Homeಕರ್ನಾಟಕನೂತನ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ (55) ಕೊರೊನಾದಿಂದ ನಿಧನ

ನೂತನ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ (55) ಕೊರೊನಾದಿಂದ ನಿಧನ

ರಾಜ್ಯಸಭೆಯಲ್ಲಿ ಕನ್ನಡ ಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದರು

- Advertisement -
- Advertisement -

ಜುಲೈ ತಿಂಗಳಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಜೆಪಿ ಸಂಸದ ಅಶೋಕ್ ಗಸ್ತಿ (55) ಕೊರೊನಾದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ 15 ದಿನಗಳಿಂದ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅಶೋಕ್‌ ಗಸ್ತಿ ರಾಯಚೂರು ಜಿಲ್ಲೆಯವರಾಗಿದ್ದು, ಈ ಹಿಂದೆ ಬಳ್ಳಾರಿ ಜಿಲ್ಲೆಯ ಪಕ್ಷದ ಉಸ್ತುವಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಬಿಜೆಪಿ ಪಕ್ಷದಲ್ಲಿ ಸರಿ ಸುಮಾರು ಮೂವತ್ತು ವರ್ಷದಿಂದ ದುಡಿಯುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಸ್ಥಿತಿ ಗಂಭೀರ: ಕರ್ನಾಟಕ ಬಿಜೆಪಿ ಸ್ಪಷ್ಟನೆ

ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಲೋಕಸಭಾ ಮಾಜಿ ಸದಸ್ಯ ರಮೇಶ್ ಕತ್ತಿ ಮತ್ತು ಹೋಟೆಲ್ ಉದ್ಯಮಿ ಪ್ರಕಾಶ್ ಶೆಟ್ಟಿ ಒಟ್ಟು ಮೂರು ಹೆಸರುಗಳನ್ನು ರಾಜ್ಯ ಬಿಜೆಪಿ ಘಟಕವು ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಗಳಾಗಿ ಆಯ್ಕೆ ಮಾಡಿ ಪಕ್ಷದ ಉನ್ನತ ನಾಯಕರಿಗೆ ಶಿಫಾರಸು ಮಾಡಿತ್ತು. ಆದರೆ ಬಿಜೆಪಿ ಹೈಕಮಾಂಡ್ ಈ ಎಲ್ಲಾ ಮೂರು ಹೆಸರುಗಳನ್ನು ತಿರಸ್ಕರಿಸಿ ಅಶೋಕ್‌ ಗಸ್ತಿ ಮತ್ತು ರಣ್ಣಾ ಕಡಾಡಿ ಅವರನ್ನು ಆಯ್ಕೆ ಮಾಡಿ ಅಚ್ಚರಿ ಮೂಡಿಸಿತ್ತು.

ಅವರ ನಿಧನಕ್ಕೆ ಆರೋಗ್ಯ  ಸಚಿವ ಬಿ. ಶ್ರೀರಾಮುಲು ಟ್ವೀಟ್ ಮಾಡಿದ್ದು, “ಅಶೋಕ್ ಗಸ್ತಿ ಅವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು ತೀವ್ರ ದುಃಖ ನೀಡಿದೆ. ಅವರು ಕಳೆದ 15 ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ.” ಎಂದು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ಖರ್ಗೆ, ದೇವೇಗೌಡರು ಸೇರಿ ನಾಲ್ವರ ಅವಿರೋಧ ಆಯ್ಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...