Homeಅಂಕಣಗಳುಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

ಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

- Advertisement -
- Advertisement -

ಭಾರತದಲ್ಲಿ ಮಾಧ್ಯಮ ಕ್ಷೇತ್ರ ತನ್ನ ಕೆಲಸ ನಿಲ್ಲಿಸಿ ಪ್ರಜಾತಂತ್ರ ವಿರೋಧಿ ಪಯಣ ಆರಂಭಿಸಿ ಬಹಳ ಕಾಲವೇ ಆಯಿತು. ಆದರೆ ತೀರಾ ಇತ್ತೀಚೆಗೆ ತನ್ನ ಜೀವವಿರೋಧಿತನವನ್ನು ಸಾಬೀತುಪಡಿಸಿಕೊಂಡಿತು. ಜಗತ್ತಿನೆಲ್ಲೆಡೆ ಮನುಷ್ಯರನ್ನು ಅತ್ಯಂತ ಕ್ಷುದ್ರವಾಗಿಸಿಬಿಟ್ಟ ಕಣ್ಣಿಗೆ ಕಾಣದ ಕೊರೊನಾ ಆವರಿಸುತ್ತಾ ಬಂದಂತೆ, ಕೆಲವರಾದರೂ ಭಿನ್ನವಾಗಿ ಆಲೋಚಿಸಲು ಶುರು ಮಾಡಿದ್ದರು. ಬದುಕು ಇಷ್ಟೇನಾ, ಹಾಗಿದ್ದ ಮೇಲೆ ಈ ಜಗಳ, ಈ ದ್ವೇಷ, ಈ ತಾರತಮ್ಯ ಏಕೆ ಎಂಬುದು ಅದರ ತಿರುಳಾಗಿತ್ತು. ಆದರೆ ಎಲ್ಲರೂ ಗಾಬರಿಗೊಳ್ಳುವ ಹಾಗೆ ನಮ್ಮ ಬಹುತೇಕ ಮಾಧ್ಯಮಗಳು ಇನ್ನಷ್ಟು ಉಲ್ಟಾ ದಿಕ್ಕಿನಲ್ಲಿ ಹೊರಟಿದ್ದವು.

ಕೊರೊನಾ ಸೋಂಕನ್ನು ಧರ್ಮವೊಂದಕ್ಕೆ ತಳುಕುಹಾಕಲು ಹೊರಟಾಗಲೇ ಮೊದಲ ಗಂಟೆ ಮೊಳಗಿತ್ತು. ದೇಶಕ್ಕೆ ದೇಶವೇ ದಿಗ್ಭ್ರಾಂತವಾಗಿ ಹೊಸಪರಿಸ್ಥಿತಿಗೆ ಹೊಂದಿಕೊಳ್ಳಲು ಒದ್ದಾಡುತ್ತಿದ್ದರೆ, ಬಡವರು ಬೀದಿಯ ಮೇಲೆ ಬಂದರೆ ಅವರನ್ನು ಬಡಿಯಲು ಪೊಲೀಸರ ಮೇಲೆ ಒತ್ತಡ ಹಾಕುವುದರಲ್ಲಿ ಮಾಧ್ಯಮಗಳು ನಿರತವಾಗಿದ್ದವು. ಮತ್ತೀಗ ದೇಶ ಕಳೆದೊಂದು ಶತಮಾನದಲ್ಲೇ ಅತೀ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಅದಕ್ಕೆ ಕೇಂದ್ರ ಸರ್ಕಾರವು ಒಂದು ಮೋಸದ ಪ್ಯಾಕೇಜನ್ನು ಬಿಡುಗಡೆ ಮಾಡಿದೆ; ಅದನ್ನು ಕನಿಷ್ಠ ವಿಮರ್ಶಾತ್ಮಕವಾಗಿ ನೋಡುವ ಕೆಲಸವನ್ನೂ ಬಹುತೇಕ ಮಾಧ್ಯಮಗಳು ಮಾಡಲಿಲ್ಲ. ಈ ಮೂರು ಸಂಗತಿಗಳು ಕಡೆಯ ಮೂರು ಬೆಲ್‍ಗಳು ಬಡಿದ ಹಾಗೆ ಎಂದು ದೇಶದ ಪ್ರಜ್ಞಾವಂತ ಸಮಾಜ ಭಾವಿಸಬೇಕಿತ್ತು; ಭಾವಿಸಿಯೂ ಇದೆ.

ಹೀಗಾಗಿಯೇ ಪರ್ಯಾಯ ಮಾಧ್ಯಮದ ಚರ್ಚೆಯೂ ಈ ಅವಧಿಯಲ್ಲಿ ಆರಂಭವಾಯಿತು. ಅದೇ ಕೆಲಸದಲ್ಲಿ ನಿರತರಾಗಿದ್ದ ಗೌರಿ ಮೀಡಿಯಾ ತಂಡವೂ ಅದಕ್ಕೆ ಪ್ರತಿಕ್ರಿಯಿಸುವುದರ ಭಾಗವಾಗಿ ಹೊಸ ಮಾಧ್ಯಮದ ಕುರಿತಾದ ತನ್ನ ಪರಿಕಲ್ಪನೆಯ ಪ್ರಸ್ತಾಪವೊಂದನ್ನು ಮುಂದಿಟ್ಟಿತು. ನ್ಯಾಯಪಥ ಮತ್ತು ನಾನುಗೌರಿ.ಕಾಂನಲ್ಲಿ ಪ್ರಕಟವಾದ ಆ ಪರಿಕಲ್ಪನೆಗೆ ಸಾಕಷ್ಟು ಪ್ರತಿಕ್ರಿಯೆಗಳು ಬಂದವು. ನಮ್ಮ ಬಳಗದಲ್ಲಿನ ಉಮೇದು ನಮಗೂ ಉತ್ಸಾಹ ತಂದಿತು.

