Homeಚಳವಳಿಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ಈಗ ದೆಹಲಿಯಲ್ಲಿ ಬೀಡುಬಿಟ್ಟಿರುವ ಲಕ್ಷಾಂತರ ರೈತರು ಮಾತ್ರವಲ್ಲದೆ ಇದಕ್ಕಿಂತಲೂ ಕನಿಷ್ಟ ಮೂರು ಪಟ್ಟು ಜನರು 26 ರ ಹೊತ್ತಿಗೆ ಬಂದು ಕೂಡಿಕೊಳ್ಳಲಿದ್ದಾರೆ. ಭಾರತದ ಧ್ವಜವನ್ನು ಕೈಯಲ್ಲಿಡಿದು ಕೆಂಪು ಕೋಟೆಯತ್ತ ಹೆಜ್ಜೆ ಹಾಕಲಿದ್ದಾರೆ. ಅರ್ಧ ಪಂಜಾಬ್ ದೆಹಲಿಯಲ್ಲಿರಲಿದೆ.

- Advertisement -
- Advertisement -

ನಿನ್ನೆ ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್, ಸೀತಾರಾಂ ಯಚೂರಿ ಒಳಗೊಂಡಂತೆ ಅನೇಕ ಮುಂದಾಳುಗಳು ಸಿಕ್ಕಿದ್ದರು. ಎಲ್ಲರ ಮಾತಿನ ಸಾರವನ್ನು ಒಂದು ವಾಕ್ಯದಲ್ಲಿ ಹೇಳಬೇಕೆಂದರೆ: “ಈ ಬಾರಿಯ ಗಣರಾಜ್ಯೋತ್ಸವ ಹೊಸ ಇತಿಹಾಸ ಬರಿಯಲಿದೆ”. ಇದರಲ್ಲಿ ಯಾವ ಸಂಶಯವೂ ಇಲ್ಲ. ಈಗ ದೆಹಲಿಯಲ್ಲಿ ಬೀಡುಬಿಟ್ಟಿರುವ ಲಕ್ಷಾಂತರ ರೈತರು ಮಾತ್ರವಲ್ಲದೆ ಇದಕ್ಕಿಂತಲೂ ಕನಿಷ್ಟ ಮೂರು ಪಟ್ಟು ಜನರು 26 ರ ಹೊತ್ತಿಗೆ ಬಂದು ಕೂಡಿಕೊಳ್ಳಲಿದ್ದಾರೆ. ಭಾರತದ ಧ್ವಜವನ್ನು ಕೈಯಲ್ಲಿಡಿದು ಕೆಂಪು ಕೋಟೆಯತ್ತ ಹೆಜ್ಜೆ ಹಾಕಲಿದ್ದಾರೆ. ಅರ್ಧ ಪಂಜಾಬ್ ದೆಹಲಿಯಲ್ಲಿರಲಿದೆ. ಹರಿಯಾಣಾದ ಪ್ರತಿ ಮನೆಯಿಂದ ಒಬ್ಬರು, ಪ್ರತಿ ಹಳ್ಳಿಯಿಂದ 10 ಟ್ರಾಕ್ಟರ್ ಹೊರಟು ಬರಬೇಕೆಂದು ಖಾಪ್ ಪಂಚಾಯಿತಿಗಳೇ ಘೋಷಿಸಿಯಾಗಿವೆ. ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಮಹರಾಷ್ಟ್ರ ಎಲ್ಲಾ ಕಡೆಯಿಂದ ಜನರು ಬಂದು ಸೇರುವುದು ಈಗಾಗಲೇ ಪ್ರಾರಂಭವಾಗಿದೆ. ಈ ಜನಸಾಗರವನ್ನು [ಗುಂಡು ಹಾರಿಸದೆ] ತಡಿಯುವುದು ಸೈನ್ಯದಿಂದಲೂ ಸಾಧ್ಯವಿಲ್ಲ. ರೈತರು ಶಪಥ ಗೈದಿದ್ದಾರೆ. ಸಾಯುತ್ತೇವೆ – ಆದರೆ ಹಿಂಸೆಗೆ ಇಳಿಯುವುದಿಲ್ಲ. ಈ ಅಹಿಂಸಾತ್ಮಕ ಜನಸಾಗರವನ್ನು ಎದುರಿಸುವ ನೈತಿಕ ಶಕ್ತಿ ಸರ್ಕಾರಕ್ಕಿಲ್ಲ. ಅದರ ಯಾವ ಚಾಣಕ್ಯ ನೀತಿಗಳೂ ಫಲಿಸುತ್ತಿಲ್ಲ. ಅದರೆ ಅದಾನಿ ಅಂಬಾನಿಗಳ ಸೇವೆ ಬಿಡಲು ಸಿದ್ಧವಿಲ್ಲ. ಪರಿಣಾಮ ಹಸ್ತಿನಾಪುರದಲ್ಲಿ ಇತಿಹಾಸ ಮರುಕಳಿಸಲಿದೆ. ಜನವರಿ 26ರಂದು ದೆಹಲಿಯಲ್ಲಿ ಶಾಂತಿಯುತ ಕುರುಕ್ಷೇತ್ರ ನಡೆಯಲಿದೆ. ಫಲಿತಾಂಶವನ್ನು ಸಧ್ಯಕ್ಕೆ ವರ್ತಮಾನಕ್ಕೆ ಬಿಡೋಣ. ಈಗ ನಮ್ಮ ಮುಂದಿನ ಚರ್ಚೆ ಅಂದಿಗಾಗಿ ಇಂದು ಮತ್ತು ಇಲ್ಲಿ ನಾವೇನು ಮಾಡೋಣ?

