Homeಮುಖಪುಟಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

ಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ನೂತನ ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರ ಹೆಸರಿನಲ್ಲಿದ್ದ, ಈಗ ಡಿಲೀಟ್ ಮಾಡಲಾಗಿರುವ ಟ್ವಿಟರ್‌ ಅಕೌಂಟ್‌ನಿಂದ ಮಾಡಲಾಗಿದ್ದ ದ್ವೇಷಪೂರಿತ ಟ್ವೀಟ್‌ಗಳು ಬಾರಿ ವಿವಾದಕ್ಕಿಡಾಗಿ ವೈರಲ್‌ ಆದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ.

“ನಾನು ಎಂದಿಗೂ ಟ್ವಿಟರ್‌ನಲ್ಲಿರಲಿಲ್ಲ, ನನ್ನ ಬಳಿ ಟ್ವಿಟರ್ ಖಾತೆ ಇಲ್ಲ” ಎಂದು ಶಾಂತಿಶ್ರೀ ಧೂಳಿಪಡಿ ಪಂಡಿತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜೆಎನ್‌ಯು ನೂತನ ಉಪಕುಲಪತಿಯಾಗಿ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಕ ಮಾಡಿ ಕೇಂದ್ರ ಶಿಕ್ಷಣ ಸಚಿವಾಲಯ ಘೋಷಿಸಿತ್ತು. ಈ ಬೆನ್ನಲ್ಲೇ, ಅವರ ಹೆಸರಿನಲ್ಲಿದ್ದ ಟ್ವಿಟರ್‌ ಖಾತೆಯಿಂದ ಜೆಎನ್‌ಯು ವಿದ್ಯಾರ್ಥಿಗಳನ್ನು ಟೀಕಿಸುವ, ರೈತರನ್ನು ದಲ್ಲಾಳಿಗಳು ಎಂದಿದ್ದ ಮತ್ತು ಬಿಜೆಪಿ ಸರ್ಕಾರವನ್ನು, ಗೋಡ್ಸೆಯನ್ನು ಬೆಂಬಲಿಸುವ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಸೇಂಟ್ ಸ್ಟೀಫನ್ಸ್ ಕಾಲೇಜ್ ಅನ್ನು “ಕೋಮು ಕ್ಯಾಂಪಸ್” ಎಂದು ಕರೆಯುವ, ಮಾಜಿಕ ಕಾರ್ಯಕರ್ತರನ್ನು “ಮಾನಸಿಕ-ಅಸ್ವಸ್ಥ ಜಿಹಾದಿಗಳು” ಎಂದಿದ್ದ ಹಳೆಯ ಟ್ವೀಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು.

ಈ ಟ್ವೀಟ್‌ಗಳು ವೈರಲ್‌ ಆಗುತ್ತಿದ್ದ ಹಾಗೆಯೇ ಈ ಖಾತೆಯನ್ನು ಡಿಲೀಟ್ ಮಾಡಲಾಗಿದೆ. ಈ ಖಾತೆಯು ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರದ್ದೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿರಲಿಲ್ಲ. ಈ ಟ್ವೀಟ್‌ಗಳು @SantishreeD ಹ್ಯಾಂಡಲ್‌ನಿಂದ ಪೋಸ್ಟ್ ಮಾಡಲಾಗಿದೆ. ಈ ಅಕೌಂಟ್ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಎಂದು ಅವರ ಪೂರ್ಣ ಹೆಸರಿನಿಂದ ಇತ್ತು. ಪ್ರೋಫೈಲ್ ಫೋಟೋ ಮಾತ್ರ ದೇವರ ಚಿತ್ರವಾಗಿತ್ತು. ಜೊತೆಗೆ ಮೇ 2021 ರಿಂದ ಈ ಖಾತೆಯಿಂದ ಯಾವುದೇ ಟ್ವೀಟ್‌ಗಳನ್ನು ಮಾಡಿಲ್ಲ.

