಸ್ಥೆಗಳಿವೆ ಮತ್ತು ಅವರು ಯಾರೆಂಬುದರ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಚಿತ್ರಣವಿಲ್ಲ” ಎಂದು ಅವರು ಹೇಳಿದರು. “ನೀವು ಅವರ ವೆಬ್‌ಸೈಟ್‌ಗಳಿಗೆ ಲಾಗ್ ಇನ್ ಮಾಡಿದರೆ, ಅವರ ಕಚೇರಿ ವಿಳಾಸ ಅಥವಾ ಪ್ರಧಾನ ಸಂಪಾದಕರ ಕುರಿತ  ಮೂಲ ಮಾಹಿತಿ ಸಹ ಸಿಗುವುದಿಲ್ಲ’ ಎಂದು ಖರೆ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ಉಲ್ಲೆಖಿಸಿದೆ.

ಮೂಲಗಳ ಪ್ರಕಾರ, ಒಂದು ತಿಂಗಳಲ್ಲಿ ಎಲ್ಲಾ ಡಿಜಿಟಲ್ ಸುದ್ದಿ ಸಂಸ್ಥೆಗಳು ಮೇಲೆ ಉಲ್ಲೇಖಿಸಿದ ವಿವರಗಳನ್ನು ಭರ್ತಿ ಮಾಡಿ ಸಚಿವಾಲಯಕ್ಕೆ ಸಲ್ಲಿಸಬೇಕಾದ ಫಾರ್ಮ್ ಅನ್ನು ಸಚಿವಾಲಯ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: ಸ್ಮಾರ್ಟ್‌ ಸಿಟಿ ನಿರ್ಮಾಣ, ನದಿಗಳನ್ನು ಸ್ವಚ್ಚಗೊಳಿಸುವುದು ಯಾವಾಗ? ಬಿಜೆಪಿ ಉತ್ತರಿಸಲಿ: ಅಖಿಲೇಶ್

ಗುರುವಾರ (ಫೆ.25) ಐ & ಬಿ ಸಚಿವ ಪ್ರಕಾಶ್ ಜಾವಡೇಕರ್ ಅವರು,  ಡಿಜಿಟಲ್ ಮೀಡಿಯಾ ಸಂಸ್ಥೆಗಳ ಬಗೆಗಿನ ಮಾಹಿತಿಯ ಕೊರತೆಯೇ, ಈ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಕ್ಕೆ ಮೊದಲು ಅವರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿರಲು ಕಾರಣ ಎಂದು ತಿಳಿಸಿದ್ದಾರೆ.

ಕಾರ್ಯದರ್ಶಿ ಖರೆ ಪ್ರಕಾರ, ವೆಬ್‌ಸೈಟ್‌ಗಳು, ಮುದ್ರಣ ಮತ್ತು ಟಿವಿ ಮಾಧ್ಯಮ ಈಗಾಗಲೇ ಅನುಸರಿಸುತ್ತಿರುವ  ಸ್ಥಾಪಿತ ನೀತಿ ಸಂಹಿತೆಯನ್ನು ಮಾತ್ರ ಅನುಸರಿಸುವ ನಿರೀಕ್ಷೆಯಿದೆ. ಅವರ ಮೇಲೆ ಹೊಸ ಬಾಧ್ಯತೆಯಿಲ್ಲ ಎಂದು ಹೇಳಿದ್ದಾರೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ಡಿಜಿಟಲ್ ನ್ಯೂಸ್ ಔಟ್‌ಲೆಟ್‌ಗಳು ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ ನಿಯಂತ್ರಣ ಕಾಯ್ದೆ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಪತ್ರಿಕೋದ್ಯಮ ನಡವಳಿಕೆಯ ಮಾನದಂಡಗಳ ಅಡಿಯಲ್ಲಿ ಪ್ರೋಗ್ರಾಂ ಕೋಡ್ ಅನ್ನು ಅನುಸರಿಸಬೇಕಾಗುತ್ತದೆ. ಇದು ಟಿವಿ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಹಾಕುವ ಕಂಟೆಂಟ್ ಹೇಗಿರಬೇಕು ಎಂಬುದನ್ನು ಸೂಚಿಸುತ್ತದೆ.

ಮುದ್ರಣಕ್ಕಾಗಿ ಅಂತಹ ಯಾವುದೇ ಸಮಿತಿ ಇಲ್ಲದಿದ್ದಾಗ ಡಿಜಿಟಲ್ ನ್ಯೂಸ್ ವೆಬ್‌ಸೈಟ್‌ಗಳಿಗಾಗಿ ಸರ್ಕಾರದ ಮೇಲ್ವಿಚಾರಣಾ ಕಾರ್ಯವಿಧಾನವನ್ನು ಸ್ಥಾಪಿಸುವ ಅಗತ್ಯತೆಯ ಬಗ್ಗೆ ಮಾತನಾಡಿರುವ ಅಮಿತ್ ಖರೆ, ’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: `ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