ದೆಹಲಿ ಹತ್ತಿರವಿದ್ದಿದ್ದರೆ, ಮೊದಲಿನಂತೆ ಸರಾಗವಾಗಿ ರೈಲು ಹತ್ತಿ ಟಿಕೆಟ್ ಇಲ್ಲದೆ ದೆಹಲಿಗೆ ಪಯಣಿಸುವಂತಿದ್ದರೆ, ನಾವೂ ಸಹ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕುರುಕ್ಷೇತ್ರದಲ್ಲಿ ಪಾಲ್ಗೊಳ್ಳಲು ಹೊರಡಬಹುದಿತ್ತು. ಆದರೆ ಅದು ಸಾಧ್ಯವಿಲ್ಲ. ಸಾಧ್ಯವಿರುವವರು ಅದಕ್ಕೂ ಹೊರಟರೆ ಒಳ್ಳೆಯದೆ. ಆದರೆ ನಾವೆಲ್ಲರೂ ಸೇರಿ ಅದೇ ದಿನ ಕರ್ನಾಟಕದಲ್ಲಿ ದುಡಿವವರ ದನಿ ಮೊಳಗುವಂತೆ ಮಾಡಲೇಬೇಕು. ಇದಕ್ಕಾಗಿಯೇ ಜನವರಿ 26ರಂದು ಬೆಂಗಳೂರಿನಲ್ಲಿ ರೈತ ಮತ್ತು ಸಮಸ್ತ ದುಡಿವ ಜನರ ಗಣರಾಜ್ಯೋತ್ಸವ ಪೆರೇಡಿಗೆ ಕರೆ ನೀಡಲಾಗಿದೆ. ಇದನ್ನು ಯಶಸ್ವಿಗೊಳಿಸಲು ನಮ್ಮಿಂದ ಸಾಧ್ಯವಿರುವುದನ್ನೆಲ್ಲಾ ಮಾಡಬೇಕು. ವೈಯಕ್ತಿಕವಾಗಿ ನಾನೇನು ಮಾಡಲಿದ್ದೇನೆ ಎಂಬ ಪ್ರಶ್ನೆಯನ್ನು ನಾವೆಲ್ಲರೂ ಹಾಕಿಕೊಳ್ಳಬೇಕು.

ಕೆಲವು ಸಲಹೆಗಳು:

1. ಜನವರಿ 25-26ನ್ನು ಈ ದೇಶದ ದುಡಿವ ಜನರಿಗೆಂದು ತೆಗೆದಿಡಲು ಸಾಧ್ಯವೆ? ನಿಮ್ಮ ಬಳಿ ಇರುವ ವಾಹನದ ಜೊತೆ, [ಕಾರು, ಟ್ರಾಕ್ಟರ್, ಜೀಪು, ಮೋಟಾರ್ ಬೈಕ್, ಸೈಕಲ್ ಯಾವುದಾದರೂ ಸರಿ] ಸಾಧ್ಯವಿರುವ ಮಿತ್ರರನ್ನು, ಕುಟುಂಬದ ಸದಸ್ಯರನ್ನು, ಜೊತೆಗೂಡಿಸಿಕೊಂಡು ಬೆಂಗಳೂರಿಗೆ ಬಂದು ಸೇರಲು ಸಿದ್ಧತೆ ಮಾಡಿಕೊಳ್ಳಬಹುದೆ?

