Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ ಸುದ್ದಿ ಹರಡುವುದರಲ್ಲಿ ಮತ್ತು ಕೋಮುದ್ವೇಷ ಪಸರಿಸುವಲ್ಲಿ ಮುಂದಿರುವುದು ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರೇ. ಈಗ ‘ಇಂಥದ್ದನ್ನೆಲ್ಲ ತಡೆಯಲು ಹೊಸ ನಿಯಮಾವಳಿ’ ಜಾರಿಗೆ ತರುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದರೆ ನಂಬುವುದು ಹೇಗೆ?

ಖಂಡಿತ ಇದು, ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಮಾಡಿಕೊಂಡಿರುವ ಒಂದು ವ್ಯಸ್ಥಿಯ ಸಂಚು.
ಈ ತಿಂಗಳ ಕೊನೆಯಲ್ಲಿ ಜಾರಿಗೆ ಬರಲಿರುವ ಹೊಸ ಸೋಷಿಯಲ್ ಮೀಡಿಯಾ ನಿಯಮಾವಳಿಗಳ ಪರಿಣಾಮವಾಗಿ ಭಾರತದ 40 ಕೋಟಿ ಸೋಷಿಯಲ್ ಮೀಡಿಯಾ ಬಳಕೆದಾರರು ತಮ್ಮ ಅನಾಮಧೇಯತೆಯನ್ನು ಕಳೆದುಕೊಳ್ಳಲಿದ್ದಾರೆ. ಜೊತೆಗೆ ಅವರ ಖಾಸಗಿತನದ ಹಕ್ಕನ್ನು ಕಳೆದಿಕೊಳ್ಳಲಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವ ಮೂಲಕವೇ ವಿರೋಧಿಗಳನ್ನು ಹತ್ತಿಕ್ಕುತ್ತ ಬಂದ ಮೋದಿ ಸರ್ಕಾರವೀಗ ಸಾಮಾಜಿಕ ಜಾಲತಾಣಗಳ ಬಳಸುವ ತನ್ನ ಸೈದ್ದಾಂತಿಕ ವಿರೋಧಿಗಳ ಮೇಲೆ ಈ ಹೊಸ ಅಸ್ತ್ರ ಪ್ರಯೋಗಿಸಲು ಸಿದ್ಧವಾಗಿದೆ.

ಭಾರತ ಸರ್ಕಾರ ಕೇಳಿದರೆ, ಫೇಸ್‌ಬುಕ್, ಟ್ವಿಟರ್, ಯು-ಟ್ಯೂಬ್, ವ್ಯಾಟ್ಸಾಪ್ ಮತ್ತು ಟಿಕ್ ಟಾಕ್ ಕಂಪನಿಗಳು ಅವರ ಯಾವುದಾದರೂ ಬಳಕೆದಾರರ ಐಡೆಂಟಿಟಿಯನ್ನು ಅಂದರೆ ವಿವರಗಳನ್ನು ಸರ್ಕಾರಕ್ಕೆ ಒದಗಿಸಬೇಕು. ಇದಕ್ಕೆ ಯಾವುದೇ ಪ್ರಕ್ರಿಯೆ ಇರುವುದಿಲ್ಲ, ಕಾನೂನಿನ ಮೊರೆ ಹೋಗುವಂತಿಲ್ಲ, ಕೇಳಿದಾಕ್ಷಣ ವಿವರ ನೀಡಬೇಕಷ್ಟೇ.

2018ರ ಡಿಸೆಂಬರ್‌ನಲ್ಲಿ ಸರ್ಕಾರ ಈ ನಿಯಮಾವಳಿ ರೂಪಿಸಿ, ಸಾರ್ವಜನಿಕ ಅಭಿಪ್ರಾಯ ಕೇಳಿತ್ತು. ಗೂಗಲ್, ಫೇಸ್‌ಬುಕ್‌ನಂತಹ ಕಂಪನಿಗಳನ್ನು ಒಳಗೊಂಡ ‘ದಿ ಇಂಟರ್‌ನೆಟ್ ಆ್ಯಂಡ್ ಮೊಬೈಲ್ ಅಸೋಷಿಯೇಷನ್ ಆಫ್ ಇಂಡಿಯಾ’ ಇದಕ್ಕೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿ, ‘ಸುಪ್ರಿಂಕೋರ್ಟ್ ತಿಳಿಸಿದಂತೆ, ಇದು ಖಸಗಿತನದ ಹಕ್ಕಿನ ಉಲ್ಲಂಘನೆ’ ಎಂದು ಹೇಳಿದ್ದವು. ಆದರೂ ಸರ್ಕಾರ ಪಟ್ಟು ಬಿಡದೇ ಈ ನಿಯಮಾವಳಿ ಜಾರಿಗೆ ತರಲು ಹೊರಟಿದೆ.

