Homeಮುಖಪುಟದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ಈಗ ಕೊರೊನಾದಿಂದಾಗಿ ಜೀವನೋಪಾಯ ಕಳೆದುಕೊಂಡ ನಂತರ ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, 1,000 ಕೋಟಿ ರೂ.ಗಳ ಸಂಸತ್ತನ್ನು ಯಾರಿಗಾಗಿ ನಿರ್ಮಿಸುತ್ತಿದ್ದಿರಿ..?

- Advertisement -
- Advertisement -

ನಟ, ನಿರ್ದೇಶಕ, ರಾಜಕಾರಣಿ ಕಮಲ್ ಹಾಸನ್ 2021ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಇಂದಿನಿಂದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಪ್ರಚಾರ ಆರಂಭಿಸುವ ಮೊದಲು ಹೊಸ ಸಂಸತ್ತಿಗೆ ಅಡಿಗಲ್ಲು ಹಾಕಿರುವ ಪ್ರಧಾನಿ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ದೇಶದ ಆರ್ಥಿಕತೆ ತೀವ್ರ ಕುಸಿತ ಕಂಡಿರುವ ಈ ಸಮಯದಲ್ಲಿ ಇಂತಹ ಬೃಹತ್ ಮೊತ್ತದ ಹೊಸ ಸಂಸತ್ತು ನಿರ್ಮಾಣದ ಅರ್ಥವೇನು ಎಂದು ಮಕ್ಕಳ್​ ನೀದಿ ಮಯ್ಯಂ ಪಕ್ಷದ ಸಂಸ್ಥಾಪಕರಾದ ನಟ ಕಮಲ್​​ ಹಾಸನ್ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ಕಮಲ್ ಹಾಸನ್, “ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, ಕೊರೊನಾ ವೈರಸ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡಿರುವಾಗ 1,000 ಕೋಟಿ ವೆಚ್ಚದ ಹೊಸ ಸಂಸತ್ತು ಏಕೆ..?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಕಮಲ್ ಹಾಸನ್ ಚೀನಾದ ಮಹಾಗೋಡೆ ನಿರ್ಮಾಣದ ಉದಾಹರಣೆ ನೀಡಿದ್ದಾರೆ. “ಚೀನಾದ ಮಹಾಗೋಡೆಯ ನಿರ್ಮಾಣದಲ್ಲಿ ಸಾವಿರಾರು ಜನರು ಸಾವನ್ನಪ್ಪಿದಾಗ, ಈ ಗೋಡೆ ಜನರನ್ನು ರಕ್ಷಿಸಲು ಎಂದು ರಾಜರು ಹೇಳಿದರು. ಈಗ ಕೊರೊನಾದಿಂದಾಗಿ ಜೀವನೋಪಾಯ ಕಳೆದುಕೊಂಡ ನಂತರ ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, 1,000 ಕೋಟಿ ರೂ.ಗಳ ಸಂಸತ್ತನ್ನು ಯಾರಿಗಾಗಿ ನಿರ್ಮಿಸುತ್ತಿದ್ದಿರಿ..? ದಯವಿಟ್ಟು, ನನ್ನ ಗೌರವಾನ್ವಿತ ಚುನಾಯಿತ ಪ್ರಧಾನಿಗಳೇ ಉತ್ತರಿಸಿ ಎಂದು ಪ್ರಶ್ನಿಸಿದ್ದಾರೆ.

 

ರಾಷ್ಟ್ರ ರಾಜಧಾನಿಯಲ್ಲಿ ಸೆಂಟ್ರಲ್ ವಿಸ್ತಾದ 20,000 ಕೋಟಿ ಯೋಜನೆಯ ಕೇಂದ್ರಬಿಂದುವಾಗಿರುವ ಹೊಸ ಸಂಸತ್ ಕಟ್ಟಡಕ್ಕೆ ಡಿಸೆಂಬರ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅಡಿಗಲ್ಲು ಹಾಕಿದ್ದಾರೆ. ಆದರೆ, ಸಂಸತ್ ಭವನದ ನಿರ್ಮಾಣವನ್ನು ತಕ್ಷಣ ಪ್ರಾರಂಭಿಸಲು ಸಾಧ್ಯವಿಲ್ಲ. ಏಕೆಂದರೆ, ಈ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇನ್ನು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನೂ ಓದಿ: ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ತಮಿಳುನಾಡು ಚುನಾವಣೆ ಹಿನ್ನೆಲೆ, ಇಂದಿನಿಂದ 16ನೇ ತಾರೀಖಿನವರೆಗೆ ಸುದೀರ್ಘ ಪ್ರಚಾರದಲ್ಲಿ ಕಮಲ್ ಹಾಸನ್ ತೊಡಗಲಿದ್ದು, ಮಧುರೈ, ಥೇಣಿ, ದಿಂಡಿಗಲ್, ವಿರುಧುನಗರ್​, ತಿರುಣಲ್​ವೇಲಿ, ಟುಟುಕೊರಿನ್ ಹಾಗೂ ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಪ್ರಚಾರ ಮಾಡಲಿದ್ದಾರೆ.

ಕಮಲ್ ಹಾಸನ್ ಈ ಬಾರಿ ಸ್ಪರ್ಧಿಸುವ ಸಾಧ್ಯತೆಯಿದ್ದು, ಭ್ರಷ್ಟಾಚಾರ ನಿರ್ಮೂಲನೆ, ಉದ್ಯೋಗಗಳು, ಗ್ರಾಮ ಅಭಿವೃದ್ಧಿ ಮತ್ತು ಕುಡಿಯುವ ನೀರು ತಮ್ಮ ಪಕ್ಷದ  ಪ್ರಮುಖ ಯೋಜನೆಗಳನ್ನಾಗಿ ಮಾಡಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಕಮಲ್ ಪಕ್ಷವು ಸುಮಾರು 4 ಶೇಕಡಾ ಮತಗಳನ್ನು ಗಳಿಸಿದೆ.

ಮೊದಲಿನಿಂದಲೂ ಬಿಜೆಪಿ ವಿರುದ್ಧ ಟೀಕೆಗಳನ್ನು ಮಾಡುತ್ತ ಬಂದಿರುವ ನಟ ಕಮಲ್, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ, ಮುಂಬರುವ ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಎಂದು ಈ ಹಿಂದೆ ಹೇಳಿದ್ದಾರೆ.

ಈಗಾಗಲೇ ತಮಿಳುನಾಡು ರಾಜಕೀಯದಲ್ಲಿ ಚಿತ್ರರಂಗದ ಜೊತೆಗೆ ಐಎಎಸ್ ಅಧಿಕಾರಿಗಳು ಸೇರಿಕೊಂಡಿದ್ದಾರೆ. ಐಎಎಸ್ ಮಾಜಿ ಅಧಿಕಾರಿ ಸಸಿಕಾಂತ್ ಸೆಂಥಿಲ್, ಅಣ್ಣಾಮಲೈ ಸೇರಿಕೊಂಡರೇ, ಡಿಸೆಂಬರ್‌ 31 ರಂದು ಪಕ್ಷವನ್ನು ಅಧಿಕೃತ ಘೋಷಣೆ ಮಾಡುವುದಾಗಿ ರಜನಿಕಾಂತ್ ಹೇಳಿದ್ದಾರೆ. ಒಟ್ಟಾರೆ, ಈ ಬಾರಿಯ ತಮಿಳುನಾಡಿನ ವಿಧಾನಸಭಾ ಚುನಾವಣೆ ದೇಶದ ಗಮನ ಸೆಳೆಯಲಿದೆ.


ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...