HomeUncategorizedಹೊಸ ಮುಖ್ಯಮಂತ್ರಿ ಒಕ್ಕೂಟ ತತ್ವದ ಆದರ್ಶಕ್ಕೆ ಆಗ್ರಹಿಸಿ ನಿಲ್ಲಲಿ

ಹೊಸ ಮುಖ್ಯಮಂತ್ರಿ ಒಕ್ಕೂಟ ತತ್ವದ ಆದರ್ಶಕ್ಕೆ ಆಗ್ರಹಿಸಿ ನಿಲ್ಲಲಿ

- Advertisement -
- Advertisement -

ಕರ್ನಾಟಕವು ಏಕೀಕರಣಗೊಂಡ ನಂತರ 19 ಮುಖ್ಯಮಂತ್ರಿಗಳನ್ನು ಕಂಡಿದೆ. ಈಗ 20ನೇ ಮುಖ್ಯಮಂತ್ರಿಯಾಗಿ ಕರ್ನಾಟಕ ಸರ್ಕಾರವನ್ನು ಮುನ್ನಡೆಸಲು ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯಾಗಲು ಇದೇನು ಹಿತಕರ ಕಾಲಘಟ್ಟವಲ್ಲ. ಒಂದು ಕಡೆ ದೇಶ ಮತ್ತು ರಾಜ್ಯಗಳೆರಡರ ಆರ್ಥಿಕತೆ ಗಣನೀಯವಾಗಿ ಕುಸಿದಿದೆ. ಕೊರೊನಾ ಸಾಂಕ್ರಾಮಿಕ ಮಧ್ಯಮ ಮತ್ತು ಬಡಮಧ್ಯಮ ವರ್ಗದ ಜನರನ್ನು ಕಂಗೆಡಿಸಿದೆ. ಇಷ್ಟು ಸಾಲದು ಎಂಬಂತೆ ’ಭಿನ್ನ’ವಾದ ಬಿಜೆಪಿ ಪಕ್ಷದಲ್ಲಿ ಇರುವ ಆಂತರಿಕ ಭಿನ್ನಮತ ಹೊಸ ಮುಖ್ಯಮಂತ್ರಿಯವರ ಆಯ್ಕೆಯಿಂದ ಶಮನವಾಗುತ್ತದೆ ಎಂಬ ಯಾವ ಭರವಸೆಗಳೂ ಗೋಚರಿಸುತ್ತಿಲ್ಲ. ’ಹಳೆಯ’ ಆರ್‌ಎಸ್‌ಎಸ್ ಕಟ್ಟಾಳು ಯಡಿಯೂರಪ್ಪನವರನ್ನೇ ಇಳಿಸಲು ಪ್ರಯತ್ನಿಸಿದ ’ಹೊಸ’ ನಮೂನೆಯ ಆರ್‌ಎಸ್‌ಎಸ್‌ಗಳು, ಆರ್‌ಎಸ್‌ಎಸ್ ಮೂಲದವರಲ್ಲದ ವಲಸಿಗ ಬೊಮ್ಮಾಯಿ ಅವರನ್ನು ಎಷ್ಟು ಸುಸೂತ್ರವಾಗಿ ಕೆಲಸ ಮಾಡಲು ಬಿಡುತ್ತಾರೆ ಎಂದು ನೋಡುವಷ್ಟರಲ್ಲಿಯೇ ಬಹುಶಃ ಉಳಿದ ಒಂದೂ ಮುಕ್ಕಾಲು ವರ್ಷ ಕಳೆದುಹೋಗಬಹುದು. ಅಷ್ಟು ಹೊತ್ತಿಗೆ ಕರ್ನಾಟಕದ ಪಾಡೇನು ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟ. ಹಾಗಾಗದೆ ಇರಲಿ ಎಂದು ಸದ್ಯಕ್ಕೆ ಪ್ರಾರ್ಥಿಸೋಣ.

