Homeಮುಖಪುಟಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

ಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ನೂತನ ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರ ಹೆಸರಿನಲ್ಲಿದ್ದ, ಈಗ ಡಿಲೀಟ್ ಮಾಡಲಾಗಿರುವ ಟ್ವಿಟರ್‌ ಅಕೌಂಟ್‌ನಿಂದ ಮಾಡಲಾಗಿದ್ದ ದ್ವೇಷಪೂರಿತ ಟ್ವೀಟ್‌ಗಳು ಬಾರಿ ವಿವಾದಕ್ಕಿಡಾಗಿ ವೈರಲ್‌ ಆದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ.

“ನಾನು ಎಂದಿಗೂ ಟ್ವಿಟರ್‌ನಲ್ಲಿರಲಿಲ್ಲ, ನನ್ನ ಬಳಿ ಟ್ವಿಟರ್ ಖಾತೆ ಇಲ್ಲ” ಎಂದು ಶಾಂತಿಶ್ರೀ ಧೂಳಿಪಡಿ ಪಂಡಿತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜೆಎನ್‌ಯು ನೂತನ ಉಪಕುಲಪತಿಯಾಗಿ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಕ ಮಾಡಿ ಕೇಂದ್ರ ಶಿಕ್ಷಣ ಸಚಿವಾಲಯ ಘೋಷಿಸಿತ್ತು. ಈ ಬೆನ್ನಲ್ಲೇ, ಅವರ ಹೆಸರಿನಲ್ಲಿದ್ದ ಟ್ವಿಟರ್‌ ಖಾತೆಯಿಂದ ಜೆಎನ್‌ಯು ವಿದ್ಯಾರ್ಥಿಗಳನ್ನು ಟೀಕಿಸುವ, ರೈತರನ್ನು ದಲ್ಲಾಳಿಗಳು ಎಂದಿದ್ದ ಮತ್ತು ಬಿಜೆಪಿ ಸರ್ಕಾರವನ್ನು, ಗೋಡ್ಸೆಯನ್ನು ಬೆಂಬಲಿಸುವ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಸೇಂಟ್ ಸ್ಟೀಫನ್ಸ್ ಕಾಲೇಜ್ ಅನ್ನು “ಕೋಮು ಕ್ಯಾಂಪಸ್” ಎಂದು ಕರೆಯುವ, ಮಾಜಿಕ ಕಾರ್ಯಕರ್ತರನ್ನು “ಮಾನಸಿಕ-ಅಸ್ವಸ್ಥ ಜಿಹಾದಿಗಳು” ಎಂದಿದ್ದ ಹಳೆಯ ಟ್ವೀಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು.

ಈ ಟ್ವೀಟ್‌ಗಳು ವೈರಲ್‌ ಆಗುತ್ತಿದ್ದ ಹಾಗೆಯೇ ಈ ಖಾತೆಯನ್ನು ಡಿಲೀಟ್ ಮಾಡಲಾಗಿದೆ. ಈ ಖಾತೆಯು ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರದ್ದೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿರಲಿಲ್ಲ. ಈ ಟ್ವೀಟ್‌ಗಳು @SantishreeD ಹ್ಯಾಂಡಲ್‌ನಿಂದ ಪೋಸ್ಟ್ ಮಾಡಲಾಗಿದೆ. ಈ ಅಕೌಂಟ್ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಎಂದು ಅವರ ಪೂರ್ಣ ಹೆಸರಿನಿಂದ ಇತ್ತು. ಪ್ರೋಫೈಲ್ ಫೋಟೋ ಮಾತ್ರ ದೇವರ ಚಿತ್ರವಾಗಿತ್ತು. ಜೊತೆಗೆ ಮೇ 2021 ರಿಂದ ಈ ಖಾತೆಯಿಂದ ಯಾವುದೇ ಟ್ವೀಟ್‌ಗಳನ್ನು ಮಾಡಿಲ್ಲ.

