Homeಮುಖಪುಟಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

ಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’

- Advertisement -
- Advertisement -

ಆನ್‌ಲೈನ್ ಸುದ್ದಿ ಮಾಧ್ಯಮಗಳ ಸಂಪೂರ್ಣ ಚಿತ್ರಣವನ್ನು ಪಡೆಯಲು ಸರ್ಕಾರ ಪ್ರಯತ್ನಿಸುತ್ತಿರುವುದರಿಂದ, ಡಿಜಿಟಲ್ ನ್ಯೂಸ್ ಪೋರ್ಟಲ್‌ಗಳು ತಮ್ಮ ಸಂಪಾದಕೀಯ ಮುಖ್ಯಸ್ಥರು, ಮಾಲೀಕತ್ವ, ವಿಳಾಸ ಮತ್ತು ಗೊತ್ತು ಪಡಿಸಿದ ಕುಂದುಕೊರತೆ ಅಧಿಕಾರಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿವರಗಳನ್ನು ಮಾಹಿತಿ ಮತ್ತು ಪ್ರಸಾರ (ಐ&ಬಿ) ಸಚಿವಾಲಯಕ್ಕೆ ಶೀಘ್ರದಲ್ಲೇ ಒದಗಿಸಬೇಕಾಗುತ್ತದೆ ಎಂದು ಐ&ಬಿ ಕಾರ್ಯದರ್ಶಿ ಅಮಿತ್ ಖರೆ ತಿಳಿಸಿದ್ದಾರೆ.

“ಪ್ರಸ್ತುತ, ಈ ವಲಯದಲ್ಲಿ ಎಷ್ಟು ಸಂಸ್ಥೆಗಳಿವೆ ಮತ್ತು ಅವರು ಯಾರೆಂಬುದರ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಚಿತ್ರಣವಿಲ್ಲ” ಎಂದು ಅವರು ಹೇಳಿದರು. “ನೀವು ಅವರ ವೆಬ್‌ಸೈಟ್‌ಗಳಿಗೆ ಲಾಗ್ ಇನ್ ಮಾಡಿದರೆ, ಅವರ ಕಚೇರಿ ವಿಳಾಸ ಅಥವಾ ಪ್ರಧಾನ ಸಂಪಾದಕರ ಕುರಿತ  ಮೂಲ ಮಾಹಿತಿ ಸಹ ಸಿಗುವುದಿಲ್ಲ’ ಎಂದು ಖರೆ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ಉಲ್ಲೆಖಿಸಿದೆ.

ಮೂಲಗಳ ಪ್ರಕಾರ, ಒಂದು ತಿಂಗಳಲ್ಲಿ ಎಲ್ಲಾ ಡಿಜಿಟಲ್ ಸುದ್ದಿ ಸಂಸ್ಥೆಗಳು ಮೇಲೆ ಉಲ್ಲೇಖಿಸಿದ ವಿವರಗಳನ್ನು ಭರ್ತಿ ಮಾಡಿ ಸಚಿವಾಲಯಕ್ಕೆ ಸಲ್ಲಿಸಬೇಕಾದ ಫಾರ್ಮ್ ಅನ್ನು ಸಚಿವಾಲಯ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: ಸ್ಮಾರ್ಟ್‌ ಸಿಟಿ ನಿರ್ಮಾಣ, ನದಿಗಳನ್ನು ಸ್ವಚ್ಚಗೊಳಿಸುವುದು ಯಾವಾಗ? ಬಿಜೆಪಿ ಉತ್ತರಿಸಲಿ: ಅಖಿಲೇಶ್

ಗುರುವಾರ (ಫೆ.25) ಐ & ಬಿ ಸಚಿವ ಪ್ರಕಾಶ್ ಜಾವಡೇಕರ್ ಅವರು,  ಡಿಜಿಟಲ್ ಮೀಡಿಯಾ ಸಂಸ್ಥೆಗಳ ಬಗೆಗಿನ ಮಾಹಿತಿಯ ಕೊರತೆಯೇ, ಈ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಕ್ಕೆ ಮೊದಲು ಅವರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿರಲು ಕಾರಣ ಎಂದು ತಿಳಿಸಿದ್ದಾರೆ.