ಒಟಿಟಿ ಪ್ಲಾಟ್‌ಫಾರ್ಮ್‌ಗಳಿಂದ ಬಂದ ಸಮಾಲೋಚನೆಯ ಬಗ್ಗೆ ಇದೇ ರೀತಿಯ ಟೀಕೆಗಳನ್ನು ಖರೆ ತಳ್ಳಿಹಾಕಿದರು. ’ಐ & ಬಿ ಸಚಿವರು ದೆಹಲಿಯಲ್ಲಿ ಎರಡು ಬಾರಿ ಭೇಟಿಯಾದರು. ಮುಂಬೈ ಮತ್ತು ಚೆನ್ನೈನಲ್ಲಿ ನಾವು ಎರಡು ಸುತ್ತಿನ ಚರ್ಚೆ ನಡೆಸಿದೆವು. ಸಮಾಲೋಚನೆ ಎಂದರೆ ಸಮ್ಮತಿ ಎಂದಲ್ಲ. ತಾತ್ವಿಕವಾಗಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಸ್ವಯಂ ನಿಯಂತ್ರಣಕ್ಕೆ ಒಪ್ಪಿಕೊಂಡಿವೆ, ಆದರೆ ಅವರ ಪ್ರಸ್ತಾಪವು ಮೇಲ್ವಿಚಾರಣೆ ಮತ್ತು ಮೇಲ್ಮನವಿಗಳಿಗಾಗಿ ಸ್ವತಂತ್ರ ಸಂಸ್ಥೆಯನ್ನು ಹೊಂದಿರಲಿಲ್ಲ. ಅವರು ಆಂತರಿಕವಾಗಿ ಕುಂದುಕೊರತೆಗಳನ್ನು ಪರಿಹರಿಸಲು ಬಯಸಿದ್ದರು ಆದರೆ ಯಾವುದೇ ಮೇಲ್ಮನವಿಯ ವ್ಯವಸ್ಥೆ ಇರಲಿಲ್ಲ. ಅದು ನಮಗೆ ಸ್ವೀಕಾರಾರ್ಹವಲ್ಲ’ ಎಂದು ಖರೆ ತಿಳಿಸಿದ್ದಾರೆ.

ಒಟಿಟಿ ಪ್ಲಾಟ್‌ಫಾರ್ಮ್‌ಗಳ ಕೆಲಸದಲ್ಲಿ ಸರ್ಕಾರದ ಅತಿಯಾದ ಹಸ್ತಕ್ಷೇಪದ ಭೀತಿಯ ಬಗಿಗಿನ ಪ್ರಶ್ನೆಗೆ ಉತ್ತರಿಸಿರುವ ಖರೆ, ’ಅಂತಹ ಸಂದೇಹಗಳು ಆಧಾರರಹಿತವಾಗಿವೆ ಎಂದಿದ್ದಾರೆ. ’ಏಕೆಂದರೆ ಮಾರ್ಗಸೂಚಿಗಳು ಒಟಿಟಿ ಮತ್ತು ಆನ್‌ಲೈನ್ ಮಾಧ್ಯಮಗಳಿಗೆ ಮೃದು-ಸ್ಪರ್ಶ ಸ್ವಯಂ-ನಿಯಂತ್ರಣ ಮಾದರಿಯನ್ನು ಪ್ರಸ್ತಾಪಿಸುತ್ತವೆ. “ಇದು ಒಟಿಟಿ ಪ್ಲಾಟ್‌ಫಾರ್ಮ್‌ಗಳ ಸೃಜನಶೀಲತೆ ಮತ್ತು ನಾಗರಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸುವ ಹಕ್ಕುಗಳನ್ನು ಸಮತೋಲನಗೊಳಿಸುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಔಪಚಾರಿಕ ಮೂರು ಹಂತದ ಪರಿಹಾರ ವ್ಯವಸ್ಥೆಯನ್ನು ಹೊಂದಿರುವುದು ದೀರ್ಘಾವಧಿಯಲ್ಲಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಮಾತ್ರ ಸಹಾಯ ಮಾಡುತ್ತದೆ ಎಂದು ಖರೆ ಹೇಳಿದರು. “ಪ್ರಸ್ತುತ, ವಿಭಿನ್ನ ವೆಬ್ ಸರಣಿಗಳ ವಿರುದ್ಧ ಹಲವಾರು ಎಫ್‌ಐಆರ್ ದಾಖಲಿಸಲಾಗಿದೆ. ಕುಂದುಕೊರತೆ ಪರಿಹಾರ ಮತ್ತು ಮೇಲ್ಮನವಿಯ ಔಪಚಾರಿಕ ಕಾರ್ಯವಿಧಾನವಿದ್ದರೆ, ಈ ವೇದಿಕೆಗಳು ಈ ಕಾರ್ಯವಿಧಾನವನ್ನು ನ್ಯಾಯಾಲಯಗಳಿಗೆ ತಿಳಿಸಬಹುದು ಮತ್ತು ನ್ಯಾಯಾಲಯಗಳು ಯಾವಾಗಲೂ ಈ ಸಂಸ್ಥೆಗಳನ್ನು ಸಮೀಪಿಸಲು ನಾಗರಿಕರನ್ನು ಪ್ರೋತ್ಸಾಹಿಸುತ್ತದೆ’ ಎಂದಿದ್ದಾರೆ.


ಇದನ್ನೂ ಓದಿ: ಹರಿಯಾಣ: ರೈತರಿಗೆ ಬೆಂಬಲ ನೀಡಿದ ಪಕ್ಷೇತರ ಶಾಸಕನ ಮನೆ, ಕಛೇರಿ ಮೇಲೆ ಐಟಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...