Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ ಸುದ್ದಿ ಹರಡುವುದರಲ್ಲಿ ಮತ್ತು ಕೋಮುದ್ವೇಷ ಪಸರಿಸುವಲ್ಲಿ ಮುಂದಿರುವುದು ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರೇ. ಈಗ ‘ಇಂಥದ್ದನ್ನೆಲ್ಲ ತಡೆಯಲು ಹೊಸ ನಿಯಮಾವಳಿ’ ಜಾರಿಗೆ ತರುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದರೆ ನಂಬುವುದು ಹೇಗೆ?

ಖಂಡಿತ ಇದು, ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಮಾಡಿಕೊಂಡಿರುವ ಒಂದು ವ್ಯಸ್ಥಿಯ ಸಂಚು.
ಈ ತಿಂಗಳ ಕೊನೆಯಲ್ಲಿ ಜಾರಿಗೆ ಬರಲಿರುವ ಹೊಸ ಸೋಷಿಯಲ್ ಮೀಡಿಯಾ ನಿಯಮಾವಳಿಗಳ ಪರಿಣಾಮವಾಗಿ ಭಾರತದ 40 ಕೋಟಿ ಸೋಷಿಯಲ್ ಮೀಡಿಯಾ ಬಳಕೆದಾರರು ತಮ್ಮ ಅನಾಮಧೇಯತೆಯನ್ನು ಕಳೆದುಕೊಳ್ಳಲಿದ್ದಾರೆ. ಜೊತೆಗೆ ಅವರ ಖಾಸಗಿತನದ ಹಕ್ಕನ್ನು ಕಳೆದಿಕೊಳ್ಳಲಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವ ಮೂಲಕವೇ ವಿರೋಧಿಗಳನ್ನು ಹತ್ತಿಕ್ಕುತ್ತ ಬಂದ ಮೋದಿ ಸರ್ಕಾರವೀಗ ಸಾಮಾಜಿಕ ಜಾಲತಾಣಗಳ ಬಳಸುವ ತನ್ನ ಸೈದ್ದಾಂತಿಕ ವಿರೋಧಿಗಳ ಮೇಲೆ ಈ ಹೊಸ ಅಸ್ತ್ರ ಪ್ರಯೋಗಿಸಲು ಸಿದ್ಧವಾಗಿದೆ.

ಭಾರತ ಸರ್ಕಾರ ಕೇಳಿದರೆ, ಫೇಸ್‌ಬುಕ್, ಟ್ವಿಟರ್, ಯು-ಟ್ಯೂಬ್, ವ್ಯಾಟ್ಸಾಪ್ ಮತ್ತು ಟಿಕ್ ಟಾಕ್ ಕಂಪನಿಗಳು ಅವರ ಯಾವುದಾದರೂ ಬಳಕೆದಾರರ ಐಡೆಂಟಿಟಿಯನ್ನು ಅಂದರೆ ವಿವರಗಳನ್ನು ಸರ್ಕಾರಕ್ಕೆ ಒದಗಿಸಬೇಕು. ಇದಕ್ಕೆ ಯಾವುದೇ ಪ್ರಕ್ರಿಯೆ ಇರುವುದಿಲ್ಲ, ಕಾನೂನಿನ ಮೊರೆ ಹೋಗುವಂತಿಲ್ಲ, ಕೇಳಿದಾಕ್ಷಣ ವಿವರ ನೀಡಬೇಕಷ್ಟೇ.

2018ರ ಡಿಸೆಂಬರ್‌ನಲ್ಲಿ ಸರ್ಕಾರ ಈ ನಿಯಮಾವಳಿ ರೂಪಿಸಿ, ಸಾರ್ವಜನಿಕ ಅಭಿಪ್ರಾಯ ಕೇಳಿತ್ತು. ಗೂಗಲ್, ಫೇಸ್‌ಬುಕ್‌ನಂತಹ ಕಂಪನಿಗಳನ್ನು ಒಳಗೊಂಡ ‘ದಿ ಇಂಟರ್‌ನೆಟ್ ಆ್ಯಂಡ್ ಮೊಬೈಲ್ ಅಸೋಷಿಯೇಷನ್ ಆಫ್ ಇಂಡಿಯಾ’ ಇದಕ್ಕೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿ, ‘ಸುಪ್ರಿಂಕೋರ್ಟ್ ತಿಳಿಸಿದಂತೆ, ಇದು ಖಸಗಿತನದ ಹಕ್ಕಿನ ಉಲ್ಲಂಘನೆ’ ಎಂದು ಹೇಳಿದ್ದವು. ಆದರೂ ಸರ್ಕಾರ ಪಟ್ಟು ಬಿಡದೇ ಈ ನಿಯಮಾವಳಿ ಜಾರಿಗೆ ತರಲು ಹೊರಟಿದೆ.

