HomeUncategorizedಹೊಸ ಮುಖ್ಯಮಂತ್ರಿ ಒಕ್ಕೂಟ ತತ್ವದ ಆದರ್ಶಕ್ಕೆ ಆಗ್ರಹಿಸಿ ನಿಲ್ಲಲಿ

ಹೊಸ ಮುಖ್ಯಮಂತ್ರಿ ಒಕ್ಕೂಟ ತತ್ವದ ಆದರ್ಶಕ್ಕೆ ಆಗ್ರಹಿಸಿ ನಿಲ್ಲಲಿ

- Advertisement -
- Advertisement -

ಕರ್ನಾಟಕವು ಏಕೀಕರಣಗೊಂಡ ನಂತರ 19 ಮುಖ್ಯಮಂತ್ರಿಗಳನ್ನು ಕಂಡಿದೆ. ಈಗ 20ನೇ ಮುಖ್ಯಮಂತ್ರಿಯಾಗಿ ಕರ್ನಾಟಕ ಸರ್ಕಾರವನ್ನು ಮುನ್ನಡೆಸಲು ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯಾಗಲು ಇದೇನು ಹಿತಕರ ಕಾಲಘಟ್ಟವಲ್ಲ. ಒಂದು ಕಡೆ ದೇಶ ಮತ್ತು ರಾಜ್ಯಗಳೆರಡರ ಆರ್ಥಿಕತೆ ಗಣನೀಯವಾಗಿ ಕುಸಿದಿದೆ. ಕೊರೊನಾ ಸಾಂಕ್ರಾಮಿಕ ಮಧ್ಯಮ ಮತ್ತು ಬಡಮಧ್ಯಮ ವರ್ಗದ ಜನರನ್ನು ಕಂಗೆಡಿಸಿದೆ. ಇಷ್ಟು ಸಾಲದು ಎಂಬಂತೆ ’ಭಿನ್ನ’ವಾದ ಬಿಜೆಪಿ ಪಕ್ಷದಲ್ಲಿ ಇರುವ ಆಂತರಿಕ ಭಿನ್ನಮತ ಹೊಸ ಮುಖ್ಯಮಂತ್ರಿಯವರ ಆಯ್ಕೆಯಿಂದ ಶಮನವಾಗುತ್ತದೆ ಎಂಬ ಯಾವ ಭರವಸೆಗಳೂ ಗೋಚರಿಸುತ್ತಿಲ್ಲ. ’ಹಳೆಯ’ ಆರ್‌ಎಸ್‌ಎಸ್ ಕಟ್ಟಾಳು ಯಡಿಯೂರಪ್ಪನವರನ್ನೇ ಇಳಿಸಲು ಪ್ರಯತ್ನಿಸಿದ ’ಹೊಸ’ ನಮೂನೆಯ ಆರ್‌ಎಸ್‌ಎಸ್‌ಗಳು, ಆರ್‌ಎಸ್‌ಎಸ್ ಮೂಲದವರಲ್ಲದ ವಲಸಿಗ ಬೊಮ್ಮಾಯಿ ಅವರನ್ನು ಎಷ್ಟು ಸುಸೂತ್ರವಾಗಿ ಕೆಲಸ ಮಾಡಲು ಬಿಡುತ್ತಾರೆ ಎಂದು ನೋಡುವಷ್ಟರಲ್ಲಿಯೇ ಬಹುಶಃ ಉಳಿದ ಒಂದೂ ಮುಕ್ಕಾಲು ವರ್ಷ ಕಳೆದುಹೋಗಬಹುದು. ಅಷ್ಟು ಹೊತ್ತಿಗೆ ಕರ್ನಾಟಕದ ಪಾಡೇನು ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟ. ಹಾಗಾಗದೆ ಇರಲಿ ಎಂದು ಸದ್ಯಕ್ಕೆ ಪ್ರಾರ್ಥಿಸೋಣ.

