Homeಕರೋನಾ ತಲ್ಲಣಬ್ರಿಟನ್‌ನಲ್ಲಿ ಹೊಸ ಕೊರೊನಾ ವೈರಸ್ ಪತ್ತೆ: ಯುಕೆ ವಿಮಾನಗಳನ್ನು ನಿರ್ಬಂಧಿಸಿದ ಭಾರತ

ಬ್ರಿಟನ್‌ನಲ್ಲಿ ಹೊಸ ಕೊರೊನಾ ವೈರಸ್ ಪತ್ತೆ: ಯುಕೆ ವಿಮಾನಗಳನ್ನು ನಿರ್ಬಂಧಿಸಿದ ಭಾರತ

ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿ. 31ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತೀಯ ಸರ್ಕಾರ ನಿರ್ಧರಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. 

- Advertisement -
- Advertisement -

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿದ್ದು, ಇಡೀ ವಿಶ್ವದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದೆ. ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಭಾರತದ ವಿಮಾನಯಾನ ಸಚಿವಾಲಯ ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆದೇಶಿಸಿದೆ.

ತೀವ್ರವಾಗಿ ಹಬ್ಬುತ್ತಿರುವ ಹೊಸ ಕೊರೊನಾ ವೈರಸ್ ಹಿನ್ನೆಲೆ, ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತೀಯ ಸರ್ಕಾರ ನಿರ್ಧರಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ಹೊಸ ಸ್ವರೂಪದ ವೈರಸ್, ಮೂಲ ವೈರಸ್‌ಗಿಂತ 70 ರಷ್ಟು ಹೆಚ್ಚು ವೇಗವಾಗಿ ಹರಡುತ್ತಿರುವ ಕಾರಣ ಹಲವು ದೇಶಗಳು ಕೂಡ ಬ್ರಿಟನ್‌ಗೆ ವಿಮಾನಯಾನವನ್ನು ನಿರ್ಬಂಧಿಸಿವೆ.

ಇದನ್ನೂ ಓದಿ: 1 ಕೋಟಿ ದಾಟಿದ ಕೊರೊನಾ ಪ್ರಕರಣಗಳು! – ಪ್ರಧಾನಿ ಹೇಳಿಕೆ ಸುಳ್ಳಾಗಿದೆ ಎಂದ ರಾಹುಲ್ ಗಾಂಧಿ

ಇಂದು ಬೆಳಗ್ಗೆ ಈ ವೈರಸ್ ಕುರಿತು ಚರ್ಚೆ ನಡೆಸಲು ಕೇಂದ್ರ ಆರೋಗ್ಯ ಸಚಿವಾಲಯ ತುರ್ತು ಸಭೆ ನಡೆಸಿತ್ತು. ನಂತರ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್, ಆತಂಕ ಪಡುವ ಅಗತ್ಯವಿಲ್ಲ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಿದೆ ಎಂದು ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಇಂಗ್ಲೆಂಡ್‌ ಸರ್ಕಾರ ಈಗಾಗಲೇ ನಾಲ್ಕನೇ ಹಂತದ ಲಾಕ್‌ಡೌನ್ ಘೋಷಿಸಿ, ಜನರನ್ನು ಮನೆಯಲ್ಲಿಯೇ ಇರುವಂತೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಮತ್ತೊಂದು ಅಲೆ ಆರಂಭವಾಗಿರುವ ಬ್ರಿಟೀಷ್​ ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಲಿದೆ ಎನ್ನಲಾಗುತ್ತಿದೆ.

ಅಲ್ಲದೆ, ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ನಿಯಂತ್ರಣದಲ್ಲಿಲ್ಲ. ಅದರ ಹರಡುವಿಕೆಯ ವೇಗ ತೀವ್ರವಾಗಿದೆ. ಈ ಹಿನ್ನೆಲೆ ಈಗ ದೇಶದಲ್ಲಿ ಹೇರಲಾಗಿರುವ ಲಾಕ್‌ಡೌನ್ ತಿಂಗಳುಗಳವರೆಗೆ ಉಳಿಯಬಹುದು ಎಂದು ಬ್ರಿಟನ್ ಆರೋಗ್ಯ ಸಚಿವರು ಎಚ್ಚರಿಸಿದ್ದಾರೆ.

“ಲಕ್ಷಾಂತರ ಜನರು ಕ್ರಿಸ್ಮಸ್ ಯೋಜನೆಗಳನ್ನು ರದ್ದುಗೊಳಿಸಬೇಕು ಮತ್ತು ಭಾನುವಾರದಿಂದ ಮನೆಯಲ್ಲಿಯೇ ಇರಬೇಕು” ಎಂದು ಪ್ರಧಾನಿ ಬೋರಿಸ್ ಜಾನ್ಸನ್ ಕೂಡ ಪ್ರಕಟಣೆ ಹೊರಡಿಸಿದ್ದರು.

ಇದನ್ನೂ ಓದಿ: 60 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲು ಸಿದ್ದವಾಗಿರುವ ಭಾರತ

ಈಗಾಗಲೇ ಬೆಲ್ಜಿಯಂ, ಡೆನ್ಮಾರ್ಕ್, ಸ್ಪೇನ್ ಸೇರಿದಂತೆ ಹಲವು ದೇಶಗಳು ಯುಕೆಗೆ ವಿಮಾನಯಾನವನ್ನು ಬಂದ್ ಮಾಡಿದೆ. ಅಲ್ಲಿಗೆ ಹೋಗುವ ಮತ್ತು ಅಲ್ಲಿಂದ ವಾಪಸ್ ಬರುವ ವಿಮಾನಗಳ ಮೇಲೆ ನಿರ್ಬಂಧ ಹೇರಿವೆ. ಕೆನಡಾವು ಪ್ರಯಾಣಿಕರ ವಿಮಾನಯಾನವನ್ನು 72 ಗಂಟೆಗಳ ಕಾಲ ಸ್ಥಗಿತಗೊಳಿಸುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಯುಕೆಯಿಂದ ಬರುವ ಎಲ್ಲಾ ವಿಮಾನಗಳನ್ನು ತಕ್ಷಣ ನಿಷೇಧಿಸುವಂತೆ ಸರ್ಕಾರವನ್ನು ಕೋರಿದ್ದರು.

ಇಂಗ್ಲೆಂಡ್‌ನ ವಿಜ್ಞಾನಿಗಳು, ಕಳೆದ ಸೆಪ್ಟೆಂಬರ್‌ನಲ್ಲಿ ರೋಗಿಯೊಬ್ಬರಲ್ಲಿ ಹೊಸ ರೂಪದ ಕೊರೊನಾ ವೈರಸ್ ಅನ್ನು ಕಂಡು ಹಿಡಿದಿದ್ದರು. ಬ್ರಿಟನ್‌ನಲ್ಲಿ ನವೆಂಬರ್‌ ತಿಂಗಳಲ್ಲಿ ಹೆಚ್ಚಾದ ಕೊರೊನಾ ಪ್ರಕರಣಗಳಲ್ಲಿ ಈ ವೈರಸ್ ಹೆಚ್ಚಾಗಿದ್ದರಿಂದ ಡಿಸೆಂಬರ್ 11 ರಂದು ಸರ್ಕಾರಕ್ಕೆ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...