Homeಮುಖಪುಟಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

ಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’

- Advertisement -
- Advertisement -

ಆನ್‌ಲೈನ್ ಸುದ್ದಿ ಮಾಧ್ಯಮಗಳ ಸಂಪೂರ್ಣ ಚಿತ್ರಣವನ್ನು ಪಡೆಯಲು ಸರ್ಕಾರ ಪ್ರಯತ್ನಿಸುತ್ತಿರುವುದರಿಂದ, ಡಿಜಿಟಲ್ ನ್ಯೂಸ್ ಪೋರ್ಟಲ್‌ಗಳು ತಮ್ಮ ಸಂಪಾದಕೀಯ ಮುಖ್ಯಸ್ಥರು, ಮಾಲೀಕತ್ವ, ವಿಳಾಸ ಮತ್ತು ಗೊತ್ತು ಪಡಿಸಿದ ಕುಂದುಕೊರತೆ ಅಧಿಕಾರಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿವರಗಳನ್ನು ಮಾಹಿತಿ ಮತ್ತು ಪ್ರಸಾರ (ಐ&ಬಿ) ಸಚಿವಾಲಯಕ್ಕೆ ಶೀಘ್ರದಲ್ಲೇ ಒದಗಿಸಬೇಕಾಗುತ್ತದೆ ಎಂದು ಐ&ಬಿ ಕಾರ್ಯದರ್ಶಿ ಅಮಿತ್ ಖರೆ ತಿಳಿಸಿದ್ದಾರೆ.

“ಪ್ರಸ್ತುತ, ಈ ವಲಯದಲ್ಲಿ ಎಷ್ಟು ಸಂಸ್ಥೆಗಳಿವೆ ಮತ್ತು ಅವರು ಯಾರೆಂಬುದರ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಚಿತ್ರಣವಿಲ್ಲ” ಎಂದು ಅವರು ಹೇಳಿದರು. “ನೀವು ಅವರ ವೆಬ್‌ಸೈಟ್‌ಗಳಿಗೆ ಲಾಗ್ ಇನ್ ಮಾಡಿದರೆ, ಅವರ ಕಚೇರಿ ವಿಳಾಸ ಅಥವಾ ಪ್ರಧಾನ ಸಂಪಾದಕರ ಕುರಿತ  ಮೂಲ ಮಾಹಿತಿ ಸಹ ಸಿಗುವುದಿಲ್ಲ’ ಎಂದು ಖರೆ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ಉಲ್ಲೆಖಿಸಿದೆ.

ಮೂಲಗಳ ಪ್ರಕಾರ, ಒಂದು ತಿಂಗಳಲ್ಲಿ ಎಲ್ಲಾ ಡಿಜಿಟಲ್ ಸುದ್ದಿ ಸಂಸ್ಥೆಗಳು ಮೇಲೆ ಉಲ್ಲೇಖಿಸಿದ ವಿವರಗಳನ್ನು ಭರ್ತಿ ಮಾಡಿ ಸಚಿವಾಲಯಕ್ಕೆ ಸಲ್ಲಿಸಬೇಕಾದ ಫಾರ್ಮ್ ಅನ್ನು ಸಚಿವಾಲಯ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: ಸ್ಮಾರ್ಟ್‌ ಸಿಟಿ ನಿರ್ಮಾಣ, ನದಿಗಳನ್ನು ಸ್ವಚ್ಚಗೊಳಿಸುವುದು ಯಾವಾಗ? ಬಿಜೆಪಿ ಉತ್ತರಿಸಲಿ: ಅಖಿಲೇಶ್

ಗುರುವಾರ (ಫೆ.25) ಐ & ಬಿ ಸಚಿವ ಪ್ರಕಾಶ್ ಜಾವಡೇಕರ್ ಅವರು,  ಡಿಜಿಟಲ್ ಮೀಡಿಯಾ ಸಂಸ್ಥೆಗಳ ಬಗೆಗಿನ ಮಾಹಿತಿಯ ಕೊರತೆಯೇ, ಈ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಕ್ಕೆ ಮೊದಲು ಅವರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿರಲು ಕಾರಣ ಎಂದು ತಿಳಿಸಿದ್ದಾರೆ.

