Homeಮುಖಪುಟಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

ಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ನೂತನ ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರ ಹೆಸರಿನಲ್ಲಿದ್ದ, ಈಗ ಡಿಲೀಟ್ ಮಾಡಲಾಗಿರುವ ಟ್ವಿಟರ್‌ ಅಕೌಂಟ್‌ನಿಂದ ಮಾಡಲಾಗಿದ್ದ ದ್ವೇಷಪೂರಿತ ಟ್ವೀಟ್‌ಗಳು ಬಾರಿ ವಿವಾದಕ್ಕಿಡಾಗಿ ವೈರಲ್‌ ಆದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ.

“ನಾನು ಎಂದಿಗೂ ಟ್ವಿಟರ್‌ನಲ್ಲಿರಲಿಲ್ಲ, ನನ್ನ ಬಳಿ ಟ್ವಿಟರ್ ಖಾತೆ ಇಲ್ಲ” ಎಂದು ಶಾಂತಿಶ್ರೀ ಧೂಳಿಪಡಿ ಪಂಡಿತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜೆಎನ್‌ಯು ನೂತನ ಉಪಕುಲಪತಿಯಾಗಿ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಕ ಮಾಡಿ ಕೇಂದ್ರ ಶಿಕ್ಷಣ ಸಚಿವಾಲಯ ಘೋಷಿಸಿತ್ತು. ಈ ಬೆನ್ನಲ್ಲೇ, ಅವರ ಹೆಸರಿನಲ್ಲಿದ್ದ ಟ್ವಿಟರ್‌ ಖಾತೆಯಿಂದ ಜೆಎನ್‌ಯು ವಿದ್ಯಾರ್ಥಿಗಳನ್ನು ಟೀಕಿಸುವ, ರೈತರನ್ನು ದಲ್ಲಾಳಿಗಳು ಎಂದಿದ್ದ ಮತ್ತು ಬಿಜೆಪಿ ಸರ್ಕಾರವನ್ನು, ಗೋಡ್ಸೆಯನ್ನು ಬೆಂಬಲಿಸುವ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಸೇಂಟ್ ಸ್ಟೀಫನ್ಸ್ ಕಾಲೇಜ್ ಅನ್ನು “ಕೋಮು ಕ್ಯಾಂಪಸ್” ಎಂದು ಕರೆಯುವ, ಮಾಜಿಕ ಕಾರ್ಯಕರ್ತರನ್ನು “ಮಾನಸಿಕ-ಅಸ್ವಸ್ಥ ಜಿಹಾದಿಗಳು” ಎಂದಿದ್ದ ಹಳೆಯ ಟ್ವೀಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು.

ಈ ಟ್ವೀಟ್‌ಗಳು ವೈರಲ್‌ ಆಗುತ್ತಿದ್ದ ಹಾಗೆಯೇ ಈ ಖಾತೆಯನ್ನು ಡಿಲೀಟ್ ಮಾಡಲಾಗಿದೆ. ಈ ಖಾತೆಯು ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರದ್ದೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿರಲಿಲ್ಲ. ಈ ಟ್ವೀಟ್‌ಗಳು @SantishreeD ಹ್ಯಾಂಡಲ್‌ನಿಂದ ಪೋಸ್ಟ್ ಮಾಡಲಾಗಿದೆ. ಈ ಅಕೌಂಟ್ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಎಂದು ಅವರ ಪೂರ್ಣ ಹೆಸರಿನಿಂದ ಇತ್ತು. ಪ್ರೋಫೈಲ್ ಫೋಟೋ ಮಾತ್ರ ದೇವರ ಚಿತ್ರವಾಗಿತ್ತು. ಜೊತೆಗೆ ಮೇ 2021 ರಿಂದ ಈ ಖಾತೆಯಿಂದ ಯಾವುದೇ ಟ್ವೀಟ್‌ಗಳನ್ನು ಮಾಡಿಲ್ಲ.