2. ನಿಮ್ಮ ಊರಿನಲ್ಲಿ ಈಗಿನಿಂದಲೇ ನಿಮ್ಮದೇ ರೀತಿಯಲ್ಲಿ ಈ ಸಂದೇಶ ಎಲ್ಲರಿಗೂ ತಲುಪಿಸುವ ಕೆಲಸವನ್ನು ತಾವು ಮಾಡಬಹುದೆ? ನಾಳೆಯಿಂದ ಬರಲು ಪ್ರಾರಂಭವಾಗುವ ಪೋಸ್ಟರುಗಳನ್ನು ಶೇರ್ ಮಾಡಬಹುದೆ? ಕರಪತ್ರಗಳನ್ನು ಮಿತ್ರರಿಗೆ, ನೆರೆಹೊರೆಯವರಿಗೆ, ಏರಿಯಾಗಳಿಗೆ, ಸಾಧ್ಯವಾದರೆ ಹಳ್ಳಿಗಳಿಗೆ ತಲುಪಿಸಲು ಪ್ರಯತ್ನಿಸಬಹುದೆ?

3. ನಿಮ್ಮ ಸುತ್ತಮುತ್ತ ಇರುವ ಸಂಘಟನೆಗಳ ಸಭೆ ಕರೆದು ಎಲ್ಲರೂ ಸೇರಿ ಏನು ಮಾಡಬಹುದು ಎಂದು ಚರ್ಚಿಸಬಹುದೆ? ನಿಮ್ಮ ಪ್ರದೇಶದಲ್ಲಿ ನಿಮ್ಮದೇ ರೀತಿಯಲ್ಲಿ ಪ್ರಚಾರ ಜಾಥ ಹಮ್ಮಿಕೊಳ್ಳಬಹುದೆ?

4. ಬೆಂಗಳೂರಿನಲ್ಲಿ ಸುಮಾರು ಸಿದ್ಧತೆಯ ಕೆಲಸಗಳಿದ್ದು ವಾಲಂಟೀರ್ ಆಗಿ ಕೆಲಸ ಮಾಡಲು ಕೆಲವು ದಿನ ಮೊದಲು ಬೆಂಗಳೂರಿಗೆ ಬರಬಹುದೆ? ನಿಮ್ಮ ಮಿತ್ರರನ್ನು ಅಥವ ಸಂಘಟನೆಯ ಕಾರ್ಯಕರ್ತರನ್ನೂ ಈ ಪುಣ್ಯ ಕಾರ್ಯದಲ್ಲಿ ತೊಡಗಿಸಬಹುದೆ?

4. ದೂರದಿಂದ ಬರುತ್ತಿರುವ ಟ್ರಾಕ್ಟರುಗಳಿಗೆ ಡೀಸಲ್ ಹಾಕಿಸಲು, ಊಟದ ವ್ಯವಸ್ಥೆ ಮಾಡಲು, ಪ್ರಚಾರ ಸಾಮಗ್ರಿಯನ್ನು ಸಿದ್ಧಗೊಳಿಸಲು ಹಣ ಸಂಗ್ರಹ ಮಾಡಿಕೊಡಬಹುದೆ?

5. ಅಂದಿನ ಮೆರವಣಿಗೆಯನ್ನು ದೇಶಪ್ರೇಮದ ಸಂಕೇತವಾಗಿಸಲು ಒಂದಿಷ್ಟು ರಾಷ್ಟ್ರ ಧ್ವಜಗಳನ್ನು ಮಾಡಿಸಿ ಅಥವ ಕೊಂಡು 26ಕ್ಕೆ ತರಬಹುದೆ?

6. ನೀವು ಈ ಹೋರಾಟವನ್ನು ಬೆಂಬಲಿಸಿ ಮತ್ತು 26ಕ್ಕೆ ಬೆಂಗಳೂರು ಬರುವಂತೆ ಆಹ್ವಾನಿಸಿ, ನಿಮ್ಮದೇ ರೀತಿಯಲ್ಲಿ ಪುಟ್ಟ ವಿಡಿಯೋ ಅಥವ ಬರವಣಿಗೆಯ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಬಹುದೆ?
ನಿಮಗೆ ಸಂಪರ್ಕದಲ್ಲಿರುವ ಪರ್ಯಾಯ ಮೀಡಿಯಾ ಅಥವ ಮುಖ್ಯವಾಹಿನಿ ಮೀಡಿಯಾಗಳಲ್ಲಿ ಇರುವ ಜನಪರ ಗೆಳೆಯ, ಗೆಳತಿಯರಿಗೆ ಕರೆ ಮಾಡಿ ಇದನ್ನು ತಮ್ಮದೇ ರೀತಿಯಲ್ಲಿ ಸುದ್ದಿ ಮಾಡುವಂತೆ ಕೇಳಿಕೊಳ್ಳಬಹುದೆ?