ಕಾರ್ಯದರ್ಶಿ ಖರೆ ಪ್ರಕಾರ, ವೆಬ್‌ಸೈಟ್‌ಗಳು, ಮುದ್ರಣ ಮತ್ತು ಟಿವಿ ಮಾಧ್ಯಮ ಈಗಾಗಲೇ ಅನುಸರಿಸುತ್ತಿರುವ  ಸ್ಥಾಪಿತ ನೀತಿ ಸಂಹಿತೆಯನ್ನು ಮಾತ್ರ ಅನುಸರಿಸುವ ನಿರೀಕ್ಷೆಯಿದೆ. ಅವರ ಮೇಲೆ ಹೊಸ ಬಾಧ್ಯತೆಯಿಲ್ಲ ಎಂದು ಹೇಳಿದ್ದಾರೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ಡಿಜಿಟಲ್ ನ್ಯೂಸ್ ಔಟ್‌ಲೆಟ್‌ಗಳು ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ ನಿಯಂತ್ರಣ ಕಾಯ್ದೆ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಪತ್ರಿಕೋದ್ಯಮ ನಡವಳಿಕೆಯ ಮಾನದಂಡಗಳ ಅಡಿಯಲ್ಲಿ ಪ್ರೋಗ್ರಾಂ ಕೋಡ್ ಅನ್ನು ಅನುಸರಿಸಬೇಕಾಗುತ್ತದೆ. ಇದು ಟಿವಿ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಹಾಕುವ ಕಂಟೆಂಟ್ ಹೇಗಿರಬೇಕು ಎಂಬುದನ್ನು ಸೂಚಿಸುತ್ತದೆ.

ಮುದ್ರಣಕ್ಕಾಗಿ ಅಂತಹ ಯಾವುದೇ ಸಮಿತಿ ಇಲ್ಲದಿದ್ದಾಗ ಡಿಜಿಟಲ್ ನ್ಯೂಸ್ ವೆಬ್‌ಸೈಟ್‌ಗಳಿಗಾಗಿ ಸರ್ಕಾರದ ಮೇಲ್ವಿಚಾರಣಾ ಕಾರ್ಯವಿಧಾನವನ್ನು ಸ್ಥಾಪಿಸುವ ಅಗತ್ಯತೆಯ ಬಗ್ಗೆ ಮಾತನಾಡಿರುವ ಅಮಿತ್ ಖರೆ, ’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: `ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

ಒಟಿಟಿ ಪ್ಲಾಟ್‌ಫಾರ್ಮ್‌ಗಳಿಂದ ಬಂದ ಸಮಾಲೋಚನೆಯ ಬಗ್ಗೆ ಇದೇ ರೀತಿಯ ಟೀಕೆಗಳನ್ನು ಖರೆ ತಳ್ಳಿಹಾಕಿದರು. ’ಐ & ಬಿ ಸಚಿವರು ದೆಹಲಿಯಲ್ಲಿ ಎರಡು ಬಾರಿ ಭೇಟಿಯಾದರು. ಮುಂಬೈ ಮತ್ತು ಚೆನ್ನೈನಲ್ಲಿ ನಾವು ಎರಡು ಸುತ್ತಿನ ಚರ್ಚೆ ನಡೆಸಿದೆವು. ಸಮಾಲೋಚನೆ ಎಂದರೆ ಸಮ್ಮತಿ ಎಂದಲ್ಲ. ತಾತ್ವಿಕವಾಗಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಸ್ವಯಂ ನಿಯಂತ್ರಣಕ್ಕೆ ಒಪ್ಪಿಕೊಂಡಿವೆ, ಆದರೆ ಅವರ ಪ್ರಸ್ತಾಪವು ಮೇಲ್ವಿಚಾರಣೆ ಮತ್ತು ಮೇಲ್ಮನವಿಗಳಿಗಾಗಿ ಸ್ವತಂತ್ರ ಸಂಸ್ಥೆಯನ್ನು ಹೊಂದಿರಲಿಲ್ಲ. ಅವರು ಆಂತರಿಕವಾಗಿ ಕುಂದುಕೊರತೆಗಳನ್ನು ಪರಿಹರಿಸಲು ಬಯಸಿದ್ದರು ಆದರೆ ಯಾವುದೇ ಮೇಲ್ಮನವಿಯ ವ್ಯವಸ್ಥೆ ಇರಲಿಲ್ಲ. ಅದು ನಮಗೆ ಸ್ವೀಕಾರಾರ್ಹವಲ್ಲ’ ಎಂದು ಖರೆ ತಿಳಿಸಿದ್ದಾರೆ.