ಎಸ್ ಆರ್ ಬೊಮ್ಮಾಯಿ ಪ್ರಕರಣ ನೀಡಿದ ಕೊಡುಗೆ ನೆನಪಿರಲಿ

ಇಂದಿನ ಸಂದರ್ಭದಲ್ಲಿ ಒಕ್ಕೂಟ ಸರ್ಕಾರದ ಜೊತೆಗೆ ಸೆಣೆಸಿ ರಾಜ್ಯದ ಹಿತ ಕಾಯ್ದುಕೊಳ್ಳುವ ಧೈರ್ಯವನ್ನು ಮಾಡುವ ಯಾವುದೇ ಬಿಜೆಪಿ ರಾಜ್ಯ ಸರ್ಕಾರ ಇರುವುದಕ್ಕೆ ಸಾಧ್ಯವಿಲ್ಲ. ಅದು ತಮಗೆ ನ್ಯಾಯಬದ್ಧವಾಗಿ ಸಿಗಬೇಕಿರುವ ಜಿಎಸ್‌ಟಿ ಬಾಕಿ ಕೇಳುವುದಕ್ಕೆ ಇರಲಿ ಅಥವಾ ಸದ್ಯದ ಕೊರೊನಾ ಸನ್ನಿವೇಶದಲ್ಲಿ ತುರ್ತಾಗಿ ಸಿಗಬೇಕಿರುವ ಲಸಿಕೆಗೆ ಆಗ್ರಹ ಮಾಡುವುದಕ್ಕಾದರೂ ಇರಲಿ. ಆದರೆ ಬಸವರಾಜ ಬೊಮ್ಮಾಯಿಯವರ ತಂದೆ ಎಸ್ ಆರ್ ಬೊಮ್ಮಾಯಿಯವರ ಸರ್ಕಾರವನ್ನು ಅಂದಿನ ಕಾಂಗ್ರೆಸ್ ಆಡಳಿತದ ಒಕ್ಕೂಟ ಸರ್ಕಾರ ವಜಾ ಮಾಡಿದ ನಂತರ, ಎಸ್ ಆರ್ ಬೊಮ್ಮಾಯಿಯವರು ಸುಪ್ರೀಂ ಕೋರ್ಟ್‌ಗೆ ತೆರಳಿ, ಒಕ್ಕೂಟ ತತ್ವದ ವ್ಯಾಖ್ಯಾನವನ್ನು ನೆನಪಿಸುವುದಕ್ಕೆ ಕಾರಣೀಭೂತರಾದವರು. ಇದು ಬಸವರಾಜ್ ಬೊಮ್ಮಾಯಿಯವರಿಗೆ ಹೆಚ್ಚು ನೆನಪಿರುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಕ್ಕೂಟ ಸರ್ಕಾರದ ಅಡಿಯಾಳಲ್ಲ, ಬದಲಿಗೆ ರಾಜ್ಯ ಒಕ್ಕೂಟ ತತ್ವದಲ್ಲಿ ಸರ್ವ ಸ್ವತಂತ್ರ ಸಾರ್ವಭೌಮ ಎಂಬುದನ್ನು ನೆನಪಿಟ್ಟುಕೊಂಡು ಆಡಳಿತ ನಡೆಸಲಿ ಎಂಬುದು ಕೂಡ ಆರು ಕೋಟಿಗೂ ಮೀರಿದ ಕರ್ನಾಟಕದ ನಾಗರಿಕರ ಆಗ್ರಹ.

