Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ ಸುದ್ದಿ ಹರಡುವುದರಲ್ಲಿ ಮತ್ತು ಕೋಮುದ್ವೇಷ ಪಸರಿಸುವಲ್ಲಿ ಮುಂದಿರುವುದು ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರೇ. ಈಗ ‘ಇಂಥದ್ದನ್ನೆಲ್ಲ ತಡೆಯಲು ಹೊಸ ನಿಯಮಾವಳಿ’ ಜಾರಿಗೆ ತರುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದರೆ ನಂಬುವುದು ಹೇಗೆ?

ಖಂಡಿತ ಇದು, ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಮಾಡಿಕೊಂಡಿರುವ ಒಂದು ವ್ಯಸ್ಥಿಯ ಸಂಚು.
ಈ ತಿಂಗಳ ಕೊನೆಯಲ್ಲಿ ಜಾರಿಗೆ ಬರಲಿರುವ ಹೊಸ ಸೋಷಿಯಲ್ ಮೀಡಿಯಾ ನಿಯಮಾವಳಿಗಳ ಪರಿಣಾಮವಾಗಿ ಭಾರತದ 40 ಕೋಟಿ ಸೋಷಿಯಲ್ ಮೀಡಿಯಾ ಬಳಕೆದಾರರು ತಮ್ಮ ಅನಾಮಧೇಯತೆಯನ್ನು ಕಳೆದುಕೊಳ್ಳಲಿದ್ದಾರೆ. ಜೊತೆಗೆ ಅವರ ಖಾಸಗಿತನದ ಹಕ್ಕನ್ನು ಕಳೆದಿಕೊಳ್ಳಲಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವ ಮೂಲಕವೇ ವಿರೋಧಿಗಳನ್ನು ಹತ್ತಿಕ್ಕುತ್ತ ಬಂದ ಮೋದಿ ಸರ್ಕಾರವೀಗ ಸಾಮಾಜಿಕ ಜಾಲತಾಣಗಳ ಬಳಸುವ ತನ್ನ ಸೈದ್ದಾಂತಿಕ ವಿರೋಧಿಗಳ ಮೇಲೆ ಈ ಹೊಸ ಅಸ್ತ್ರ ಪ್ರಯೋಗಿಸಲು ಸಿದ್ಧವಾಗಿದೆ.

ಭಾರತ ಸರ್ಕಾರ ಕೇಳಿದರೆ, ಫೇಸ್‌ಬುಕ್, ಟ್ವಿಟರ್, ಯು-ಟ್ಯೂಬ್, ವ್ಯಾಟ್ಸಾಪ್ ಮತ್ತು ಟಿಕ್ ಟಾಕ್ ಕಂಪನಿಗಳು ಅವರ ಯಾವುದಾದರೂ ಬಳಕೆದಾರರ ಐಡೆಂಟಿಟಿಯನ್ನು ಅಂದರೆ ವಿವರಗಳನ್ನು ಸರ್ಕಾರಕ್ಕೆ ಒದಗಿಸಬೇಕು. ಇದಕ್ಕೆ ಯಾವುದೇ ಪ್ರಕ್ರಿಯೆ ಇರುವುದಿಲ್ಲ, ಕಾನೂನಿನ ಮೊರೆ ಹೋಗುವಂತಿಲ್ಲ, ಕೇಳಿದಾಕ್ಷಣ ವಿವರ ನೀಡಬೇಕಷ್ಟೇ.

2018ರ ಡಿಸೆಂಬರ್‌ನಲ್ಲಿ ಸರ್ಕಾರ ಈ ನಿಯಮಾವಳಿ ರೂಪಿಸಿ, ಸಾರ್ವಜನಿಕ ಅಭಿಪ್ರಾಯ ಕೇಳಿತ್ತು. ಗೂಗಲ್, ಫೇಸ್‌ಬುಕ್‌ನಂತಹ ಕಂಪನಿಗಳನ್ನು ಒಳಗೊಂಡ ‘ದಿ ಇಂಟರ್‌ನೆಟ್ ಆ್ಯಂಡ್ ಮೊಬೈಲ್ ಅಸೋಷಿಯೇಷನ್ ಆಫ್ ಇಂಡಿಯಾ’ ಇದಕ್ಕೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿ, ‘ಸುಪ್ರಿಂಕೋರ್ಟ್ ತಿಳಿಸಿದಂತೆ, ಇದು ಖಸಗಿತನದ ಹಕ್ಕಿನ ಉಲ್ಲಂಘನೆ’ ಎಂದು ಹೇಳಿದ್ದವು. ಆದರೂ ಸರ್ಕಾರ ಪಟ್ಟು ಬಿಡದೇ ಈ ನಿಯಮಾವಳಿ ಜಾರಿಗೆ ತರಲು ಹೊರಟಿದೆ.

