HomeUncategorizedಹೊಸ ಮುಖ್ಯಮಂತ್ರಿ ಒಕ್ಕೂಟ ತತ್ವದ ಆದರ್ಶಕ್ಕೆ ಆಗ್ರಹಿಸಿ ನಿಲ್ಲಲಿ

ಹೊಸ ಮುಖ್ಯಮಂತ್ರಿ ಒಕ್ಕೂಟ ತತ್ವದ ಆದರ್ಶಕ್ಕೆ ಆಗ್ರಹಿಸಿ ನಿಲ್ಲಲಿ

- Advertisement -
- Advertisement -

ಕರ್ನಾಟಕವು ಏಕೀಕರಣಗೊಂಡ ನಂತರ 19 ಮುಖ್ಯಮಂತ್ರಿಗಳನ್ನು ಕಂಡಿದೆ. ಈಗ 20ನೇ ಮುಖ್ಯಮಂತ್ರಿಯಾಗಿ ಕರ್ನಾಟಕ ಸರ್ಕಾರವನ್ನು ಮುನ್ನಡೆಸಲು ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯಾಗಲು ಇದೇನು ಹಿತಕರ ಕಾಲಘಟ್ಟವಲ್ಲ. ಒಂದು ಕಡೆ ದೇಶ ಮತ್ತು ರಾಜ್ಯಗಳೆರಡರ ಆರ್ಥಿಕತೆ ಗಣನೀಯವಾಗಿ ಕುಸಿದಿದೆ. ಕೊರೊನಾ ಸಾಂಕ್ರಾಮಿಕ ಮಧ್ಯಮ ಮತ್ತು ಬಡಮಧ್ಯಮ ವರ್ಗದ ಜನರನ್ನು ಕಂಗೆಡಿಸಿದೆ. ಇಷ್ಟು ಸಾಲದು ಎಂಬಂತೆ ’ಭಿನ್ನ’ವಾದ ಬಿಜೆಪಿ ಪಕ್ಷದಲ್ಲಿ ಇರುವ ಆಂತರಿಕ ಭಿನ್ನಮತ ಹೊಸ ಮುಖ್ಯಮಂತ್ರಿಯವರ ಆಯ್ಕೆಯಿಂದ ಶಮನವಾಗುತ್ತದೆ ಎಂಬ ಯಾವ ಭರವಸೆಗಳೂ ಗೋಚರಿಸುತ್ತಿಲ್ಲ. ’ಹಳೆಯ’ ಆರ್‌ಎಸ್‌ಎಸ್ ಕಟ್ಟಾಳು ಯಡಿಯೂರಪ್ಪನವರನ್ನೇ ಇಳಿಸಲು ಪ್ರಯತ್ನಿಸಿದ ’ಹೊಸ’ ನಮೂನೆಯ ಆರ್‌ಎಸ್‌ಎಸ್‌ಗಳು, ಆರ್‌ಎಸ್‌ಎಸ್ ಮೂಲದವರಲ್ಲದ ವಲಸಿಗ ಬೊಮ್ಮಾಯಿ ಅವರನ್ನು ಎಷ್ಟು ಸುಸೂತ್ರವಾಗಿ ಕೆಲಸ ಮಾಡಲು ಬಿಡುತ್ತಾರೆ ಎಂದು ನೋಡುವಷ್ಟರಲ್ಲಿಯೇ ಬಹುಶಃ ಉಳಿದ ಒಂದೂ ಮುಕ್ಕಾಲು ವರ್ಷ ಕಳೆದುಹೋಗಬಹುದು. ಅಷ್ಟು ಹೊತ್ತಿಗೆ ಕರ್ನಾಟಕದ ಪಾಡೇನು ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟ. ಹಾಗಾಗದೆ ಇರಲಿ ಎಂದು ಸದ್ಯಕ್ಕೆ ಪ್ರಾರ್ಥಿಸೋಣ.

