Homeಮುಖಪುಟಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

ಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’

- Advertisement -
- Advertisement -

ಆನ್‌ಲೈನ್ ಸುದ್ದಿ ಮಾಧ್ಯಮಗಳ ಸಂಪೂರ್ಣ ಚಿತ್ರಣವನ್ನು ಪಡೆಯಲು ಸರ್ಕಾರ ಪ್ರಯತ್ನಿಸುತ್ತಿರುವುದರಿಂದ, ಡಿಜಿಟಲ್ ನ್ಯೂಸ್ ಪೋರ್ಟಲ್‌ಗಳು ತಮ್ಮ ಸಂಪಾದಕೀಯ ಮುಖ್ಯಸ್ಥರು, ಮಾಲೀಕತ್ವ, ವಿಳಾಸ ಮತ್ತು ಗೊತ್ತು ಪಡಿಸಿದ ಕುಂದುಕೊರತೆ ಅಧಿಕಾರಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿವರಗಳನ್ನು ಮಾಹಿತಿ ಮತ್ತು ಪ್ರಸಾರ (ಐ&ಬಿ) ಸಚಿವಾಲಯಕ್ಕೆ ಶೀಘ್ರದಲ್ಲೇ ಒದಗಿಸಬೇಕಾಗುತ್ತದೆ ಎಂದು ಐ&ಬಿ ಕಾರ್ಯದರ್ಶಿ ಅಮಿತ್ ಖರೆ ತಿಳಿಸಿದ್ದಾರೆ.

“ಪ್ರಸ್ತುತ, ಈ ವಲಯದಲ್ಲಿ ಎಷ್ಟು ಸಂಸ್ಥೆಗಳಿವೆ ಮತ್ತು ಅವರು ಯಾರೆಂಬುದರ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಚಿತ್ರಣವಿಲ್ಲ” ಎಂದು ಅವರು ಹೇಳಿದರು. “ನೀವು ಅವರ ವೆಬ್‌ಸೈಟ್‌ಗಳಿಗೆ ಲಾಗ್ ಇನ್ ಮಾಡಿದರೆ, ಅವರ ಕಚೇರಿ ವಿಳಾಸ ಅಥವಾ ಪ್ರಧಾನ ಸಂಪಾದಕರ ಕುರಿತ  ಮೂಲ ಮಾಹಿತಿ ಸಹ ಸಿಗುವುದಿಲ್ಲ’ ಎಂದು ಖರೆ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ಉಲ್ಲೆಖಿಸಿದೆ.

ಮೂಲಗಳ ಪ್ರಕಾರ, ಒಂದು ತಿಂಗಳಲ್ಲಿ ಎಲ್ಲಾ ಡಿಜಿಟಲ್ ಸುದ್ದಿ ಸಂಸ್ಥೆಗಳು ಮೇಲೆ ಉಲ್ಲೇಖಿಸಿದ ವಿವರಗಳನ್ನು ಭರ್ತಿ ಮಾಡಿ ಸಚಿವಾಲಯಕ್ಕೆ ಸಲ್ಲಿಸಬೇಕಾದ ಫಾರ್ಮ್ ಅನ್ನು ಸಚಿವಾಲಯ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: ಸ್ಮಾರ್ಟ್‌ ಸಿಟಿ ನಿರ್ಮಾಣ, ನದಿಗಳನ್ನು ಸ್ವಚ್ಚಗೊಳಿಸುವುದು ಯಾವಾಗ? ಬಿಜೆಪಿ ಉತ್ತರಿಸಲಿ: ಅಖಿಲೇಶ್

ಗುರುವಾರ (ಫೆ.25) ಐ & ಬಿ ಸಚಿವ ಪ್ರಕಾಶ್ ಜಾವಡೇಕರ್ ಅವರು,  ಡಿಜಿಟಲ್ ಮೀಡಿಯಾ ಸಂಸ್ಥೆಗಳ ಬಗೆಗಿನ ಮಾಹಿತಿಯ ಕೊರತೆಯೇ, ಈ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಕ್ಕೆ ಮೊದಲು ಅವರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿರಲು ಕಾರಣ ಎಂದು ತಿಳಿಸಿದ್ದಾರೆ.

