Homeಅಂತರಾಷ್ಟ್ರೀಯನ್ಯೂಜೆರ್ಸಿ: ಮುಸ್ಲಿಂ ದ್ವೇಷ ಕಾರಿದ ಹಿಂದೂ ಮತೀಯವಾದಿ ಹೇಳಿಕೆಗೆ ಟೀನೆಕ್ ಮೇಯರ್‌ ಕ್ಷಮೆಯಾಚನೆ

ನ್ಯೂಜೆರ್ಸಿ: ಮುಸ್ಲಿಂ ದ್ವೇಷ ಕಾರಿದ ಹಿಂದೂ ಮತೀಯವಾದಿ ಹೇಳಿಕೆಗೆ ಟೀನೆಕ್ ಮೇಯರ್‌ ಕ್ಷಮೆಯಾಚನೆ

- Advertisement -
- Advertisement -

ನ್ಯೂಜೆರ್ಸಿ: ಸೆಪ್ಟೆಂಬರ್‌ನಲ್ಲಿ ನಡೆದ ಸಿಟಿ ಕೌನ್ಸಿಲ್ ಸಭೆಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡಿದ್ದ ಹಿಂದೂ ಮತೀಯವಾದಿಯ ಹೇಳಿಕೆಗೆ ನ್ಯೂಜೆರ್ಸಿಯ ಟೀನೆಕ್ ಟೌನ್‌ಶಿಪ್‌ನ ಮೇಯರ್ ಮತ್ತು ಇಬ್ಬರು ಸಿಟಿ ಕೌನ್ಸಿಲ್ ಸದಸ್ಯರು ವಿಷಾದ ವ್ಯಕ್ತಪಡಿಸಿದ್ದಾರೆ.

ಮತೀಯವಾದಿಗಳಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ. ಈ ಭಾಷಣವು ರಾಜ್ಯಾದ್ಯಂತ ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು.

ಮುಸ್ಲಿಂ ಸಮುದಾಯದ ವಿರುದ್ಧದ ದ್ವೇಷವನ್ನು ಖಂಡಿಸುವ ಅಧಿಕೃತ ಹೇಳಿಕೆಯನ್ನು ಅಕ್ಟೋಬರ್ 28 ರಂದು ಮೇಯರ್ ಜಿಮ್ ಡನ್ಲೆವಿ ಬಿಡುಗಡೆ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದಬ್ಬಾಳಿಕೆಯು ತೀವ್ರತರವಾದದ್ದು. ಈ ಅಪಾಯಕಾರಿ ಮತೀಯವಾದಿಗಳಿಗೆ ಟೀನೆಕ್ ಅಥವಾ ನ್ಯೂಜೆರ್ಸಿಯಲ್ಲಿ ಯಾವುದೇ ಸ್ಥಾನವಿಲ್ಲ” ಎಂದು ಸ್ಪಷ್ಟಪಡಿಸಿರುವುದಾಗಿ ‘ಕ್ಲಾರಿಯಾನ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

ಅಕ್ಟೋಬರ್ 25ರಂದು ನಡೆದ ಸಿಟಿ ಕೌನ್ಸಿಲ್ ಸಭೆಯಲ್ಲಿ ಮೇಯರ್ ಮತ್ತು ಕೌನ್ಸಿಲ್ ಸದಸ್ಯರು ಜನರಲ್ಲಿ ಕ್ಷಮೆಯಾಚಿಸಿದ್ದರು. ಈ ಸಮಯದಲ್ಲಿ ಹಲವಾರು ಮುಸ್ಲಿಂ ಸದಸ್ಯರು, ಹಿಂದೂ ಉಗ್ರಗಾಮಿಗಳ ಮುಸ್ಲಿಂ ವಿರೋಧಿ ವರ್ತನೆ ಹಾಗೂ ವಿಷಕಾರಿ ಹೇಳಿಕೆಗಳ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

“ಇಸ್ಲಾಂ ವಿರುದ್ಧ ದ್ವೇಷ ಕಾರಿದ ವ್ಯಕ್ತಿಯನ್ನು ತಕ್ಷಣವೇ ತಡೆದು ನಿಲ್ಲಿಸಬೇಕಿತ್ತು” ಎಂದು ಕೌನ್ಸಿಲ್ಮನ್ ಕೀತ್ ಕಪ್ಲಾನ್ ಹೇಳಿದ್ದಾರೆ.

“ಹಿಂದೂ ರಾಷ್ಟ್ರೀಯತೆ ಒಂದು ಕೆಟ್ಟ ವಿಷಯ ಎಂದು ನನಗೆ ತಿಳಿದಿರಲಿಲ್ಲ. ಇಲ್ಲಿ ದಾಳಿಯಾಗಿದೆ ಅಥವಾ ತಪ್ಪಾಗಿ ಬಿಂಬಿಸಲಾಗಿದೆ ಎಂದು ಭಾವಿಸುವ ಪ್ರತಿಯೊಬ್ಬರಲ್ಲಿಯೂ ನಾನು ಕ್ಷಮೆಯಾಚಿಸುತ್ತೇನೆ” ಎಂದು ಕೌನ್ಸಿಲ್ವುಮನ್ ಕರೆನ್ ಒರ್ಗೆನ್ ತಿಳಿಸಿದ್ದಾರೆ.

