Homeಅಂತರಾಷ್ಟ್ರೀಯನ್ಯೂಜೆರ್ಸಿ: ಮುಸ್ಲಿಂ ದ್ವೇಷ ಕಾರಿದ ಹಿಂದೂ ಮತೀಯವಾದಿ ಹೇಳಿಕೆಗೆ ಟೀನೆಕ್ ಮೇಯರ್‌ ಕ್ಷಮೆಯಾಚನೆ

ನ್ಯೂಜೆರ್ಸಿ: ಮುಸ್ಲಿಂ ದ್ವೇಷ ಕಾರಿದ ಹಿಂದೂ ಮತೀಯವಾದಿ ಹೇಳಿಕೆಗೆ ಟೀನೆಕ್ ಮೇಯರ್‌ ಕ್ಷಮೆಯಾಚನೆ

- Advertisement -
- Advertisement -

ನ್ಯೂಜೆರ್ಸಿ: ಸೆಪ್ಟೆಂಬರ್‌ನಲ್ಲಿ ನಡೆದ ಸಿಟಿ ಕೌನ್ಸಿಲ್ ಸಭೆಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡಿದ್ದ ಹಿಂದೂ ಮತೀಯವಾದಿಯ ಹೇಳಿಕೆಗೆ ನ್ಯೂಜೆರ್ಸಿಯ ಟೀನೆಕ್ ಟೌನ್‌ಶಿಪ್‌ನ ಮೇಯರ್ ಮತ್ತು ಇಬ್ಬರು ಸಿಟಿ ಕೌನ್ಸಿಲ್ ಸದಸ್ಯರು ವಿಷಾದ ವ್ಯಕ್ತಪಡಿಸಿದ್ದಾರೆ.

ಮತೀಯವಾದಿಗಳಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ. ಈ ಭಾಷಣವು ರಾಜ್ಯಾದ್ಯಂತ ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು.

ಮುಸ್ಲಿಂ ಸಮುದಾಯದ ವಿರುದ್ಧದ ದ್ವೇಷವನ್ನು ಖಂಡಿಸುವ ಅಧಿಕೃತ ಹೇಳಿಕೆಯನ್ನು ಅಕ್ಟೋಬರ್ 28 ರಂದು ಮೇಯರ್ ಜಿಮ್ ಡನ್ಲೆವಿ ಬಿಡುಗಡೆ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದಬ್ಬಾಳಿಕೆಯು ತೀವ್ರತರವಾದದ್ದು. ಈ ಅಪಾಯಕಾರಿ ಮತೀಯವಾದಿಗಳಿಗೆ ಟೀನೆಕ್ ಅಥವಾ ನ್ಯೂಜೆರ್ಸಿಯಲ್ಲಿ ಯಾವುದೇ ಸ್ಥಾನವಿಲ್ಲ” ಎಂದು ಸ್ಪಷ್ಟಪಡಿಸಿರುವುದಾಗಿ ‘ಕ್ಲಾರಿಯಾನ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

ಅಕ್ಟೋಬರ್ 25ರಂದು ನಡೆದ ಸಿಟಿ ಕೌನ್ಸಿಲ್ ಸಭೆಯಲ್ಲಿ ಮೇಯರ್ ಮತ್ತು ಕೌನ್ಸಿಲ್ ಸದಸ್ಯರು ಜನರಲ್ಲಿ ಕ್ಷಮೆಯಾಚಿಸಿದ್ದರು. ಈ ಸಮಯದಲ್ಲಿ ಹಲವಾರು ಮುಸ್ಲಿಂ ಸದಸ್ಯರು, ಹಿಂದೂ ಉಗ್ರಗಾಮಿಗಳ ಮುಸ್ಲಿಂ ವಿರೋಧಿ ವರ್ತನೆ ಹಾಗೂ ವಿಷಕಾರಿ ಹೇಳಿಕೆಗಳ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

“ಇಸ್ಲಾಂ ವಿರುದ್ಧ ದ್ವೇಷ ಕಾರಿದ ವ್ಯಕ್ತಿಯನ್ನು ತಕ್ಷಣವೇ ತಡೆದು ನಿಲ್ಲಿಸಬೇಕಿತ್ತು” ಎಂದು ಕೌನ್ಸಿಲ್ಮನ್ ಕೀತ್ ಕಪ್ಲಾನ್ ಹೇಳಿದ್ದಾರೆ.

“ಹಿಂದೂ ರಾಷ್ಟ್ರೀಯತೆ ಒಂದು ಕೆಟ್ಟ ವಿಷಯ ಎಂದು ನನಗೆ ತಿಳಿದಿರಲಿಲ್ಲ. ಇಲ್ಲಿ ದಾಳಿಯಾಗಿದೆ ಅಥವಾ ತಪ್ಪಾಗಿ ಬಿಂಬಿಸಲಾಗಿದೆ ಎಂದು ಭಾವಿಸುವ ಪ್ರತಿಯೊಬ್ಬರಲ್ಲಿಯೂ ನಾನು ಕ್ಷಮೆಯಾಚಿಸುತ್ತೇನೆ” ಎಂದು ಕೌನ್ಸಿಲ್ವುಮನ್ ಕರೆನ್ ಒರ್ಗೆನ್ ತಿಳಿಸಿದ್ದಾರೆ.

