Homeಮುಖಪುಟಸುಪ್ರೀಂಗೆ ಹೊಸ ನ್ಯಾಯಾಧೀಶರ ನೇಮಕಾತಿ: ಮಾಧ್ಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ

ಸುಪ್ರೀಂಗೆ ಹೊಸ ನ್ಯಾಯಾಧೀಶರ ನೇಮಕಾತಿ: ಮಾಧ್ಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಹೊಸ ನ್ಯಾಯಾಧೀಶರ ಕುರಿತ ಸುಪ್ರೀಂಕೋರ್ಟ್ ಕೊಲಿಜಿಯಂನ ಶಿಫಾರಸುಗಳ ಕುರಿತು ಮಾಧ್ಯಮ ವರದಿಗಳ ಬಗ್ಗೆ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂತಹ ಸುದ್ದಿಗಳನ್ನು ವರದಿ ಮಾಡುವಲ್ಲಿ ಮಾಧ್ಯಮಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಅವರು ಹೇಳಿದ್ದು, ಯಾವುದೇ ಔಪಚಾರಿಕ ಘೋಷಣೆಗೆ ಮುಂಚೆಯೇ ನೇಮಕಾತಿಗಳ ವರದಿಗಳು ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

“ನ್ಯಾಯಾಧೀಶರ ನೇಮಕಾತಿಯ ಪ್ರಕ್ರಿಯೆಯು ಪವಿತ್ರವಾದುದಾಗಿದ್ದು, ಅದಕ್ಕೆ ಘನತೆ ಇದೆ. ಮಾಧ್ಯಮದ ಸ್ನೇಹಿತರು ಈ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಗುರುತಿಸಬೇಕು” ಎಂದು ನ್ಯಾಯಾಧೀಶರಾದ ನ್ಯಾಯಮೂರ್ತಿ ನವೀನ್ ಸಿನ್ಹಾ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡುತ್ತಾ ಎನ್‌ವಿ ರಮಣ ಹೇಳಿದ್ದಾರೆ.

ಇದನ್ನೂ ಓದಿ: ನ್ಯಾಯಮೂರ್ತಿ ಬೊಬ್ಡೆ ಅವಧಿಯಲ್ಲಿ ಸಂವಿಧಾನವನ್ನು ಕಾಯುವ ತನ್ನ ಪಾತ್ರವನ್ನುಸುಪ್ರೀಂ ಯಶಸ್ವಿಯಾಗಿ ನಿರ್ವಹಿಸಿತೇ?

“ಇಂತಹ ಬೇಜವಾಬ್ದಾರಿಯುತ ವರದಿ ಮತ್ತು ಊಹಾಪೋಹಗಳಿಂದಾಗಿ ಅತ್ಯುತ್ತಮ ಪ್ರತಿಭೆಗಳ ವೃತ್ತಿಜೀವನದ ಪ್ರಗತಿಗೆ ಕುಂದುಂಟಾದ ಉದಾಹರಣೆಗಳಿವೆ. ಇದು ತುಂಬಾ ದುರದೃಷ್ಟಕರವಾಗಿದ್ದು, ನಾನು ಈ ವರದಿಗಳ ಬಗ್ಗೆ ತುಂಬಾ ಅಸಮಾಧಾನಗೊಂಡಿದ್ದೇನೆ. ಅಂತಹ ಗಂಭೀರ ವಿಷಯದ ಬಗ್ಗೆ ಊಹಾಪೋಹಗಳನ್ನು ಹರಡದಿರುವಲ್ಲಿ ಹೆಚ್ಚಿನ ಹಿರಿಯ ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳು ಪ್ರದರ್ಶಿಸಿದ ಪ್ರಬುದ್ಧತೆ ಮತ್ತು ಜವಾಬ್ದಾರಿಯನ್ನು ನಾನು ಪ್ರಶಂಸಿಸುತ್ತೇನೆ” ಎಂದು ನ್ಯಾಯಮೂರ್ತಿ ರಮಣ ಹೇಳಿದ್ದಾರೆ.

ನ್ಯಾಯಾಧೀಶರನ್ನು ನೇಮಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸೂಚಿಸಿರುವ ಅವರು, “ಸಭೆಗಳನ್ನು ನಡೆಸಿ, ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ ಮಾಧ್ಯಮ ಸ್ವಾತಂತ್ರ್ಯ ಮತ್ತು ವ್ಯಕ್ತಿಗಳ ಹಕ್ಕುಗಳನ್ನು ಗೌರವಿಸುತ್ತದೆ ಎಂದು ಪ್ರತಿಪಾದಿಸಿದ ನ್ಯಾಯಮೂರ್ತಿ ರಮಣ, ನ್ಯಾಯಾಲಯದ ಎಲ್ಲಾ ಪಾಲುದಾರರು ಅದರ ಸಮಗ್ರತೆ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗುವ ಸಮಯ ದೂರವಿಲ್ಲ: ಜಸ್ಟಿಸ್ ಆರ್‌‌.ಎ‌ಫ್‌. ನಾರಿಮನ್

ವರದಿಗಳ ಪ್ರಕಾರ, ನ್ಯಾಯಮೂರ್ತಿ ರಮಣ ನೇತೃತ್ವದ ಸುಪ್ರೀಂಕೋರ್ಟ್ ಕೊಲಿಜಿಯಂ ಒಂಬತ್ತು ನ್ಯಾಯಾಧೀಶರ ಹೆಸರನ್ನು ಉನ್ನತ ನ್ಯಾಯಾಲಯಕ್ಕೆ ಏರಿಸಲು ಶಿಫಾರಸು ಮಾಡಿದೆ. ಅವರಲ್ಲಿ 2027 ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗುವ ನ್ಯಾಯಮೂರ್ತಿ ಬಿ.ವಿ ನಾಗರತ್ನ ಕೂಡ ಇದ್ದಾರೆ.

ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರನ್ನು 2008 ರಲ್ಲಿ ಕರ್ನಾಟಕದ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು ಸುಮಾರು ಎರಡು ವರ್ಷಗಳ ನಂತರ ಖಾಯಂ ನ್ಯಾಯಾಧೀಶರಾಗಿ ನೇಮಿಸಲಾಯಿತು.

ಸುಪ್ರೀಂಕೋರ್ಟ್‌ನ ಐದು ಸದಸ್ಯರ ಕೊಲಿಜಿಯಂ ಶಿಫಾರಸು ಮಾಡಿದ ಇತರ ಹೆಸರುಗಳೆಂದರೆ, ಹಿರಿಯ ವಕೀಲ ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಎಸ್ ನರಸಿಂಹ, ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಜೆ ಕೆ ಮಹೇಶ್ವರಿ, ನ್ಯಾಯಮೂರ್ತಿ ಸಿ ಟಿ ರವಿಕುಮಾರ್ ಮತ್ತು ನ್ಯಾಯಮೂರ್ತಿ ಎಂ ಎಂ ಸುಂದ್ರೇಶ್, ನ್ಯಾಯಮೂರ್ತಿ ಹಿಮಾಕೋಲಿ, ನ್ಯಾಯಮೂರ್ತಿ ಬೇಲಾ ತ್ರಿವೇದಿ.

ಇದನ್ನೂ ಓದಿ: ‘ನ್ಯಾಯಮೂರ್ತಿ ರಮಣ ಪಕ್ಷಪಾತಿ’: ಆಂಧ್ರ ಸಿಎಂ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...