ವಿವೇಕ್ ಎಂದು ಗುರುತಿಸಿಕೊಂಡ ವ್ಯಕ್ತಿಯೊಬ್ಬ ಸೆಪ್ಟೆಂಬರ್ 20, 2022ರಂದು ಕೌನ್ಸಿಲ್ ಸಭೆಯ ಸಮಯದಲ್ಲಿ ಮಾತನಾಡಿದ್ದನು. ಮತದಾರರಿಗಾಗಿ ಮೀಸಲಿಟ್ಟ ವೇದಿಕೆಯನ್ನು ಬಳಸಿಕೊಂಡ ಆತ ಮುಸ್ಲಿಮರನ್ನು ಭಯೋತ್ಪಾದಕರು ಮತ್ತು ಅತ್ಯಾಚಾರಿಗಳು ಎಂದು ಜರಿದಿದ್ದನು. ಮುಸ್ಲಿಮರು 9/11ರ ಘಟನೆಯನ್ನು ‘ಆನಂದಿಸಿದ್ದಾರೆ’ ಮತ್ತು ದೇಶಗಳನ್ನು ‘ನಾಶ’ ಮಾಡಲು ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತಕ್ಕೆ ವಲಸೆ ಬಂದಿದ್ದಾರೆ ಎಂದು ಆರೋಪಿಸಿದ್ದನು.

“ನೀವು ದೇಶದಲ್ಲಿ (ಭಾರತ) ನಡೆಯುವ ಅತ್ಯಾಚಾರದ ಬಗ್ಗೆ ಮಾತನಾಡುತ್ತೀರಿ. ಅವು ಮುಸ್ಲಿಮರಿಂದ ನಡೆಯುತ್ತಿವೆ. ಈ ಮುಸ್ಲಿಮರು ಎಲ್ಲ ಹುಡುಗಿಯನ್ನು ಸೆಳೆದುಕೊಳ್ಳುತ್ತಾರೆ. ಎಲ್ಲರನ್ನೂ ಮತಾಂತರ ಮಾಡಲು ಪ್ರಯತ್ನಿಸುತ್ತಾರೆ. ನಂತರ ಅವರು ಮಕ್ಕಳನ್ನು ಮಾಡಿ, ಹುಡುಗಿಯರನ್ನು ಕೊಲ್ಲುತ್ತಾರೆ” ಎಂದು ಮಾತನಾಡಿದ್ದನು.

ಭಾರತದಲ್ಲಿ ಹಿಂಸಾತ್ಮಕ ಧೋರಣೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳು ಹಾಗೂ ಅವುಗಳೊಂದಿಗೆ ಸಂಬಂಧ ಹೊಂದಿರುವ ಯುಎಸ್ ಮೂಲದ ಹಿಂದೂ ಬಲಪಂಥೀಯ ಗುಂಪುಗಳ ಬಗ್ಗೆ ತನಿಖೆಗೆ ಒತ್ತಾಯಿಸುವ ನಿರ್ಣಯವನ್ನು ಟೀನೆಕ್ ಡೆಮಾಕ್ರಟಿಕ್ ಮುನ್ಸಿಪಲ್ ಕಮಿಟಿ (ಟಿಡಿಎಂಸಿ) ಅಂಗೀಕರಿಸಿದ ನಂತರ ಈ ಟೀಕೆಗಳನ್ನು ವಿವೇಕ್‌ ಮಾಡಿದ್ದನು.

ಇದನ್ನೂ ಓದಿರಿ: ಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

ವಿವೇಕ್ ಮಾಡಿದ ಮುಸ್ಲಿಂ ವಿರೋಧಿ ಟೀಕೆಗಳನ್ನು ಕೌನ್ಸಿಲ್ ಖಂಡಿಸಲು ವಿಫಲವಾದ ನಂತರ, ಹಲವಾರು ಮುಸ್ಲಿಂ ಟೀನೆಕ್ ನಿವಾಸಿಗಳು ಮತ್ತು ಸ್ನೇಹಿತರು ಆಕ್ರೋಶ ಹೊರಹಾಕಿದ್ದರು. ಅಕ್ಟೋಬರ್‌ನ ಸಿಟಿ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಿ, ಮುಸ್ಲಿಂ ವಿರೋಧಿ ದ್ವೇಷದ ಭಾಷಣದ ವಿರುದ್ಧ ಕೌನ್ಸಿಲ್‌ನ ನಿಷ್ಕ್ರಿಯತೆಯನ್ನು ಖಂಡಿಸಿದ್ದರು.

ಕೌನ್ಸಿಲ್ಮನ್ ಕಪ್ಲಾನ್ ಮಾತನಾಡಿ, “ತಪ್ಪು ಮಾಹಿತಿಯನ್ನು ಹರಡುವ ಯಾರನ್ನಾದರೂ ನಿಲ್ಲಿಸುವುದಾಗಿದ್ದರೆ ಕಳೆದ ತಿಂಗಳು ನೀವು ಎಲ್ಲಿದ್ದೀರಿ? ಮುಸ್ಲಿಮರು 9/11 ಅನ್ನು ಆನಂದಿಸಿದ್ದಾರೆ. ಅವರು ಕ್ರಿಶ್ಚಿಯನ್ ಮಹಿಳೆಯರನ್ನು ಅತ್ಯಾಚಾರ ಮಾಡುತ್ತಾರೆ. ಮಕ್ಕಳನ್ನು ಮಾಡಿ ಕೊಲ್ಲುತ್ತಾರೆ ಎಂದು ಹಿಂದೂ ಉಗ್ರಗಾಮಿ ಹೇಳುತ್ತಿದ್ದನು. ಇದು ಸ್ಪಷ್ಟ ತಪ್ಪು ಮಾಹಿತಿಯಲ್ಲವೇ?” ಎಂದು ಕೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...