ಕಾರ್ಯದರ್ಶಿ ಖರೆ ಪ್ರಕಾರ, ವೆಬ್‌ಸೈಟ್‌ಗಳು, ಮುದ್ರಣ ಮತ್ತು ಟಿವಿ ಮಾಧ್ಯಮ ಈಗಾಗಲೇ ಅನುಸರಿಸುತ್ತಿರುವ  ಸ್ಥಾಪಿತ ನೀತಿ ಸಂಹಿತೆಯನ್ನು ಮಾತ್ರ ಅನುಸರಿಸುವ ನಿರೀಕ್ಷೆಯಿದೆ. ಅವರ ಮೇಲೆ ಹೊಸ ಬಾಧ್ಯತೆಯಿಲ್ಲ ಎಂದು ಹೇಳಿದ್ದಾರೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ಡಿಜಿಟಲ್ ನ್ಯೂಸ್ ಔಟ್‌ಲೆಟ್‌ಗಳು ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ ನಿಯಂತ್ರಣ ಕಾಯ್ದೆ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಪತ್ರಿಕೋದ್ಯಮ ನಡವಳಿಕೆಯ ಮಾನದಂಡಗಳ ಅಡಿಯಲ್ಲಿ ಪ್ರೋಗ್ರಾಂ ಕೋಡ್ ಅನ್ನು ಅನುಸರಿಸಬೇಕಾಗುತ್ತದೆ. ಇದು ಟಿವಿ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಹಾಕುವ ಕಂಟೆಂಟ್ ಹೇಗಿರಬೇಕು ಎಂಬುದನ್ನು ಸೂಚಿಸುತ್ತದೆ.

ಮುದ್ರಣಕ್ಕಾಗಿ ಅಂತಹ ಯಾವುದೇ ಸಮಿತಿ ಇಲ್ಲದಿದ್ದಾಗ ಡಿಜಿಟಲ್ ನ್ಯೂಸ್ ವೆಬ್‌ಸೈಟ್‌ಗಳಿಗಾಗಿ ಸರ್ಕಾರದ ಮೇಲ್ವಿಚಾರಣಾ ಕಾರ್ಯವಿಧಾನವನ್ನು ಸ್ಥಾಪಿಸುವ ಅಗತ್ಯತೆಯ ಬಗ್ಗೆ ಮಾತನಾಡಿರುವ ಅಮಿತ್ ಖರೆ, ’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: `ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

ಒಟಿಟಿ ಪ್ಲಾಟ್‌ಫಾರ್ಮ್‌ಗಳಿಂದ ಬಂದ ಸಮಾಲೋಚನೆಯ ಬಗ್ಗೆ ಇದೇ ರೀತಿಯ ಟೀಕೆಗಳನ್ನು ಖರೆ ತಳ್ಳಿಹಾಕಿದರು. ’ಐ & ಬಿ ಸಚಿವರು ದೆಹಲಿಯಲ್ಲಿ ಎರಡು ಬಾರಿ ಭೇಟಿಯಾದರು. ಮುಂಬೈ ಮತ್ತು ಚೆನ್ನೈನಲ್ಲಿ ನಾವು ಎರಡು ಸುತ್ತಿನ ಚರ್ಚೆ ನಡೆಸಿದೆವು. ಸಮಾಲೋಚನೆ ಎಂದರೆ ಸಮ್ಮತಿ ಎಂದಲ್ಲ. ತಾತ್ವಿಕವಾಗಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಸ್ವಯಂ ನಿಯಂತ್ರಣಕ್ಕೆ ಒಪ್ಪಿಕೊಂಡಿವೆ, ಆದರೆ ಅವರ ಪ್ರಸ್ತಾಪವು ಮೇಲ್ವಿಚಾರಣೆ ಮತ್ತು ಮೇಲ್ಮನವಿಗಳಿಗಾಗಿ ಸ್ವತಂತ್ರ ಸಂಸ್ಥೆಯನ್ನು ಹೊಂದಿರಲಿಲ್ಲ. ಅವರು ಆಂತರಿಕವಾಗಿ ಕುಂದುಕೊರತೆಗಳನ್ನು ಪರಿಹರಿಸಲು ಬಯಸಿದ್ದರು ಆದರೆ ಯಾವುದೇ ಮೇಲ್ಮನವಿಯ ವ್ಯವಸ್ಥೆ ಇರಲಿಲ್ಲ. ಅದು ನಮಗೆ ಸ್ವೀಕಾರಾರ್ಹವಲ್ಲ’ ಎಂದು ಖರೆ ತಿಳಿಸಿದ್ದಾರೆ.