ಕೌಬೆಲ್ಟ್ ಹಿಂದುತ್ವ ರಾಜ್ಯದಲ್ಲಿ ನಡೆಯುವುದಿಲ್ಲ ಎಂಬ ಎಚ್ಚರಿಕೆ ಜಾಗೃತವಾಗಿರಲಿ

ಬಸವರಾಜ್ ಬೊಮ್ಮಾಯಿಯವರ ಆಯ್ಕೆಗೂ ಮುನ್ನ ಅತಿ ಹೆಚ್ಚು ಚರ್ಚೆಯಲ್ಲಿದ್ದ ಸಂಗತಿ ಕರ್ನಾಟಕದಲ್ಲಿ ಹಿಂದುತ್ವವನ್ನು ಉಚ್ಛ್ರಾಯ ಸ್ಥಿತಿಗೆ ತಲುಪಿಸುವ ಹಾರ್ಡ್‌ಕೋರ್ ಹಿಂದುತ್ವವಾದಿಗೆ ಮುಖ್ಯಮಂತ್ರಿ ಗಾದಿ ಒಲಿಯಲಿದೆ ಎಂಬ ಸುದ್ದಿ. ಹಿಂದುತ್ವ ಹಾರ್ಡ್ ಆಗಿರಲಿ ಅಥವಾ ಮೆತ್ತಗೆ ಮೃದುವಾಗಿರಲಿ ಅದು ಅಪಾಯಕಾರಿ ಎಂಬುದರಲ್ಲಿ ಎರಡು ಮಾತಿಲ್ಲ, ಆದರೆ ಕರ್ನಾಟಕದ ಮಟ್ಟಿಗೆ, ಇನ್ನೆಲ್ಲಾ ಬಿಟ್ಟು ದಿನಾಲು ೨೪ ಗಂಟೆ ಕೋಮು ವಿಷ ಕಾರಲು ಶಕ್ತಿ ಇದ್ದ ಹತ್ತಾರು ಸಚಿವರು ಹಿಂದಕ್ಕೆ ಸರಿದಿದ್ದಾರೆ ಎಂದರೆ ಬಿಜೆಪಿಯ ಹೈಕಮಾಂಡ್ ಮತ್ತು ಆರ್‌ಎಸ್‌ಎಸ್ ಥಿಂಕ್ ಟ್ಯಾಂಕ್‌ಗೆ ಕರ್ನಾಟಕದಲ್ಲಿರುವ ಪ್ರತಿರೋಧ ತುಸುವಾದರೂ ಅರ್ಥವಾಗಿರಲಿಕ್ಕೆ ಸಾಕು. ಇಲ್ಲಿ ಜಾತಿ ಐಡೆಂಟಿಟಿ ಸಂಘ ಪರಿವಾರ ಪ್ರತಿಪಾದಿಸುವ ’ನಾವೆಲ್ಲರೂ ಹಿಂದೂ ನಾವೆಲ್ಲರೂ ಒಂದು’ ಹಿಂದುತ್ವ ಸಿದ್ಧಾಂತಕ್ಕಿಂತ ಬಲಶಾಲಿಯಾಗಿದೆ ಎಂಬುದು ಒಂದು ಮಟ್ಟಿಗಿನ ನಿಜ ಸಂಗತಿಯಾದರೂ, ಅದನ್ನು ಮೀರಿದ ಒಂದು ಪ್ರಜ್ಞೆಯೂ ಕನ್ನಡಿಗರಲ್ಲಿ ಇದೆ ಅನ್ನುವುದೂ ನಿಜ. ಬಸವಣ್ಣ, ನಾಲ್ವಡಿ, ಕುವೆಂಪು, ಬಿ ಕೃಷ್ಣಪ್ಪ, ಬಿ ಬಸವಲಿಂಗಪ್ಪ ಆದಿಯಾಗಿ ಹಲವು ಧೀಮಂತರು ಕಟ್ಟಿಕೊಟ್ಟಿರುವ ಸಾಂಸ್ಕೃತಿಕ-ರಾಜಕೀಯ ಎಚ್ಚರಿಕೆಯ ಪರಂಪರೆಯೂ ಜನರ ಸ್ಮೃತಿಯಲ್ಲಿ ಎಲ್ಲೋ ಅಡಕವಾಗಿದೆ. ಅದು ಆಗಾಗ ಜಾಗೃತವಾಗುವುದಕ್ಕೂ ಸಾಧ್ಯತೆ ಇದೆ ಎನ್ನುವ ಎಚ್ಚರಿಕೆ ಹೊಸ ಮುಖ್ಯಮಂತ್ರಿಗಳಿಗೆ ಇರಲಿ. ಎಲ್ಲ ಸಮುದಾಯಗಳನ್ನು ಒಳಗೊಳ್ಳುವ ಬಹುತ್ವದ ರಾಜಕಾರಣವನ್ನು ಅವರು ಮರೆಯದಿರಲಿ.

