Homeಅಂತರಾಷ್ಟ್ರೀಯನ್ಯೂಜೆರ್ಸಿ: ಮುಸ್ಲಿಂ ದ್ವೇಷ ಕಾರಿದ ಹಿಂದೂ ಮತೀಯವಾದಿ ಹೇಳಿಕೆಗೆ ಟೀನೆಕ್ ಮೇಯರ್‌ ಕ್ಷಮೆಯಾಚನೆ

ನ್ಯೂಜೆರ್ಸಿ: ಮುಸ್ಲಿಂ ದ್ವೇಷ ಕಾರಿದ ಹಿಂದೂ ಮತೀಯವಾದಿ ಹೇಳಿಕೆಗೆ ಟೀನೆಕ್ ಮೇಯರ್‌ ಕ್ಷಮೆಯಾಚನೆ

- Advertisement -
- Advertisement -

ನ್ಯೂಜೆರ್ಸಿ: ಸೆಪ್ಟೆಂಬರ್‌ನಲ್ಲಿ ನಡೆದ ಸಿಟಿ ಕೌನ್ಸಿಲ್ ಸಭೆಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡಿದ್ದ ಹಿಂದೂ ಮತೀಯವಾದಿಯ ಹೇಳಿಕೆಗೆ ನ್ಯೂಜೆರ್ಸಿಯ ಟೀನೆಕ್ ಟೌನ್‌ಶಿಪ್‌ನ ಮೇಯರ್ ಮತ್ತು ಇಬ್ಬರು ಸಿಟಿ ಕೌನ್ಸಿಲ್ ಸದಸ್ಯರು ವಿಷಾದ ವ್ಯಕ್ತಪಡಿಸಿದ್ದಾರೆ.

ಮತೀಯವಾದಿಗಳಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ. ಈ ಭಾಷಣವು ರಾಜ್ಯಾದ್ಯಂತ ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು.

ಮುಸ್ಲಿಂ ಸಮುದಾಯದ ವಿರುದ್ಧದ ದ್ವೇಷವನ್ನು ಖಂಡಿಸುವ ಅಧಿಕೃತ ಹೇಳಿಕೆಯನ್ನು ಅಕ್ಟೋಬರ್ 28 ರಂದು ಮೇಯರ್ ಜಿಮ್ ಡನ್ಲೆವಿ ಬಿಡುಗಡೆ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದಬ್ಬಾಳಿಕೆಯು ತೀವ್ರತರವಾದದ್ದು. ಈ ಅಪಾಯಕಾರಿ ಮತೀಯವಾದಿಗಳಿಗೆ ಟೀನೆಕ್ ಅಥವಾ ನ್ಯೂಜೆರ್ಸಿಯಲ್ಲಿ ಯಾವುದೇ ಸ್ಥಾನವಿಲ್ಲ” ಎಂದು ಸ್ಪಷ್ಟಪಡಿಸಿರುವುದಾಗಿ ‘ಕ್ಲಾರಿಯಾನ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

ಅಕ್ಟೋಬರ್ 25ರಂದು ನಡೆದ ಸಿಟಿ ಕೌನ್ಸಿಲ್ ಸಭೆಯಲ್ಲಿ ಮೇಯರ್ ಮತ್ತು ಕೌನ್ಸಿಲ್ ಸದಸ್ಯರು ಜನರಲ್ಲಿ ಕ್ಷಮೆಯಾಚಿಸಿದ್ದರು. ಈ ಸಮಯದಲ್ಲಿ ಹಲವಾರು ಮುಸ್ಲಿಂ ಸದಸ್ಯರು, ಹಿಂದೂ ಉಗ್ರಗಾಮಿಗಳ ಮುಸ್ಲಿಂ ವಿರೋಧಿ ವರ್ತನೆ ಹಾಗೂ ವಿಷಕಾರಿ ಹೇಳಿಕೆಗಳ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

“ಇಸ್ಲಾಂ ವಿರುದ್ಧ ದ್ವೇಷ ಕಾರಿದ ವ್ಯಕ್ತಿಯನ್ನು ತಕ್ಷಣವೇ ತಡೆದು ನಿಲ್ಲಿಸಬೇಕಿತ್ತು” ಎಂದು ಕೌನ್ಸಿಲ್ಮನ್ ಕೀತ್ ಕಪ್ಲಾನ್ ಹೇಳಿದ್ದಾರೆ.

“ಹಿಂದೂ ರಾಷ್ಟ್ರೀಯತೆ ಒಂದು ಕೆಟ್ಟ ವಿಷಯ ಎಂದು ನನಗೆ ತಿಳಿದಿರಲಿಲ್ಲ. ಇಲ್ಲಿ ದಾಳಿಯಾಗಿದೆ ಅಥವಾ ತಪ್ಪಾಗಿ ಬಿಂಬಿಸಲಾಗಿದೆ ಎಂದು ಭಾವಿಸುವ ಪ್ರತಿಯೊಬ್ಬರಲ್ಲಿಯೂ ನಾನು ಕ್ಷಮೆಯಾಚಿಸುತ್ತೇನೆ” ಎಂದು ಕೌನ್ಸಿಲ್ವುಮನ್ ಕರೆನ್ ಒರ್ಗೆನ್ ತಿಳಿಸಿದ್ದಾರೆ.

