Homeಮುಖಪುಟಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ...

ಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ ನೂತನ ಸಿಎಂ

- Advertisement -
- Advertisement -

ಒಡಿಶಾದ ನೂತನ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದಕ್ಕೆ ಸಿಲುಕಿದ್ದಾರೆ. 1999ರಲ್ಲಿ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಹತ್ಯೆಗೈದ ಆರೋಪದಲ್ಲಿ ಶಿಕ್ಷೆಗೊಳಗಾದ ಭಜರಂಗದಳ ಕಾರ್ಯಕರ್ತ ದಾರಾ ಸಿಂಗ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಸುದರ್ಶನ್ ಟಿವಿಯ ಸಂಪಾದಕ ಸುರೇಶ್ ಚವ್ಹಾಂಕೆ ಅವರ ಜೊತೆಗೆ ಭಾಗಿಯಾಗಿದ್ದರು.

ಇಸ್ಲಾಮೋಫೋಬಿಯಾಕ್ಕೆ ಹೆಸರುವಾಸಿಯಾಗಿರುವ ಚವ್ಹಾಂಕೆ ದಾರಾ ಸಿಂಗ್‌ನನ್ನು ಬಿಡುಗಡೆ ಮಾಡುವಂತೆ ಅಭಿಯಾನವನ್ನು ನಡೆಸಿದ್ದಾರೆ. ಸೆಪ್ಟೆಂಬರ್ 2022ರಲ್ಲಿ, ಕಿಯೋಂಜಾರ್ ಜೈಲಿನಲ್ಲಿ ಸಿಂಗ್ ಅವರನ್ನು ಭೇಟಿ ಮಾಡಲು ಚವ್ಹಾಂಕೆಗೆ ಅನುಮತಿ ನಿರಾಕರಿಸಲಾಗಿದೆ, ಅದರ ನಂತರ ಸುದರ್ಶನ್ ಟಿವಿ ಸಂಪಾದಕ ಮತ್ತು ಮಾಝಿ ಸೇರಿದಂತೆ ಅವರ ಜೊತೆಗಿದ್ದ ಬಿಜೆಪಿ ನಾಯಕರು ಜೈಲು ಅಧಿಕಾರಿಗಳ ವಿರುದ್ಧ ಧರಣಿ ನಡೆಸಿದ್ದರು.

1999ರ ಜನವರಿ 22ರ ರಾತ್ರಿ ಮನೋಹರಪುರದಲ್ಲಿ ಜಂಗಲ್ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಲಾಗಿತ್ತು. ಬಿಜೆಪಿ ಜೊತೆ  ಸಂಬಂಧ ಹೊಂದಿರುವ ಬಲಪಂಥೀಯ ಬಜರಂಗದಳದ ಕಾರ್ಯಕರ್ತರ ಗುಂಪು ಈ ಕೃತ್ಯವನ್ನು ಎಸಗಿತ್ತು.

ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಿದ್ದ ತಂಡದಲ್ಲಿದ್ದ ದಾರಾ ಸಿಂಗ್ ಬಿಜೆಪಿಯ ಸದಸ್ಯನಾಗಿದ್ದ. ಆತ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಾಗಿದ್ದ. ಗೋ ಸುರಕ್ಷಾ ಸಮಿತಿಯ ಸಕ್ರಿಯ ಸದಸ್ಯನಾಗಿದ್ದ ಈತ 1998ರ ಚುನಾವಣೆಯ ಸಮಯದಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ರ್ಯಾಲಿಗಳಲ್ಲಿ ತೊಡಗಿಸಿಕೊಂಡಿದ್ದ. ಇದಲ್ಲದೆ 1991ರ ಚುನಾವಣೆಯ ಸಮಯದಲ್ಲಿ ಪಾಟ್ನಾದಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದ. ಹಿಂದುತ್ವದ ಬಲವಾದ ಪ್ರತಿಪಾದಕನಾಗಿದ್ದ.

ದನದ ವ್ಯಾಪಾರಿಗಳನ್ನು ಟಾರ್ಗೆಟ್‌ ಮಾಡಿ ದುಷ್ಕೃತ್ಯ ನಡೆಸುತ್ತಿದ್ದ ಗಂಗಾನದಿ ಬಯಲು ಪ್ರದೇಶದ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್, ಕುಷ್ಠರೋಗದ ಸಂತ್ರಸ್ತರ ಸೇವೆ ಮಾಡುತ್ತಿದ್ದ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೈನ್ಸ್(58) ಮತ್ತು ಅವನ ಇಬ್ಬರು ಮಕ್ಕಳಾದ ಫಿಲಿಪ್ (10) ಮತ್ತು ತಿಮೋತಿ(6) ಅವರನ್ನು ಜೀವಂತ ಸುಟ್ಟು ಹಾಕಿದ್ದ. ಈ ಘಟನೆ 1999ರ ಜನವರಿ 21-22ರಾತ್ರಿ ವೇಳೆ ನಡೆದಿದೆ. ಘಟನೆ ನಡೆದು ಇಂದಿಗೆ 25 ವರ್ಷವಾಗಿದೆ. ಪ್ರಕರಣದಲ್ಲಿ ದಾರಾ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯ ಈ ಪ್ರಕರಣದಲ್ಲಿ ಕೊಲೆಗಾರನ ಸಿದ್ದಾಂತವನ್ನು ಅರ್ಥಮಾಡಿಕೊಂಡಿಲ್ಲ ಎಂದು ಕ್ರಿಶ್ಚಿಯನ್ ಸಮುದಾಯವು ಹೇಳಿಕೊಂಡಿತ್ತು.

ಆಸ್ಟ್ರೇಲಿಯಾದಿಂದ ಒರಿಸ್ಸಾ(ಒಡಿಶಾ)ಗೆ ಬಂದು ನೆಲೆಸಿದ್ದ ಗ್ರಹನ್ ಸ್ಟೇನ್ಸ್ ಸ್ಥಳೀಯ ಭಾಷೆ ಕಲಿತು ಕುಷ್ಠರೋಗಿಗಳ ಸೇವೆ ಮಾಡುತ್ತಿದ್ದರು. ರಾಜ್ಯದ ಮಯೂರ್‌ ಬಂಜ್ ಎಂಬ ಊರಿನಲ್ಲಿ ಕುಷ್ಠರೋಗಿಗಳ ಚಿಕಿತ್ಸೆಗಾಗಿ ಒಂದು ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಇವರು ಎರಡನೇ ಮದರ್ ತೆರೇಸಾ ಎಂದು ಕೂಡ ಕರೆಯಲ್ಪಟ್ಟಿದ್ದರು. ಗ್ರಹನ್ ಸ್ಟೇನ್ಸ್ ಹತ್ಯೆ ಘಟನೆಯನ್ನು ಅಂದಿನ ಭಾರತದ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ರಾಷ್ಟ್ರಕ್ಕೆ ಕಪ್ಪು ಚುಕ್ಕೆ ಎಂದು ಕರೆದಿದ್ದರು.

2003ರಲ್ಲಿ ಖೋರ್ಧಾದ ವಿಚಾರಣಾ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ಸಿಂಗ್‌ಗೆ ಮರಣದಂಡನೆ ವಿಧಿಸಿತ್ತು. ಇತರ 12 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಒಡಿಶಾ ಹೈಕೋರ್ಟ್ ಸಿಂಗ್ ಅವರ ಮರಣದಂಡನೆಯನ್ನು ಜೀವಾವಧಿಗೆ ಪರಿವರ್ತಿಸಿತ್ತು.

ಇದನ್ನು ಓದಿ: ಪೋಕ್ಸೋ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಹೈಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...