ಇದನ್ನೂ ಓದಿ: ಜೆಎನ್‌ಯುಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಮೊದಲ ಮಹಿಳಾ ಉಪಕುಲಪತಿ, ಪರ ವಿರೋಧ ಚರ್ಚೆ

ಇದಕ್ಕೆ ಪ್ರತಿಕ್ರಿಯೇ ನೀಡಿರುವ ಅವರು, “ನನಗೆ ಟ್ವಿಟರ್ ಖಾತೆ ಇರಲಿಲ್ಲ. ಆ ಟ್ವಿಟರ್‌ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಜೆಎನ್‌ಯುನ ಆಂತರಿಕವಾಗಿ ಯಾರೋ ಇದನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯ ವಿಷಯವೆಂದರೆ, ನಾನು ಮೊದಲ ಮಹಿಳಾ ವಿಸಿ ಎಂದು ಅನೇಕ ಜನರು ಅತೃಪ್ತರಾಗಿದ್ದಾರೆ. ಜೆಎನ್‌ಯುನ ಕೆಲವರು ಇದರಲ್ಲಿ ಭಾಗಿಯಾಗಿರುವ ಬಗ್ಗೆ ವಿಶ್ವಾಸಾರ್ಹ ಮೂಲಗಳಿಂದ ನನಗೆ ಮಾಹಿತಿಯಿದೆ” ಎಂದಿದ್ದಾರೆ.

“ನನ್ನ ಮಗಳು ಸೈಬರ್ ಸೆಕ್ಯುರಿಟಿ ಇಂಜಿನಿಯರ್. ಆರು ವರ್ಷಗಳ ಹಿಂದೆ, ಆಕೆ ಯುಎಸ್‌ನಲ್ಲಿ ಕೆಲವು ಉದ್ಯೋಗಗಳಿಗೆ ಅರ್ಜಿ ಸಲ್ಲಿಸುತ್ತಿದ್ದಾಗ ನನ್ನ ಅಕೌಂಟ್‌ಗಳನ್ನು ಕ್ಲೋಸ್ ಮಾಡಿದ್ದರು. ನಾನು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿಲ್ಲ. ಈ ಟ್ವಿಟ್ಟರ್ ಅನ್ನು ಯಾರು ಪ್ರಾರಂಭಿಸಿದರು ಎಂದು ನನಗೆ ತಿಳಿದಿಲ್ಲ,” ಎಂದಿದ್ದಾರೆ.  ಜೊತೆಗೆ ಇದೆಲ್ಲಾ ಯೋಜಿತ ಕೆಲಸಗಳು. ನನ್ನನ್ನು ನೇಮಕ ಮಾಡಿದ ತಕ್ಷಣ ಟ್ವೀಟ್‌ಗಳು ಹೇಗೆ ಹೊರಬರುತ್ತವೆ..? ಎಂದು ಪ್ರಶ್ನಿಸಿದ್ದಾರೆ.

ಮುಂದುವರಿದು, “ನಾನು ಈ ವಿಶ್ವವಿದ್ಯಾಲಯದ ವಿದ್ಯಾರ್ಥಿ, ಇದು ನನ್ನ ತಾಯಿಯಂತೆ. ನಾನು ಇಂದು ಏನಾಗಿದ್ದೇನೆ ಎಂದರೆ ಅದಕ್ಕೆ ಜೆಎನ್‌ಯು ಕಾರಣ. ವಿಭಿನ್ನ ಸಿದ್ಧಾಂತಗಳು ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲವೇ? ಎಂದಿದ್ದಾರೆ.

ಅವರ ಹೆಸರಿನ ಖಾತೆಯ ಹಳೆಯ ಟ್ವೀಟ್‌ಗಳು ವೈರಲ್ ಆದ ಕೆಲವೇ ಗಂಟೆಗಳ ನಂತರ ಟ್ವಿಟರ್‌ ಖಾತೆಯನ್ನು ಅಳಿಸಲಾಗಿದೆ. ಆದರೆ ಈ ಮೊದಲೇ ತೆಗೆದುಕೊಳ್ಳಲಾಗಿದ್ದ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿವೆ.


ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...