Homeಚಳವಳಿಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ಈಗ ದೆಹಲಿಯಲ್ಲಿ ಬೀಡುಬಿಟ್ಟಿರುವ ಲಕ್ಷಾಂತರ ರೈತರು ಮಾತ್ರವಲ್ಲದೆ ಇದಕ್ಕಿಂತಲೂ ಕನಿಷ್ಟ ಮೂರು ಪಟ್ಟು ಜನರು 26 ರ ಹೊತ್ತಿಗೆ ಬಂದು ಕೂಡಿಕೊಳ್ಳಲಿದ್ದಾರೆ. ಭಾರತದ ಧ್ವಜವನ್ನು ಕೈಯಲ್ಲಿಡಿದು ಕೆಂಪು ಕೋಟೆಯತ್ತ ಹೆಜ್ಜೆ ಹಾಕಲಿದ್ದಾರೆ. ಅರ್ಧ ಪಂಜಾಬ್ ದೆಹಲಿಯಲ್ಲಿರಲಿದೆ.

- Advertisement -
- Advertisement -

ನಿನ್ನೆ ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್, ಸೀತಾರಾಂ ಯಚೂರಿ ಒಳಗೊಂಡಂತೆ ಅನೇಕ ಮುಂದಾಳುಗಳು ಸಿಕ್ಕಿದ್ದರು. ಎಲ್ಲರ ಮಾತಿನ ಸಾರವನ್ನು ಒಂದು ವಾಕ್ಯದಲ್ಲಿ ಹೇಳಬೇಕೆಂದರೆ: “ಈ ಬಾರಿಯ ಗಣರಾಜ್ಯೋತ್ಸವ ಹೊಸ ಇತಿಹಾಸ ಬರಿಯಲಿದೆ”. ಇದರಲ್ಲಿ ಯಾವ ಸಂಶಯವೂ ಇಲ್ಲ. ಈಗ ದೆಹಲಿಯಲ್ಲಿ ಬೀಡುಬಿಟ್ಟಿರುವ ಲಕ್ಷಾಂತರ ರೈತರು ಮಾತ್ರವಲ್ಲದೆ ಇದಕ್ಕಿಂತಲೂ ಕನಿಷ್ಟ ಮೂರು ಪಟ್ಟು ಜನರು 26 ರ ಹೊತ್ತಿಗೆ ಬಂದು ಕೂಡಿಕೊಳ್ಳಲಿದ್ದಾರೆ. ಭಾರತದ ಧ್ವಜವನ್ನು ಕೈಯಲ್ಲಿಡಿದು ಕೆಂಪು ಕೋಟೆಯತ್ತ ಹೆಜ್ಜೆ ಹಾಕಲಿದ್ದಾರೆ. ಅರ್ಧ ಪಂಜಾಬ್ ದೆಹಲಿಯಲ್ಲಿರಲಿದೆ. ಹರಿಯಾಣಾದ ಪ್ರತಿ ಮನೆಯಿಂದ ಒಬ್ಬರು, ಪ್ರತಿ ಹಳ್ಳಿಯಿಂದ 10 ಟ್ರಾಕ್ಟರ್ ಹೊರಟು ಬರಬೇಕೆಂದು ಖಾಪ್ ಪಂಚಾಯಿತಿಗಳೇ ಘೋಷಿಸಿಯಾಗಿವೆ. ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಮಹರಾಷ್ಟ್ರ ಎಲ್ಲಾ ಕಡೆಯಿಂದ ಜನರು ಬಂದು ಸೇರುವುದು ಈಗಾಗಲೇ ಪ್ರಾರಂಭವಾಗಿದೆ. ಈ ಜನಸಾಗರವನ್ನು [ಗುಂಡು ಹಾರಿಸದೆ] ತಡಿಯುವುದು ಸೈನ್ಯದಿಂದಲೂ ಸಾಧ್ಯವಿಲ್ಲ. ರೈತರು ಶಪಥ ಗೈದಿದ್ದಾರೆ. ಸಾಯುತ್ತೇವೆ – ಆದರೆ ಹಿಂಸೆಗೆ ಇಳಿಯುವುದಿಲ್ಲ. ಈ ಅಹಿಂಸಾತ್ಮಕ ಜನಸಾಗರವನ್ನು ಎದುರಿಸುವ ನೈತಿಕ ಶಕ್ತಿ ಸರ್ಕಾರಕ್ಕಿಲ್ಲ. ಅದರ ಯಾವ ಚಾಣಕ್ಯ ನೀತಿಗಳೂ ಫಲಿಸುತ್ತಿಲ್ಲ. ಅದರೆ ಅದಾನಿ ಅಂಬಾನಿಗಳ ಸೇವೆ ಬಿಡಲು ಸಿದ್ಧವಿಲ್ಲ. ಪರಿಣಾಮ ಹಸ್ತಿನಾಪುರದಲ್ಲಿ ಇತಿಹಾಸ ಮರುಕಳಿಸಲಿದೆ. ಜನವರಿ 26ರಂದು ದೆಹಲಿಯಲ್ಲಿ ಶಾಂತಿಯುತ ಕುರುಕ್ಷೇತ್ರ ನಡೆಯಲಿದೆ. ಫಲಿತಾಂಶವನ್ನು ಸಧ್ಯಕ್ಕೆ ವರ್ತಮಾನಕ್ಕೆ ಬಿಡೋಣ. ಈಗ ನಮ್ಮ ಮುಂದಿನ ಚರ್ಚೆ ಅಂದಿಗಾಗಿ ಇಂದು ಮತ್ತು ಇಲ್ಲಿ ನಾವೇನು ಮಾಡೋಣ?