ಹೀಗಾಗಿ ಸೋಷಿಯಲ್ ಮೀಡಿಯಾ ಕಂಪನಿಗಳು ತಮ್ಮ ಬಳಕೆದಾರರಿಗೆ ತಮ್ಮ ಐಡೆಂಟಿಟಿ ವಿವರ ನೀಡುವಂತೆ ನಿಯಮ ಮಾಡಲಿವೆ. ಇಷ್ಟು ವರ್ಷ ಕೇವಲ ಆನ್‌ಲೈನ್‌ನಲ್ಲಿ ಯಾವುದೇ ದಾಖಲೆ ಇಲ್ಲದೇ, ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.
ಸುಳ್‌ಸುದ್ದಿ ತಡೆಯಲು ಮತ್ತು ಸಮಾಜವಿರೋಧಿ ಶಕ್ತಿಗನ್ನು ಪತ್ತೆ ಹಚ್ಚಲು ಈ ನಿಯಮಾವಳಿ ತರುತ್ತೇವೆಂದು ಕೇಂದ್ರ ಸರ್ಕಾರ ಹೇಳುತ್ತಿದೆ.

ವಿಶ್ವದ ಹಲವಾರು ದೇಶಗಳಲ್ಲಿ ಸೈಬರ್ ಅನ್‌, ಪೋರ್ನ್‌ ಜಾಲತಾಣ (ಅಶ್ಲೀಲ ತಾಣ) ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಿಯಂತ್ರಿಸಲು, ಅಂತರ್ಜಾಲ ಒದಗಿಸುವ ಸಾಮಾಜಿಕ ಜಾಲತಾಣಗಳ ಸೇವೆಯ ಮೇಲೆ ನಿಯಂತ್ರಣ ಹೊಂದಿವೆ. ಆದರೆ ಅಲ್ಲಿ ಸಾಮಾಜಿಕ ಜಾಲತಾಣಗಳ ನೆರವು ಪಡೆದು, ಸೈಬರ್ ತಜ್ಞರ ಮೂಲಕ ಅಪರಾಧಿಗಳ ಪತ್ತೆ ಹಚ್ಚುತ್ತಾರೆ. ಅಶ್ಲೀಲ ಮತ್ತು ದ್ವೇಷ ಹರಡುವ ಜಾಲತಾಣ ಮತ್ತು ಅಕೌಂಟುಗಳನ್ನು ಪತ್ತೆ ಹಚ್ಚಲು ಫೇಸ್‌ಬುಕ್ ಮತ್ತು ಟ್ವಿಟರ್‌ಗಳು ವಿಶೇಷ ಸಾಫ್ಟ್ವೇರ್ ರೂಪಿಸಿವೆ. ಅಂತಹ ಅಕೌಂಟುಗಳನ್ನು ನಿಷೇಧಿಸುತ್ತವೆ.

ಆದರೆ ಭಾರತದಲ್ಲಿ ತರಲು ಹೊರಟಿರುವ ಕಾನೂನು ಮತ್ತು ನಿಯಮಗಳು ಉಳಿದ ದೇಶಗಳ ನಿಯಮಗಳಿಗಿಂತ ಅಪಾಯಕಾರಿಯಾಗಿವೆ. ಯಾವುದೇ ಕಾನೂನು ಪ್ರಕ್ರಿಯೆ ಅಥವಾ ನೋಟಿಸ್ ಇಲ್ಲದೇ ಜಾಲತಾಣಗಳಿಗೆ ಇಂತಿಂಥವರ ವಿವರ ಬೇಕೆಂದಾಕ್ಷಣ ನೀಡಲೇಬೇಕು. ಯಾವುದೇ ಆಡಳಿತ ಪಕ್ಷ ಇದನ್ನು ತಮ್ಮ ವಿರೋಧಿಗಳನ್ನು ಹಣಿಯಲು ಬಳಸಬಹುದು. ತಮ್ಮ ಸಿದ್ದಾಂತ ಒಪ್ಪದ ಸಾಮಾನ್ಯ ಜನರನ್ನೂ ಪತ್ತೆ ಹಚ್ಚಿ ತೊಂದರೆ ನೀಡಬಹುದು. ಹೇಳಿಕೇಳಿ, ತನ್ನ ವಿರೋಧಿಸುವವರನ್ನು ದೇಶದ್ರೋಹಿ, ಅರ್ಬನ್ ನಕ್ಸಲ್ ಎಂದೆಲ್ಲ ಜೈಲಿಗಟ್ಟುವ ಈ ಸರ್ಕಾರವೀಗ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿರೋಧಿಸುವವರ ಬೇಟೆಯಾಡಲು ಹೊರಟಂತಿದೆ.
(ಮಾಹಿತಿ: ದಿ ಎಕನಾಮಿಕ್ ಟೈಮ್ಸ್, ಎನ್‌ಡಿಟಿವಿಡಾಟ್ ಕಾಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...