ಹೀಗಾಗಿ ಸೋಷಿಯಲ್ ಮೀಡಿಯಾ ಕಂಪನಿಗಳು ತಮ್ಮ ಬಳಕೆದಾರರಿಗೆ ತಮ್ಮ ಐಡೆಂಟಿಟಿ ವಿವರ ನೀಡುವಂತೆ ನಿಯಮ ಮಾಡಲಿವೆ. ಇಷ್ಟು ವರ್ಷ ಕೇವಲ ಆನ್‌ಲೈನ್‌ನಲ್ಲಿ ಯಾವುದೇ ದಾಖಲೆ ಇಲ್ಲದೇ, ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.
ಸುಳ್‌ಸುದ್ದಿ ತಡೆಯಲು ಮತ್ತು ಸಮಾಜವಿರೋಧಿ ಶಕ್ತಿಗನ್ನು ಪತ್ತೆ ಹಚ್ಚಲು ಈ ನಿಯಮಾವಳಿ ತರುತ್ತೇವೆಂದು ಕೇಂದ್ರ ಸರ್ಕಾರ ಹೇಳುತ್ತಿದೆ.

ವಿಶ್ವದ ಹಲವಾರು ದೇಶಗಳಲ್ಲಿ ಸೈಬರ್ ಅನ್‌, ಪೋರ್ನ್‌ ಜಾಲತಾಣ (ಅಶ್ಲೀಲ ತಾಣ) ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಿಯಂತ್ರಿಸಲು, ಅಂತರ್ಜಾಲ ಒದಗಿಸುವ ಸಾಮಾಜಿಕ ಜಾಲತಾಣಗಳ ಸೇವೆಯ ಮೇಲೆ ನಿಯಂತ್ರಣ ಹೊಂದಿವೆ. ಆದರೆ ಅಲ್ಲಿ ಸಾಮಾಜಿಕ ಜಾಲತಾಣಗಳ ನೆರವು ಪಡೆದು, ಸೈಬರ್ ತಜ್ಞರ ಮೂಲಕ ಅಪರಾಧಿಗಳ ಪತ್ತೆ ಹಚ್ಚುತ್ತಾರೆ. ಅಶ್ಲೀಲ ಮತ್ತು ದ್ವೇಷ ಹರಡುವ ಜಾಲತಾಣ ಮತ್ತು ಅಕೌಂಟುಗಳನ್ನು ಪತ್ತೆ ಹಚ್ಚಲು ಫೇಸ್‌ಬುಕ್ ಮತ್ತು ಟ್ವಿಟರ್‌ಗಳು ವಿಶೇಷ ಸಾಫ್ಟ್ವೇರ್ ರೂಪಿಸಿವೆ. ಅಂತಹ ಅಕೌಂಟುಗಳನ್ನು ನಿಷೇಧಿಸುತ್ತವೆ.

ಆದರೆ ಭಾರತದಲ್ಲಿ ತರಲು ಹೊರಟಿರುವ ಕಾನೂನು ಮತ್ತು ನಿಯಮಗಳು ಉಳಿದ ದೇಶಗಳ ನಿಯಮಗಳಿಗಿಂತ ಅಪಾಯಕಾರಿಯಾಗಿವೆ. ಯಾವುದೇ ಕಾನೂನು ಪ್ರಕ್ರಿಯೆ ಅಥವಾ ನೋಟಿಸ್ ಇಲ್ಲದೇ ಜಾಲತಾಣಗಳಿಗೆ ಇಂತಿಂಥವರ ವಿವರ ಬೇಕೆಂದಾಕ್ಷಣ ನೀಡಲೇಬೇಕು. ಯಾವುದೇ ಆಡಳಿತ ಪಕ್ಷ ಇದನ್ನು ತಮ್ಮ ವಿರೋಧಿಗಳನ್ನು ಹಣಿಯಲು ಬಳಸಬಹುದು. ತಮ್ಮ ಸಿದ್ದಾಂತ ಒಪ್ಪದ ಸಾಮಾನ್ಯ ಜನರನ್ನೂ ಪತ್ತೆ ಹಚ್ಚಿ ತೊಂದರೆ ನೀಡಬಹುದು. ಹೇಳಿಕೇಳಿ, ತನ್ನ ವಿರೋಧಿಸುವವರನ್ನು ದೇಶದ್ರೋಹಿ, ಅರ್ಬನ್ ನಕ್ಸಲ್ ಎಂದೆಲ್ಲ ಜೈಲಿಗಟ್ಟುವ ಈ ಸರ್ಕಾರವೀಗ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿರೋಧಿಸುವವರ ಬೇಟೆಯಾಡಲು ಹೊರಟಂತಿದೆ.
(ಮಾಹಿತಿ: ದಿ ಎಕನಾಮಿಕ್ ಟೈಮ್ಸ್, ಎನ್‌ಡಿಟಿವಿಡಾಟ್ ಕಾಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...