Homeಅಂಕಣಗಳುಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

ಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

- Advertisement -
- Advertisement -

ಭಾರತದಲ್ಲಿ ಮಾಧ್ಯಮ ಕ್ಷೇತ್ರ ತನ್ನ ಕೆಲಸ ನಿಲ್ಲಿಸಿ ಪ್ರಜಾತಂತ್ರ ವಿರೋಧಿ ಪಯಣ ಆರಂಭಿಸಿ ಬಹಳ ಕಾಲವೇ ಆಯಿತು. ಆದರೆ ತೀರಾ ಇತ್ತೀಚೆಗೆ ತನ್ನ ಜೀವವಿರೋಧಿತನವನ್ನು ಸಾಬೀತುಪಡಿಸಿಕೊಂಡಿತು. ಜಗತ್ತಿನೆಲ್ಲೆಡೆ ಮನುಷ್ಯರನ್ನು ಅತ್ಯಂತ ಕ್ಷುದ್ರವಾಗಿಸಿಬಿಟ್ಟ ಕಣ್ಣಿಗೆ ಕಾಣದ ಕೊರೊನಾ ಆವರಿಸುತ್ತಾ ಬಂದಂತೆ, ಕೆಲವರಾದರೂ ಭಿನ್ನವಾಗಿ ಆಲೋಚಿಸಲು ಶುರು ಮಾಡಿದ್ದರು. ಬದುಕು ಇಷ್ಟೇನಾ, ಹಾಗಿದ್ದ ಮೇಲೆ ಈ ಜಗಳ, ಈ ದ್ವೇಷ, ಈ ತಾರತಮ್ಯ ಏಕೆ ಎಂಬುದು ಅದರ ತಿರುಳಾಗಿತ್ತು. ಆದರೆ ಎಲ್ಲರೂ ಗಾಬರಿಗೊಳ್ಳುವ ಹಾಗೆ ನಮ್ಮ ಬಹುತೇಕ ಮಾಧ್ಯಮಗಳು ಇನ್ನಷ್ಟು ಉಲ್ಟಾ ದಿಕ್ಕಿನಲ್ಲಿ ಹೊರಟಿದ್ದವು.

ಕೊರೊನಾ ಸೋಂಕನ್ನು ಧರ್ಮವೊಂದಕ್ಕೆ ತಳುಕುಹಾಕಲು ಹೊರಟಾಗಲೇ ಮೊದಲ ಗಂಟೆ ಮೊಳಗಿತ್ತು. ದೇಶಕ್ಕೆ ದೇಶವೇ ದಿಗ್ಭ್ರಾಂತವಾಗಿ ಹೊಸಪರಿಸ್ಥಿತಿಗೆ ಹೊಂದಿಕೊಳ್ಳಲು ಒದ್ದಾಡುತ್ತಿದ್ದರೆ, ಬಡವರು ಬೀದಿಯ ಮೇಲೆ ಬಂದರೆ ಅವರನ್ನು ಬಡಿಯಲು ಪೊಲೀಸರ ಮೇಲೆ ಒತ್ತಡ ಹಾಕುವುದರಲ್ಲಿ ಮಾಧ್ಯಮಗಳು ನಿರತವಾಗಿದ್ದವು. ಮತ್ತೀಗ ದೇಶ ಕಳೆದೊಂದು ಶತಮಾನದಲ್ಲೇ ಅತೀ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಅದಕ್ಕೆ ಕೇಂದ್ರ ಸರ್ಕಾರವು ಒಂದು ಮೋಸದ ಪ್ಯಾಕೇಜನ್ನು ಬಿಡುಗಡೆ ಮಾಡಿದೆ; ಅದನ್ನು ಕನಿಷ್ಠ ವಿಮರ್ಶಾತ್ಮಕವಾಗಿ ನೋಡುವ ಕೆಲಸವನ್ನೂ ಬಹುತೇಕ ಮಾಧ್ಯಮಗಳು ಮಾಡಲಿಲ್ಲ. ಈ ಮೂರು ಸಂಗತಿಗಳು ಕಡೆಯ ಮೂರು ಬೆಲ್‍ಗಳು ಬಡಿದ ಹಾಗೆ ಎಂದು ದೇಶದ ಪ್ರಜ್ಞಾವಂತ ಸಮಾಜ ಭಾವಿಸಬೇಕಿತ್ತು; ಭಾವಿಸಿಯೂ ಇದೆ.

ಹೀಗಾಗಿಯೇ ಪರ್ಯಾಯ ಮಾಧ್ಯಮದ ಚರ್ಚೆಯೂ ಈ ಅವಧಿಯಲ್ಲಿ ಆರಂಭವಾಯಿತು. ಅದೇ ಕೆಲಸದಲ್ಲಿ ನಿರತರಾಗಿದ್ದ ಗೌರಿ ಮೀಡಿಯಾ ತಂಡವೂ ಅದಕ್ಕೆ ಪ್ರತಿಕ್ರಿಯಿಸುವುದರ ಭಾಗವಾಗಿ ಹೊಸ ಮಾಧ್ಯಮದ ಕುರಿತಾದ ತನ್ನ ಪರಿಕಲ್ಪನೆಯ ಪ್ರಸ್ತಾಪವೊಂದನ್ನು ಮುಂದಿಟ್ಟಿತು. ನ್ಯಾಯಪಥ ಮತ್ತು ನಾನುಗೌರಿ.ಕಾಂನಲ್ಲಿ ಪ್ರಕಟವಾದ ಆ ಪರಿಕಲ್ಪನೆಗೆ ಸಾಕಷ್ಟು ಪ್ರತಿಕ್ರಿಯೆಗಳು ಬಂದವು. ನಮ್ಮ ಬಳಗದಲ್ಲಿನ ಉಮೇದು ನಮಗೂ ಉತ್ಸಾಹ ತಂದಿತು.

