Homeಮುಖಪುಟಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ...

ಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ ನೂತನ ಸಿಎಂ

- Advertisement -
- Advertisement -

ಒಡಿಶಾದ ನೂತನ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದಕ್ಕೆ ಸಿಲುಕಿದ್ದಾರೆ. 1999ರಲ್ಲಿ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಹತ್ಯೆಗೈದ ಆರೋಪದಲ್ಲಿ ಶಿಕ್ಷೆಗೊಳಗಾದ ಭಜರಂಗದಳ ಕಾರ್ಯಕರ್ತ ದಾರಾ ಸಿಂಗ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಸುದರ್ಶನ್ ಟಿವಿಯ ಸಂಪಾದಕ ಸುರೇಶ್ ಚವ್ಹಾಂಕೆ ಅವರ ಜೊತೆಗೆ ಭಾಗಿಯಾಗಿದ್ದರು.

ಇಸ್ಲಾಮೋಫೋಬಿಯಾಕ್ಕೆ ಹೆಸರುವಾಸಿಯಾಗಿರುವ ಚವ್ಹಾಂಕೆ ದಾರಾ ಸಿಂಗ್‌ನನ್ನು ಬಿಡುಗಡೆ ಮಾಡುವಂತೆ ಅಭಿಯಾನವನ್ನು ನಡೆಸಿದ್ದಾರೆ. ಸೆಪ್ಟೆಂಬರ್ 2022ರಲ್ಲಿ, ಕಿಯೋಂಜಾರ್ ಜೈಲಿನಲ್ಲಿ ಸಿಂಗ್ ಅವರನ್ನು ಭೇಟಿ ಮಾಡಲು ಚವ್ಹಾಂಕೆಗೆ ಅನುಮತಿ ನಿರಾಕರಿಸಲಾಗಿದೆ, ಅದರ ನಂತರ ಸುದರ್ಶನ್ ಟಿವಿ ಸಂಪಾದಕ ಮತ್ತು ಮಾಝಿ ಸೇರಿದಂತೆ ಅವರ ಜೊತೆಗಿದ್ದ ಬಿಜೆಪಿ ನಾಯಕರು ಜೈಲು ಅಧಿಕಾರಿಗಳ ವಿರುದ್ಧ ಧರಣಿ ನಡೆಸಿದ್ದರು.

1999ರ ಜನವರಿ 22ರ ರಾತ್ರಿ ಮನೋಹರಪುರದಲ್ಲಿ ಜಂಗಲ್ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಲಾಗಿತ್ತು. ಬಿಜೆಪಿ ಜೊತೆ  ಸಂಬಂಧ ಹೊಂದಿರುವ ಬಲಪಂಥೀಯ ಬಜರಂಗದಳದ ಕಾರ್ಯಕರ್ತರ ಗುಂಪು ಈ ಕೃತ್ಯವನ್ನು ಎಸಗಿತ್ತು.

ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಿದ್ದ ತಂಡದಲ್ಲಿದ್ದ ದಾರಾ ಸಿಂಗ್ ಬಿಜೆಪಿಯ ಸದಸ್ಯನಾಗಿದ್ದ. ಆತ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಾಗಿದ್ದ. ಗೋ ಸುರಕ್ಷಾ ಸಮಿತಿಯ ಸಕ್ರಿಯ ಸದಸ್ಯನಾಗಿದ್ದ ಈತ 1998ರ ಚುನಾವಣೆಯ ಸಮಯದಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ರ್ಯಾಲಿಗಳಲ್ಲಿ ತೊಡಗಿಸಿಕೊಂಡಿದ್ದ. ಇದಲ್ಲದೆ 1991ರ ಚುನಾವಣೆಯ ಸಮಯದಲ್ಲಿ ಪಾಟ್ನಾದಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದ. ಹಿಂದುತ್ವದ ಬಲವಾದ ಪ್ರತಿಪಾದಕನಾಗಿದ್ದ.

