Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ ಸುದ್ದಿ ಹರಡುವುದರಲ್ಲಿ ಮತ್ತು ಕೋಮುದ್ವೇಷ ಪಸರಿಸುವಲ್ಲಿ ಮುಂದಿರುವುದು ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರೇ. ಈಗ ‘ಇಂಥದ್ದನ್ನೆಲ್ಲ ತಡೆಯಲು ಹೊಸ ನಿಯಮಾವಳಿ’ ಜಾರಿಗೆ ತರುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದರೆ ನಂಬುವುದು ಹೇಗೆ?

ಖಂಡಿತ ಇದು, ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಮಾಡಿಕೊಂಡಿರುವ ಒಂದು ವ್ಯಸ್ಥಿಯ ಸಂಚು.
ಈ ತಿಂಗಳ ಕೊನೆಯಲ್ಲಿ ಜಾರಿಗೆ ಬರಲಿರುವ ಹೊಸ ಸೋಷಿಯಲ್ ಮೀಡಿಯಾ ನಿಯಮಾವಳಿಗಳ ಪರಿಣಾಮವಾಗಿ ಭಾರತದ 40 ಕೋಟಿ ಸೋಷಿಯಲ್ ಮೀಡಿಯಾ ಬಳಕೆದಾರರು ತಮ್ಮ ಅನಾಮಧೇಯತೆಯನ್ನು ಕಳೆದುಕೊಳ್ಳಲಿದ್ದಾರೆ. ಜೊತೆಗೆ ಅವರ ಖಾಸಗಿತನದ ಹಕ್ಕನ್ನು ಕಳೆದಿಕೊಳ್ಳಲಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವ ಮೂಲಕವೇ ವಿರೋಧಿಗಳನ್ನು ಹತ್ತಿಕ್ಕುತ್ತ ಬಂದ ಮೋದಿ ಸರ್ಕಾರವೀಗ ಸಾಮಾಜಿಕ ಜಾಲತಾಣಗಳ ಬಳಸುವ ತನ್ನ ಸೈದ್ದಾಂತಿಕ ವಿರೋಧಿಗಳ ಮೇಲೆ ಈ ಹೊಸ ಅಸ್ತ್ರ ಪ್ರಯೋಗಿಸಲು ಸಿದ್ಧವಾಗಿದೆ.

ಭಾರತ ಸರ್ಕಾರ ಕೇಳಿದರೆ, ಫೇಸ್‌ಬುಕ್, ಟ್ವಿಟರ್, ಯು-ಟ್ಯೂಬ್, ವ್ಯಾಟ್ಸಾಪ್ ಮತ್ತು ಟಿಕ್ ಟಾಕ್ ಕಂಪನಿಗಳು ಅವರ ಯಾವುದಾದರೂ ಬಳಕೆದಾರರ ಐಡೆಂಟಿಟಿಯನ್ನು ಅಂದರೆ ವಿವರಗಳನ್ನು ಸರ್ಕಾರಕ್ಕೆ ಒದಗಿಸಬೇಕು. ಇದಕ್ಕೆ ಯಾವುದೇ ಪ್ರಕ್ರಿಯೆ ಇರುವುದಿಲ್ಲ, ಕಾನೂನಿನ ಮೊರೆ ಹೋಗುವಂತಿಲ್ಲ, ಕೇಳಿದಾಕ್ಷಣ ವಿವರ ನೀಡಬೇಕಷ್ಟೇ.

2018ರ ಡಿಸೆಂಬರ್‌ನಲ್ಲಿ ಸರ್ಕಾರ ಈ ನಿಯಮಾವಳಿ ರೂಪಿಸಿ, ಸಾರ್ವಜನಿಕ ಅಭಿಪ್ರಾಯ ಕೇಳಿತ್ತು. ಗೂಗಲ್, ಫೇಸ್‌ಬುಕ್‌ನಂತಹ ಕಂಪನಿಗಳನ್ನು ಒಳಗೊಂಡ ‘ದಿ ಇಂಟರ್‌ನೆಟ್ ಆ್ಯಂಡ್ ಮೊಬೈಲ್ ಅಸೋಷಿಯೇಷನ್ ಆಫ್ ಇಂಡಿಯಾ’ ಇದಕ್ಕೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿ, ‘ಸುಪ್ರಿಂಕೋರ್ಟ್ ತಿಳಿಸಿದಂತೆ, ಇದು ಖಸಗಿತನದ ಹಕ್ಕಿನ ಉಲ್ಲಂಘನೆ’ ಎಂದು ಹೇಳಿದ್ದವು. ಆದರೂ ಸರ್ಕಾರ ಪಟ್ಟು ಬಿಡದೇ ಈ ನಿಯಮಾವಳಿ ಜಾರಿಗೆ ತರಲು ಹೊರಟಿದೆ.