ಆ ಬರಹದಲ್ಲಿ ಮುಖ್ಯವಾಹಿನಿ ಮಾಧ್ಯಮ ಎಂದು ಬಳಸಿದ್ದು ಕೆಲವರಲ್ಲಿ ಗೊಂದಲ ಮೂಡಿಸಿತ್ತು. ಇನ್ನೊಂದು ಚಾನೆಲ್ ಆರಂಭಿಸುವುದು ಅಥವಾ ದೊಡ್ಡ ರಾಜ್ಯ ಮಟ್ಟದ ಪತ್ರಿಕೆಯನ್ನು ತರುವುದು ಸಾಧ್ಯವೇ ಎಂಬುದು ಆ ಗೊಂದಲಕ್ಕೆ ಕಾರಣವಾಗಿತ್ತು. ಚಾನೆಲ್ ಅಥವಾ ದೊಡ್ಡ ಪತ್ರಿಕೆ ಯಾರಾದರೂ ಮಾಡಿದರೆ ಅದಕ್ಕೆ ನಮ್ಮ ತಕರಾರೇನೂ ಇಲ್ಲ; ಆದರೆ ನಮ್ಮ ಪರಿಕಲ್ಪನೆಯ ಮುಖ್ಯವಾಹಿನಿ ಮಾಧ್ಯಮ ಅದಲ್ಲ ಎಂದು ಸ್ಪಷ್ಟಪಡಿಸಬೇಕಾಗಿ ಬಂದಿತು. ಮುಖ್ಯವಾಹಿನಿ ಎಂದಾಗ ಕಣ್ಣಮುಂದೆ ಬರುವ ಕಲ್ಪನೆಯು ಹಾಗೇ ಇರುತ್ತದಾದ್ದರಿಂದ, ಅದು ನನ್ನ ಬರಹದಲ್ಲೇ ಇದ್ದ ಸಮಸ್ಯೆಯಾಗಿತ್ತು ಎಂಬುದನ್ನು ವಿನಮ್ರವಾಗಿ ಒಪ್ಪಿಕೊಳ್ಳಬಯಸುತ್ತೇನೆ.

ಹೊಸ ಮುಖ್ಯವಾಹಿನಿ ಎಂದರೆ ಜನಸಾಮಾನ್ಯರೆಲ್ಲರೂ ತಮ್ಮದೆಂದು ಭಾವಿಸಿ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮಾಧ್ಯಮದ ಹೊಸರೂಪವಾಗಿರುತ್ತದೆ. ನೂರಾರು ಸಣ್ಣ ಪ್ರಯತ್ನಗಳು ಸ್ವಾಯತ್ತವಾಗಿ ಉಳಿದುಕೊಂಡೂ ಸಮಷ್ಟಿಯಾಗಿ ಸಮಷ್ಟಿ ಹಿತಕ್ಕಾಗಿ ಕೆಲಸ ಮಾಡುವ ಸಂಘಟನಾ ರೂಪ ಹಾಗೂ ಉದ್ದೇಶ ಹೊಂದಿರುತ್ತವೆ.

ಈ ಕುರಿತು ನಮ್ಮ ಪತ್ರಿಕಾ ಬಳಗದಲ್ಲೂ ಚರ್ಚೆ ಶುರುವಾಗಿದ್ದು, ಇನ್ನೊಂದೆರಡು ವಾರಗಳಲ್ಲಿ ಅಂತಿಮಗೊಳ್ಳಲಿದೆ. ಅದನ್ನು ನಿಮ್ಮೆಲ್ಲರ ಮುಂದಿಡಲಾಗುತ್ತದೆ. ಎಲ್ಲರೂ ಮುಕ್ತವಾದ ಚರ್ಚೆ ನಡೆಸೋಣ. ಅಲ್ಲಿಂದಾಚೆಗೆ ನಾವೆಲ್ಲರೂ ಜೊತೆಗೂಡಿ ಈ ಕಾಲದ ಬಹುಮುಖ್ಯ ಅಗತ್ಯವಾದ ಹೊಸ ಮಾಧ್ಯಮವನ್ನು ಕಟ್ಟುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲಿದ್ದೇವೆ ಎಂಬ ವಿಶ್ವಾಸ ನಮಗಂತೂ ಇದೆ. ಕಡೆಯ ಮೂರು ಗಂಟೆ ಹೊಡೆದ ಮೇಲೂ ನಮ್ಮ ಕೆಲಸಕ್ಕೆ ಚಾಲನೆ ಕೊಡದಿದ್ದರೆ ಹೇಗೆ, ಅಲ್ಲವೇ?


ಇದನ್ನು ಓದಿ: ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...