ದೆಹಲಿ ಹತ್ತಿರವಿದ್ದಿದ್ದರೆ, ಮೊದಲಿನಂತೆ ಸರಾಗವಾಗಿ ರೈಲು ಹತ್ತಿ ಟಿಕೆಟ್ ಇಲ್ಲದೆ ದೆಹಲಿಗೆ ಪಯಣಿಸುವಂತಿದ್ದರೆ, ನಾವೂ ಸಹ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕುರುಕ್ಷೇತ್ರದಲ್ಲಿ ಪಾಲ್ಗೊಳ್ಳಲು ಹೊರಡಬಹುದಿತ್ತು. ಆದರೆ ಅದು ಸಾಧ್ಯವಿಲ್ಲ. ಸಾಧ್ಯವಿರುವವರು ಅದಕ್ಕೂ ಹೊರಟರೆ ಒಳ್ಳೆಯದೆ. ಆದರೆ ನಾವೆಲ್ಲರೂ ಸೇರಿ ಅದೇ ದಿನ ಕರ್ನಾಟಕದಲ್ಲಿ ದುಡಿವವರ ದನಿ ಮೊಳಗುವಂತೆ ಮಾಡಲೇಬೇಕು. ಇದಕ್ಕಾಗಿಯೇ ಜನವರಿ 26ರಂದು ಬೆಂಗಳೂರಿನಲ್ಲಿ ರೈತ ಮತ್ತು ಸಮಸ್ತ ದುಡಿವ ಜನರ ಗಣರಾಜ್ಯೋತ್ಸವ ಪೆರೇಡಿಗೆ ಕರೆ ನೀಡಲಾಗಿದೆ. ಇದನ್ನು ಯಶಸ್ವಿಗೊಳಿಸಲು ನಮ್ಮಿಂದ ಸಾಧ್ಯವಿರುವುದನ್ನೆಲ್ಲಾ ಮಾಡಬೇಕು. ವೈಯಕ್ತಿಕವಾಗಿ ನಾನೇನು ಮಾಡಲಿದ್ದೇನೆ ಎಂಬ ಪ್ರಶ್ನೆಯನ್ನು ನಾವೆಲ್ಲರೂ ಹಾಕಿಕೊಳ್ಳಬೇಕು.

ಕೆಲವು ಸಲಹೆಗಳು:

1. ಜನವರಿ 25-26ನ್ನು ಈ ದೇಶದ ದುಡಿವ ಜನರಿಗೆಂದು ತೆಗೆದಿಡಲು ಸಾಧ್ಯವೆ? ನಿಮ್ಮ ಬಳಿ ಇರುವ ವಾಹನದ ಜೊತೆ, [ಕಾರು, ಟ್ರಾಕ್ಟರ್, ಜೀಪು, ಮೋಟಾರ್ ಬೈಕ್, ಸೈಕಲ್ ಯಾವುದಾದರೂ ಸರಿ] ಸಾಧ್ಯವಿರುವ ಮಿತ್ರರನ್ನು, ಕುಟುಂಬದ ಸದಸ್ಯರನ್ನು, ಜೊತೆಗೂಡಿಸಿಕೊಂಡು ಬೆಂಗಳೂರಿಗೆ ಬಂದು ಸೇರಲು ಸಿದ್ಧತೆ ಮಾಡಿಕೊಳ್ಳಬಹುದೆ?