ವಿವೇಕ್ ಎಂದು ಗುರುತಿಸಿಕೊಂಡ ವ್ಯಕ್ತಿಯೊಬ್ಬ ಸೆಪ್ಟೆಂಬರ್ 20, 2022ರಂದು ಕೌನ್ಸಿಲ್ ಸಭೆಯ ಸಮಯದಲ್ಲಿ ಮಾತನಾಡಿದ್ದನು. ಮತದಾರರಿಗಾಗಿ ಮೀಸಲಿಟ್ಟ ವೇದಿಕೆಯನ್ನು ಬಳಸಿಕೊಂಡ ಆತ ಮುಸ್ಲಿಮರನ್ನು ಭಯೋತ್ಪಾದಕರು ಮತ್ತು ಅತ್ಯಾಚಾರಿಗಳು ಎಂದು ಜರಿದಿದ್ದನು. ಮುಸ್ಲಿಮರು 9/11ರ ಘಟನೆಯನ್ನು ‘ಆನಂದಿಸಿದ್ದಾರೆ’ ಮತ್ತು ದೇಶಗಳನ್ನು ‘ನಾಶ’ ಮಾಡಲು ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತಕ್ಕೆ ವಲಸೆ ಬಂದಿದ್ದಾರೆ ಎಂದು ಆರೋಪಿಸಿದ್ದನು.

“ನೀವು ದೇಶದಲ್ಲಿ (ಭಾರತ) ನಡೆಯುವ ಅತ್ಯಾಚಾರದ ಬಗ್ಗೆ ಮಾತನಾಡುತ್ತೀರಿ. ಅವು ಮುಸ್ಲಿಮರಿಂದ ನಡೆಯುತ್ತಿವೆ. ಈ ಮುಸ್ಲಿಮರು ಎಲ್ಲ ಹುಡುಗಿಯನ್ನು ಸೆಳೆದುಕೊಳ್ಳುತ್ತಾರೆ. ಎಲ್ಲರನ್ನೂ ಮತಾಂತರ ಮಾಡಲು ಪ್ರಯತ್ನಿಸುತ್ತಾರೆ. ನಂತರ ಅವರು ಮಕ್ಕಳನ್ನು ಮಾಡಿ, ಹುಡುಗಿಯರನ್ನು ಕೊಲ್ಲುತ್ತಾರೆ” ಎಂದು ಮಾತನಾಡಿದ್ದನು.

ಭಾರತದಲ್ಲಿ ಹಿಂಸಾತ್ಮಕ ಧೋರಣೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳು ಹಾಗೂ ಅವುಗಳೊಂದಿಗೆ ಸಂಬಂಧ ಹೊಂದಿರುವ ಯುಎಸ್ ಮೂಲದ ಹಿಂದೂ ಬಲಪಂಥೀಯ ಗುಂಪುಗಳ ಬಗ್ಗೆ ತನಿಖೆಗೆ ಒತ್ತಾಯಿಸುವ ನಿರ್ಣಯವನ್ನು ಟೀನೆಕ್ ಡೆಮಾಕ್ರಟಿಕ್ ಮುನ್ಸಿಪಲ್ ಕಮಿಟಿ (ಟಿಡಿಎಂಸಿ) ಅಂಗೀಕರಿಸಿದ ನಂತರ ಈ ಟೀಕೆಗಳನ್ನು ವಿವೇಕ್‌ ಮಾಡಿದ್ದನು.

ಇದನ್ನೂ ಓದಿರಿ: ಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

ವಿವೇಕ್ ಮಾಡಿದ ಮುಸ್ಲಿಂ ವಿರೋಧಿ ಟೀಕೆಗಳನ್ನು ಕೌನ್ಸಿಲ್ ಖಂಡಿಸಲು ವಿಫಲವಾದ ನಂತರ, ಹಲವಾರು ಮುಸ್ಲಿಂ ಟೀನೆಕ್ ನಿವಾಸಿಗಳು ಮತ್ತು ಸ್ನೇಹಿತರು ಆಕ್ರೋಶ ಹೊರಹಾಕಿದ್ದರು. ಅಕ್ಟೋಬರ್‌ನ ಸಿಟಿ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಿ, ಮುಸ್ಲಿಂ ವಿರೋಧಿ ದ್ವೇಷದ ಭಾಷಣದ ವಿರುದ್ಧ ಕೌನ್ಸಿಲ್‌ನ ನಿಷ್ಕ್ರಿಯತೆಯನ್ನು ಖಂಡಿಸಿದ್ದರು.

ಕೌನ್ಸಿಲ್ಮನ್ ಕಪ್ಲಾನ್ ಮಾತನಾಡಿ, “ತಪ್ಪು ಮಾಹಿತಿಯನ್ನು ಹರಡುವ ಯಾರನ್ನಾದರೂ ನಿಲ್ಲಿಸುವುದಾಗಿದ್ದರೆ ಕಳೆದ ತಿಂಗಳು ನೀವು ಎಲ್ಲಿದ್ದೀರಿ? ಮುಸ್ಲಿಮರು 9/11 ಅನ್ನು ಆನಂದಿಸಿದ್ದಾರೆ. ಅವರು ಕ್ರಿಶ್ಚಿಯನ್ ಮಹಿಳೆಯರನ್ನು ಅತ್ಯಾಚಾರ ಮಾಡುತ್ತಾರೆ. ಮಕ್ಕಳನ್ನು ಮಾಡಿ ಕೊಲ್ಲುತ್ತಾರೆ ಎಂದು ಹಿಂದೂ ಉಗ್ರಗಾಮಿ ಹೇಳುತ್ತಿದ್ದನು. ಇದು ಸ್ಪಷ್ಟ ತಪ್ಪು ಮಾಹಿತಿಯಲ್ಲವೇ?” ಎಂದು ಕೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...