Homeಅಂತರಾಷ್ಟ್ರೀಯನ್ಯೂಜೆರ್ಸಿ: ಮುಸ್ಲಿಂ ದ್ವೇಷ ಕಾರಿದ ಹಿಂದೂ ಮತೀಯವಾದಿ ಹೇಳಿಕೆಗೆ ಟೀನೆಕ್ ಮೇಯರ್‌ ಕ್ಷಮೆಯಾಚನೆ

ನ್ಯೂಜೆರ್ಸಿ: ಮುಸ್ಲಿಂ ದ್ವೇಷ ಕಾರಿದ ಹಿಂದೂ ಮತೀಯವಾದಿ ಹೇಳಿಕೆಗೆ ಟೀನೆಕ್ ಮೇಯರ್‌ ಕ್ಷಮೆಯಾಚನೆ

- Advertisement -
- Advertisement -

ನ್ಯೂಜೆರ್ಸಿ: ಸೆಪ್ಟೆಂಬರ್‌ನಲ್ಲಿ ನಡೆದ ಸಿಟಿ ಕೌನ್ಸಿಲ್ ಸಭೆಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡಿದ್ದ ಹಿಂದೂ ಮತೀಯವಾದಿಯ ಹೇಳಿಕೆಗೆ ನ್ಯೂಜೆರ್ಸಿಯ ಟೀನೆಕ್ ಟೌನ್‌ಶಿಪ್‌ನ ಮೇಯರ್ ಮತ್ತು ಇಬ್ಬರು ಸಿಟಿ ಕೌನ್ಸಿಲ್ ಸದಸ್ಯರು ವಿಷಾದ ವ್ಯಕ್ತಪಡಿಸಿದ್ದಾರೆ.

ಮತೀಯವಾದಿಗಳಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ. ಈ ಭಾಷಣವು ರಾಜ್ಯಾದ್ಯಂತ ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು.

ಮುಸ್ಲಿಂ ಸಮುದಾಯದ ವಿರುದ್ಧದ ದ್ವೇಷವನ್ನು ಖಂಡಿಸುವ ಅಧಿಕೃತ ಹೇಳಿಕೆಯನ್ನು ಅಕ್ಟೋಬರ್ 28 ರಂದು ಮೇಯರ್ ಜಿಮ್ ಡನ್ಲೆವಿ ಬಿಡುಗಡೆ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದಬ್ಬಾಳಿಕೆಯು ತೀವ್ರತರವಾದದ್ದು. ಈ ಅಪಾಯಕಾರಿ ಮತೀಯವಾದಿಗಳಿಗೆ ಟೀನೆಕ್ ಅಥವಾ ನ್ಯೂಜೆರ್ಸಿಯಲ್ಲಿ ಯಾವುದೇ ಸ್ಥಾನವಿಲ್ಲ” ಎಂದು ಸ್ಪಷ್ಟಪಡಿಸಿರುವುದಾಗಿ ‘ಕ್ಲಾರಿಯಾನ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

ಅಕ್ಟೋಬರ್ 25ರಂದು ನಡೆದ ಸಿಟಿ ಕೌನ್ಸಿಲ್ ಸಭೆಯಲ್ಲಿ ಮೇಯರ್ ಮತ್ತು ಕೌನ್ಸಿಲ್ ಸದಸ್ಯರು ಜನರಲ್ಲಿ ಕ್ಷಮೆಯಾಚಿಸಿದ್ದರು. ಈ ಸಮಯದಲ್ಲಿ ಹಲವಾರು ಮುಸ್ಲಿಂ ಸದಸ್ಯರು, ಹಿಂದೂ ಉಗ್ರಗಾಮಿಗಳ ಮುಸ್ಲಿಂ ವಿರೋಧಿ ವರ್ತನೆ ಹಾಗೂ ವಿಷಕಾರಿ ಹೇಳಿಕೆಗಳ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

“ಇಸ್ಲಾಂ ವಿರುದ್ಧ ದ್ವೇಷ ಕಾರಿದ ವ್ಯಕ್ತಿಯನ್ನು ತಕ್ಷಣವೇ ತಡೆದು ನಿಲ್ಲಿಸಬೇಕಿತ್ತು” ಎಂದು ಕೌನ್ಸಿಲ್ಮನ್ ಕೀತ್ ಕಪ್ಲಾನ್ ಹೇಳಿದ್ದಾರೆ.

“ಹಿಂದೂ ರಾಷ್ಟ್ರೀಯತೆ ಒಂದು ಕೆಟ್ಟ ವಿಷಯ ಎಂದು ನನಗೆ ತಿಳಿದಿರಲಿಲ್ಲ. ಇಲ್ಲಿ ದಾಳಿಯಾಗಿದೆ ಅಥವಾ ತಪ್ಪಾಗಿ ಬಿಂಬಿಸಲಾಗಿದೆ ಎಂದು ಭಾವಿಸುವ ಪ್ರತಿಯೊಬ್ಬರಲ್ಲಿಯೂ ನಾನು ಕ್ಷಮೆಯಾಚಿಸುತ್ತೇನೆ” ಎಂದು ಕೌನ್ಸಿಲ್ವುಮನ್ ಕರೆನ್ ಒರ್ಗೆನ್ ತಿಳಿಸಿದ್ದಾರೆ.