ಕಾರ್ಯದರ್ಶಿ ಖರೆ ಪ್ರಕಾರ, ವೆಬ್‌ಸೈಟ್‌ಗಳು, ಮುದ್ರಣ ಮತ್ತು ಟಿವಿ ಮಾಧ್ಯಮ ಈಗಾಗಲೇ ಅನುಸರಿಸುತ್ತಿರುವ  ಸ್ಥಾಪಿತ ನೀತಿ ಸಂಹಿತೆಯನ್ನು ಮಾತ್ರ ಅನುಸರಿಸುವ ನಿರೀಕ್ಷೆಯಿದೆ. ಅವರ ಮೇಲೆ ಹೊಸ ಬಾಧ್ಯತೆಯಿಲ್ಲ ಎಂದು ಹೇಳಿದ್ದಾರೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ಡಿಜಿಟಲ್ ನ್ಯೂಸ್ ಔಟ್‌ಲೆಟ್‌ಗಳು ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ ನಿಯಂತ್ರಣ ಕಾಯ್ದೆ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಪತ್ರಿಕೋದ್ಯಮ ನಡವಳಿಕೆಯ ಮಾನದಂಡಗಳ ಅಡಿಯಲ್ಲಿ ಪ್ರೋಗ್ರಾಂ ಕೋಡ್ ಅನ್ನು ಅನುಸರಿಸಬೇಕಾಗುತ್ತದೆ. ಇದು ಟಿವಿ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಹಾಕುವ ಕಂಟೆಂಟ್ ಹೇಗಿರಬೇಕು ಎಂಬುದನ್ನು ಸೂಚಿಸುತ್ತದೆ.

ಮುದ್ರಣಕ್ಕಾಗಿ ಅಂತಹ ಯಾವುದೇ ಸಮಿತಿ ಇಲ್ಲದಿದ್ದಾಗ ಡಿಜಿಟಲ್ ನ್ಯೂಸ್ ವೆಬ್‌ಸೈಟ್‌ಗಳಿಗಾಗಿ ಸರ್ಕಾರದ ಮೇಲ್ವಿಚಾರಣಾ ಕಾರ್ಯವಿಧಾನವನ್ನು ಸ್ಥಾಪಿಸುವ ಅಗತ್ಯತೆಯ ಬಗ್ಗೆ ಮಾತನಾಡಿರುವ ಅಮಿತ್ ಖರೆ, ’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: `ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

ಒಟಿಟಿ ಪ್ಲಾಟ್‌ಫಾರ್ಮ್‌ಗಳಿಂದ ಬಂದ ಸಮಾಲೋಚನೆಯ ಬಗ್ಗೆ ಇದೇ ರೀತಿಯ ಟೀಕೆಗಳನ್ನು ಖರೆ ತಳ್ಳಿಹಾಕಿದರು. ’ಐ & ಬಿ ಸಚಿವರು ದೆಹಲಿಯಲ್ಲಿ ಎರಡು ಬಾರಿ ಭೇಟಿಯಾದರು. ಮುಂಬೈ ಮತ್ತು ಚೆನ್ನೈನಲ್ಲಿ ನಾವು ಎರಡು ಸುತ್ತಿನ ಚರ್ಚೆ ನಡೆಸಿದೆವು. ಸಮಾಲೋಚನೆ ಎಂದರೆ ಸಮ್ಮತಿ ಎಂದಲ್ಲ. ತಾತ್ವಿಕವಾಗಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಸ್ವಯಂ ನಿಯಂತ್ರಣಕ್ಕೆ ಒಪ್ಪಿಕೊಂಡಿವೆ, ಆದರೆ ಅವರ ಪ್ರಸ್ತಾಪವು ಮೇಲ್ವಿಚಾರಣೆ ಮತ್ತು ಮೇಲ್ಮನವಿಗಳಿಗಾಗಿ ಸ್ವತಂತ್ರ ಸಂಸ್ಥೆಯನ್ನು ಹೊಂದಿರಲಿಲ್ಲ. ಅವರು ಆಂತರಿಕವಾಗಿ ಕುಂದುಕೊರತೆಗಳನ್ನು ಪರಿಹರಿಸಲು ಬಯಸಿದ್ದರು ಆದರೆ ಯಾವುದೇ ಮೇಲ್ಮನವಿಯ ವ್ಯವಸ್ಥೆ ಇರಲಿಲ್ಲ. ಅದು ನಮಗೆ ಸ್ವೀಕಾರಾರ್ಹವಲ್ಲ’ ಎಂದು ಖರೆ ತಿಳಿಸಿದ್ದಾರೆ.

