Homeಮುಖಪುಟದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ಈಗ ಕೊರೊನಾದಿಂದಾಗಿ ಜೀವನೋಪಾಯ ಕಳೆದುಕೊಂಡ ನಂತರ ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, 1,000 ಕೋಟಿ ರೂ.ಗಳ ಸಂಸತ್ತನ್ನು ಯಾರಿಗಾಗಿ ನಿರ್ಮಿಸುತ್ತಿದ್ದಿರಿ..?

- Advertisement -
- Advertisement -

ನಟ, ನಿರ್ದೇಶಕ, ರಾಜಕಾರಣಿ ಕಮಲ್ ಹಾಸನ್ 2021ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಇಂದಿನಿಂದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಪ್ರಚಾರ ಆರಂಭಿಸುವ ಮೊದಲು ಹೊಸ ಸಂಸತ್ತಿಗೆ ಅಡಿಗಲ್ಲು ಹಾಕಿರುವ ಪ್ರಧಾನಿ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ದೇಶದ ಆರ್ಥಿಕತೆ ತೀವ್ರ ಕುಸಿತ ಕಂಡಿರುವ ಈ ಸಮಯದಲ್ಲಿ ಇಂತಹ ಬೃಹತ್ ಮೊತ್ತದ ಹೊಸ ಸಂಸತ್ತು ನಿರ್ಮಾಣದ ಅರ್ಥವೇನು ಎಂದು ಮಕ್ಕಳ್​ ನೀದಿ ಮಯ್ಯಂ ಪಕ್ಷದ ಸಂಸ್ಥಾಪಕರಾದ ನಟ ಕಮಲ್​​ ಹಾಸನ್ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ಕಮಲ್ ಹಾಸನ್, “ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, ಕೊರೊನಾ ವೈರಸ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡಿರುವಾಗ 1,000 ಕೋಟಿ ವೆಚ್ಚದ ಹೊಸ ಸಂಸತ್ತು ಏಕೆ..?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಕಮಲ್ ಹಾಸನ್ ಚೀನಾದ ಮಹಾಗೋಡೆ ನಿರ್ಮಾಣದ ಉದಾಹರಣೆ ನೀಡಿದ್ದಾರೆ. “ಚೀನಾದ ಮಹಾಗೋಡೆಯ ನಿರ್ಮಾಣದಲ್ಲಿ ಸಾವಿರಾರು ಜನರು ಸಾವನ್ನಪ್ಪಿದಾಗ, ಈ ಗೋಡೆ ಜನರನ್ನು ರಕ್ಷಿಸಲು ಎಂದು ರಾಜರು ಹೇಳಿದರು. ಈಗ ಕೊರೊನಾದಿಂದಾಗಿ ಜೀವನೋಪಾಯ ಕಳೆದುಕೊಂಡ ನಂತರ ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, 1,000 ಕೋಟಿ ರೂ.ಗಳ ಸಂಸತ್ತನ್ನು ಯಾರಿಗಾಗಿ ನಿರ್ಮಿಸುತ್ತಿದ್ದಿರಿ..? ದಯವಿಟ್ಟು, ನನ್ನ ಗೌರವಾನ್ವಿತ ಚುನಾಯಿತ ಪ್ರಧಾನಿಗಳೇ ಉತ್ತರಿಸಿ ಎಂದು ಪ್ರಶ್ನಿಸಿದ್ದಾರೆ.

 

ರಾಷ್ಟ್ರ ರಾಜಧಾನಿಯಲ್ಲಿ ಸೆಂಟ್ರಲ್ ವಿಸ್ತಾದ 20,000 ಕೋಟಿ ಯೋಜನೆಯ ಕೇಂದ್ರಬಿಂದುವಾಗಿರುವ ಹೊಸ ಸಂಸತ್ ಕಟ್ಟಡಕ್ಕೆ ಡಿಸೆಂಬರ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅಡಿಗಲ್ಲು ಹಾಕಿದ್ದಾರೆ. ಆದರೆ, ಸಂಸತ್ ಭವನದ ನಿರ್ಮಾಣವನ್ನು ತಕ್ಷಣ ಪ್ರಾರಂಭಿಸಲು ಸಾಧ್ಯವಿಲ್ಲ. ಏಕೆಂದರೆ, ಈ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇನ್ನು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನೂ ಓದಿ: ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ತಮಿಳುನಾಡು ಚುನಾವಣೆ ಹಿನ್ನೆಲೆ, ಇಂದಿನಿಂದ 16ನೇ ತಾರೀಖಿನವರೆಗೆ ಸುದೀರ್ಘ ಪ್ರಚಾರದಲ್ಲಿ ಕಮಲ್ ಹಾಸನ್ ತೊಡಗಲಿದ್ದು, ಮಧುರೈ, ಥೇಣಿ, ದಿಂಡಿಗಲ್, ವಿರುಧುನಗರ್​, ತಿರುಣಲ್​ವೇಲಿ, ಟುಟುಕೊರಿನ್ ಹಾಗೂ ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಪ್ರಚಾರ ಮಾಡಲಿದ್ದಾರೆ.

ಕಮಲ್ ಹಾಸನ್ ಈ ಬಾರಿ ಸ್ಪರ್ಧಿಸುವ ಸಾಧ್ಯತೆಯಿದ್ದು, ಭ್ರಷ್ಟಾಚಾರ ನಿರ್ಮೂಲನೆ, ಉದ್ಯೋಗಗಳು, ಗ್ರಾಮ ಅಭಿವೃದ್ಧಿ ಮತ್ತು ಕುಡಿಯುವ ನೀರು ತಮ್ಮ ಪಕ್ಷದ  ಪ್ರಮುಖ ಯೋಜನೆಗಳನ್ನಾಗಿ ಮಾಡಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಕಮಲ್ ಪಕ್ಷವು ಸುಮಾರು 4 ಶೇಕಡಾ ಮತಗಳನ್ನು ಗಳಿಸಿದೆ.

ಮೊದಲಿನಿಂದಲೂ ಬಿಜೆಪಿ ವಿರುದ್ಧ ಟೀಕೆಗಳನ್ನು ಮಾಡುತ್ತ ಬಂದಿರುವ ನಟ ಕಮಲ್, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ, ಮುಂಬರುವ ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಎಂದು ಈ ಹಿಂದೆ ಹೇಳಿದ್ದಾರೆ.

ಈಗಾಗಲೇ ತಮಿಳುನಾಡು ರಾಜಕೀಯದಲ್ಲಿ ಚಿತ್ರರಂಗದ ಜೊತೆಗೆ ಐಎಎಸ್ ಅಧಿಕಾರಿಗಳು ಸೇರಿಕೊಂಡಿದ್ದಾರೆ. ಐಎಎಸ್ ಮಾಜಿ ಅಧಿಕಾರಿ ಸಸಿಕಾಂತ್ ಸೆಂಥಿಲ್, ಅಣ್ಣಾಮಲೈ ಸೇರಿಕೊಂಡರೇ, ಡಿಸೆಂಬರ್‌ 31 ರಂದು ಪಕ್ಷವನ್ನು ಅಧಿಕೃತ ಘೋಷಣೆ ಮಾಡುವುದಾಗಿ ರಜನಿಕಾಂತ್ ಹೇಳಿದ್ದಾರೆ. ಒಟ್ಟಾರೆ, ಈ ಬಾರಿಯ ತಮಿಳುನಾಡಿನ ವಿಧಾನಸಭಾ ಚುನಾವಣೆ ದೇಶದ ಗಮನ ಸೆಳೆಯಲಿದೆ.


ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....