ಆ ಬರಹದಲ್ಲಿ ಮುಖ್ಯವಾಹಿನಿ ಮಾಧ್ಯಮ ಎಂದು ಬಳಸಿದ್ದು ಕೆಲವರಲ್ಲಿ ಗೊಂದಲ ಮೂಡಿಸಿತ್ತು. ಇನ್ನೊಂದು ಚಾನೆಲ್ ಆರಂಭಿಸುವುದು ಅಥವಾ ದೊಡ್ಡ ರಾಜ್ಯ ಮಟ್ಟದ ಪತ್ರಿಕೆಯನ್ನು ತರುವುದು ಸಾಧ್ಯವೇ ಎಂಬುದು ಆ ಗೊಂದಲಕ್ಕೆ ಕಾರಣವಾಗಿತ್ತು. ಚಾನೆಲ್ ಅಥವಾ ದೊಡ್ಡ ಪತ್ರಿಕೆ ಯಾರಾದರೂ ಮಾಡಿದರೆ ಅದಕ್ಕೆ ನಮ್ಮ ತಕರಾರೇನೂ ಇಲ್ಲ; ಆದರೆ ನಮ್ಮ ಪರಿಕಲ್ಪನೆಯ ಮುಖ್ಯವಾಹಿನಿ ಮಾಧ್ಯಮ ಅದಲ್ಲ ಎಂದು ಸ್ಪಷ್ಟಪಡಿಸಬೇಕಾಗಿ ಬಂದಿತು. ಮುಖ್ಯವಾಹಿನಿ ಎಂದಾಗ ಕಣ್ಣಮುಂದೆ ಬರುವ ಕಲ್ಪನೆಯು ಹಾಗೇ ಇರುತ್ತದಾದ್ದರಿಂದ, ಅದು ನನ್ನ ಬರಹದಲ್ಲೇ ಇದ್ದ ಸಮಸ್ಯೆಯಾಗಿತ್ತು ಎಂಬುದನ್ನು ವಿನಮ್ರವಾಗಿ ಒಪ್ಪಿಕೊಳ್ಳಬಯಸುತ್ತೇನೆ.

ಹೊಸ ಮುಖ್ಯವಾಹಿನಿ ಎಂದರೆ ಜನಸಾಮಾನ್ಯರೆಲ್ಲರೂ ತಮ್ಮದೆಂದು ಭಾವಿಸಿ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮಾಧ್ಯಮದ ಹೊಸರೂಪವಾಗಿರುತ್ತದೆ. ನೂರಾರು ಸಣ್ಣ ಪ್ರಯತ್ನಗಳು ಸ್ವಾಯತ್ತವಾಗಿ ಉಳಿದುಕೊಂಡೂ ಸಮಷ್ಟಿಯಾಗಿ ಸಮಷ್ಟಿ ಹಿತಕ್ಕಾಗಿ ಕೆಲಸ ಮಾಡುವ ಸಂಘಟನಾ ರೂಪ ಹಾಗೂ ಉದ್ದೇಶ ಹೊಂದಿರುತ್ತವೆ.

ಈ ಕುರಿತು ನಮ್ಮ ಪತ್ರಿಕಾ ಬಳಗದಲ್ಲೂ ಚರ್ಚೆ ಶುರುವಾಗಿದ್ದು, ಇನ್ನೊಂದೆರಡು ವಾರಗಳಲ್ಲಿ ಅಂತಿಮಗೊಳ್ಳಲಿದೆ. ಅದನ್ನು ನಿಮ್ಮೆಲ್ಲರ ಮುಂದಿಡಲಾಗುತ್ತದೆ. ಎಲ್ಲರೂ ಮುಕ್ತವಾದ ಚರ್ಚೆ ನಡೆಸೋಣ. ಅಲ್ಲಿಂದಾಚೆಗೆ ನಾವೆಲ್ಲರೂ ಜೊತೆಗೂಡಿ ಈ ಕಾಲದ ಬಹುಮುಖ್ಯ ಅಗತ್ಯವಾದ ಹೊಸ ಮಾಧ್ಯಮವನ್ನು ಕಟ್ಟುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲಿದ್ದೇವೆ ಎಂಬ ವಿಶ್ವಾಸ ನಮಗಂತೂ ಇದೆ. ಕಡೆಯ ಮೂರು ಗಂಟೆ ಹೊಡೆದ ಮೇಲೂ ನಮ್ಮ ಕೆಲಸಕ್ಕೆ ಚಾಲನೆ ಕೊಡದಿದ್ದರೆ ಹೇಗೆ, ಅಲ್ಲವೇ?


ಇದನ್ನು ಓದಿ: ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...