Homeಚಳವಳಿನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಡಿಸೆಂಬರ್ 12 ರಿಂದ ದೆಹಲಿ-ಜೈಪುರ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ರೈತ ಸಂಘಗಳು ಎಚ್ಚರಿಸಿವೆ.

- Advertisement -
- Advertisement -

ನೂತನ ಸಂಸತ್ ಭವನ ನಿರ್ಮಾಣಕ್ಕೆ ಕಾರ್ಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅಡಿಗಲ್ಲು ಹಾಕಿದ್ದಾರೆ.  ಇಂಡಿಯಾ ಗೇಟ್ ಬಳಿ ದೆಹಲಿಯ ಹೃದಯಭಾಗದಲ್ಲಿ ಹೊಸ ಸಂಸತ್ ಕಟ್ಟಡದ ಭೂಮಿಪೂಜೆಯನ್ನು ನೆರವೇರಿಸಿರುವ ಪ್ರಧಾನಿ ಮೋದಿ, ನಂತರ ಅಡಿಗಲ್ಲು ಹಾಕಿದ್ದಾರೆ.

ಸಂಸತ್ತಿನ ಹೊಸ ಕಟ್ಟಡವು 20,000 ಕೋಟಿ ರೂಪಾಯಿಗಳ ಸೆಂಟ್ರಲ್ ವಿಸ್ತಾ ಯೋಜನೆಯ ಪ್ರಮುಖ ಭಾಗವಾಗಿದೆ. ತ್ರಿಕೋನ ಆಕಾರದಲ್ಲಿ ನಿರ್ಮಾಣವಾಗಲಿರುವ ಸಂಸತ್ ಭವನದ ಜತೆಗೆ ಕೇಂದ್ರೀಯ ಸಚಿವಾಲಯಗಳು ಮತ್ತು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ 3 ಕಿ.ಮೀ ಉದ್ದದ ರಾಜ್‌ಪತ್‌ ಮಾರ್ಗವನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಭೂಮಿ ಪೂಜೆ ಸಮಾರಂಭವು ಮಧ್ಯಾಹ್ನ 12:55 ಕ್ಕೆ ನಡೆಯಿತು. ಮಧ್ಯಾಹ್ನ 1 ಗಂಟೆಗೆ ಸಂಸತ್ ಭವನಕ್ಕೆ ಅಡಿಪಾಯ ಹಾಕಲಾಗಿದೆ.

ಆದರೆ, ಪ್ರಧಾನಿಯವರೇ ಅಡಿಗಲ್ಲು ಹಾಕಿದರು ಕೂಡ ಸಂಸತ್ ಭವನದ ನಿರ್ಮಾಣವನ್ನು ತಕ್ಷಣ ಪ್ರಾರಂಭಿಸಲು ಸಾಧ್ಯವಿಲ್ಲ. ಏಕೆಂದರೆ, ಈ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇನ್ನು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನೂ ಓದಿ: ಸೆಂಟ್ರಲ್ ವಿಸ್ತಾ ಹೊಸ ಸಂಸತ್ ಭವನಕ್ಕೆ ಡಿಸೆಂಬರ್‌ನಲ್ಲಿ ಪ್ರಧಾನಿಯಿಂದ ಅಡಿಪಾಯ!

ಉದ್ದೇಶಿತ ನಾಲ್ಕು ಅಂತಸ್ತಿನ ಕಟ್ಟಡವು 64,500 ಚದರ ಮೀಟರ್ ವಿಸ್ತೀರ್ಣದಲ್ಲಿದ್ದು, ಅಂದಾಜು 971 ಕೋಟಿ ರೂಪಾಯಿ ವೆಚ್ಚವಾಗುತ್ತದೆ. ಆಗಸ್ಟ್ 2022 ರಲ್ಲಿ ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ನಿರ್ಮಾಣವು ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಇತ್ತ, ದೆಹಲಿಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ದೆಹಲಿಯ ಗಡಿಯಲ್ಲಿ ಟ್ರಾಫಿಕ್ ಜಾಮ್‌ಗಳು ಮುಂದುವರೆದಿವೆ. ನಿನ್ನೆ ಕೇಂದ್ರ ಸರ್ಕಾರ ಕಳುಹಿಸಿದ್ದ ವಿವಾದಿತ ಕೃಷಿ ಕಾನೂನುಗಳ ಬದಲಾವಣೆಯ ಪ್ರಸ್ತಾಪವನ್ನು ರೈತರು ನಿರಾಕರಿಸಿದ್ದಾರೆ.

ಹರಿಯಾಣಕ್ಕೆ ಹೋಗುವ ಮತ್ತು ಅಲ್ಲಿಂದ ಪ್ರಯಾಣಿಸುವ ಪ್ರಯಾಣಿಕರು ದೌರಾಲಾ, ಕಪಶೇರಾ, ಬದುಸರೈ, ರಾಜೋಕ್ರಿ ಎನ್ಎಚ್ -8, ಬಿಜ್ವಾಸನ್, ಪಾಲಂ ವಿಹಾರ್ ಮತ್ತು ದುಂಡಾಹೇರಾ ಗಡಿಗಳಲ್ಲಿ ಒಂದೇ ಮಾರ್ಗ ಬಳಸಬಹುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಡಿಸೆಂಬರ್ 12 ರಿಂದ ದೆಹಲಿ-ಜೈಪುರ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ರೈತ ಸಂಘಗಳು ಎಚ್ಚರಿಸಿವೆ. ಜೊತೆಗೆ ನರೇಂದ್ರ ಮೋದಿ ಸರ್ಕಾರ ಉತ್ತೇಜನ ನೀಡುತ್ತಿರುವ ಅಂಬಾನಿಯ ರಿಲೆಯನ್ಸ್ ಉತ್ಪನ್ನಗಳ ವಿರುದ್ಧ ಕರೆ ನೀಡಿದ್ದ ಬಾಯ್ಕಾಟ್ ಅಭಿಯಾನಕ್ಕೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ದೇಶದ ಅನ್ನದಾತರು ರಸ್ತೆಗೆ ಬಂದು ನ್ಯಾಯಕ್ಕಾಗಿ ಆಗ್ರಹಿಸುತ್ತಿರುವಾಗ, ಹಸಿವು, ಬಡತನ ದೇಶದಲ್ಲಿ ತಾಂಡವವಾಡುತ್ತಿರುವಾಗ ನೂತನ ಭವನಕ್ಕೆ ಕೋಟ್ಯಂತರ ರೂಪಾಯಿ ವ್ಯಯಿಸುತ್ತಿರುವ ಕುರಿತು ಆಕ್ರೋಶ ಕೂಡ ವ್ಯಕ್ತವಾಗಿದೆ.

ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು, ’ಹೊಸ ಸಂಸತ್ ಭವನದ ಶುಭಾಷಯಗಳು!!
ಎಲ್ಲಾ ರಾಜಕೀಯ ಮುಖಂಡರಿಗೆ ಮತ್ತು ವಿಶೇಷವಾಗಿ ಸರ್ಕಾರಕ್ಕೆ ನಾಚಿಕೆಯಾಗಬೇಕು. ಸುಪ್ರೀಂ ಕೋರ್ಟ್ ನಿಷೇಧಿಸಿದ ನಂತರವೂ ಉದ್ಘಾಟನೆ ಮಾಡುವವರಿಗೆ ನಾಚಿಕೆಯಾಗಬೇಕು’ ಎಂದಿದ್ದಾರೆ.


ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...