ಎಸ್ ಆರ್ ಬೊಮ್ಮಾಯಿ ಪ್ರಕರಣ ನೀಡಿದ ಕೊಡುಗೆ ನೆನಪಿರಲಿ

ಇಂದಿನ ಸಂದರ್ಭದಲ್ಲಿ ಒಕ್ಕೂಟ ಸರ್ಕಾರದ ಜೊತೆಗೆ ಸೆಣೆಸಿ ರಾಜ್ಯದ ಹಿತ ಕಾಯ್ದುಕೊಳ್ಳುವ ಧೈರ್ಯವನ್ನು ಮಾಡುವ ಯಾವುದೇ ಬಿಜೆಪಿ ರಾಜ್ಯ ಸರ್ಕಾರ ಇರುವುದಕ್ಕೆ ಸಾಧ್ಯವಿಲ್ಲ. ಅದು ತಮಗೆ ನ್ಯಾಯಬದ್ಧವಾಗಿ ಸಿಗಬೇಕಿರುವ ಜಿಎಸ್‌ಟಿ ಬಾಕಿ ಕೇಳುವುದಕ್ಕೆ ಇರಲಿ ಅಥವಾ ಸದ್ಯದ ಕೊರೊನಾ ಸನ್ನಿವೇಶದಲ್ಲಿ ತುರ್ತಾಗಿ ಸಿಗಬೇಕಿರುವ ಲಸಿಕೆಗೆ ಆಗ್ರಹ ಮಾಡುವುದಕ್ಕಾದರೂ ಇರಲಿ. ಆದರೆ ಬಸವರಾಜ ಬೊಮ್ಮಾಯಿಯವರ ತಂದೆ ಎಸ್ ಆರ್ ಬೊಮ್ಮಾಯಿಯವರ ಸರ್ಕಾರವನ್ನು ಅಂದಿನ ಕಾಂಗ್ರೆಸ್ ಆಡಳಿತದ ಒಕ್ಕೂಟ ಸರ್ಕಾರ ವಜಾ ಮಾಡಿದ ನಂತರ, ಎಸ್ ಆರ್ ಬೊಮ್ಮಾಯಿಯವರು ಸುಪ್ರೀಂ ಕೋರ್ಟ್‌ಗೆ ತೆರಳಿ, ಒಕ್ಕೂಟ ತತ್ವದ ವ್ಯಾಖ್ಯಾನವನ್ನು ನೆನಪಿಸುವುದಕ್ಕೆ ಕಾರಣೀಭೂತರಾದವರು. ಇದು ಬಸವರಾಜ್ ಬೊಮ್ಮಾಯಿಯವರಿಗೆ ಹೆಚ್ಚು ನೆನಪಿರುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಕ್ಕೂಟ ಸರ್ಕಾರದ ಅಡಿಯಾಳಲ್ಲ, ಬದಲಿಗೆ ರಾಜ್ಯ ಒಕ್ಕೂಟ ತತ್ವದಲ್ಲಿ ಸರ್ವ ಸ್ವತಂತ್ರ ಸಾರ್ವಭೌಮ ಎಂಬುದನ್ನು ನೆನಪಿಟ್ಟುಕೊಂಡು ಆಡಳಿತ ನಡೆಸಲಿ ಎಂಬುದು ಕೂಡ ಆರು ಕೋಟಿಗೂ ಮೀರಿದ ಕರ್ನಾಟಕದ ನಾಗರಿಕರ ಆಗ್ರಹ.

