Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ ಸುದ್ದಿ ಹರಡುವುದರಲ್ಲಿ ಮತ್ತು ಕೋಮುದ್ವೇಷ ಪಸರಿಸುವಲ್ಲಿ ಮುಂದಿರುವುದು ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರೇ. ಈಗ ‘ಇಂಥದ್ದನ್ನೆಲ್ಲ ತಡೆಯಲು ಹೊಸ ನಿಯಮಾವಳಿ’ ಜಾರಿಗೆ ತರುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದರೆ ನಂಬುವುದು ಹೇಗೆ?

ಖಂಡಿತ ಇದು, ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಮಾಡಿಕೊಂಡಿರುವ ಒಂದು ವ್ಯಸ್ಥಿಯ ಸಂಚು.
ಈ ತಿಂಗಳ ಕೊನೆಯಲ್ಲಿ ಜಾರಿಗೆ ಬರಲಿರುವ ಹೊಸ ಸೋಷಿಯಲ್ ಮೀಡಿಯಾ ನಿಯಮಾವಳಿಗಳ ಪರಿಣಾಮವಾಗಿ ಭಾರತದ 40 ಕೋಟಿ ಸೋಷಿಯಲ್ ಮೀಡಿಯಾ ಬಳಕೆದಾರರು ತಮ್ಮ ಅನಾಮಧೇಯತೆಯನ್ನು ಕಳೆದುಕೊಳ್ಳಲಿದ್ದಾರೆ. ಜೊತೆಗೆ ಅವರ ಖಾಸಗಿತನದ ಹಕ್ಕನ್ನು ಕಳೆದಿಕೊಳ್ಳಲಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವ ಮೂಲಕವೇ ವಿರೋಧಿಗಳನ್ನು ಹತ್ತಿಕ್ಕುತ್ತ ಬಂದ ಮೋದಿ ಸರ್ಕಾರವೀಗ ಸಾಮಾಜಿಕ ಜಾಲತಾಣಗಳ ಬಳಸುವ ತನ್ನ ಸೈದ್ದಾಂತಿಕ ವಿರೋಧಿಗಳ ಮೇಲೆ ಈ ಹೊಸ ಅಸ್ತ್ರ ಪ್ರಯೋಗಿಸಲು ಸಿದ್ಧವಾಗಿದೆ.

ಭಾರತ ಸರ್ಕಾರ ಕೇಳಿದರೆ, ಫೇಸ್‌ಬುಕ್, ಟ್ವಿಟರ್, ಯು-ಟ್ಯೂಬ್, ವ್ಯಾಟ್ಸಾಪ್ ಮತ್ತು ಟಿಕ್ ಟಾಕ್ ಕಂಪನಿಗಳು ಅವರ ಯಾವುದಾದರೂ ಬಳಕೆದಾರರ ಐಡೆಂಟಿಟಿಯನ್ನು ಅಂದರೆ ವಿವರಗಳನ್ನು ಸರ್ಕಾರಕ್ಕೆ ಒದಗಿಸಬೇಕು. ಇದಕ್ಕೆ ಯಾವುದೇ ಪ್ರಕ್ರಿಯೆ ಇರುವುದಿಲ್ಲ, ಕಾನೂನಿನ ಮೊರೆ ಹೋಗುವಂತಿಲ್ಲ, ಕೇಳಿದಾಕ್ಷಣ ವಿವರ ನೀಡಬೇಕಷ್ಟೇ.

2018ರ ಡಿಸೆಂಬರ್‌ನಲ್ಲಿ ಸರ್ಕಾರ ಈ ನಿಯಮಾವಳಿ ರೂಪಿಸಿ, ಸಾರ್ವಜನಿಕ ಅಭಿಪ್ರಾಯ ಕೇಳಿತ್ತು. ಗೂಗಲ್, ಫೇಸ್‌ಬುಕ್‌ನಂತಹ ಕಂಪನಿಗಳನ್ನು ಒಳಗೊಂಡ ‘ದಿ ಇಂಟರ್‌ನೆಟ್ ಆ್ಯಂಡ್ ಮೊಬೈಲ್ ಅಸೋಷಿಯೇಷನ್ ಆಫ್ ಇಂಡಿಯಾ’ ಇದಕ್ಕೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿ, ‘ಸುಪ್ರಿಂಕೋರ್ಟ್ ತಿಳಿಸಿದಂತೆ, ಇದು ಖಸಗಿತನದ ಹಕ್ಕಿನ ಉಲ್ಲಂಘನೆ’ ಎಂದು ಹೇಳಿದ್ದವು. ಆದರೂ ಸರ್ಕಾರ ಪಟ್ಟು ಬಿಡದೇ ಈ ನಿಯಮಾವಳಿ ಜಾರಿಗೆ ತರಲು ಹೊರಟಿದೆ.

