HomeUncategorized'ಡೀಪ್ ಫೇಕ್‌' ತಡೆಗೆ ಶೀಘ್ರ ಹೊಸ ಕಾನೂನು: ಅಶ್ವಿನಿ ವೈಷ್ಣವ್

‘ಡೀಪ್ ಫೇಕ್‌’ ತಡೆಗೆ ಶೀಘ್ರ ಹೊಸ ಕಾನೂನು: ಅಶ್ವಿನಿ ವೈಷ್ಣವ್

- Advertisement -
- Advertisement -

ಇತ್ತೀಚೆಗೆ ಭಾರೀ ಸುದ್ದಿಯಲ್ಲಿರುವ ‘ಡೀಪ್ ಫೇಕ್‌’ ತಡೆಗೆ ಶೀಘ್ರದಲ್ಲಿ ಕಾನೂನು ರೂಪಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಪ್ರಮುಖರ ಡೀಪ್ ಫೇಕ್‌ ವಿಡಿಯೋಗಳು ಸಾಮಾಜಿಕ ಮಾಧ್ಯಗಳಲ್ಲಿ ಸದ್ದು ಮಾಡಿದ ಹಿನ್ನೆಲೆ, ಇಂದು ಸಾಮಾಜಿಕ ಮಾಧ್ಯಮಗಳ ಮುಖ್ಯಸ್ಥರು ಮತ್ತು ಕಂಪನಿಗಳ ಜೊತೆ ಸಚಿವ ಅಶ್ವಿನ್ ವೈಷ್ಣವ್ ಸಭೆ ನಡೆಸಿದರು.

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡೀಪ್ ಫೇಕ್ ಪ್ರಜಾಪ್ರಭುತ್ವಕ್ಕೆ ಹೊಸ ಬೆದರಿಕೆಯಾಗಿದೆ. ಡೀಪ್‌ ಫೇಕ್‌ನ ಹೊಣೆಗಾರಿಗೆ ಅದನ್ನು ರಚಿಸಿದವರು ಮತ್ತು ಪಸರಿಸಿದ ವೇದಿಕೆ ಮೇಲೆ ಇರುತ್ತದೆ. ಡೀಪ್ ಫೇಕ್‌ ಮಾಡುವವರ ಮೇಲೆ ದಂಡ ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು.

ಸಾಮಾಜಿಕ ಮಾಧ್ಯಮ ಮುಖ್ಯಸ್ಥರೊಂದಿಗಿನ ಸಭೆಯಲ್ಲಿ, ಡೀಪ್‌ಫೇಕ್‌ಗಳನ್ನು ಹೇಗೆ ಕಂಡುಹಿಡಿಯಬಹುದು? ಡೀಪ್‌ಫೇಕ್‌ಗಳನ್ನು ಪೋಸ್ಟ್ ಮಾಡುವುದರಿಂದ ಜನರನ್ನು ಹೇಗೆ ತಡೆಯಬಹುದು ಮತ್ತು ಅಂತಹ ವಿಷಯವನ್ನು ವೈರಲ್ ಆಗದಂತೆ ತಡೆಯಬಹುದೇ? ರಿಪೋರ್ಟ್‌ ಮಾಡುವ ಕಾರ್ಯ ವಿಧಾನವನ್ನು ಹೇಗೆ ಕಾರ್ಯಗತಗೊಳಿಸಬಹುದು? ಎಂಬ ನಾಲ್ಕು ವಿಷಯಗಳನ್ನು ಪ್ರಮುಖವಾಗಿ ಚರ್ಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ಬಳಕೆದಾರರು ಪ್ಲಾಟ್‌ಫಾರ್ಮ್ ಮತ್ತು ಅಧಿಕಾರಿಗಳಿಗೆ ಡೀಪ್‌ಫೇಕ್ ಬಗ್ಗೆ ಎಚ್ಚರಿಕೆ ನೀಡಬಹುದು. ಇದರಿಂದ ಸಂಬಂಧಪಟ್ಟವರು ಕ್ರಮ ತೆಗೆದುಕೊಳ್ಳಲು ಸಾಧ್ಯವಿದೆ. ಸಾರ್ವಜನಿಕರಲ್ಲಿ ಡೀಫ್ ಫೇಕ್ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರ, ಉದ್ಯಮಗಳು ಮತ್ತು ಮಾಧ್ಯಮಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಇತ್ಯಾದಿ ವಿಷಯಗಳನ್ನು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದರು.

ಡೀಪ್ ಫೇಕ್ ತಡೆಗೆ ಕಾನೂನು ರೂಪಿಸುವ ಅಗತ್ಯವಿದೆ ಎಂಬುವುದು ಸಭೆಯಿಂದ ತಿಳಿದು ಬಂದಿದೆ. ಸರ್ಕಾರ ಅತೀ ಶೀಘ್ರದಲ್ಲಿ ಈ ಸಂಬಂಧ ಕರಡು ಸಿದ್ದಪಡಿಸಲಿದೆ. ಪ್ರಸ್ತುತ ಇರುವ ಐಟಿ ನಿಯಮಗಳಿಗೆ ತಿದ್ದುಪಡಿ ತರಬಹುದು ಅಥವಾ ಹೊಸ ಕಾನೂನು ರೂಪಿಸಬಹುದು ಎಂದು ಅಶ್ವಿನಿ ವೈಷ್ಣವ್ ಹೇಳಿದರು.

ಇದನ್ನೂ ಓದಿ: ಮಹುವಾ ವಿರುದ್ಧದ ಪ್ರಶ್ನೆಗಾಗಿ ನಗದು ಆರೋಪ: ಮೌನ ಮುರಿದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...