ಎಸ್ ಆರ್ ಬೊಮ್ಮಾಯಿ ಪ್ರಕರಣ ನೀಡಿದ ಕೊಡುಗೆ ನೆನಪಿರಲಿ

ಇಂದಿನ ಸಂದರ್ಭದಲ್ಲಿ ಒಕ್ಕೂಟ ಸರ್ಕಾರದ ಜೊತೆಗೆ ಸೆಣೆಸಿ ರಾಜ್ಯದ ಹಿತ ಕಾಯ್ದುಕೊಳ್ಳುವ ಧೈರ್ಯವನ್ನು ಮಾಡುವ ಯಾವುದೇ ಬಿಜೆಪಿ ರಾಜ್ಯ ಸರ್ಕಾರ ಇರುವುದಕ್ಕೆ ಸಾಧ್ಯವಿಲ್ಲ. ಅದು ತಮಗೆ ನ್ಯಾಯಬದ್ಧವಾಗಿ ಸಿಗಬೇಕಿರುವ ಜಿಎಸ್‌ಟಿ ಬಾಕಿ ಕೇಳುವುದಕ್ಕೆ ಇರಲಿ ಅಥವಾ ಸದ್ಯದ ಕೊರೊನಾ ಸನ್ನಿವೇಶದಲ್ಲಿ ತುರ್ತಾಗಿ ಸಿಗಬೇಕಿರುವ ಲಸಿಕೆಗೆ ಆಗ್ರಹ ಮಾಡುವುದಕ್ಕಾದರೂ ಇರಲಿ. ಆದರೆ ಬಸವರಾಜ ಬೊಮ್ಮಾಯಿಯವರ ತಂದೆ ಎಸ್ ಆರ್ ಬೊಮ್ಮಾಯಿಯವರ ಸರ್ಕಾರವನ್ನು ಅಂದಿನ ಕಾಂಗ್ರೆಸ್ ಆಡಳಿತದ ಒಕ್ಕೂಟ ಸರ್ಕಾರ ವಜಾ ಮಾಡಿದ ನಂತರ, ಎಸ್ ಆರ್ ಬೊಮ್ಮಾಯಿಯವರು ಸುಪ್ರೀಂ ಕೋರ್ಟ್‌ಗೆ ತೆರಳಿ, ಒಕ್ಕೂಟ ತತ್ವದ ವ್ಯಾಖ್ಯಾನವನ್ನು ನೆನಪಿಸುವುದಕ್ಕೆ ಕಾರಣೀಭೂತರಾದವರು. ಇದು ಬಸವರಾಜ್ ಬೊಮ್ಮಾಯಿಯವರಿಗೆ ಹೆಚ್ಚು ನೆನಪಿರುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಕ್ಕೂಟ ಸರ್ಕಾರದ ಅಡಿಯಾಳಲ್ಲ, ಬದಲಿಗೆ ರಾಜ್ಯ ಒಕ್ಕೂಟ ತತ್ವದಲ್ಲಿ ಸರ್ವ ಸ್ವತಂತ್ರ ಸಾರ್ವಭೌಮ ಎಂಬುದನ್ನು ನೆನಪಿಟ್ಟುಕೊಂಡು ಆಡಳಿತ ನಡೆಸಲಿ ಎಂಬುದು ಕೂಡ ಆರು ಕೋಟಿಗೂ ಮೀರಿದ ಕರ್ನಾಟಕದ ನಾಗರಿಕರ ಆಗ್ರಹ.