ಹೀಗಾಗಿ ಸೋಷಿಯಲ್ ಮೀಡಿಯಾ ಕಂಪನಿಗಳು ತಮ್ಮ ಬಳಕೆದಾರರಿಗೆ ತಮ್ಮ ಐಡೆಂಟಿಟಿ ವಿವರ ನೀಡುವಂತೆ ನಿಯಮ ಮಾಡಲಿವೆ. ಇಷ್ಟು ವರ್ಷ ಕೇವಲ ಆನ್‌ಲೈನ್‌ನಲ್ಲಿ ಯಾವುದೇ ದಾಖಲೆ ಇಲ್ಲದೇ, ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.
ಸುಳ್‌ಸುದ್ದಿ ತಡೆಯಲು ಮತ್ತು ಸಮಾಜವಿರೋಧಿ ಶಕ್ತಿಗನ್ನು ಪತ್ತೆ ಹಚ್ಚಲು ಈ ನಿಯಮಾವಳಿ ತರುತ್ತೇವೆಂದು ಕೇಂದ್ರ ಸರ್ಕಾರ ಹೇಳುತ್ತಿದೆ.

ವಿಶ್ವದ ಹಲವಾರು ದೇಶಗಳಲ್ಲಿ ಸೈಬರ್ ಅನ್‌, ಪೋರ್ನ್‌ ಜಾಲತಾಣ (ಅಶ್ಲೀಲ ತಾಣ) ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಿಯಂತ್ರಿಸಲು, ಅಂತರ್ಜಾಲ ಒದಗಿಸುವ ಸಾಮಾಜಿಕ ಜಾಲತಾಣಗಳ ಸೇವೆಯ ಮೇಲೆ ನಿಯಂತ್ರಣ ಹೊಂದಿವೆ. ಆದರೆ ಅಲ್ಲಿ ಸಾಮಾಜಿಕ ಜಾಲತಾಣಗಳ ನೆರವು ಪಡೆದು, ಸೈಬರ್ ತಜ್ಞರ ಮೂಲಕ ಅಪರಾಧಿಗಳ ಪತ್ತೆ ಹಚ್ಚುತ್ತಾರೆ. ಅಶ್ಲೀಲ ಮತ್ತು ದ್ವೇಷ ಹರಡುವ ಜಾಲತಾಣ ಮತ್ತು ಅಕೌಂಟುಗಳನ್ನು ಪತ್ತೆ ಹಚ್ಚಲು ಫೇಸ್‌ಬುಕ್ ಮತ್ತು ಟ್ವಿಟರ್‌ಗಳು ವಿಶೇಷ ಸಾಫ್ಟ್ವೇರ್ ರೂಪಿಸಿವೆ. ಅಂತಹ ಅಕೌಂಟುಗಳನ್ನು ನಿಷೇಧಿಸುತ್ತವೆ.

ಆದರೆ ಭಾರತದಲ್ಲಿ ತರಲು ಹೊರಟಿರುವ ಕಾನೂನು ಮತ್ತು ನಿಯಮಗಳು ಉಳಿದ ದೇಶಗಳ ನಿಯಮಗಳಿಗಿಂತ ಅಪಾಯಕಾರಿಯಾಗಿವೆ. ಯಾವುದೇ ಕಾನೂನು ಪ್ರಕ್ರಿಯೆ ಅಥವಾ ನೋಟಿಸ್ ಇಲ್ಲದೇ ಜಾಲತಾಣಗಳಿಗೆ ಇಂತಿಂಥವರ ವಿವರ ಬೇಕೆಂದಾಕ್ಷಣ ನೀಡಲೇಬೇಕು. ಯಾವುದೇ ಆಡಳಿತ ಪಕ್ಷ ಇದನ್ನು ತಮ್ಮ ವಿರೋಧಿಗಳನ್ನು ಹಣಿಯಲು ಬಳಸಬಹುದು. ತಮ್ಮ ಸಿದ್ದಾಂತ ಒಪ್ಪದ ಸಾಮಾನ್ಯ ಜನರನ್ನೂ ಪತ್ತೆ ಹಚ್ಚಿ ತೊಂದರೆ ನೀಡಬಹುದು. ಹೇಳಿಕೇಳಿ, ತನ್ನ ವಿರೋಧಿಸುವವರನ್ನು ದೇಶದ್ರೋಹಿ, ಅರ್ಬನ್ ನಕ್ಸಲ್ ಎಂದೆಲ್ಲ ಜೈಲಿಗಟ್ಟುವ ಈ ಸರ್ಕಾರವೀಗ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿರೋಧಿಸುವವರ ಬೇಟೆಯಾಡಲು ಹೊರಟಂತಿದೆ.
(ಮಾಹಿತಿ: ದಿ ಎಕನಾಮಿಕ್ ಟೈಮ್ಸ್, ಎನ್‌ಡಿಟಿವಿಡಾಟ್ ಕಾಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...