Homeಮುಖಪುಟಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

ಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’

- Advertisement -
- Advertisement -

ಆನ್‌ಲೈನ್ ಸುದ್ದಿ ಮಾಧ್ಯಮಗಳ ಸಂಪೂರ್ಣ ಚಿತ್ರಣವನ್ನು ಪಡೆಯಲು ಸರ್ಕಾರ ಪ್ರಯತ್ನಿಸುತ್ತಿರುವುದರಿಂದ, ಡಿಜಿಟಲ್ ನ್ಯೂಸ್ ಪೋರ್ಟಲ್‌ಗಳು ತಮ್ಮ ಸಂಪಾದಕೀಯ ಮುಖ್ಯಸ್ಥರು, ಮಾಲೀಕತ್ವ, ವಿಳಾಸ ಮತ್ತು ಗೊತ್ತು ಪಡಿಸಿದ ಕುಂದುಕೊರತೆ ಅಧಿಕಾರಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿವರಗಳನ್ನು ಮಾಹಿತಿ ಮತ್ತು ಪ್ರಸಾರ (ಐ&ಬಿ) ಸಚಿವಾಲಯಕ್ಕೆ ಶೀಘ್ರದಲ್ಲೇ ಒದಗಿಸಬೇಕಾಗುತ್ತದೆ ಎಂದು ಐ&ಬಿ ಕಾರ್ಯದರ್ಶಿ ಅಮಿತ್ ಖರೆ ತಿಳಿಸಿದ್ದಾರೆ.

“ಪ್ರಸ್ತುತ, ಈ ವಲಯದಲ್ಲಿ ಎಷ್ಟು ಸಂಸ್ಥೆಗಳಿವೆ ಮತ್ತು ಅವರು ಯಾರೆಂಬುದರ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಚಿತ್ರಣವಿಲ್ಲ” ಎಂದು ಅವರು ಹೇಳಿದರು. “ನೀವು ಅವರ ವೆಬ್‌ಸೈಟ್‌ಗಳಿಗೆ ಲಾಗ್ ಇನ್ ಮಾಡಿದರೆ, ಅವರ ಕಚೇರಿ ವಿಳಾಸ ಅಥವಾ ಪ್ರಧಾನ ಸಂಪಾದಕರ ಕುರಿತ  ಮೂಲ ಮಾಹಿತಿ ಸಹ ಸಿಗುವುದಿಲ್ಲ’ ಎಂದು ಖರೆ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ಉಲ್ಲೆಖಿಸಿದೆ.

ಮೂಲಗಳ ಪ್ರಕಾರ, ಒಂದು ತಿಂಗಳಲ್ಲಿ ಎಲ್ಲಾ ಡಿಜಿಟಲ್ ಸುದ್ದಿ ಸಂಸ್ಥೆಗಳು ಮೇಲೆ ಉಲ್ಲೇಖಿಸಿದ ವಿವರಗಳನ್ನು ಭರ್ತಿ ಮಾಡಿ ಸಚಿವಾಲಯಕ್ಕೆ ಸಲ್ಲಿಸಬೇಕಾದ ಫಾರ್ಮ್ ಅನ್ನು ಸಚಿವಾಲಯ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: ಸ್ಮಾರ್ಟ್‌ ಸಿಟಿ ನಿರ್ಮಾಣ, ನದಿಗಳನ್ನು ಸ್ವಚ್ಚಗೊಳಿಸುವುದು ಯಾವಾಗ? ಬಿಜೆಪಿ ಉತ್ತರಿಸಲಿ: ಅಖಿಲೇಶ್

ಗುರುವಾರ (ಫೆ.25) ಐ & ಬಿ ಸಚಿವ ಪ್ರಕಾಶ್ ಜಾವಡೇಕರ್ ಅವರು,  ಡಿಜಿಟಲ್ ಮೀಡಿಯಾ ಸಂಸ್ಥೆಗಳ ಬಗೆಗಿನ ಮಾಹಿತಿಯ ಕೊರತೆಯೇ, ಈ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಕ್ಕೆ ಮೊದಲು ಅವರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿರಲು ಕಾರಣ ಎಂದು ತಿಳಿಸಿದ್ದಾರೆ.