7. ಜನವರಿ 16ರಂದು ಇದರ ಕರ್ಟನ್ ರೈಸರ್ ಕಾರ್ಯಕ್ರಮ ಬೆಂಗಳೂರಿನ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆಯಲಿದ್ದು, ಅದಕ್ಕೆ ದೆಹಲಿ ಹೋರಾಟಕ್ಕೆ ಮುಂದಾಳತ್ವ ನೀಡುತ್ತಿರುವ “ಸಂಯುಕ್ತ ಕಿಸಾನ್ ಮೋರ್ಚಾದ” ತಂಡ ಆಗಮಿಸಲಿದೆ. ಯೋಗೇಂದ್ರ ಯಾದವ್, ಮನ್ಜೀತ್ ಸಿಂಗ್ ಮತ್ತು ಯಧುವೀರ್ ಸಿಂಗ್ ಸಮಾಜದಲ್ಲಿ ಹರಿಬಿಡಲಾಗಿರುವ ಸುಳ್ಳು ಪ್ರಚಾರವನ್ನು ಮುಕ್ತ ಸಂವಾದದಲ್ಲಿ ಬಯಲುಗೊಳಿಸಲಿದ್ದಾರೆ. ಇದರಲ್ಲಿ ತಾವೂ ಭಾಗವಹಿಸಬಹುದೆ?

8. ನೇರವಾಗಿ ಕರ್ನಾಟಕವನ್ನು ಪ್ರತಿನಿಧಿಸಿ ಭಾಗವಹಿಸಿಸಲು ಹೋರಾಟಗಾರರ ತಂಡವೊಂದು 14ರಂದು ದೆಹಲಿಗೆ ಹೊರಟಿದ್ದು ಅದರ ಜೊತೆ ತಾವೂ ದೆಹಲಿಗೆ ಹೊರಡಬಹುದೆ?

ಆಯ್ಕೆಯ ಸ್ವಾತಂತ್ರ್ಯ ತಮ್ಮದು, ಮೇಲೆ ನಾನು ಸೂಚಿಸಿರುವ ವಿಧಾನವನ್ನೂ ಬಿಟ್ಟು ಬೇರೆಯದೇ ರೀತಿಯಲ್ಲಿ ನೀವು ಕೈಗೂಡಿಸಬಹುದು. ಕೈಗೂಡಿಸುತ್ತೀರಿ ಎಂಬ ಪೂರ್ಣ ವಿಶ್ವಾಸವೂ ಇದೆ. ಇದರ ಮಹತ್ವವನ್ನು ಒತ್ತಿ ಹೇಳಲು ಮತ್ತು ಸಾಧ್ಯತೆಗಳನ್ನು
ತೆರೆದಿಡಲು ಮಾತ್ರ ಇದನ್ನು ಬರೆದಿದ್ದೇನೆ. ಜನವರಿ 26 ರಂದು ತಪ್ಪದೇ ಬೆಂಗಳೂರಿನಲ್ಲಿ ಭೇಟಿಯಾಗೋಣ. ಒಂದು ವೇಳೆ ನೀವು ದೆಹಲಿ ಕುರುಕ್ಷೇತ್ರಕ್ಕೇ ಹೋಗುವುದಾದರೆ ಬಂದ ನಂತರ ಭೇಟಿಯಾಗೋಣ.

  • ನೂರ್ ಶ್ರೀಧರ್

ಇದರಲ್ಲಿ ಭಾಗಿಯಾಗುವವರು ಅಥವಾ ಹೆಚ್ಚಿನ ಮಾಹಿತಿ ಬೇಕಾದವರು ಸರೋವರ್‍ ಬೆಂಕಿಕೆರೆ (9686842196) ರವರನ್ನು ಸಂಪರ್ಕಿಸಬಹುದು.


ಇದನ್ನೂ ಓದಿ: ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿಯ ಕಾರ್ಯಕ್ರಮಗಳಿಂದ ಭಾರತಕ್ಕೆ ಈಗ ಅನಿವಾರ್ಯವಾಗಿರುವ ಪರ್ಯಾಯ ನಾಯಕತ್ವ ರೂಪುಗೊಳ್ಳಲಿ , ಡ್ಜ್ರುವೀಕರಣ ಗೊಳ್ಳುತ್ತಿರುವ ಜನಾಂಗಗಳ ನಡುವೆ ಸಾಮರಸ್ಯ ಮೂಡಿಸಲು ಹಾಗು ವಾಸ್ತವತೆಯನ್ನು ಸರಿಯಾಗಿ ಪ್ರತಿಬಿಂಬಿಸದ ಮಾಧ್ಯಮಗಳ ನಡವಳಿಕೆಯನ್ನು ಚರ್ಚಿಸಲು ಒಂದು ವೇದಿಕೆಯಾಗಲಿ.
    MSP ರೈತರ ಹಕ್ಕಾಗುವಂತೆ ,ನೈಜ ಸುದ್ದಿ ನಾಗರಿಕರ ಕನಿಷ್ಟ ಹಕ್ಕು ಆಗುವಂತೆ ನಾವು ಸಮಾಜವನ್ನು ರೂಪಿಸಬಹುದೇ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...