ವಿವೇಕ್ ಎಂದು ಗುರುತಿಸಿಕೊಂಡ ವ್ಯಕ್ತಿಯೊಬ್ಬ ಸೆಪ್ಟೆಂಬರ್ 20, 2022ರಂದು ಕೌನ್ಸಿಲ್ ಸಭೆಯ ಸಮಯದಲ್ಲಿ ಮಾತನಾಡಿದ್ದನು. ಮತದಾರರಿಗಾಗಿ ಮೀಸಲಿಟ್ಟ ವೇದಿಕೆಯನ್ನು ಬಳಸಿಕೊಂಡ ಆತ ಮುಸ್ಲಿಮರನ್ನು ಭಯೋತ್ಪಾದಕರು ಮತ್ತು ಅತ್ಯಾಚಾರಿಗಳು ಎಂದು ಜರಿದಿದ್ದನು. ಮುಸ್ಲಿಮರು 9/11ರ ಘಟನೆಯನ್ನು ‘ಆನಂದಿಸಿದ್ದಾರೆ’ ಮತ್ತು ದೇಶಗಳನ್ನು ‘ನಾಶ’ ಮಾಡಲು ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತಕ್ಕೆ ವಲಸೆ ಬಂದಿದ್ದಾರೆ ಎಂದು ಆರೋಪಿಸಿದ್ದನು.

“ನೀವು ದೇಶದಲ್ಲಿ (ಭಾರತ) ನಡೆಯುವ ಅತ್ಯಾಚಾರದ ಬಗ್ಗೆ ಮಾತನಾಡುತ್ತೀರಿ. ಅವು ಮುಸ್ಲಿಮರಿಂದ ನಡೆಯುತ್ತಿವೆ. ಈ ಮುಸ್ಲಿಮರು ಎಲ್ಲ ಹುಡುಗಿಯನ್ನು ಸೆಳೆದುಕೊಳ್ಳುತ್ತಾರೆ. ಎಲ್ಲರನ್ನೂ ಮತಾಂತರ ಮಾಡಲು ಪ್ರಯತ್ನಿಸುತ್ತಾರೆ. ನಂತರ ಅವರು ಮಕ್ಕಳನ್ನು ಮಾಡಿ, ಹುಡುಗಿಯರನ್ನು ಕೊಲ್ಲುತ್ತಾರೆ” ಎಂದು ಮಾತನಾಡಿದ್ದನು.

ಭಾರತದಲ್ಲಿ ಹಿಂಸಾತ್ಮಕ ಧೋರಣೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳು ಹಾಗೂ ಅವುಗಳೊಂದಿಗೆ ಸಂಬಂಧ ಹೊಂದಿರುವ ಯುಎಸ್ ಮೂಲದ ಹಿಂದೂ ಬಲಪಂಥೀಯ ಗುಂಪುಗಳ ಬಗ್ಗೆ ತನಿಖೆಗೆ ಒತ್ತಾಯಿಸುವ ನಿರ್ಣಯವನ್ನು ಟೀನೆಕ್ ಡೆಮಾಕ್ರಟಿಕ್ ಮುನ್ಸಿಪಲ್ ಕಮಿಟಿ (ಟಿಡಿಎಂಸಿ) ಅಂಗೀಕರಿಸಿದ ನಂತರ ಈ ಟೀಕೆಗಳನ್ನು ವಿವೇಕ್‌ ಮಾಡಿದ್ದನು.

ಇದನ್ನೂ ಓದಿರಿ: ಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

ವಿವೇಕ್ ಮಾಡಿದ ಮುಸ್ಲಿಂ ವಿರೋಧಿ ಟೀಕೆಗಳನ್ನು ಕೌನ್ಸಿಲ್ ಖಂಡಿಸಲು ವಿಫಲವಾದ ನಂತರ, ಹಲವಾರು ಮುಸ್ಲಿಂ ಟೀನೆಕ್ ನಿವಾಸಿಗಳು ಮತ್ತು ಸ್ನೇಹಿತರು ಆಕ್ರೋಶ ಹೊರಹಾಕಿದ್ದರು. ಅಕ್ಟೋಬರ್‌ನ ಸಿಟಿ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಿ, ಮುಸ್ಲಿಂ ವಿರೋಧಿ ದ್ವೇಷದ ಭಾಷಣದ ವಿರುದ್ಧ ಕೌನ್ಸಿಲ್‌ನ ನಿಷ್ಕ್ರಿಯತೆಯನ್ನು ಖಂಡಿಸಿದ್ದರು.

ಕೌನ್ಸಿಲ್ಮನ್ ಕಪ್ಲಾನ್ ಮಾತನಾಡಿ, “ತಪ್ಪು ಮಾಹಿತಿಯನ್ನು ಹರಡುವ ಯಾರನ್ನಾದರೂ ನಿಲ್ಲಿಸುವುದಾಗಿದ್ದರೆ ಕಳೆದ ತಿಂಗಳು ನೀವು ಎಲ್ಲಿದ್ದೀರಿ? ಮುಸ್ಲಿಮರು 9/11 ಅನ್ನು ಆನಂದಿಸಿದ್ದಾರೆ. ಅವರು ಕ್ರಿಶ್ಚಿಯನ್ ಮಹಿಳೆಯರನ್ನು ಅತ್ಯಾಚಾರ ಮಾಡುತ್ತಾರೆ. ಮಕ್ಕಳನ್ನು ಮಾಡಿ ಕೊಲ್ಲುತ್ತಾರೆ ಎಂದು ಹಿಂದೂ ಉಗ್ರಗಾಮಿ ಹೇಳುತ್ತಿದ್ದನು. ಇದು ಸ್ಪಷ್ಟ ತಪ್ಪು ಮಾಹಿತಿಯಲ್ಲವೇ?” ಎಂದು ಕೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...