ಕಾರ್ಯದರ್ಶಿ ಖರೆ ಪ್ರಕಾರ, ವೆಬ್‌ಸೈಟ್‌ಗಳು, ಮುದ್ರಣ ಮತ್ತು ಟಿವಿ ಮಾಧ್ಯಮ ಈಗಾಗಲೇ ಅನುಸರಿಸುತ್ತಿರುವ  ಸ್ಥಾಪಿತ ನೀತಿ ಸಂಹಿತೆಯನ್ನು ಮಾತ್ರ ಅನುಸರಿಸುವ ನಿರೀಕ್ಷೆಯಿದೆ. ಅವರ ಮೇಲೆ ಹೊಸ ಬಾಧ್ಯತೆಯಿಲ್ಲ ಎಂದು ಹೇಳಿದ್ದಾರೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ಡಿಜಿಟಲ್ ನ್ಯೂಸ್ ಔಟ್‌ಲೆಟ್‌ಗಳು ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ ನಿಯಂತ್ರಣ ಕಾಯ್ದೆ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಪತ್ರಿಕೋದ್ಯಮ ನಡವಳಿಕೆಯ ಮಾನದಂಡಗಳ ಅಡಿಯಲ್ಲಿ ಪ್ರೋಗ್ರಾಂ ಕೋಡ್ ಅನ್ನು ಅನುಸರಿಸಬೇಕಾಗುತ್ತದೆ. ಇದು ಟಿವಿ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಹಾಕುವ ಕಂಟೆಂಟ್ ಹೇಗಿರಬೇಕು ಎಂಬುದನ್ನು ಸೂಚಿಸುತ್ತದೆ.

ಮುದ್ರಣಕ್ಕಾಗಿ ಅಂತಹ ಯಾವುದೇ ಸಮಿತಿ ಇಲ್ಲದಿದ್ದಾಗ ಡಿಜಿಟಲ್ ನ್ಯೂಸ್ ವೆಬ್‌ಸೈಟ್‌ಗಳಿಗಾಗಿ ಸರ್ಕಾರದ ಮೇಲ್ವಿಚಾರಣಾ ಕಾರ್ಯವಿಧಾನವನ್ನು ಸ್ಥಾಪಿಸುವ ಅಗತ್ಯತೆಯ ಬಗ್ಗೆ ಮಾತನಾಡಿರುವ ಅಮಿತ್ ಖರೆ, ’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: `ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

ಒಟಿಟಿ ಪ್ಲಾಟ್‌ಫಾರ್ಮ್‌ಗಳಿಂದ ಬಂದ ಸಮಾಲೋಚನೆಯ ಬಗ್ಗೆ ಇದೇ ರೀತಿಯ ಟೀಕೆಗಳನ್ನು ಖರೆ ತಳ್ಳಿಹಾಕಿದರು. ’ಐ & ಬಿ ಸಚಿವರು ದೆಹಲಿಯಲ್ಲಿ ಎರಡು ಬಾರಿ ಭೇಟಿಯಾದರು. ಮುಂಬೈ ಮತ್ತು ಚೆನ್ನೈನಲ್ಲಿ ನಾವು ಎರಡು ಸುತ್ತಿನ ಚರ್ಚೆ ನಡೆಸಿದೆವು. ಸಮಾಲೋಚನೆ ಎಂದರೆ ಸಮ್ಮತಿ ಎಂದಲ್ಲ. ತಾತ್ವಿಕವಾಗಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಸ್ವಯಂ ನಿಯಂತ್ರಣಕ್ಕೆ ಒಪ್ಪಿಕೊಂಡಿವೆ, ಆದರೆ ಅವರ ಪ್ರಸ್ತಾಪವು ಮೇಲ್ವಿಚಾರಣೆ ಮತ್ತು ಮೇಲ್ಮನವಿಗಳಿಗಾಗಿ ಸ್ವತಂತ್ರ ಸಂಸ್ಥೆಯನ್ನು ಹೊಂದಿರಲಿಲ್ಲ. ಅವರು ಆಂತರಿಕವಾಗಿ ಕುಂದುಕೊರತೆಗಳನ್ನು ಪರಿಹರಿಸಲು ಬಯಸಿದ್ದರು ಆದರೆ ಯಾವುದೇ ಮೇಲ್ಮನವಿಯ ವ್ಯವಸ್ಥೆ ಇರಲಿಲ್ಲ. ಅದು ನಮಗೆ ಸ್ವೀಕಾರಾರ್ಹವಲ್ಲ’ ಎಂದು ಖರೆ ತಿಳಿಸಿದ್ದಾರೆ.