2. ನಿಮ್ಮ ಊರಿನಲ್ಲಿ ಈಗಿನಿಂದಲೇ ನಿಮ್ಮದೇ ರೀತಿಯಲ್ಲಿ ಈ ಸಂದೇಶ ಎಲ್ಲರಿಗೂ ತಲುಪಿಸುವ ಕೆಲಸವನ್ನು ತಾವು ಮಾಡಬಹುದೆ? ನಾಳೆಯಿಂದ ಬರಲು ಪ್ರಾರಂಭವಾಗುವ ಪೋಸ್ಟರುಗಳನ್ನು ಶೇರ್ ಮಾಡಬಹುದೆ? ಕರಪತ್ರಗಳನ್ನು ಮಿತ್ರರಿಗೆ, ನೆರೆಹೊರೆಯವರಿಗೆ, ಏರಿಯಾಗಳಿಗೆ, ಸಾಧ್ಯವಾದರೆ ಹಳ್ಳಿಗಳಿಗೆ ತಲುಪಿಸಲು ಪ್ರಯತ್ನಿಸಬಹುದೆ?

3. ನಿಮ್ಮ ಸುತ್ತಮುತ್ತ ಇರುವ ಸಂಘಟನೆಗಳ ಸಭೆ ಕರೆದು ಎಲ್ಲರೂ ಸೇರಿ ಏನು ಮಾಡಬಹುದು ಎಂದು ಚರ್ಚಿಸಬಹುದೆ? ನಿಮ್ಮ ಪ್ರದೇಶದಲ್ಲಿ ನಿಮ್ಮದೇ ರೀತಿಯಲ್ಲಿ ಪ್ರಚಾರ ಜಾಥ ಹಮ್ಮಿಕೊಳ್ಳಬಹುದೆ?

4. ಬೆಂಗಳೂರಿನಲ್ಲಿ ಸುಮಾರು ಸಿದ್ಧತೆಯ ಕೆಲಸಗಳಿದ್ದು ವಾಲಂಟೀರ್ ಆಗಿ ಕೆಲಸ ಮಾಡಲು ಕೆಲವು ದಿನ ಮೊದಲು ಬೆಂಗಳೂರಿಗೆ ಬರಬಹುದೆ? ನಿಮ್ಮ ಮಿತ್ರರನ್ನು ಅಥವ ಸಂಘಟನೆಯ ಕಾರ್ಯಕರ್ತರನ್ನೂ ಈ ಪುಣ್ಯ ಕಾರ್ಯದಲ್ಲಿ ತೊಡಗಿಸಬಹುದೆ?

4. ದೂರದಿಂದ ಬರುತ್ತಿರುವ ಟ್ರಾಕ್ಟರುಗಳಿಗೆ ಡೀಸಲ್ ಹಾಕಿಸಲು, ಊಟದ ವ್ಯವಸ್ಥೆ ಮಾಡಲು, ಪ್ರಚಾರ ಸಾಮಗ್ರಿಯನ್ನು ಸಿದ್ಧಗೊಳಿಸಲು ಹಣ ಸಂಗ್ರಹ ಮಾಡಿಕೊಡಬಹುದೆ?

5. ಅಂದಿನ ಮೆರವಣಿಗೆಯನ್ನು ದೇಶಪ್ರೇಮದ ಸಂಕೇತವಾಗಿಸಲು ಒಂದಿಷ್ಟು ರಾಷ್ಟ್ರ ಧ್ವಜಗಳನ್ನು ಮಾಡಿಸಿ ಅಥವ ಕೊಂಡು 26ಕ್ಕೆ ತರಬಹುದೆ?

6. ನೀವು ಈ ಹೋರಾಟವನ್ನು ಬೆಂಬಲಿಸಿ ಮತ್ತು 26ಕ್ಕೆ ಬೆಂಗಳೂರು ಬರುವಂತೆ ಆಹ್ವಾನಿಸಿ, ನಿಮ್ಮದೇ ರೀತಿಯಲ್ಲಿ ಪುಟ್ಟ ವಿಡಿಯೋ ಅಥವ ಬರವಣಿಗೆಯ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಬಹುದೆ?
ನಿಮಗೆ ಸಂಪರ್ಕದಲ್ಲಿರುವ ಪರ್ಯಾಯ ಮೀಡಿಯಾ ಅಥವ ಮುಖ್ಯವಾಹಿನಿ ಮೀಡಿಯಾಗಳಲ್ಲಿ ಇರುವ ಜನಪರ ಗೆಳೆಯ, ಗೆಳತಿಯರಿಗೆ ಕರೆ ಮಾಡಿ ಇದನ್ನು ತಮ್ಮದೇ ರೀತಿಯಲ್ಲಿ ಸುದ್ದಿ ಮಾಡುವಂತೆ ಕೇಳಿಕೊಳ್ಳಬಹುದೆ?