ಕೌಬೆಲ್ಟ್ ಹಿಂದುತ್ವ ರಾಜ್ಯದಲ್ಲಿ ನಡೆಯುವುದಿಲ್ಲ ಎಂಬ ಎಚ್ಚರಿಕೆ ಜಾಗೃತವಾಗಿರಲಿ

ಬಸವರಾಜ್ ಬೊಮ್ಮಾಯಿಯವರ ಆಯ್ಕೆಗೂ ಮುನ್ನ ಅತಿ ಹೆಚ್ಚು ಚರ್ಚೆಯಲ್ಲಿದ್ದ ಸಂಗತಿ ಕರ್ನಾಟಕದಲ್ಲಿ ಹಿಂದುತ್ವವನ್ನು ಉಚ್ಛ್ರಾಯ ಸ್ಥಿತಿಗೆ ತಲುಪಿಸುವ ಹಾರ್ಡ್‌ಕೋರ್ ಹಿಂದುತ್ವವಾದಿಗೆ ಮುಖ್ಯಮಂತ್ರಿ ಗಾದಿ ಒಲಿಯಲಿದೆ ಎಂಬ ಸುದ್ದಿ. ಹಿಂದುತ್ವ ಹಾರ್ಡ್ ಆಗಿರಲಿ ಅಥವಾ ಮೆತ್ತಗೆ ಮೃದುವಾಗಿರಲಿ ಅದು ಅಪಾಯಕಾರಿ ಎಂಬುದರಲ್ಲಿ ಎರಡು ಮಾತಿಲ್ಲ, ಆದರೆ ಕರ್ನಾಟಕದ ಮಟ್ಟಿಗೆ, ಇನ್ನೆಲ್ಲಾ ಬಿಟ್ಟು ದಿನಾಲು ೨೪ ಗಂಟೆ ಕೋಮು ವಿಷ ಕಾರಲು ಶಕ್ತಿ ಇದ್ದ ಹತ್ತಾರು ಸಚಿವರು ಹಿಂದಕ್ಕೆ ಸರಿದಿದ್ದಾರೆ ಎಂದರೆ ಬಿಜೆಪಿಯ ಹೈಕಮಾಂಡ್ ಮತ್ತು ಆರ್‌ಎಸ್‌ಎಸ್ ಥಿಂಕ್ ಟ್ಯಾಂಕ್‌ಗೆ ಕರ್ನಾಟಕದಲ್ಲಿರುವ ಪ್ರತಿರೋಧ ತುಸುವಾದರೂ ಅರ್ಥವಾಗಿರಲಿಕ್ಕೆ ಸಾಕು. ಇಲ್ಲಿ ಜಾತಿ ಐಡೆಂಟಿಟಿ ಸಂಘ ಪರಿವಾರ ಪ್ರತಿಪಾದಿಸುವ ’ನಾವೆಲ್ಲರೂ ಹಿಂದೂ ನಾವೆಲ್ಲರೂ ಒಂದು’ ಹಿಂದುತ್ವ ಸಿದ್ಧಾಂತಕ್ಕಿಂತ ಬಲಶಾಲಿಯಾಗಿದೆ ಎಂಬುದು ಒಂದು ಮಟ್ಟಿಗಿನ ನಿಜ ಸಂಗತಿಯಾದರೂ, ಅದನ್ನು ಮೀರಿದ ಒಂದು ಪ್ರಜ್ಞೆಯೂ ಕನ್ನಡಿಗರಲ್ಲಿ ಇದೆ ಅನ್ನುವುದೂ ನಿಜ. ಬಸವಣ್ಣ, ನಾಲ್ವಡಿ, ಕುವೆಂಪು, ಬಿ ಕೃಷ್ಣಪ್ಪ, ಬಿ ಬಸವಲಿಂಗಪ್ಪ ಆದಿಯಾಗಿ ಹಲವು ಧೀಮಂತರು ಕಟ್ಟಿಕೊಟ್ಟಿರುವ ಸಾಂಸ್ಕೃತಿಕ-ರಾಜಕೀಯ ಎಚ್ಚರಿಕೆಯ ಪರಂಪರೆಯೂ ಜನರ ಸ್ಮೃತಿಯಲ್ಲಿ ಎಲ್ಲೋ ಅಡಕವಾಗಿದೆ. ಅದು ಆಗಾಗ ಜಾಗೃತವಾಗುವುದಕ್ಕೂ ಸಾಧ್ಯತೆ ಇದೆ ಎನ್ನುವ ಎಚ್ಚರಿಕೆ ಹೊಸ ಮುಖ್ಯಮಂತ್ರಿಗಳಿಗೆ ಇರಲಿ. ಎಲ್ಲ ಸಮುದಾಯಗಳನ್ನು ಒಳಗೊಳ್ಳುವ ಬಹುತ್ವದ ರಾಜಕಾರಣವನ್ನು ಅವರು ಮರೆಯದಿರಲಿ.