ಒಟಿಟಿ ಪ್ಲಾಟ್‌ಫಾರ್ಮ್‌ಗಳ ಕೆಲಸದಲ್ಲಿ ಸರ್ಕಾರದ ಅತಿಯಾದ ಹಸ್ತಕ್ಷೇಪದ ಭೀತಿಯ ಬಗಿಗಿನ ಪ್ರಶ್ನೆಗೆ ಉತ್ತರಿಸಿರುವ ಖರೆ, ’ಅಂತಹ ಸಂದೇಹಗಳು ಆಧಾರರಹಿತವಾಗಿವೆ ಎಂದಿದ್ದಾರೆ. ’ಏಕೆಂದರೆ ಮಾರ್ಗಸೂಚಿಗಳು ಒಟಿಟಿ ಮತ್ತು ಆನ್‌ಲೈನ್ ಮಾಧ್ಯಮಗಳಿಗೆ ಮೃದು-ಸ್ಪರ್ಶ ಸ್ವಯಂ-ನಿಯಂತ್ರಣ ಮಾದರಿಯನ್ನು ಪ್ರಸ್ತಾಪಿಸುತ್ತವೆ. “ಇದು ಒಟಿಟಿ ಪ್ಲಾಟ್‌ಫಾರ್ಮ್‌ಗಳ ಸೃಜನಶೀಲತೆ ಮತ್ತು ನಾಗರಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸುವ ಹಕ್ಕುಗಳನ್ನು ಸಮತೋಲನಗೊಳಿಸುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಔಪಚಾರಿಕ ಮೂರು ಹಂತದ ಪರಿಹಾರ ವ್ಯವಸ್ಥೆಯನ್ನು ಹೊಂದಿರುವುದು ದೀರ್ಘಾವಧಿಯಲ್ಲಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಮಾತ್ರ ಸಹಾಯ ಮಾಡುತ್ತದೆ ಎಂದು ಖರೆ ಹೇಳಿದರು. “ಪ್ರಸ್ತುತ, ವಿಭಿನ್ನ ವೆಬ್ ಸರಣಿಗಳ ವಿರುದ್ಧ ಹಲವಾರು ಎಫ್‌ಐಆರ್ ದಾಖಲಿಸಲಾಗಿದೆ. ಕುಂದುಕೊರತೆ ಪರಿಹಾರ ಮತ್ತು ಮೇಲ್ಮನವಿಯ ಔಪಚಾರಿಕ ಕಾರ್ಯವಿಧಾನವಿದ್ದರೆ, ಈ ವೇದಿಕೆಗಳು ಈ ಕಾರ್ಯವಿಧಾನವನ್ನು ನ್ಯಾಯಾಲಯಗಳಿಗೆ ತಿಳಿಸಬಹುದು ಮತ್ತು ನ್ಯಾಯಾಲಯಗಳು ಯಾವಾಗಲೂ ಈ ಸಂಸ್ಥೆಗಳನ್ನು ಸಮೀಪಿಸಲು ನಾಗರಿಕರನ್ನು ಪ್ರೋತ್ಸಾಹಿಸುತ್ತದೆ’ ಎಂದಿದ್ದಾರೆ.


ಇದನ್ನೂ ಓದಿ: ಹರಿಯಾಣ: ರೈತರಿಗೆ ಬೆಂಬಲ ನೀಡಿದ ಪಕ್ಷೇತರ ಶಾಸಕನ ಮನೆ, ಕಛೇರಿ ಮೇಲೆ ಐಟಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...