ಇದನ್ನೂ ಓದಿ: ಜೆಎನ್‌ಯುಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಮೊದಲ ಮಹಿಳಾ ಉಪಕುಲಪತಿ, ಪರ ವಿರೋಧ ಚರ್ಚೆ

ಇದಕ್ಕೆ ಪ್ರತಿಕ್ರಿಯೇ ನೀಡಿರುವ ಅವರು, “ನನಗೆ ಟ್ವಿಟರ್ ಖಾತೆ ಇರಲಿಲ್ಲ. ಆ ಟ್ವಿಟರ್‌ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಜೆಎನ್‌ಯುನ ಆಂತರಿಕವಾಗಿ ಯಾರೋ ಇದನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯ ವಿಷಯವೆಂದರೆ, ನಾನು ಮೊದಲ ಮಹಿಳಾ ವಿಸಿ ಎಂದು ಅನೇಕ ಜನರು ಅತೃಪ್ತರಾಗಿದ್ದಾರೆ. ಜೆಎನ್‌ಯುನ ಕೆಲವರು ಇದರಲ್ಲಿ ಭಾಗಿಯಾಗಿರುವ ಬಗ್ಗೆ ವಿಶ್ವಾಸಾರ್ಹ ಮೂಲಗಳಿಂದ ನನಗೆ ಮಾಹಿತಿಯಿದೆ” ಎಂದಿದ್ದಾರೆ.

“ನನ್ನ ಮಗಳು ಸೈಬರ್ ಸೆಕ್ಯುರಿಟಿ ಇಂಜಿನಿಯರ್. ಆರು ವರ್ಷಗಳ ಹಿಂದೆ, ಆಕೆ ಯುಎಸ್‌ನಲ್ಲಿ ಕೆಲವು ಉದ್ಯೋಗಗಳಿಗೆ ಅರ್ಜಿ ಸಲ್ಲಿಸುತ್ತಿದ್ದಾಗ ನನ್ನ ಅಕೌಂಟ್‌ಗಳನ್ನು ಕ್ಲೋಸ್ ಮಾಡಿದ್ದರು. ನಾನು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿಲ್ಲ. ಈ ಟ್ವಿಟ್ಟರ್ ಅನ್ನು ಯಾರು ಪ್ರಾರಂಭಿಸಿದರು ಎಂದು ನನಗೆ ತಿಳಿದಿಲ್ಲ,” ಎಂದಿದ್ದಾರೆ.  ಜೊತೆಗೆ ಇದೆಲ್ಲಾ ಯೋಜಿತ ಕೆಲಸಗಳು. ನನ್ನನ್ನು ನೇಮಕ ಮಾಡಿದ ತಕ್ಷಣ ಟ್ವೀಟ್‌ಗಳು ಹೇಗೆ ಹೊರಬರುತ್ತವೆ..? ಎಂದು ಪ್ರಶ್ನಿಸಿದ್ದಾರೆ.

ಮುಂದುವರಿದು, “ನಾನು ಈ ವಿಶ್ವವಿದ್ಯಾಲಯದ ವಿದ್ಯಾರ್ಥಿ, ಇದು ನನ್ನ ತಾಯಿಯಂತೆ. ನಾನು ಇಂದು ಏನಾಗಿದ್ದೇನೆ ಎಂದರೆ ಅದಕ್ಕೆ ಜೆಎನ್‌ಯು ಕಾರಣ. ವಿಭಿನ್ನ ಸಿದ್ಧಾಂತಗಳು ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲವೇ? ಎಂದಿದ್ದಾರೆ.

ಅವರ ಹೆಸರಿನ ಖಾತೆಯ ಹಳೆಯ ಟ್ವೀಟ್‌ಗಳು ವೈರಲ್ ಆದ ಕೆಲವೇ ಗಂಟೆಗಳ ನಂತರ ಟ್ವಿಟರ್‌ ಖಾತೆಯನ್ನು ಅಳಿಸಲಾಗಿದೆ. ಆದರೆ ಈ ಮೊದಲೇ ತೆಗೆದುಕೊಳ್ಳಲಾಗಿದ್ದ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿವೆ.


ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...