ಒಟಿಟಿ ಪ್ಲಾಟ್‌ಫಾರ್ಮ್‌ಗಳ ಕೆಲಸದಲ್ಲಿ ಸರ್ಕಾರದ ಅತಿಯಾದ ಹಸ್ತಕ್ಷೇಪದ ಭೀತಿಯ ಬಗಿಗಿನ ಪ್ರಶ್ನೆಗೆ ಉತ್ತರಿಸಿರುವ ಖರೆ, ’ಅಂತಹ ಸಂದೇಹಗಳು ಆಧಾರರಹಿತವಾಗಿವೆ ಎಂದಿದ್ದಾರೆ. ’ಏಕೆಂದರೆ ಮಾರ್ಗಸೂಚಿಗಳು ಒಟಿಟಿ ಮತ್ತು ಆನ್‌ಲೈನ್ ಮಾಧ್ಯಮಗಳಿಗೆ ಮೃದು-ಸ್ಪರ್ಶ ಸ್ವಯಂ-ನಿಯಂತ್ರಣ ಮಾದರಿಯನ್ನು ಪ್ರಸ್ತಾಪಿಸುತ್ತವೆ. “ಇದು ಒಟಿಟಿ ಪ್ಲಾಟ್‌ಫಾರ್ಮ್‌ಗಳ ಸೃಜನಶೀಲತೆ ಮತ್ತು ನಾಗರಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸುವ ಹಕ್ಕುಗಳನ್ನು ಸಮತೋಲನಗೊಳಿಸುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಔಪಚಾರಿಕ ಮೂರು ಹಂತದ ಪರಿಹಾರ ವ್ಯವಸ್ಥೆಯನ್ನು ಹೊಂದಿರುವುದು ದೀರ್ಘಾವಧಿಯಲ್ಲಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಮಾತ್ರ ಸಹಾಯ ಮಾಡುತ್ತದೆ ಎಂದು ಖರೆ ಹೇಳಿದರು. “ಪ್ರಸ್ತುತ, ವಿಭಿನ್ನ ವೆಬ್ ಸರಣಿಗಳ ವಿರುದ್ಧ ಹಲವಾರು ಎಫ್‌ಐಆರ್ ದಾಖಲಿಸಲಾಗಿದೆ. ಕುಂದುಕೊರತೆ ಪರಿಹಾರ ಮತ್ತು ಮೇಲ್ಮನವಿಯ ಔಪಚಾರಿಕ ಕಾರ್ಯವಿಧಾನವಿದ್ದರೆ, ಈ ವೇದಿಕೆಗಳು ಈ ಕಾರ್ಯವಿಧಾನವನ್ನು ನ್ಯಾಯಾಲಯಗಳಿಗೆ ತಿಳಿಸಬಹುದು ಮತ್ತು ನ್ಯಾಯಾಲಯಗಳು ಯಾವಾಗಲೂ ಈ ಸಂಸ್ಥೆಗಳನ್ನು ಸಮೀಪಿಸಲು ನಾಗರಿಕರನ್ನು ಪ್ರೋತ್ಸಾಹಿಸುತ್ತದೆ’ ಎಂದಿದ್ದಾರೆ.


ಇದನ್ನೂ ಓದಿ: ಹರಿಯಾಣ: ರೈತರಿಗೆ ಬೆಂಬಲ ನೀಡಿದ ಪಕ್ಷೇತರ ಶಾಸಕನ ಮನೆ, ಕಛೇರಿ ಮೇಲೆ ಐಟಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...