ಇದನ್ನೂ ಓದಿ: ಜೆಎನ್‌ಯುಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಮೊದಲ ಮಹಿಳಾ ಉಪಕುಲಪತಿ, ಪರ ವಿರೋಧ ಚರ್ಚೆ

ಇದಕ್ಕೆ ಪ್ರತಿಕ್ರಿಯೇ ನೀಡಿರುವ ಅವರು, “ನನಗೆ ಟ್ವಿಟರ್ ಖಾತೆ ಇರಲಿಲ್ಲ. ಆ ಟ್ವಿಟರ್‌ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಜೆಎನ್‌ಯುನ ಆಂತರಿಕವಾಗಿ ಯಾರೋ ಇದನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯ ವಿಷಯವೆಂದರೆ, ನಾನು ಮೊದಲ ಮಹಿಳಾ ವಿಸಿ ಎಂದು ಅನೇಕ ಜನರು ಅತೃಪ್ತರಾಗಿದ್ದಾರೆ. ಜೆಎನ್‌ಯುನ ಕೆಲವರು ಇದರಲ್ಲಿ ಭಾಗಿಯಾಗಿರುವ ಬಗ್ಗೆ ವಿಶ್ವಾಸಾರ್ಹ ಮೂಲಗಳಿಂದ ನನಗೆ ಮಾಹಿತಿಯಿದೆ” ಎಂದಿದ್ದಾರೆ.

“ನನ್ನ ಮಗಳು ಸೈಬರ್ ಸೆಕ್ಯುರಿಟಿ ಇಂಜಿನಿಯರ್. ಆರು ವರ್ಷಗಳ ಹಿಂದೆ, ಆಕೆ ಯುಎಸ್‌ನಲ್ಲಿ ಕೆಲವು ಉದ್ಯೋಗಗಳಿಗೆ ಅರ್ಜಿ ಸಲ್ಲಿಸುತ್ತಿದ್ದಾಗ ನನ್ನ ಅಕೌಂಟ್‌ಗಳನ್ನು ಕ್ಲೋಸ್ ಮಾಡಿದ್ದರು. ನಾನು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿಲ್ಲ. ಈ ಟ್ವಿಟ್ಟರ್ ಅನ್ನು ಯಾರು ಪ್ರಾರಂಭಿಸಿದರು ಎಂದು ನನಗೆ ತಿಳಿದಿಲ್ಲ,” ಎಂದಿದ್ದಾರೆ.  ಜೊತೆಗೆ ಇದೆಲ್ಲಾ ಯೋಜಿತ ಕೆಲಸಗಳು. ನನ್ನನ್ನು ನೇಮಕ ಮಾಡಿದ ತಕ್ಷಣ ಟ್ವೀಟ್‌ಗಳು ಹೇಗೆ ಹೊರಬರುತ್ತವೆ..? ಎಂದು ಪ್ರಶ್ನಿಸಿದ್ದಾರೆ.

ಮುಂದುವರಿದು, “ನಾನು ಈ ವಿಶ್ವವಿದ್ಯಾಲಯದ ವಿದ್ಯಾರ್ಥಿ, ಇದು ನನ್ನ ತಾಯಿಯಂತೆ. ನಾನು ಇಂದು ಏನಾಗಿದ್ದೇನೆ ಎಂದರೆ ಅದಕ್ಕೆ ಜೆಎನ್‌ಯು ಕಾರಣ. ವಿಭಿನ್ನ ಸಿದ್ಧಾಂತಗಳು ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲವೇ? ಎಂದಿದ್ದಾರೆ.

ಅವರ ಹೆಸರಿನ ಖಾತೆಯ ಹಳೆಯ ಟ್ವೀಟ್‌ಗಳು ವೈರಲ್ ಆದ ಕೆಲವೇ ಗಂಟೆಗಳ ನಂತರ ಟ್ವಿಟರ್‌ ಖಾತೆಯನ್ನು ಅಳಿಸಲಾಗಿದೆ. ಆದರೆ ಈ ಮೊದಲೇ ತೆಗೆದುಕೊಳ್ಳಲಾಗಿದ್ದ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿವೆ.


ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...