7. ಜನವರಿ 16ರಂದು ಇದರ ಕರ್ಟನ್ ರೈಸರ್ ಕಾರ್ಯಕ್ರಮ ಬೆಂಗಳೂರಿನ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆಯಲಿದ್ದು, ಅದಕ್ಕೆ ದೆಹಲಿ ಹೋರಾಟಕ್ಕೆ ಮುಂದಾಳತ್ವ ನೀಡುತ್ತಿರುವ “ಸಂಯುಕ್ತ ಕಿಸಾನ್ ಮೋರ್ಚಾದ” ತಂಡ ಆಗಮಿಸಲಿದೆ. ಯೋಗೇಂದ್ರ ಯಾದವ್, ಮನ್ಜೀತ್ ಸಿಂಗ್ ಮತ್ತು ಯಧುವೀರ್ ಸಿಂಗ್ ಸಮಾಜದಲ್ಲಿ ಹರಿಬಿಡಲಾಗಿರುವ ಸುಳ್ಳು ಪ್ರಚಾರವನ್ನು ಮುಕ್ತ ಸಂವಾದದಲ್ಲಿ ಬಯಲುಗೊಳಿಸಲಿದ್ದಾರೆ. ಇದರಲ್ಲಿ ತಾವೂ ಭಾಗವಹಿಸಬಹುದೆ?

8. ನೇರವಾಗಿ ಕರ್ನಾಟಕವನ್ನು ಪ್ರತಿನಿಧಿಸಿ ಭಾಗವಹಿಸಿಸಲು ಹೋರಾಟಗಾರರ ತಂಡವೊಂದು 14ರಂದು ದೆಹಲಿಗೆ ಹೊರಟಿದ್ದು ಅದರ ಜೊತೆ ತಾವೂ ದೆಹಲಿಗೆ ಹೊರಡಬಹುದೆ?

ಆಯ್ಕೆಯ ಸ್ವಾತಂತ್ರ್ಯ ತಮ್ಮದು, ಮೇಲೆ ನಾನು ಸೂಚಿಸಿರುವ ವಿಧಾನವನ್ನೂ ಬಿಟ್ಟು ಬೇರೆಯದೇ ರೀತಿಯಲ್ಲಿ ನೀವು ಕೈಗೂಡಿಸಬಹುದು. ಕೈಗೂಡಿಸುತ್ತೀರಿ ಎಂಬ ಪೂರ್ಣ ವಿಶ್ವಾಸವೂ ಇದೆ. ಇದರ ಮಹತ್ವವನ್ನು ಒತ್ತಿ ಹೇಳಲು ಮತ್ತು ಸಾಧ್ಯತೆಗಳನ್ನು
ತೆರೆದಿಡಲು ಮಾತ್ರ ಇದನ್ನು ಬರೆದಿದ್ದೇನೆ. ಜನವರಿ 26 ರಂದು ತಪ್ಪದೇ ಬೆಂಗಳೂರಿನಲ್ಲಿ ಭೇಟಿಯಾಗೋಣ. ಒಂದು ವೇಳೆ ನೀವು ದೆಹಲಿ ಕುರುಕ್ಷೇತ್ರಕ್ಕೇ ಹೋಗುವುದಾದರೆ ಬಂದ ನಂತರ ಭೇಟಿಯಾಗೋಣ.

  • ನೂರ್ ಶ್ರೀಧರ್

ಇದರಲ್ಲಿ ಭಾಗಿಯಾಗುವವರು ಅಥವಾ ಹೆಚ್ಚಿನ ಮಾಹಿತಿ ಬೇಕಾದವರು ಸರೋವರ್‍ ಬೆಂಕಿಕೆರೆ (9686842196) ರವರನ್ನು ಸಂಪರ್ಕಿಸಬಹುದು.


ಇದನ್ನೂ ಓದಿ: ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿಯ ಕಾರ್ಯಕ್ರಮಗಳಿಂದ ಭಾರತಕ್ಕೆ ಈಗ ಅನಿವಾರ್ಯವಾಗಿರುವ ಪರ್ಯಾಯ ನಾಯಕತ್ವ ರೂಪುಗೊಳ್ಳಲಿ , ಡ್ಜ್ರುವೀಕರಣ ಗೊಳ್ಳುತ್ತಿರುವ ಜನಾಂಗಗಳ ನಡುವೆ ಸಾಮರಸ್ಯ ಮೂಡಿಸಲು ಹಾಗು ವಾಸ್ತವತೆಯನ್ನು ಸರಿಯಾಗಿ ಪ್ರತಿಬಿಂಬಿಸದ ಮಾಧ್ಯಮಗಳ ನಡವಳಿಕೆಯನ್ನು ಚರ್ಚಿಸಲು ಒಂದು ವೇದಿಕೆಯಾಗಲಿ.
    MSP ರೈತರ ಹಕ್ಕಾಗುವಂತೆ ,ನೈಜ ಸುದ್ದಿ ನಾಗರಿಕರ ಕನಿಷ್ಟ ಹಕ್ಕು ಆಗುವಂತೆ ನಾವು ಸಮಾಜವನ್ನು ರೂಪಿಸಬಹುದೇ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...