Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ ಸುದ್ದಿ ಹರಡುವುದರಲ್ಲಿ ಮತ್ತು ಕೋಮುದ್ವೇಷ ಪಸರಿಸುವಲ್ಲಿ ಮುಂದಿರುವುದು ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರೇ. ಈಗ ‘ಇಂಥದ್ದನ್ನೆಲ್ಲ ತಡೆಯಲು ಹೊಸ ನಿಯಮಾವಳಿ’ ಜಾರಿಗೆ ತರುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದರೆ ನಂಬುವುದು ಹೇಗೆ?

ಖಂಡಿತ ಇದು, ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಮಾಡಿಕೊಂಡಿರುವ ಒಂದು ವ್ಯಸ್ಥಿಯ ಸಂಚು.
ಈ ತಿಂಗಳ ಕೊನೆಯಲ್ಲಿ ಜಾರಿಗೆ ಬರಲಿರುವ ಹೊಸ ಸೋಷಿಯಲ್ ಮೀಡಿಯಾ ನಿಯಮಾವಳಿಗಳ ಪರಿಣಾಮವಾಗಿ ಭಾರತದ 40 ಕೋಟಿ ಸೋಷಿಯಲ್ ಮೀಡಿಯಾ ಬಳಕೆದಾರರು ತಮ್ಮ ಅನಾಮಧೇಯತೆಯನ್ನು ಕಳೆದುಕೊಳ್ಳಲಿದ್ದಾರೆ. ಜೊತೆಗೆ ಅವರ ಖಾಸಗಿತನದ ಹಕ್ಕನ್ನು ಕಳೆದಿಕೊಳ್ಳಲಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವ ಮೂಲಕವೇ ವಿರೋಧಿಗಳನ್ನು ಹತ್ತಿಕ್ಕುತ್ತ ಬಂದ ಮೋದಿ ಸರ್ಕಾರವೀಗ ಸಾಮಾಜಿಕ ಜಾಲತಾಣಗಳ ಬಳಸುವ ತನ್ನ ಸೈದ್ದಾಂತಿಕ ವಿರೋಧಿಗಳ ಮೇಲೆ ಈ ಹೊಸ ಅಸ್ತ್ರ ಪ್ರಯೋಗಿಸಲು ಸಿದ್ಧವಾಗಿದೆ.

ಭಾರತ ಸರ್ಕಾರ ಕೇಳಿದರೆ, ಫೇಸ್‌ಬುಕ್, ಟ್ವಿಟರ್, ಯು-ಟ್ಯೂಬ್, ವ್ಯಾಟ್ಸಾಪ್ ಮತ್ತು ಟಿಕ್ ಟಾಕ್ ಕಂಪನಿಗಳು ಅವರ ಯಾವುದಾದರೂ ಬಳಕೆದಾರರ ಐಡೆಂಟಿಟಿಯನ್ನು ಅಂದರೆ ವಿವರಗಳನ್ನು ಸರ್ಕಾರಕ್ಕೆ ಒದಗಿಸಬೇಕು. ಇದಕ್ಕೆ ಯಾವುದೇ ಪ್ರಕ್ರಿಯೆ ಇರುವುದಿಲ್ಲ, ಕಾನೂನಿನ ಮೊರೆ ಹೋಗುವಂತಿಲ್ಲ, ಕೇಳಿದಾಕ್ಷಣ ವಿವರ ನೀಡಬೇಕಷ್ಟೇ.

2018ರ ಡಿಸೆಂಬರ್‌ನಲ್ಲಿ ಸರ್ಕಾರ ಈ ನಿಯಮಾವಳಿ ರೂಪಿಸಿ, ಸಾರ್ವಜನಿಕ ಅಭಿಪ್ರಾಯ ಕೇಳಿತ್ತು. ಗೂಗಲ್, ಫೇಸ್‌ಬುಕ್‌ನಂತಹ ಕಂಪನಿಗಳನ್ನು ಒಳಗೊಂಡ ‘ದಿ ಇಂಟರ್‌ನೆಟ್ ಆ್ಯಂಡ್ ಮೊಬೈಲ್ ಅಸೋಷಿಯೇಷನ್ ಆಫ್ ಇಂಡಿಯಾ’ ಇದಕ್ಕೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿ, ‘ಸುಪ್ರಿಂಕೋರ್ಟ್ ತಿಳಿಸಿದಂತೆ, ಇದು ಖಸಗಿತನದ ಹಕ್ಕಿನ ಉಲ್ಲಂಘನೆ’ ಎಂದು ಹೇಳಿದ್ದವು. ಆದರೂ ಸರ್ಕಾರ ಪಟ್ಟು ಬಿಡದೇ ಈ ನಿಯಮಾವಳಿ ಜಾರಿಗೆ ತರಲು ಹೊರಟಿದೆ.