ಕೌಬೆಲ್ಟ್ ಹಿಂದುತ್ವ ರಾಜ್ಯದಲ್ಲಿ ನಡೆಯುವುದಿಲ್ಲ ಎಂಬ ಎಚ್ಚರಿಕೆ ಜಾಗೃತವಾಗಿರಲಿ

ಬಸವರಾಜ್ ಬೊಮ್ಮಾಯಿಯವರ ಆಯ್ಕೆಗೂ ಮುನ್ನ ಅತಿ ಹೆಚ್ಚು ಚರ್ಚೆಯಲ್ಲಿದ್ದ ಸಂಗತಿ ಕರ್ನಾಟಕದಲ್ಲಿ ಹಿಂದುತ್ವವನ್ನು ಉಚ್ಛ್ರಾಯ ಸ್ಥಿತಿಗೆ ತಲುಪಿಸುವ ಹಾರ್ಡ್‌ಕೋರ್ ಹಿಂದುತ್ವವಾದಿಗೆ ಮುಖ್ಯಮಂತ್ರಿ ಗಾದಿ ಒಲಿಯಲಿದೆ ಎಂಬ ಸುದ್ದಿ. ಹಿಂದುತ್ವ ಹಾರ್ಡ್ ಆಗಿರಲಿ ಅಥವಾ ಮೆತ್ತಗೆ ಮೃದುವಾಗಿರಲಿ ಅದು ಅಪಾಯಕಾರಿ ಎಂಬುದರಲ್ಲಿ ಎರಡು ಮಾತಿಲ್ಲ, ಆದರೆ ಕರ್ನಾಟಕದ ಮಟ್ಟಿಗೆ, ಇನ್ನೆಲ್ಲಾ ಬಿಟ್ಟು ದಿನಾಲು ೨೪ ಗಂಟೆ ಕೋಮು ವಿಷ ಕಾರಲು ಶಕ್ತಿ ಇದ್ದ ಹತ್ತಾರು ಸಚಿವರು ಹಿಂದಕ್ಕೆ ಸರಿದಿದ್ದಾರೆ ಎಂದರೆ ಬಿಜೆಪಿಯ ಹೈಕಮಾಂಡ್ ಮತ್ತು ಆರ್‌ಎಸ್‌ಎಸ್ ಥಿಂಕ್ ಟ್ಯಾಂಕ್‌ಗೆ ಕರ್ನಾಟಕದಲ್ಲಿರುವ ಪ್ರತಿರೋಧ ತುಸುವಾದರೂ ಅರ್ಥವಾಗಿರಲಿಕ್ಕೆ ಸಾಕು. ಇಲ್ಲಿ ಜಾತಿ ಐಡೆಂಟಿಟಿ ಸಂಘ ಪರಿವಾರ ಪ್ರತಿಪಾದಿಸುವ ’ನಾವೆಲ್ಲರೂ ಹಿಂದೂ ನಾವೆಲ್ಲರೂ ಒಂದು’ ಹಿಂದುತ್ವ ಸಿದ್ಧಾಂತಕ್ಕಿಂತ ಬಲಶಾಲಿಯಾಗಿದೆ ಎಂಬುದು ಒಂದು ಮಟ್ಟಿಗಿನ ನಿಜ ಸಂಗತಿಯಾದರೂ, ಅದನ್ನು ಮೀರಿದ ಒಂದು ಪ್ರಜ್ಞೆಯೂ ಕನ್ನಡಿಗರಲ್ಲಿ ಇದೆ ಅನ್ನುವುದೂ ನಿಜ. ಬಸವಣ್ಣ, ನಾಲ್ವಡಿ, ಕುವೆಂಪು, ಬಿ ಕೃಷ್ಣಪ್ಪ, ಬಿ ಬಸವಲಿಂಗಪ್ಪ ಆದಿಯಾಗಿ ಹಲವು ಧೀಮಂತರು ಕಟ್ಟಿಕೊಟ್ಟಿರುವ ಸಾಂಸ್ಕೃತಿಕ-ರಾಜಕೀಯ ಎಚ್ಚರಿಕೆಯ ಪರಂಪರೆಯೂ ಜನರ ಸ್ಮೃತಿಯಲ್ಲಿ ಎಲ್ಲೋ ಅಡಕವಾಗಿದೆ. ಅದು ಆಗಾಗ ಜಾಗೃತವಾಗುವುದಕ್ಕೂ ಸಾಧ್ಯತೆ ಇದೆ ಎನ್ನುವ ಎಚ್ಚರಿಕೆ ಹೊಸ ಮುಖ್ಯಮಂತ್ರಿಗಳಿಗೆ ಇರಲಿ. ಎಲ್ಲ ಸಮುದಾಯಗಳನ್ನು ಒಳಗೊಳ್ಳುವ ಬಹುತ್ವದ ರಾಜಕಾರಣವನ್ನು ಅವರು ಮರೆಯದಿರಲಿ.

