Homeಅಂಕಣಗಳುಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

ಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

- Advertisement -
- Advertisement -

ಭಾರತದಲ್ಲಿ ಮಾಧ್ಯಮ ಕ್ಷೇತ್ರ ತನ್ನ ಕೆಲಸ ನಿಲ್ಲಿಸಿ ಪ್ರಜಾತಂತ್ರ ವಿರೋಧಿ ಪಯಣ ಆರಂಭಿಸಿ ಬಹಳ ಕಾಲವೇ ಆಯಿತು. ಆದರೆ ತೀರಾ ಇತ್ತೀಚೆಗೆ ತನ್ನ ಜೀವವಿರೋಧಿತನವನ್ನು ಸಾಬೀತುಪಡಿಸಿಕೊಂಡಿತು. ಜಗತ್ತಿನೆಲ್ಲೆಡೆ ಮನುಷ್ಯರನ್ನು ಅತ್ಯಂತ ಕ್ಷುದ್ರವಾಗಿಸಿಬಿಟ್ಟ ಕಣ್ಣಿಗೆ ಕಾಣದ ಕೊರೊನಾ ಆವರಿಸುತ್ತಾ ಬಂದಂತೆ, ಕೆಲವರಾದರೂ ಭಿನ್ನವಾಗಿ ಆಲೋಚಿಸಲು ಶುರು ಮಾಡಿದ್ದರು. ಬದುಕು ಇಷ್ಟೇನಾ, ಹಾಗಿದ್ದ ಮೇಲೆ ಈ ಜಗಳ, ಈ ದ್ವೇಷ, ಈ ತಾರತಮ್ಯ ಏಕೆ ಎಂಬುದು ಅದರ ತಿರುಳಾಗಿತ್ತು. ಆದರೆ ಎಲ್ಲರೂ ಗಾಬರಿಗೊಳ್ಳುವ ಹಾಗೆ ನಮ್ಮ ಬಹುತೇಕ ಮಾಧ್ಯಮಗಳು ಇನ್ನಷ್ಟು ಉಲ್ಟಾ ದಿಕ್ಕಿನಲ್ಲಿ ಹೊರಟಿದ್ದವು.

ಕೊರೊನಾ ಸೋಂಕನ್ನು ಧರ್ಮವೊಂದಕ್ಕೆ ತಳುಕುಹಾಕಲು ಹೊರಟಾಗಲೇ ಮೊದಲ ಗಂಟೆ ಮೊಳಗಿತ್ತು. ದೇಶಕ್ಕೆ ದೇಶವೇ ದಿಗ್ಭ್ರಾಂತವಾಗಿ ಹೊಸಪರಿಸ್ಥಿತಿಗೆ ಹೊಂದಿಕೊಳ್ಳಲು ಒದ್ದಾಡುತ್ತಿದ್ದರೆ, ಬಡವರು ಬೀದಿಯ ಮೇಲೆ ಬಂದರೆ ಅವರನ್ನು ಬಡಿಯಲು ಪೊಲೀಸರ ಮೇಲೆ ಒತ್ತಡ ಹಾಕುವುದರಲ್ಲಿ ಮಾಧ್ಯಮಗಳು ನಿರತವಾಗಿದ್ದವು. ಮತ್ತೀಗ ದೇಶ ಕಳೆದೊಂದು ಶತಮಾನದಲ್ಲೇ ಅತೀ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಅದಕ್ಕೆ ಕೇಂದ್ರ ಸರ್ಕಾರವು ಒಂದು ಮೋಸದ ಪ್ಯಾಕೇಜನ್ನು ಬಿಡುಗಡೆ ಮಾಡಿದೆ; ಅದನ್ನು ಕನಿಷ್ಠ ವಿಮರ್ಶಾತ್ಮಕವಾಗಿ ನೋಡುವ ಕೆಲಸವನ್ನೂ ಬಹುತೇಕ ಮಾಧ್ಯಮಗಳು ಮಾಡಲಿಲ್ಲ. ಈ ಮೂರು ಸಂಗತಿಗಳು ಕಡೆಯ ಮೂರು ಬೆಲ್‍ಗಳು ಬಡಿದ ಹಾಗೆ ಎಂದು ದೇಶದ ಪ್ರಜ್ಞಾವಂತ ಸಮಾಜ ಭಾವಿಸಬೇಕಿತ್ತು; ಭಾವಿಸಿಯೂ ಇದೆ.

ಹೀಗಾಗಿಯೇ ಪರ್ಯಾಯ ಮಾಧ್ಯಮದ ಚರ್ಚೆಯೂ ಈ ಅವಧಿಯಲ್ಲಿ ಆರಂಭವಾಯಿತು. ಅದೇ ಕೆಲಸದಲ್ಲಿ ನಿರತರಾಗಿದ್ದ ಗೌರಿ ಮೀಡಿಯಾ ತಂಡವೂ ಅದಕ್ಕೆ ಪ್ರತಿಕ್ರಿಯಿಸುವುದರ ಭಾಗವಾಗಿ ಹೊಸ ಮಾಧ್ಯಮದ ಕುರಿತಾದ ತನ್ನ ಪರಿಕಲ್ಪನೆಯ ಪ್ರಸ್ತಾಪವೊಂದನ್ನು ಮುಂದಿಟ್ಟಿತು. ನ್ಯಾಯಪಥ ಮತ್ತು ನಾನುಗೌರಿ.ಕಾಂನಲ್ಲಿ ಪ್ರಕಟವಾದ ಆ ಪರಿಕಲ್ಪನೆಗೆ ಸಾಕಷ್ಟು ಪ್ರತಿಕ್ರಿಯೆಗಳು ಬಂದವು. ನಮ್ಮ ಬಳಗದಲ್ಲಿನ ಉಮೇದು ನಮಗೂ ಉತ್ಸಾಹ ತಂದಿತು.