ಹೀಗಾಗಿ ಸೋಷಿಯಲ್ ಮೀಡಿಯಾ ಕಂಪನಿಗಳು ತಮ್ಮ ಬಳಕೆದಾರರಿಗೆ ತಮ್ಮ ಐಡೆಂಟಿಟಿ ವಿವರ ನೀಡುವಂತೆ ನಿಯಮ ಮಾಡಲಿವೆ. ಇಷ್ಟು ವರ್ಷ ಕೇವಲ ಆನ್‌ಲೈನ್‌ನಲ್ಲಿ ಯಾವುದೇ ದಾಖಲೆ ಇಲ್ಲದೇ, ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.
ಸುಳ್‌ಸುದ್ದಿ ತಡೆಯಲು ಮತ್ತು ಸಮಾಜವಿರೋಧಿ ಶಕ್ತಿಗನ್ನು ಪತ್ತೆ ಹಚ್ಚಲು ಈ ನಿಯಮಾವಳಿ ತರುತ್ತೇವೆಂದು ಕೇಂದ್ರ ಸರ್ಕಾರ ಹೇಳುತ್ತಿದೆ.

ವಿಶ್ವದ ಹಲವಾರು ದೇಶಗಳಲ್ಲಿ ಸೈಬರ್ ಅನ್‌, ಪೋರ್ನ್‌ ಜಾಲತಾಣ (ಅಶ್ಲೀಲ ತಾಣ) ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಿಯಂತ್ರಿಸಲು, ಅಂತರ್ಜಾಲ ಒದಗಿಸುವ ಸಾಮಾಜಿಕ ಜಾಲತಾಣಗಳ ಸೇವೆಯ ಮೇಲೆ ನಿಯಂತ್ರಣ ಹೊಂದಿವೆ. ಆದರೆ ಅಲ್ಲಿ ಸಾಮಾಜಿಕ ಜಾಲತಾಣಗಳ ನೆರವು ಪಡೆದು, ಸೈಬರ್ ತಜ್ಞರ ಮೂಲಕ ಅಪರಾಧಿಗಳ ಪತ್ತೆ ಹಚ್ಚುತ್ತಾರೆ. ಅಶ್ಲೀಲ ಮತ್ತು ದ್ವೇಷ ಹರಡುವ ಜಾಲತಾಣ ಮತ್ತು ಅಕೌಂಟುಗಳನ್ನು ಪತ್ತೆ ಹಚ್ಚಲು ಫೇಸ್‌ಬುಕ್ ಮತ್ತು ಟ್ವಿಟರ್‌ಗಳು ವಿಶೇಷ ಸಾಫ್ಟ್ವೇರ್ ರೂಪಿಸಿವೆ. ಅಂತಹ ಅಕೌಂಟುಗಳನ್ನು ನಿಷೇಧಿಸುತ್ತವೆ.

ಆದರೆ ಭಾರತದಲ್ಲಿ ತರಲು ಹೊರಟಿರುವ ಕಾನೂನು ಮತ್ತು ನಿಯಮಗಳು ಉಳಿದ ದೇಶಗಳ ನಿಯಮಗಳಿಗಿಂತ ಅಪಾಯಕಾರಿಯಾಗಿವೆ. ಯಾವುದೇ ಕಾನೂನು ಪ್ರಕ್ರಿಯೆ ಅಥವಾ ನೋಟಿಸ್ ಇಲ್ಲದೇ ಜಾಲತಾಣಗಳಿಗೆ ಇಂತಿಂಥವರ ವಿವರ ಬೇಕೆಂದಾಕ್ಷಣ ನೀಡಲೇಬೇಕು. ಯಾವುದೇ ಆಡಳಿತ ಪಕ್ಷ ಇದನ್ನು ತಮ್ಮ ವಿರೋಧಿಗಳನ್ನು ಹಣಿಯಲು ಬಳಸಬಹುದು. ತಮ್ಮ ಸಿದ್ದಾಂತ ಒಪ್ಪದ ಸಾಮಾನ್ಯ ಜನರನ್ನೂ ಪತ್ತೆ ಹಚ್ಚಿ ತೊಂದರೆ ನೀಡಬಹುದು. ಹೇಳಿಕೇಳಿ, ತನ್ನ ವಿರೋಧಿಸುವವರನ್ನು ದೇಶದ್ರೋಹಿ, ಅರ್ಬನ್ ನಕ್ಸಲ್ ಎಂದೆಲ್ಲ ಜೈಲಿಗಟ್ಟುವ ಈ ಸರ್ಕಾರವೀಗ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿರೋಧಿಸುವವರ ಬೇಟೆಯಾಡಲು ಹೊರಟಂತಿದೆ.
(ಮಾಹಿತಿ: ದಿ ಎಕನಾಮಿಕ್ ಟೈಮ್ಸ್, ಎನ್‌ಡಿಟಿವಿಡಾಟ್ ಕಾಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...