ಹೀಗಾಗಿ ಸೋಷಿಯಲ್ ಮೀಡಿಯಾ ಕಂಪನಿಗಳು ತಮ್ಮ ಬಳಕೆದಾರರಿಗೆ ತಮ್ಮ ಐಡೆಂಟಿಟಿ ವಿವರ ನೀಡುವಂತೆ ನಿಯಮ ಮಾಡಲಿವೆ. ಇಷ್ಟು ವರ್ಷ ಕೇವಲ ಆನ್‌ಲೈನ್‌ನಲ್ಲಿ ಯಾವುದೇ ದಾಖಲೆ ಇಲ್ಲದೇ, ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.
ಸುಳ್‌ಸುದ್ದಿ ತಡೆಯಲು ಮತ್ತು ಸಮಾಜವಿರೋಧಿ ಶಕ್ತಿಗನ್ನು ಪತ್ತೆ ಹಚ್ಚಲು ಈ ನಿಯಮಾವಳಿ ತರುತ್ತೇವೆಂದು ಕೇಂದ್ರ ಸರ್ಕಾರ ಹೇಳುತ್ತಿದೆ.

ವಿಶ್ವದ ಹಲವಾರು ದೇಶಗಳಲ್ಲಿ ಸೈಬರ್ ಅನ್‌, ಪೋರ್ನ್‌ ಜಾಲತಾಣ (ಅಶ್ಲೀಲ ತಾಣ) ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಿಯಂತ್ರಿಸಲು, ಅಂತರ್ಜಾಲ ಒದಗಿಸುವ ಸಾಮಾಜಿಕ ಜಾಲತಾಣಗಳ ಸೇವೆಯ ಮೇಲೆ ನಿಯಂತ್ರಣ ಹೊಂದಿವೆ. ಆದರೆ ಅಲ್ಲಿ ಸಾಮಾಜಿಕ ಜಾಲತಾಣಗಳ ನೆರವು ಪಡೆದು, ಸೈಬರ್ ತಜ್ಞರ ಮೂಲಕ ಅಪರಾಧಿಗಳ ಪತ್ತೆ ಹಚ್ಚುತ್ತಾರೆ. ಅಶ್ಲೀಲ ಮತ್ತು ದ್ವೇಷ ಹರಡುವ ಜಾಲತಾಣ ಮತ್ತು ಅಕೌಂಟುಗಳನ್ನು ಪತ್ತೆ ಹಚ್ಚಲು ಫೇಸ್‌ಬುಕ್ ಮತ್ತು ಟ್ವಿಟರ್‌ಗಳು ವಿಶೇಷ ಸಾಫ್ಟ್ವೇರ್ ರೂಪಿಸಿವೆ. ಅಂತಹ ಅಕೌಂಟುಗಳನ್ನು ನಿಷೇಧಿಸುತ್ತವೆ.

ಆದರೆ ಭಾರತದಲ್ಲಿ ತರಲು ಹೊರಟಿರುವ ಕಾನೂನು ಮತ್ತು ನಿಯಮಗಳು ಉಳಿದ ದೇಶಗಳ ನಿಯಮಗಳಿಗಿಂತ ಅಪಾಯಕಾರಿಯಾಗಿವೆ. ಯಾವುದೇ ಕಾನೂನು ಪ್ರಕ್ರಿಯೆ ಅಥವಾ ನೋಟಿಸ್ ಇಲ್ಲದೇ ಜಾಲತಾಣಗಳಿಗೆ ಇಂತಿಂಥವರ ವಿವರ ಬೇಕೆಂದಾಕ್ಷಣ ನೀಡಲೇಬೇಕು. ಯಾವುದೇ ಆಡಳಿತ ಪಕ್ಷ ಇದನ್ನು ತಮ್ಮ ವಿರೋಧಿಗಳನ್ನು ಹಣಿಯಲು ಬಳಸಬಹುದು. ತಮ್ಮ ಸಿದ್ದಾಂತ ಒಪ್ಪದ ಸಾಮಾನ್ಯ ಜನರನ್ನೂ ಪತ್ತೆ ಹಚ್ಚಿ ತೊಂದರೆ ನೀಡಬಹುದು. ಹೇಳಿಕೇಳಿ, ತನ್ನ ವಿರೋಧಿಸುವವರನ್ನು ದೇಶದ್ರೋಹಿ, ಅರ್ಬನ್ ನಕ್ಸಲ್ ಎಂದೆಲ್ಲ ಜೈಲಿಗಟ್ಟುವ ಈ ಸರ್ಕಾರವೀಗ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿರೋಧಿಸುವವರ ಬೇಟೆಯಾಡಲು ಹೊರಟಂತಿದೆ.
(ಮಾಹಿತಿ: ದಿ ಎಕನಾಮಿಕ್ ಟೈಮ್ಸ್, ಎನ್‌ಡಿಟಿವಿಡಾಟ್ ಕಾಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...