ಆ ಬರಹದಲ್ಲಿ ಮುಖ್ಯವಾಹಿನಿ ಮಾಧ್ಯಮ ಎಂದು ಬಳಸಿದ್ದು ಕೆಲವರಲ್ಲಿ ಗೊಂದಲ ಮೂಡಿಸಿತ್ತು. ಇನ್ನೊಂದು ಚಾನೆಲ್ ಆರಂಭಿಸುವುದು ಅಥವಾ ದೊಡ್ಡ ರಾಜ್ಯ ಮಟ್ಟದ ಪತ್ರಿಕೆಯನ್ನು ತರುವುದು ಸಾಧ್ಯವೇ ಎಂಬುದು ಆ ಗೊಂದಲಕ್ಕೆ ಕಾರಣವಾಗಿತ್ತು. ಚಾನೆಲ್ ಅಥವಾ ದೊಡ್ಡ ಪತ್ರಿಕೆ ಯಾರಾದರೂ ಮಾಡಿದರೆ ಅದಕ್ಕೆ ನಮ್ಮ ತಕರಾರೇನೂ ಇಲ್ಲ; ಆದರೆ ನಮ್ಮ ಪರಿಕಲ್ಪನೆಯ ಮುಖ್ಯವಾಹಿನಿ ಮಾಧ್ಯಮ ಅದಲ್ಲ ಎಂದು ಸ್ಪಷ್ಟಪಡಿಸಬೇಕಾಗಿ ಬಂದಿತು. ಮುಖ್ಯವಾಹಿನಿ ಎಂದಾಗ ಕಣ್ಣಮುಂದೆ ಬರುವ ಕಲ್ಪನೆಯು ಹಾಗೇ ಇರುತ್ತದಾದ್ದರಿಂದ, ಅದು ನನ್ನ ಬರಹದಲ್ಲೇ ಇದ್ದ ಸಮಸ್ಯೆಯಾಗಿತ್ತು ಎಂಬುದನ್ನು ವಿನಮ್ರವಾಗಿ ಒಪ್ಪಿಕೊಳ್ಳಬಯಸುತ್ತೇನೆ.

ಹೊಸ ಮುಖ್ಯವಾಹಿನಿ ಎಂದರೆ ಜನಸಾಮಾನ್ಯರೆಲ್ಲರೂ ತಮ್ಮದೆಂದು ಭಾವಿಸಿ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮಾಧ್ಯಮದ ಹೊಸರೂಪವಾಗಿರುತ್ತದೆ. ನೂರಾರು ಸಣ್ಣ ಪ್ರಯತ್ನಗಳು ಸ್ವಾಯತ್ತವಾಗಿ ಉಳಿದುಕೊಂಡೂ ಸಮಷ್ಟಿಯಾಗಿ ಸಮಷ್ಟಿ ಹಿತಕ್ಕಾಗಿ ಕೆಲಸ ಮಾಡುವ ಸಂಘಟನಾ ರೂಪ ಹಾಗೂ ಉದ್ದೇಶ ಹೊಂದಿರುತ್ತವೆ.

ಈ ಕುರಿತು ನಮ್ಮ ಪತ್ರಿಕಾ ಬಳಗದಲ್ಲೂ ಚರ್ಚೆ ಶುರುವಾಗಿದ್ದು, ಇನ್ನೊಂದೆರಡು ವಾರಗಳಲ್ಲಿ ಅಂತಿಮಗೊಳ್ಳಲಿದೆ. ಅದನ್ನು ನಿಮ್ಮೆಲ್ಲರ ಮುಂದಿಡಲಾಗುತ್ತದೆ. ಎಲ್ಲರೂ ಮುಕ್ತವಾದ ಚರ್ಚೆ ನಡೆಸೋಣ. ಅಲ್ಲಿಂದಾಚೆಗೆ ನಾವೆಲ್ಲರೂ ಜೊತೆಗೂಡಿ ಈ ಕಾಲದ ಬಹುಮುಖ್ಯ ಅಗತ್ಯವಾದ ಹೊಸ ಮಾಧ್ಯಮವನ್ನು ಕಟ್ಟುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲಿದ್ದೇವೆ ಎಂಬ ವಿಶ್ವಾಸ ನಮಗಂತೂ ಇದೆ. ಕಡೆಯ ಮೂರು ಗಂಟೆ ಹೊಡೆದ ಮೇಲೂ ನಮ್ಮ ಕೆಲಸಕ್ಕೆ ಚಾಲನೆ ಕೊಡದಿದ್ದರೆ ಹೇಗೆ, ಅಲ್ಲವೇ?


ಇದನ್ನು ಓದಿ: ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...