Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ ಸುದ್ದಿ ಹರಡುವುದರಲ್ಲಿ ಮತ್ತು ಕೋಮುದ್ವೇಷ ಪಸರಿಸುವಲ್ಲಿ ಮುಂದಿರುವುದು ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರೇ. ಈಗ ‘ಇಂಥದ್ದನ್ನೆಲ್ಲ ತಡೆಯಲು ಹೊಸ ನಿಯಮಾವಳಿ’ ಜಾರಿಗೆ ತರುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದರೆ ನಂಬುವುದು ಹೇಗೆ?

ಖಂಡಿತ ಇದು, ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಮಾಡಿಕೊಂಡಿರುವ ಒಂದು ವ್ಯಸ್ಥಿಯ ಸಂಚು.
ಈ ತಿಂಗಳ ಕೊನೆಯಲ್ಲಿ ಜಾರಿಗೆ ಬರಲಿರುವ ಹೊಸ ಸೋಷಿಯಲ್ ಮೀಡಿಯಾ ನಿಯಮಾವಳಿಗಳ ಪರಿಣಾಮವಾಗಿ ಭಾರತದ 40 ಕೋಟಿ ಸೋಷಿಯಲ್ ಮೀಡಿಯಾ ಬಳಕೆದಾರರು ತಮ್ಮ ಅನಾಮಧೇಯತೆಯನ್ನು ಕಳೆದುಕೊಳ್ಳಲಿದ್ದಾರೆ. ಜೊತೆಗೆ ಅವರ ಖಾಸಗಿತನದ ಹಕ್ಕನ್ನು ಕಳೆದಿಕೊಳ್ಳಲಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವ ಮೂಲಕವೇ ವಿರೋಧಿಗಳನ್ನು ಹತ್ತಿಕ್ಕುತ್ತ ಬಂದ ಮೋದಿ ಸರ್ಕಾರವೀಗ ಸಾಮಾಜಿಕ ಜಾಲತಾಣಗಳ ಬಳಸುವ ತನ್ನ ಸೈದ್ದಾಂತಿಕ ವಿರೋಧಿಗಳ ಮೇಲೆ ಈ ಹೊಸ ಅಸ್ತ್ರ ಪ್ರಯೋಗಿಸಲು ಸಿದ್ಧವಾಗಿದೆ.

ಭಾರತ ಸರ್ಕಾರ ಕೇಳಿದರೆ, ಫೇಸ್‌ಬುಕ್, ಟ್ವಿಟರ್, ಯು-ಟ್ಯೂಬ್, ವ್ಯಾಟ್ಸಾಪ್ ಮತ್ತು ಟಿಕ್ ಟಾಕ್ ಕಂಪನಿಗಳು ಅವರ ಯಾವುದಾದರೂ ಬಳಕೆದಾರರ ಐಡೆಂಟಿಟಿಯನ್ನು ಅಂದರೆ ವಿವರಗಳನ್ನು ಸರ್ಕಾರಕ್ಕೆ ಒದಗಿಸಬೇಕು. ಇದಕ್ಕೆ ಯಾವುದೇ ಪ್ರಕ್ರಿಯೆ ಇರುವುದಿಲ್ಲ, ಕಾನೂನಿನ ಮೊರೆ ಹೋಗುವಂತಿಲ್ಲ, ಕೇಳಿದಾಕ್ಷಣ ವಿವರ ನೀಡಬೇಕಷ್ಟೇ.

2018ರ ಡಿಸೆಂಬರ್‌ನಲ್ಲಿ ಸರ್ಕಾರ ಈ ನಿಯಮಾವಳಿ ರೂಪಿಸಿ, ಸಾರ್ವಜನಿಕ ಅಭಿಪ್ರಾಯ ಕೇಳಿತ್ತು. ಗೂಗಲ್, ಫೇಸ್‌ಬುಕ್‌ನಂತಹ ಕಂಪನಿಗಳನ್ನು ಒಳಗೊಂಡ ‘ದಿ ಇಂಟರ್‌ನೆಟ್ ಆ್ಯಂಡ್ ಮೊಬೈಲ್ ಅಸೋಷಿಯೇಷನ್ ಆಫ್ ಇಂಡಿಯಾ’ ಇದಕ್ಕೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿ, ‘ಸುಪ್ರಿಂಕೋರ್ಟ್ ತಿಳಿಸಿದಂತೆ, ಇದು ಖಸಗಿತನದ ಹಕ್ಕಿನ ಉಲ್ಲಂಘನೆ’ ಎಂದು ಹೇಳಿದ್ದವು. ಆದರೂ ಸರ್ಕಾರ ಪಟ್ಟು ಬಿಡದೇ ಈ ನಿಯಮಾವಳಿ ಜಾರಿಗೆ ತರಲು ಹೊರಟಿದೆ.