PC: Mangalorean.com

ಭ್ರಷ್ಟಾಚಾರ ತಗ್ಗಲಿ; ಆಡಳಿತದಲ್ಲಿ ಹೊಸ ಹುರುಪು, ಪಾರದರ್ಶಕತೆ ಮತ್ತು ಚಾಕಚಕ್ಯತೆ ಇರಲಿ

ಭ್ರಷ್ಟಾಚಾರ ಕೊನೆಗೊಳಿಸುವ ಸರ್ಕಾರ ನೋಡಲು ಕರ್ನಾಟಕ ಜನತೆಗೆ ಯೋಗ ಯಾವಾಗ ಕೂಡಿಬರುತ್ತದೋ ತಿಳಿದಿಲ್ಲ. ಆದರೆ ಹಿಂದಿನ ಸರ್ಕಾರಕ್ಕಿಂತಲೂ ಉತ್ತಮ ಆಡಳಿತ ನಡೆಸಿ ಎಂದು ಹೊಸ ಸರ್ಕಾರ ಬಂದಾಗ ಕೇಳಿಕೊಳ್ಳುವುದನ್ನಾದರೂ ಮಾಡಬಹುದೇನೋ! ಉದಾಹರಣೆಗೆ ಶಿಕ್ಷಣ ಸಚಿವಾಲಯವನ್ನೇ ನೋಡಿ. ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಸಾಂಕ್ರಾಮಿಕದಿಂದ ಲಕ್ಷಾಂತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಕೆಲಸಗಳಿಗೆ ಹೋಗುವಂತಾಗಿದೆ. ಆ ಮಕ್ಕಳ ಶಿಕ್ಷಣಕ್ಕೆ ಪರಿಹಾರ ಸಿಗುವಂತಹ ಒಂದು ಆರೋಗ್ಯಕರ ನೀತಿಯನ್ನು ಸೃಷ್ಟಿಸಲು ಶಿಕ್ಷಣ ಇಲಾಖೆಗೆ ಸಾಧ್ಯವಾಗಿಲ್ಲ. ಪರೀಕ್ಷೆಗಳನ್ನು ನಡೆಸುವುದೇ ಸಾಧನೆ ಎಂಬಂತೆ ನಡೆದುಕೊಳ್ಳುವ ಶಿಕ್ಷಣ ಸಚಿವರು ಹೆಸರಿಗೆ ದಕ್ಷರು ಮತ್ತು ಸಜ್ಜನರು. ಡಿಜಿಟಲ್ ಡಿವೈಡ್‌ನಿಂದ ಬಡಮಕ್ಕಳಿಗೆ ಆಗಿರುವ ಸಮಸ್ಯೆಯ ಬಗ್ಗೆ ಒಂದು ಪರಿಹಾರವನ್ನೂ ಈ ಸಚಿವರು ಸೂಚಿಸಿರುವ ಉದಾಹರಣೆಯಿಲ್ಲ. ಹಲವಾರು ಶಿಕ್ಷಣ ತಜ್ಞರನ್ನು ಒಳಗೊಂಡಿರುವ ಕರ್ನಾಟಕದಲ್ಲಿ ಸಲಹೆಗೇನೂ ಬರವಿರಲಿಲ್ಲ ಅಲ್ಲವೇ?

ಇದು ಒಂದು ಇಲಾಖೆಯ ಉದಾಹರಣೆಯಾದರೆ ಕೃಷಿ, ಕಾರ್ಮಿಕ, ಆರೋಗ್ಯ, ವಸತಿ, ಸಾರಿಗೆ ಹೀಗೆ ಯಾವ ಇಲಾಖೆಯನ್ನೂ ತೆಗೆದುಕೊಂಡರೂ ಸಮಸ್ಯೆಗಳ ಆಗರವಾಗಿದೆ. ಸಾಮಾನ್ಯ ಜನರ ಸಮಸ್ಯೆಗೆ ಮಿಡಿಯುವವರಿಲ್ಲದೆ ಆಡಳಿತ ಕುಂಟುವುದನ್ನೂ ನಿಲ್ಲಿಸಿ ಮಕಾಡೆ ಮಲಗಿದೆ. ಹೊಸ ಸಚಿವ ಸಂಪುಟ ಈ ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ತಮಗೆ ಸಿಕ್ಕಿರುವ ಈ ಸಣ್ಣ ಆದರೆ ಸವಾಲಿನ ಸಮಯದಲ್ಲಿ ಕೆಲಸ ಮಾಡುವಂತಾಗಲಿ. ಇದಕ್ಕೆ ನೂತನ ಮುಖ್ಯಮಂತ್ರಿಗಳು ಸ್ಪೂರ್ತಿಯಾಗಿ,
ಆದರ್ಶಪ್ರಾಯವಾಗಿ ಕೆಲಸ ಮಾಡಿ ರಾಜ್ಯವನ್ನು ಮುನ್ನಡೆಸಲಿ.


ಇದನ್ನೂ ಓದಿ: ಯಡಿಯೂರಪ್ಪ ಪದಚ್ಯುತಿ; ದುಃಖಕ್ಕೂ ಸಂಭ್ರಮಕ್ಕೂ ಯೋಗ್ಯವಲ್ಲದ ಬದಲಾವಣೆ

ಇದನ್ನೂ ಓದಿ: ಸರ್ವಾಧಿಕಾರದ ಧೋರಣೆಗೆ ವಿರುದ್ಧವಾಗಿ ಪ್ರಜಾಸತ್ತಾತ್ಮಕ ಮೌಲ್ಯಗಳ ’ಸರ್‌ಪಟ್ಟ ಪರಂಪರೈ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...