ಒಟಿಟಿ ಪ್ಲಾಟ್‌ಫಾರ್ಮ್‌ಗಳ ಕೆಲಸದಲ್ಲಿ ಸರ್ಕಾರದ ಅತಿಯಾದ ಹಸ್ತಕ್ಷೇಪದ ಭೀತಿಯ ಬಗಿಗಿನ ಪ್ರಶ್ನೆಗೆ ಉತ್ತರಿಸಿರುವ ಖರೆ, ’ಅಂತಹ ಸಂದೇಹಗಳು ಆಧಾರರಹಿತವಾಗಿವೆ ಎಂದಿದ್ದಾರೆ. ’ಏಕೆಂದರೆ ಮಾರ್ಗಸೂಚಿಗಳು ಒಟಿಟಿ ಮತ್ತು ಆನ್‌ಲೈನ್ ಮಾಧ್ಯಮಗಳಿಗೆ ಮೃದು-ಸ್ಪರ್ಶ ಸ್ವಯಂ-ನಿಯಂತ್ರಣ ಮಾದರಿಯನ್ನು ಪ್ರಸ್ತಾಪಿಸುತ್ತವೆ. “ಇದು ಒಟಿಟಿ ಪ್ಲಾಟ್‌ಫಾರ್ಮ್‌ಗಳ ಸೃಜನಶೀಲತೆ ಮತ್ತು ನಾಗರಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸುವ ಹಕ್ಕುಗಳನ್ನು ಸಮತೋಲನಗೊಳಿಸುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಔಪಚಾರಿಕ ಮೂರು ಹಂತದ ಪರಿಹಾರ ವ್ಯವಸ್ಥೆಯನ್ನು ಹೊಂದಿರುವುದು ದೀರ್ಘಾವಧಿಯಲ್ಲಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಮಾತ್ರ ಸಹಾಯ ಮಾಡುತ್ತದೆ ಎಂದು ಖರೆ ಹೇಳಿದರು. “ಪ್ರಸ್ತುತ, ವಿಭಿನ್ನ ವೆಬ್ ಸರಣಿಗಳ ವಿರುದ್ಧ ಹಲವಾರು ಎಫ್‌ಐಆರ್ ದಾಖಲಿಸಲಾಗಿದೆ. ಕುಂದುಕೊರತೆ ಪರಿಹಾರ ಮತ್ತು ಮೇಲ್ಮನವಿಯ ಔಪಚಾರಿಕ ಕಾರ್ಯವಿಧಾನವಿದ್ದರೆ, ಈ ವೇದಿಕೆಗಳು ಈ ಕಾರ್ಯವಿಧಾನವನ್ನು ನ್ಯಾಯಾಲಯಗಳಿಗೆ ತಿಳಿಸಬಹುದು ಮತ್ತು ನ್ಯಾಯಾಲಯಗಳು ಯಾವಾಗಲೂ ಈ ಸಂಸ್ಥೆಗಳನ್ನು ಸಮೀಪಿಸಲು ನಾಗರಿಕರನ್ನು ಪ್ರೋತ್ಸಾಹಿಸುತ್ತದೆ’ ಎಂದಿದ್ದಾರೆ.


ಇದನ್ನೂ ಓದಿ: ಹರಿಯಾಣ: ರೈತರಿಗೆ ಬೆಂಬಲ ನೀಡಿದ ಪಕ್ಷೇತರ ಶಾಸಕನ ಮನೆ, ಕಛೇರಿ ಮೇಲೆ ಐಟಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...