PC: Mangalorean.com

ಭ್ರಷ್ಟಾಚಾರ ತಗ್ಗಲಿ; ಆಡಳಿತದಲ್ಲಿ ಹೊಸ ಹುರುಪು, ಪಾರದರ್ಶಕತೆ ಮತ್ತು ಚಾಕಚಕ್ಯತೆ ಇರಲಿ

ಭ್ರಷ್ಟಾಚಾರ ಕೊನೆಗೊಳಿಸುವ ಸರ್ಕಾರ ನೋಡಲು ಕರ್ನಾಟಕ ಜನತೆಗೆ ಯೋಗ ಯಾವಾಗ ಕೂಡಿಬರುತ್ತದೋ ತಿಳಿದಿಲ್ಲ. ಆದರೆ ಹಿಂದಿನ ಸರ್ಕಾರಕ್ಕಿಂತಲೂ ಉತ್ತಮ ಆಡಳಿತ ನಡೆಸಿ ಎಂದು ಹೊಸ ಸರ್ಕಾರ ಬಂದಾಗ ಕೇಳಿಕೊಳ್ಳುವುದನ್ನಾದರೂ ಮಾಡಬಹುದೇನೋ! ಉದಾಹರಣೆಗೆ ಶಿಕ್ಷಣ ಸಚಿವಾಲಯವನ್ನೇ ನೋಡಿ. ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಸಾಂಕ್ರಾಮಿಕದಿಂದ ಲಕ್ಷಾಂತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಕೆಲಸಗಳಿಗೆ ಹೋಗುವಂತಾಗಿದೆ. ಆ ಮಕ್ಕಳ ಶಿಕ್ಷಣಕ್ಕೆ ಪರಿಹಾರ ಸಿಗುವಂತಹ ಒಂದು ಆರೋಗ್ಯಕರ ನೀತಿಯನ್ನು ಸೃಷ್ಟಿಸಲು ಶಿಕ್ಷಣ ಇಲಾಖೆಗೆ ಸಾಧ್ಯವಾಗಿಲ್ಲ. ಪರೀಕ್ಷೆಗಳನ್ನು ನಡೆಸುವುದೇ ಸಾಧನೆ ಎಂಬಂತೆ ನಡೆದುಕೊಳ್ಳುವ ಶಿಕ್ಷಣ ಸಚಿವರು ಹೆಸರಿಗೆ ದಕ್ಷರು ಮತ್ತು ಸಜ್ಜನರು. ಡಿಜಿಟಲ್ ಡಿವೈಡ್‌ನಿಂದ ಬಡಮಕ್ಕಳಿಗೆ ಆಗಿರುವ ಸಮಸ್ಯೆಯ ಬಗ್ಗೆ ಒಂದು ಪರಿಹಾರವನ್ನೂ ಈ ಸಚಿವರು ಸೂಚಿಸಿರುವ ಉದಾಹರಣೆಯಿಲ್ಲ. ಹಲವಾರು ಶಿಕ್ಷಣ ತಜ್ಞರನ್ನು ಒಳಗೊಂಡಿರುವ ಕರ್ನಾಟಕದಲ್ಲಿ ಸಲಹೆಗೇನೂ ಬರವಿರಲಿಲ್ಲ ಅಲ್ಲವೇ?

ಇದು ಒಂದು ಇಲಾಖೆಯ ಉದಾಹರಣೆಯಾದರೆ ಕೃಷಿ, ಕಾರ್ಮಿಕ, ಆರೋಗ್ಯ, ವಸತಿ, ಸಾರಿಗೆ ಹೀಗೆ ಯಾವ ಇಲಾಖೆಯನ್ನೂ ತೆಗೆದುಕೊಂಡರೂ ಸಮಸ್ಯೆಗಳ ಆಗರವಾಗಿದೆ. ಸಾಮಾನ್ಯ ಜನರ ಸಮಸ್ಯೆಗೆ ಮಿಡಿಯುವವರಿಲ್ಲದೆ ಆಡಳಿತ ಕುಂಟುವುದನ್ನೂ ನಿಲ್ಲಿಸಿ ಮಕಾಡೆ ಮಲಗಿದೆ. ಹೊಸ ಸಚಿವ ಸಂಪುಟ ಈ ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ತಮಗೆ ಸಿಕ್ಕಿರುವ ಈ ಸಣ್ಣ ಆದರೆ ಸವಾಲಿನ ಸಮಯದಲ್ಲಿ ಕೆಲಸ ಮಾಡುವಂತಾಗಲಿ. ಇದಕ್ಕೆ ನೂತನ ಮುಖ್ಯಮಂತ್ರಿಗಳು ಸ್ಪೂರ್ತಿಯಾಗಿ,
ಆದರ್ಶಪ್ರಾಯವಾಗಿ ಕೆಲಸ ಮಾಡಿ ರಾಜ್ಯವನ್ನು ಮುನ್ನಡೆಸಲಿ.


ಇದನ್ನೂ ಓದಿ: ಯಡಿಯೂರಪ್ಪ ಪದಚ್ಯುತಿ; ದುಃಖಕ್ಕೂ ಸಂಭ್ರಮಕ್ಕೂ ಯೋಗ್ಯವಲ್ಲದ ಬದಲಾವಣೆ

ಇದನ್ನೂ ಓದಿ: ಸರ್ವಾಧಿಕಾರದ ಧೋರಣೆಗೆ ವಿರುದ್ಧವಾಗಿ ಪ್ರಜಾಸತ್ತಾತ್ಮಕ ಮೌಲ್ಯಗಳ ’ಸರ್‌ಪಟ್ಟ ಪರಂಪರೈ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...