ಒಟಿಟಿ ಪ್ಲಾಟ್‌ಫಾರ್ಮ್‌ಗಳ ಕೆಲಸದಲ್ಲಿ ಸರ್ಕಾರದ ಅತಿಯಾದ ಹಸ್ತಕ್ಷೇಪದ ಭೀತಿಯ ಬಗಿಗಿನ ಪ್ರಶ್ನೆಗೆ ಉತ್ತರಿಸಿರುವ ಖರೆ, ’ಅಂತಹ ಸಂದೇಹಗಳು ಆಧಾರರಹಿತವಾಗಿವೆ ಎಂದಿದ್ದಾರೆ. ’ಏಕೆಂದರೆ ಮಾರ್ಗಸೂಚಿಗಳು ಒಟಿಟಿ ಮತ್ತು ಆನ್‌ಲೈನ್ ಮಾಧ್ಯಮಗಳಿಗೆ ಮೃದು-ಸ್ಪರ್ಶ ಸ್ವಯಂ-ನಿಯಂತ್ರಣ ಮಾದರಿಯನ್ನು ಪ್ರಸ್ತಾಪಿಸುತ್ತವೆ. “ಇದು ಒಟಿಟಿ ಪ್ಲಾಟ್‌ಫಾರ್ಮ್‌ಗಳ ಸೃಜನಶೀಲತೆ ಮತ್ತು ನಾಗರಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸುವ ಹಕ್ಕುಗಳನ್ನು ಸಮತೋಲನಗೊಳಿಸುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಔಪಚಾರಿಕ ಮೂರು ಹಂತದ ಪರಿಹಾರ ವ್ಯವಸ್ಥೆಯನ್ನು ಹೊಂದಿರುವುದು ದೀರ್ಘಾವಧಿಯಲ್ಲಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಮಾತ್ರ ಸಹಾಯ ಮಾಡುತ್ತದೆ ಎಂದು ಖರೆ ಹೇಳಿದರು. “ಪ್ರಸ್ತುತ, ವಿಭಿನ್ನ ವೆಬ್ ಸರಣಿಗಳ ವಿರುದ್ಧ ಹಲವಾರು ಎಫ್‌ಐಆರ್ ದಾಖಲಿಸಲಾಗಿದೆ. ಕುಂದುಕೊರತೆ ಪರಿಹಾರ ಮತ್ತು ಮೇಲ್ಮನವಿಯ ಔಪಚಾರಿಕ ಕಾರ್ಯವಿಧಾನವಿದ್ದರೆ, ಈ ವೇದಿಕೆಗಳು ಈ ಕಾರ್ಯವಿಧಾನವನ್ನು ನ್ಯಾಯಾಲಯಗಳಿಗೆ ತಿಳಿಸಬಹುದು ಮತ್ತು ನ್ಯಾಯಾಲಯಗಳು ಯಾವಾಗಲೂ ಈ ಸಂಸ್ಥೆಗಳನ್ನು ಸಮೀಪಿಸಲು ನಾಗರಿಕರನ್ನು ಪ್ರೋತ್ಸಾಹಿಸುತ್ತದೆ’ ಎಂದಿದ್ದಾರೆ.


ಇದನ್ನೂ ಓದಿ: ಹರಿಯಾಣ: ರೈತರಿಗೆ ಬೆಂಬಲ ನೀಡಿದ ಪಕ್ಷೇತರ ಶಾಸಕನ ಮನೆ, ಕಛೇರಿ ಮೇಲೆ ಐಟಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...