ಹೀಗಾಗಿ ಸೋಷಿಯಲ್ ಮೀಡಿಯಾ ಕಂಪನಿಗಳು ತಮ್ಮ ಬಳಕೆದಾರರಿಗೆ ತಮ್ಮ ಐಡೆಂಟಿಟಿ ವಿವರ ನೀಡುವಂತೆ ನಿಯಮ ಮಾಡಲಿವೆ. ಇಷ್ಟು ವರ್ಷ ಕೇವಲ ಆನ್‌ಲೈನ್‌ನಲ್ಲಿ ಯಾವುದೇ ದಾಖಲೆ ಇಲ್ಲದೇ, ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.
ಸುಳ್‌ಸುದ್ದಿ ತಡೆಯಲು ಮತ್ತು ಸಮಾಜವಿರೋಧಿ ಶಕ್ತಿಗನ್ನು ಪತ್ತೆ ಹಚ್ಚಲು ಈ ನಿಯಮಾವಳಿ ತರುತ್ತೇವೆಂದು ಕೇಂದ್ರ ಸರ್ಕಾರ ಹೇಳುತ್ತಿದೆ.

ವಿಶ್ವದ ಹಲವಾರು ದೇಶಗಳಲ್ಲಿ ಸೈಬರ್ ಅನ್‌, ಪೋರ್ನ್‌ ಜಾಲತಾಣ (ಅಶ್ಲೀಲ ತಾಣ) ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಿಯಂತ್ರಿಸಲು, ಅಂತರ್ಜಾಲ ಒದಗಿಸುವ ಸಾಮಾಜಿಕ ಜಾಲತಾಣಗಳ ಸೇವೆಯ ಮೇಲೆ ನಿಯಂತ್ರಣ ಹೊಂದಿವೆ. ಆದರೆ ಅಲ್ಲಿ ಸಾಮಾಜಿಕ ಜಾಲತಾಣಗಳ ನೆರವು ಪಡೆದು, ಸೈಬರ್ ತಜ್ಞರ ಮೂಲಕ ಅಪರಾಧಿಗಳ ಪತ್ತೆ ಹಚ್ಚುತ್ತಾರೆ. ಅಶ್ಲೀಲ ಮತ್ತು ದ್ವೇಷ ಹರಡುವ ಜಾಲತಾಣ ಮತ್ತು ಅಕೌಂಟುಗಳನ್ನು ಪತ್ತೆ ಹಚ್ಚಲು ಫೇಸ್‌ಬುಕ್ ಮತ್ತು ಟ್ವಿಟರ್‌ಗಳು ವಿಶೇಷ ಸಾಫ್ಟ್ವೇರ್ ರೂಪಿಸಿವೆ. ಅಂತಹ ಅಕೌಂಟುಗಳನ್ನು ನಿಷೇಧಿಸುತ್ತವೆ.

ಆದರೆ ಭಾರತದಲ್ಲಿ ತರಲು ಹೊರಟಿರುವ ಕಾನೂನು ಮತ್ತು ನಿಯಮಗಳು ಉಳಿದ ದೇಶಗಳ ನಿಯಮಗಳಿಗಿಂತ ಅಪಾಯಕಾರಿಯಾಗಿವೆ. ಯಾವುದೇ ಕಾನೂನು ಪ್ರಕ್ರಿಯೆ ಅಥವಾ ನೋಟಿಸ್ ಇಲ್ಲದೇ ಜಾಲತಾಣಗಳಿಗೆ ಇಂತಿಂಥವರ ವಿವರ ಬೇಕೆಂದಾಕ್ಷಣ ನೀಡಲೇಬೇಕು. ಯಾವುದೇ ಆಡಳಿತ ಪಕ್ಷ ಇದನ್ನು ತಮ್ಮ ವಿರೋಧಿಗಳನ್ನು ಹಣಿಯಲು ಬಳಸಬಹುದು. ತಮ್ಮ ಸಿದ್ದಾಂತ ಒಪ್ಪದ ಸಾಮಾನ್ಯ ಜನರನ್ನೂ ಪತ್ತೆ ಹಚ್ಚಿ ತೊಂದರೆ ನೀಡಬಹುದು. ಹೇಳಿಕೇಳಿ, ತನ್ನ ವಿರೋಧಿಸುವವರನ್ನು ದೇಶದ್ರೋಹಿ, ಅರ್ಬನ್ ನಕ್ಸಲ್ ಎಂದೆಲ್ಲ ಜೈಲಿಗಟ್ಟುವ ಈ ಸರ್ಕಾರವೀಗ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿರೋಧಿಸುವವರ ಬೇಟೆಯಾಡಲು ಹೊರಟಂತಿದೆ.
(ಮಾಹಿತಿ: ದಿ ಎಕನಾಮಿಕ್ ಟೈಮ್ಸ್, ಎನ್‌ಡಿಟಿವಿಡಾಟ್ ಕಾಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...