ವಿವೇಕ್ ಎಂದು ಗುರುತಿಸಿಕೊಂಡ ವ್ಯಕ್ತಿಯೊಬ್ಬ ಸೆಪ್ಟೆಂಬರ್ 20, 2022ರಂದು ಕೌನ್ಸಿಲ್ ಸಭೆಯ ಸಮಯದಲ್ಲಿ ಮಾತನಾಡಿದ್ದನು. ಮತದಾರರಿಗಾಗಿ ಮೀಸಲಿಟ್ಟ ವೇದಿಕೆಯನ್ನು ಬಳಸಿಕೊಂಡ ಆತ ಮುಸ್ಲಿಮರನ್ನು ಭಯೋತ್ಪಾದಕರು ಮತ್ತು ಅತ್ಯಾಚಾರಿಗಳು ಎಂದು ಜರಿದಿದ್ದನು. ಮುಸ್ಲಿಮರು 9/11ರ ಘಟನೆಯನ್ನು ‘ಆನಂದಿಸಿದ್ದಾರೆ’ ಮತ್ತು ದೇಶಗಳನ್ನು ‘ನಾಶ’ ಮಾಡಲು ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತಕ್ಕೆ ವಲಸೆ ಬಂದಿದ್ದಾರೆ ಎಂದು ಆರೋಪಿಸಿದ್ದನು.

“ನೀವು ದೇಶದಲ್ಲಿ (ಭಾರತ) ನಡೆಯುವ ಅತ್ಯಾಚಾರದ ಬಗ್ಗೆ ಮಾತನಾಡುತ್ತೀರಿ. ಅವು ಮುಸ್ಲಿಮರಿಂದ ನಡೆಯುತ್ತಿವೆ. ಈ ಮುಸ್ಲಿಮರು ಎಲ್ಲ ಹುಡುಗಿಯನ್ನು ಸೆಳೆದುಕೊಳ್ಳುತ್ತಾರೆ. ಎಲ್ಲರನ್ನೂ ಮತಾಂತರ ಮಾಡಲು ಪ್ರಯತ್ನಿಸುತ್ತಾರೆ. ನಂತರ ಅವರು ಮಕ್ಕಳನ್ನು ಮಾಡಿ, ಹುಡುಗಿಯರನ್ನು ಕೊಲ್ಲುತ್ತಾರೆ” ಎಂದು ಮಾತನಾಡಿದ್ದನು.

ಭಾರತದಲ್ಲಿ ಹಿಂಸಾತ್ಮಕ ಧೋರಣೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳು ಹಾಗೂ ಅವುಗಳೊಂದಿಗೆ ಸಂಬಂಧ ಹೊಂದಿರುವ ಯುಎಸ್ ಮೂಲದ ಹಿಂದೂ ಬಲಪಂಥೀಯ ಗುಂಪುಗಳ ಬಗ್ಗೆ ತನಿಖೆಗೆ ಒತ್ತಾಯಿಸುವ ನಿರ್ಣಯವನ್ನು ಟೀನೆಕ್ ಡೆಮಾಕ್ರಟಿಕ್ ಮುನ್ಸಿಪಲ್ ಕಮಿಟಿ (ಟಿಡಿಎಂಸಿ) ಅಂಗೀಕರಿಸಿದ ನಂತರ ಈ ಟೀಕೆಗಳನ್ನು ವಿವೇಕ್‌ ಮಾಡಿದ್ದನು.

ಇದನ್ನೂ ಓದಿರಿ: ಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

ವಿವೇಕ್ ಮಾಡಿದ ಮುಸ್ಲಿಂ ವಿರೋಧಿ ಟೀಕೆಗಳನ್ನು ಕೌನ್ಸಿಲ್ ಖಂಡಿಸಲು ವಿಫಲವಾದ ನಂತರ, ಹಲವಾರು ಮುಸ್ಲಿಂ ಟೀನೆಕ್ ನಿವಾಸಿಗಳು ಮತ್ತು ಸ್ನೇಹಿತರು ಆಕ್ರೋಶ ಹೊರಹಾಕಿದ್ದರು. ಅಕ್ಟೋಬರ್‌ನ ಸಿಟಿ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಿ, ಮುಸ್ಲಿಂ ವಿರೋಧಿ ದ್ವೇಷದ ಭಾಷಣದ ವಿರುದ್ಧ ಕೌನ್ಸಿಲ್‌ನ ನಿಷ್ಕ್ರಿಯತೆಯನ್ನು ಖಂಡಿಸಿದ್ದರು.

ಕೌನ್ಸಿಲ್ಮನ್ ಕಪ್ಲಾನ್ ಮಾತನಾಡಿ, “ತಪ್ಪು ಮಾಹಿತಿಯನ್ನು ಹರಡುವ ಯಾರನ್ನಾದರೂ ನಿಲ್ಲಿಸುವುದಾಗಿದ್ದರೆ ಕಳೆದ ತಿಂಗಳು ನೀವು ಎಲ್ಲಿದ್ದೀರಿ? ಮುಸ್ಲಿಮರು 9/11 ಅನ್ನು ಆನಂದಿಸಿದ್ದಾರೆ. ಅವರು ಕ್ರಿಶ್ಚಿಯನ್ ಮಹಿಳೆಯರನ್ನು ಅತ್ಯಾಚಾರ ಮಾಡುತ್ತಾರೆ. ಮಕ್ಕಳನ್ನು ಮಾಡಿ ಕೊಲ್ಲುತ್ತಾರೆ ಎಂದು ಹಿಂದೂ ಉಗ್ರಗಾಮಿ ಹೇಳುತ್ತಿದ್ದನು. ಇದು ಸ್ಪಷ್ಟ ತಪ್ಪು ಮಾಹಿತಿಯಲ್ಲವೇ?” ಎಂದು ಕೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...