ದನದ ವ್ಯಾಪಾರಿಗಳನ್ನು ಟಾರ್ಗೆಟ್‌ ಮಾಡಿ ದುಷ್ಕೃತ್ಯ ನಡೆಸುತ್ತಿದ್ದ ಗಂಗಾನದಿ ಬಯಲು ಪ್ರದೇಶದ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್, ಕುಷ್ಠರೋಗದ ಸಂತ್ರಸ್ತರ ಸೇವೆ ಮಾಡುತ್ತಿದ್ದ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೈನ್ಸ್(58) ಮತ್ತು ಅವನ ಇಬ್ಬರು ಮಕ್ಕಳಾದ ಫಿಲಿಪ್ (10) ಮತ್ತು ತಿಮೋತಿ(6) ಅವರನ್ನು ಜೀವಂತ ಸುಟ್ಟು ಹಾಕಿದ್ದ. ಈ ಘಟನೆ 1999ರ ಜನವರಿ 21-22ರಾತ್ರಿ ವೇಳೆ ನಡೆದಿದೆ. ಘಟನೆ ನಡೆದು ಇಂದಿಗೆ 25 ವರ್ಷವಾಗಿದೆ. ಪ್ರಕರಣದಲ್ಲಿ ದಾರಾ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯ ಈ ಪ್ರಕರಣದಲ್ಲಿ ಕೊಲೆಗಾರನ ಸಿದ್ದಾಂತವನ್ನು ಅರ್ಥಮಾಡಿಕೊಂಡಿಲ್ಲ ಎಂದು ಕ್ರಿಶ್ಚಿಯನ್ ಸಮುದಾಯವು ಹೇಳಿಕೊಂಡಿತ್ತು.

ಆಸ್ಟ್ರೇಲಿಯಾದಿಂದ ಒರಿಸ್ಸಾ(ಒಡಿಶಾ)ಗೆ ಬಂದು ನೆಲೆಸಿದ್ದ ಗ್ರಹನ್ ಸ್ಟೇನ್ಸ್ ಸ್ಥಳೀಯ ಭಾಷೆ ಕಲಿತು ಕುಷ್ಠರೋಗಿಗಳ ಸೇವೆ ಮಾಡುತ್ತಿದ್ದರು. ರಾಜ್ಯದ ಮಯೂರ್‌ ಬಂಜ್ ಎಂಬ ಊರಿನಲ್ಲಿ ಕುಷ್ಠರೋಗಿಗಳ ಚಿಕಿತ್ಸೆಗಾಗಿ ಒಂದು ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಇವರು ಎರಡನೇ ಮದರ್ ತೆರೇಸಾ ಎಂದು ಕೂಡ ಕರೆಯಲ್ಪಟ್ಟಿದ್ದರು. ಗ್ರಹನ್ ಸ್ಟೇನ್ಸ್ ಹತ್ಯೆ ಘಟನೆಯನ್ನು ಅಂದಿನ ಭಾರತದ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ರಾಷ್ಟ್ರಕ್ಕೆ ಕಪ್ಪು ಚುಕ್ಕೆ ಎಂದು ಕರೆದಿದ್ದರು.

2003ರಲ್ಲಿ ಖೋರ್ಧಾದ ವಿಚಾರಣಾ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ಸಿಂಗ್‌ಗೆ ಮರಣದಂಡನೆ ವಿಧಿಸಿತ್ತು. ಇತರ 12 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಒಡಿಶಾ ಹೈಕೋರ್ಟ್ ಸಿಂಗ್ ಅವರ ಮರಣದಂಡನೆಯನ್ನು ಜೀವಾವಧಿಗೆ ಪರಿವರ್ತಿಸಿತ್ತು.

ಇದನ್ನು ಓದಿ: ಪೋಕ್ಸೋ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಹೈಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್‌ಗೆ ದೆಹಲಿ ಹೈಕೋರ್ಟಿನಿಂದ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿನ ನಡೆದಿದೆ ಎನ್ನಲಾದ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ಕುರಿತು, ಕಾಂಗ್ರೆಸ್ ಸಂಸದೀಯ...

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ...

ಶಿಕ್ಷಣ ಸಂಸ್ಥೆಗಳು ‘ಕೋಮುವಾದದ ಪ್ರಯೋಗಶಾಲೆʼಗಳಾಗಲು ಅವಕಾಶ ನೀಡುವುದಿಲ್ಲ: ಕೇರಳ ಸರ್ಕಾರ

ಶಾಲೆಗಳಲ್ಲಿ ಕ್ರಿಸ್‌ಮಸ್‌ ಆಚರಣೆಗೆ ಹಿಂದುತ್ವ ಗುಂಪುಗಳು ಅಡ್ಡಿಪಡಿಸುತ್ತಿವೆ ಎಂಬ ಆರೋಪದ ಕುರಿತು ಕೇರಳದ ಶಿಕ್ಷಣ ಸಚಿವ ಶಿವನ್ ಕುಟ್ಟಿ ಭಾನುವಾರ (ಡಿ.22) ಪ್ರತಿಕ್ರಿಯಿಸಿದ್ದು, ಶಿಕ್ಷಣ ಸಂಸ್ಥೆಗಳು ಕೋಮುವಾದದ ಪ್ರಯೋಗ ಶಾಲೆಗಳಾಗಲು ಅವಕಾಶ ನೀಡುವುದಿಲ್ಲ...

ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

ರಷ್ಯಾ ಪರವಾಗಿ ಹೋರಾಡಿದ ಆರೋಪದ ಮೇಲೆ ಪ್ರಸ್ತುತ ಉಕ್ರೇನಿಯನ್ ಬಂಧನದಲ್ಲಿರುವ ಗುಜರಾತ್‌ನ ಮೊರ್ಬಿ ಜಿಲ್ಲೆಯ 23 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಿಡುಗಡೆ ಮಾಡಿ, ಸಹಾಯ ಮಾಡುವಂತೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ...

ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ

ತಮಿಳುನಾಡಿನ ಕರೂರ್ ಜಿಲ್ಲೆಯ ತೋಗಮಲೈ ಬಳಿಯ ಪಂಚಾಯತ್ ಯೂನಿಯನ್ ಮಧ್ಯಮ ಶಾಲೆಯಲ್ಲಿ, ಮುಖ್ಯಮಂತ್ರಿಗಳ ಉಪಾಹಾರ ಯೋಜನೆ (ಸಿಎಮ್‌ಬಿಎಸ್) ಅಡಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳೆಯನ್ನು ಕೆಲಸದಿಂದ ತೆಗೆದುಹಾಕಲಾಗಿದ ಎಂದು 'ನ್ಯೂ ಇಂಡಿಯನ್...

ಬಾಂಗ್ಲಾ ಉದ್ವಿಗ್ನತೆ: ಮತ್ತೊಬ್ಬ ಯುವ ನಾಯಕ ಮುಹಮ್ಮದ್ ಮೊತಾಲೆಬ್ ಸಿಕ್ದಾರ್ ಮೇಲೆ ಗುಂಡಿನ ದಾಳಿ 

ದೇಶದಲ್ಲಿ ವ್ಯಾಪಕ ಅಶಾಂತಿಗೆ ಕಾರಣವಾದ ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಬಿನ್ ಹಾದಿ ಅವರ ಮರಣದ ಕೆಲವು ದಿನಗಳ ನಂತರ, ಸೋಮವಾರ ಮತ್ತೊಬ್ಬ ನಾಯಕನ ಮೇಲೆ ಗುಂಡು ಹಾರಿಸಲಾಯಿತು. ಗಾಯಗೊಂಡ...

ಕೇರಳ |ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿ : ಸಿಪಿಐ(ಎಂ) ನಾಯಕರಿಂದ ಆರೋಪ

ಕೇರಳದಲ್ಲಿ ಪಾಲಕ್ಕಾಡ್‌ನಲ್ಲಿ ನಡೆದ ಛತ್ತೀಸ್‌ಗಢದ ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯರ್ತರು ಭಾಗಿಯಾಗಿದ್ದಾರೆ ಎಂದು ಆಡಳಿತರೂಢ ಸಿಪಿಐ(ಎಂ) ನಾಯಕರು ಆರೋಪಿಸಿದ್ದಾರೆ. ಸ್ಥಳೀಯ ಸ್ವ-ಆಡಳಿತ ಸಚಿವ ಎಂ.ಬಿ ರಾಜೇಶ್ ಆರಂಭದಲ್ಲಿ ಈ ಆರೋಪ ಮಾಡಿದ್ದು,...

‘ಹಿಂದೂಸ್ತಾನಿ ಅವಾಮ್ ಮೋರ್ಚಾಕ್ಕೆ ರಾಜ್ಯಸಭಾ ಸೀಟು ನೀಡಿ’: ದಲಿತ ನಾಯಕ ಜಿತನ್ ರಾಮ್ ಮಾಂಝಿ ಬೇಡಿಕೆ

ಬಿಹಾರ: ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಉಸ್ತುವಾರಿ ಜಿತನ್ ರಾಮ್ ಮಾಂಝಿ ಅವರು 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಹಾರದಲ್ಲಿ NDA ಮೈತ್ರಿಕೂಟದ ಭಾಗವಾಗಿ ನೀಡಿದ ಭರವಸೆಗಳನ್ನು ನೆನಪಿಸಿಕೊಂಡು...

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ...