Homeಚಳವಳಿನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಡಿಸೆಂಬರ್ 12 ರಿಂದ ದೆಹಲಿ-ಜೈಪುರ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ರೈತ ಸಂಘಗಳು ಎಚ್ಚರಿಸಿವೆ.

- Advertisement -
- Advertisement -

ನೂತನ ಸಂಸತ್ ಭವನ ನಿರ್ಮಾಣಕ್ಕೆ ಕಾರ್ಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅಡಿಗಲ್ಲು ಹಾಕಿದ್ದಾರೆ.  ಇಂಡಿಯಾ ಗೇಟ್ ಬಳಿ ದೆಹಲಿಯ ಹೃದಯಭಾಗದಲ್ಲಿ ಹೊಸ ಸಂಸತ್ ಕಟ್ಟಡದ ಭೂಮಿಪೂಜೆಯನ್ನು ನೆರವೇರಿಸಿರುವ ಪ್ರಧಾನಿ ಮೋದಿ, ನಂತರ ಅಡಿಗಲ್ಲು ಹಾಕಿದ್ದಾರೆ.

ಸಂಸತ್ತಿನ ಹೊಸ ಕಟ್ಟಡವು 20,000 ಕೋಟಿ ರೂಪಾಯಿಗಳ ಸೆಂಟ್ರಲ್ ವಿಸ್ತಾ ಯೋಜನೆಯ ಪ್ರಮುಖ ಭಾಗವಾಗಿದೆ. ತ್ರಿಕೋನ ಆಕಾರದಲ್ಲಿ ನಿರ್ಮಾಣವಾಗಲಿರುವ ಸಂಸತ್ ಭವನದ ಜತೆಗೆ ಕೇಂದ್ರೀಯ ಸಚಿವಾಲಯಗಳು ಮತ್ತು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ 3 ಕಿ.ಮೀ ಉದ್ದದ ರಾಜ್‌ಪತ್‌ ಮಾರ್ಗವನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಭೂಮಿ ಪೂಜೆ ಸಮಾರಂಭವು ಮಧ್ಯಾಹ್ನ 12:55 ಕ್ಕೆ ನಡೆಯಿತು. ಮಧ್ಯಾಹ್ನ 1 ಗಂಟೆಗೆ ಸಂಸತ್ ಭವನಕ್ಕೆ ಅಡಿಪಾಯ ಹಾಕಲಾಗಿದೆ.

ಆದರೆ, ಪ್ರಧಾನಿಯವರೇ ಅಡಿಗಲ್ಲು ಹಾಕಿದರು ಕೂಡ ಸಂಸತ್ ಭವನದ ನಿರ್ಮಾಣವನ್ನು ತಕ್ಷಣ ಪ್ರಾರಂಭಿಸಲು ಸಾಧ್ಯವಿಲ್ಲ. ಏಕೆಂದರೆ, ಈ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇನ್ನು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನೂ ಓದಿ: ಸೆಂಟ್ರಲ್ ವಿಸ್ತಾ ಹೊಸ ಸಂಸತ್ ಭವನಕ್ಕೆ ಡಿಸೆಂಬರ್‌ನಲ್ಲಿ ಪ್ರಧಾನಿಯಿಂದ ಅಡಿಪಾಯ!

ಉದ್ದೇಶಿತ ನಾಲ್ಕು ಅಂತಸ್ತಿನ ಕಟ್ಟಡವು 64,500 ಚದರ ಮೀಟರ್ ವಿಸ್ತೀರ್ಣದಲ್ಲಿದ್ದು, ಅಂದಾಜು 971 ಕೋಟಿ ರೂಪಾಯಿ ವೆಚ್ಚವಾಗುತ್ತದೆ. ಆಗಸ್ಟ್ 2022 ರಲ್ಲಿ ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ನಿರ್ಮಾಣವು ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಇತ್ತ, ದೆಹಲಿಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ದೆಹಲಿಯ ಗಡಿಯಲ್ಲಿ ಟ್ರಾಫಿಕ್ ಜಾಮ್‌ಗಳು ಮುಂದುವರೆದಿವೆ. ನಿನ್ನೆ ಕೇಂದ್ರ ಸರ್ಕಾರ ಕಳುಹಿಸಿದ್ದ ವಿವಾದಿತ ಕೃಷಿ ಕಾನೂನುಗಳ ಬದಲಾವಣೆಯ ಪ್ರಸ್ತಾಪವನ್ನು ರೈತರು ನಿರಾಕರಿಸಿದ್ದಾರೆ.

ಹರಿಯಾಣಕ್ಕೆ ಹೋಗುವ ಮತ್ತು ಅಲ್ಲಿಂದ ಪ್ರಯಾಣಿಸುವ ಪ್ರಯಾಣಿಕರು ದೌರಾಲಾ, ಕಪಶೇರಾ, ಬದುಸರೈ, ರಾಜೋಕ್ರಿ ಎನ್ಎಚ್ -8, ಬಿಜ್ವಾಸನ್, ಪಾಲಂ ವಿಹಾರ್ ಮತ್ತು ದುಂಡಾಹೇರಾ ಗಡಿಗಳಲ್ಲಿ ಒಂದೇ ಮಾರ್ಗ ಬಳಸಬಹುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಡಿಸೆಂಬರ್ 12 ರಿಂದ ದೆಹಲಿ-ಜೈಪುರ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ರೈತ ಸಂಘಗಳು ಎಚ್ಚರಿಸಿವೆ. ಜೊತೆಗೆ ನರೇಂದ್ರ ಮೋದಿ ಸರ್ಕಾರ ಉತ್ತೇಜನ ನೀಡುತ್ತಿರುವ ಅಂಬಾನಿಯ ರಿಲೆಯನ್ಸ್ ಉತ್ಪನ್ನಗಳ ವಿರುದ್ಧ ಕರೆ ನೀಡಿದ್ದ ಬಾಯ್ಕಾಟ್ ಅಭಿಯಾನಕ್ಕೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ದೇಶದ ಅನ್ನದಾತರು ರಸ್ತೆಗೆ ಬಂದು ನ್ಯಾಯಕ್ಕಾಗಿ ಆಗ್ರಹಿಸುತ್ತಿರುವಾಗ, ಹಸಿವು, ಬಡತನ ದೇಶದಲ್ಲಿ ತಾಂಡವವಾಡುತ್ತಿರುವಾಗ ನೂತನ ಭವನಕ್ಕೆ ಕೋಟ್ಯಂತರ ರೂಪಾಯಿ ವ್ಯಯಿಸುತ್ತಿರುವ ಕುರಿತು ಆಕ್ರೋಶ ಕೂಡ ವ್ಯಕ್ತವಾಗಿದೆ.

ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು, ’ಹೊಸ ಸಂಸತ್ ಭವನದ ಶುಭಾಷಯಗಳು!!
ಎಲ್ಲಾ ರಾಜಕೀಯ ಮುಖಂಡರಿಗೆ ಮತ್ತು ವಿಶೇಷವಾಗಿ ಸರ್ಕಾರಕ್ಕೆ ನಾಚಿಕೆಯಾಗಬೇಕು. ಸುಪ್ರೀಂ ಕೋರ್ಟ್ ನಿಷೇಧಿಸಿದ ನಂತರವೂ ಉದ್ಘಾಟನೆ ಮಾಡುವವರಿಗೆ ನಾಚಿಕೆಯಾಗಬೇಕು’ ಎಂದಿದ್ದಾರೆ.


ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...