HomeUncategorized'ಡೀಪ್ ಫೇಕ್‌' ತಡೆಗೆ ಶೀಘ್ರ ಹೊಸ ಕಾನೂನು: ಅಶ್ವಿನಿ ವೈಷ್ಣವ್

‘ಡೀಪ್ ಫೇಕ್‌’ ತಡೆಗೆ ಶೀಘ್ರ ಹೊಸ ಕಾನೂನು: ಅಶ್ವಿನಿ ವೈಷ್ಣವ್

- Advertisement -
- Advertisement -

ಇತ್ತೀಚೆಗೆ ಭಾರೀ ಸುದ್ದಿಯಲ್ಲಿರುವ ‘ಡೀಪ್ ಫೇಕ್‌’ ತಡೆಗೆ ಶೀಘ್ರದಲ್ಲಿ ಕಾನೂನು ರೂಪಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಪ್ರಮುಖರ ಡೀಪ್ ಫೇಕ್‌ ವಿಡಿಯೋಗಳು ಸಾಮಾಜಿಕ ಮಾಧ್ಯಗಳಲ್ಲಿ ಸದ್ದು ಮಾಡಿದ ಹಿನ್ನೆಲೆ, ಇಂದು ಸಾಮಾಜಿಕ ಮಾಧ್ಯಮಗಳ ಮುಖ್ಯಸ್ಥರು ಮತ್ತು ಕಂಪನಿಗಳ ಜೊತೆ ಸಚಿವ ಅಶ್ವಿನ್ ವೈಷ್ಣವ್ ಸಭೆ ನಡೆಸಿದರು.

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡೀಪ್ ಫೇಕ್ ಪ್ರಜಾಪ್ರಭುತ್ವಕ್ಕೆ ಹೊಸ ಬೆದರಿಕೆಯಾಗಿದೆ. ಡೀಪ್‌ ಫೇಕ್‌ನ ಹೊಣೆಗಾರಿಗೆ ಅದನ್ನು ರಚಿಸಿದವರು ಮತ್ತು ಪಸರಿಸಿದ ವೇದಿಕೆ ಮೇಲೆ ಇರುತ್ತದೆ. ಡೀಪ್ ಫೇಕ್‌ ಮಾಡುವವರ ಮೇಲೆ ದಂಡ ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು.

ಸಾಮಾಜಿಕ ಮಾಧ್ಯಮ ಮುಖ್ಯಸ್ಥರೊಂದಿಗಿನ ಸಭೆಯಲ್ಲಿ, ಡೀಪ್‌ಫೇಕ್‌ಗಳನ್ನು ಹೇಗೆ ಕಂಡುಹಿಡಿಯಬಹುದು? ಡೀಪ್‌ಫೇಕ್‌ಗಳನ್ನು ಪೋಸ್ಟ್ ಮಾಡುವುದರಿಂದ ಜನರನ್ನು ಹೇಗೆ ತಡೆಯಬಹುದು ಮತ್ತು ಅಂತಹ ವಿಷಯವನ್ನು ವೈರಲ್ ಆಗದಂತೆ ತಡೆಯಬಹುದೇ? ರಿಪೋರ್ಟ್‌ ಮಾಡುವ ಕಾರ್ಯ ವಿಧಾನವನ್ನು ಹೇಗೆ ಕಾರ್ಯಗತಗೊಳಿಸಬಹುದು? ಎಂಬ ನಾಲ್ಕು ವಿಷಯಗಳನ್ನು ಪ್ರಮುಖವಾಗಿ ಚರ್ಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ಬಳಕೆದಾರರು ಪ್ಲಾಟ್‌ಫಾರ್ಮ್ ಮತ್ತು ಅಧಿಕಾರಿಗಳಿಗೆ ಡೀಪ್‌ಫೇಕ್ ಬಗ್ಗೆ ಎಚ್ಚರಿಕೆ ನೀಡಬಹುದು. ಇದರಿಂದ ಸಂಬಂಧಪಟ್ಟವರು ಕ್ರಮ ತೆಗೆದುಕೊಳ್ಳಲು ಸಾಧ್ಯವಿದೆ. ಸಾರ್ವಜನಿಕರಲ್ಲಿ ಡೀಫ್ ಫೇಕ್ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರ, ಉದ್ಯಮಗಳು ಮತ್ತು ಮಾಧ್ಯಮಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಇತ್ಯಾದಿ ವಿಷಯಗಳನ್ನು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದರು.

ಡೀಪ್ ಫೇಕ್ ತಡೆಗೆ ಕಾನೂನು ರೂಪಿಸುವ ಅಗತ್ಯವಿದೆ ಎಂಬುವುದು ಸಭೆಯಿಂದ ತಿಳಿದು ಬಂದಿದೆ. ಸರ್ಕಾರ ಅತೀ ಶೀಘ್ರದಲ್ಲಿ ಈ ಸಂಬಂಧ ಕರಡು ಸಿದ್ದಪಡಿಸಲಿದೆ. ಪ್ರಸ್ತುತ ಇರುವ ಐಟಿ ನಿಯಮಗಳಿಗೆ ತಿದ್ದುಪಡಿ ತರಬಹುದು ಅಥವಾ ಹೊಸ ಕಾನೂನು ರೂಪಿಸಬಹುದು ಎಂದು ಅಶ್ವಿನಿ ವೈಷ್ಣವ್ ಹೇಳಿದರು.

ಇದನ್ನೂ ಓದಿ: ಮಹುವಾ ವಿರುದ್ಧದ ಪ್ರಶ್ನೆಗಾಗಿ ನಗದು ಆರೋಪ: ಮೌನ ಮುರಿದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...