ಹೀಗಾಗಿ ಸೋಷಿಯಲ್ ಮೀಡಿಯಾ ಕಂಪನಿಗಳು ತಮ್ಮ ಬಳಕೆದಾರರಿಗೆ ತಮ್ಮ ಐಡೆಂಟಿಟಿ ವಿವರ ನೀಡುವಂತೆ ನಿಯಮ ಮಾಡಲಿವೆ. ಇಷ್ಟು ವರ್ಷ ಕೇವಲ ಆನ್‌ಲೈನ್‌ನಲ್ಲಿ ಯಾವುದೇ ದಾಖಲೆ ಇಲ್ಲದೇ, ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.
ಸುಳ್‌ಸುದ್ದಿ ತಡೆಯಲು ಮತ್ತು ಸಮಾಜವಿರೋಧಿ ಶಕ್ತಿಗನ್ನು ಪತ್ತೆ ಹಚ್ಚಲು ಈ ನಿಯಮಾವಳಿ ತರುತ್ತೇವೆಂದು ಕೇಂದ್ರ ಸರ್ಕಾರ ಹೇಳುತ್ತಿದೆ.

ವಿಶ್ವದ ಹಲವಾರು ದೇಶಗಳಲ್ಲಿ ಸೈಬರ್ ಅನ್‌, ಪೋರ್ನ್‌ ಜಾಲತಾಣ (ಅಶ್ಲೀಲ ತಾಣ) ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಿಯಂತ್ರಿಸಲು, ಅಂತರ್ಜಾಲ ಒದಗಿಸುವ ಸಾಮಾಜಿಕ ಜಾಲತಾಣಗಳ ಸೇವೆಯ ಮೇಲೆ ನಿಯಂತ್ರಣ ಹೊಂದಿವೆ. ಆದರೆ ಅಲ್ಲಿ ಸಾಮಾಜಿಕ ಜಾಲತಾಣಗಳ ನೆರವು ಪಡೆದು, ಸೈಬರ್ ತಜ್ಞರ ಮೂಲಕ ಅಪರಾಧಿಗಳ ಪತ್ತೆ ಹಚ್ಚುತ್ತಾರೆ. ಅಶ್ಲೀಲ ಮತ್ತು ದ್ವೇಷ ಹರಡುವ ಜಾಲತಾಣ ಮತ್ತು ಅಕೌಂಟುಗಳನ್ನು ಪತ್ತೆ ಹಚ್ಚಲು ಫೇಸ್‌ಬುಕ್ ಮತ್ತು ಟ್ವಿಟರ್‌ಗಳು ವಿಶೇಷ ಸಾಫ್ಟ್ವೇರ್ ರೂಪಿಸಿವೆ. ಅಂತಹ ಅಕೌಂಟುಗಳನ್ನು ನಿಷೇಧಿಸುತ್ತವೆ.

ಆದರೆ ಭಾರತದಲ್ಲಿ ತರಲು ಹೊರಟಿರುವ ಕಾನೂನು ಮತ್ತು ನಿಯಮಗಳು ಉಳಿದ ದೇಶಗಳ ನಿಯಮಗಳಿಗಿಂತ ಅಪಾಯಕಾರಿಯಾಗಿವೆ. ಯಾವುದೇ ಕಾನೂನು ಪ್ರಕ್ರಿಯೆ ಅಥವಾ ನೋಟಿಸ್ ಇಲ್ಲದೇ ಜಾಲತಾಣಗಳಿಗೆ ಇಂತಿಂಥವರ ವಿವರ ಬೇಕೆಂದಾಕ್ಷಣ ನೀಡಲೇಬೇಕು. ಯಾವುದೇ ಆಡಳಿತ ಪಕ್ಷ ಇದನ್ನು ತಮ್ಮ ವಿರೋಧಿಗಳನ್ನು ಹಣಿಯಲು ಬಳಸಬಹುದು. ತಮ್ಮ ಸಿದ್ದಾಂತ ಒಪ್ಪದ ಸಾಮಾನ್ಯ ಜನರನ್ನೂ ಪತ್ತೆ ಹಚ್ಚಿ ತೊಂದರೆ ನೀಡಬಹುದು. ಹೇಳಿಕೇಳಿ, ತನ್ನ ವಿರೋಧಿಸುವವರನ್ನು ದೇಶದ್ರೋಹಿ, ಅರ್ಬನ್ ನಕ್ಸಲ್ ಎಂದೆಲ್ಲ ಜೈಲಿಗಟ್ಟುವ ಈ ಸರ್ಕಾರವೀಗ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿರೋಧಿಸುವವರ ಬೇಟೆಯಾಡಲು ಹೊರಟಂತಿದೆ.
(ಮಾಹಿತಿ: ದಿ ಎಕನಾಮಿಕ್ ಟೈಮ್ಸ್, ಎನ್‌ಡಿಟಿವಿಡಾಟ್ ಕಾಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...