PC: Mangalorean.com

ಭ್ರಷ್ಟಾಚಾರ ತಗ್ಗಲಿ; ಆಡಳಿತದಲ್ಲಿ ಹೊಸ ಹುರುಪು, ಪಾರದರ್ಶಕತೆ ಮತ್ತು ಚಾಕಚಕ್ಯತೆ ಇರಲಿ

ಭ್ರಷ್ಟಾಚಾರ ಕೊನೆಗೊಳಿಸುವ ಸರ್ಕಾರ ನೋಡಲು ಕರ್ನಾಟಕ ಜನತೆಗೆ ಯೋಗ ಯಾವಾಗ ಕೂಡಿಬರುತ್ತದೋ ತಿಳಿದಿಲ್ಲ. ಆದರೆ ಹಿಂದಿನ ಸರ್ಕಾರಕ್ಕಿಂತಲೂ ಉತ್ತಮ ಆಡಳಿತ ನಡೆಸಿ ಎಂದು ಹೊಸ ಸರ್ಕಾರ ಬಂದಾಗ ಕೇಳಿಕೊಳ್ಳುವುದನ್ನಾದರೂ ಮಾಡಬಹುದೇನೋ! ಉದಾಹರಣೆಗೆ ಶಿಕ್ಷಣ ಸಚಿವಾಲಯವನ್ನೇ ನೋಡಿ. ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಸಾಂಕ್ರಾಮಿಕದಿಂದ ಲಕ್ಷಾಂತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಕೆಲಸಗಳಿಗೆ ಹೋಗುವಂತಾಗಿದೆ. ಆ ಮಕ್ಕಳ ಶಿಕ್ಷಣಕ್ಕೆ ಪರಿಹಾರ ಸಿಗುವಂತಹ ಒಂದು ಆರೋಗ್ಯಕರ ನೀತಿಯನ್ನು ಸೃಷ್ಟಿಸಲು ಶಿಕ್ಷಣ ಇಲಾಖೆಗೆ ಸಾಧ್ಯವಾಗಿಲ್ಲ. ಪರೀಕ್ಷೆಗಳನ್ನು ನಡೆಸುವುದೇ ಸಾಧನೆ ಎಂಬಂತೆ ನಡೆದುಕೊಳ್ಳುವ ಶಿಕ್ಷಣ ಸಚಿವರು ಹೆಸರಿಗೆ ದಕ್ಷರು ಮತ್ತು ಸಜ್ಜನರು. ಡಿಜಿಟಲ್ ಡಿವೈಡ್‌ನಿಂದ ಬಡಮಕ್ಕಳಿಗೆ ಆಗಿರುವ ಸಮಸ್ಯೆಯ ಬಗ್ಗೆ ಒಂದು ಪರಿಹಾರವನ್ನೂ ಈ ಸಚಿವರು ಸೂಚಿಸಿರುವ ಉದಾಹರಣೆಯಿಲ್ಲ. ಹಲವಾರು ಶಿಕ್ಷಣ ತಜ್ಞರನ್ನು ಒಳಗೊಂಡಿರುವ ಕರ್ನಾಟಕದಲ್ಲಿ ಸಲಹೆಗೇನೂ ಬರವಿರಲಿಲ್ಲ ಅಲ್ಲವೇ?

ಇದು ಒಂದು ಇಲಾಖೆಯ ಉದಾಹರಣೆಯಾದರೆ ಕೃಷಿ, ಕಾರ್ಮಿಕ, ಆರೋಗ್ಯ, ವಸತಿ, ಸಾರಿಗೆ ಹೀಗೆ ಯಾವ ಇಲಾಖೆಯನ್ನೂ ತೆಗೆದುಕೊಂಡರೂ ಸಮಸ್ಯೆಗಳ ಆಗರವಾಗಿದೆ. ಸಾಮಾನ್ಯ ಜನರ ಸಮಸ್ಯೆಗೆ ಮಿಡಿಯುವವರಿಲ್ಲದೆ ಆಡಳಿತ ಕುಂಟುವುದನ್ನೂ ನಿಲ್ಲಿಸಿ ಮಕಾಡೆ ಮಲಗಿದೆ. ಹೊಸ ಸಚಿವ ಸಂಪುಟ ಈ ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ತಮಗೆ ಸಿಕ್ಕಿರುವ ಈ ಸಣ್ಣ ಆದರೆ ಸವಾಲಿನ ಸಮಯದಲ್ಲಿ ಕೆಲಸ ಮಾಡುವಂತಾಗಲಿ. ಇದಕ್ಕೆ ನೂತನ ಮುಖ್ಯಮಂತ್ರಿಗಳು ಸ್ಪೂರ್ತಿಯಾಗಿ,
ಆದರ್ಶಪ್ರಾಯವಾಗಿ ಕೆಲಸ ಮಾಡಿ ರಾಜ್ಯವನ್ನು ಮುನ್ನಡೆಸಲಿ.


ಇದನ್ನೂ ಓದಿ: ಯಡಿಯೂರಪ್ಪ ಪದಚ್ಯುತಿ; ದುಃಖಕ್ಕೂ ಸಂಭ್ರಮಕ್ಕೂ ಯೋಗ್ಯವಲ್ಲದ ಬದಲಾವಣೆ

ಇದನ್ನೂ ಓದಿ: ಸರ್ವಾಧಿಕಾರದ ಧೋರಣೆಗೆ ವಿರುದ್ಧವಾಗಿ ಪ್ರಜಾಸತ್ತಾತ್ಮಕ ಮೌಲ್ಯಗಳ ’ಸರ್‌ಪಟ್ಟ ಪರಂಪರೈ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...