Homeಕರೋನಾ ತಲ್ಲಣಬ್ರಿಟನ್‌ನಲ್ಲಿ ಹೊಸ ಕೊರೊನಾ ವೈರಸ್ ಪತ್ತೆ: ಯುಕೆ ವಿಮಾನಗಳನ್ನು ನಿರ್ಬಂಧಿಸಿದ ಭಾರತ

ಬ್ರಿಟನ್‌ನಲ್ಲಿ ಹೊಸ ಕೊರೊನಾ ವೈರಸ್ ಪತ್ತೆ: ಯುಕೆ ವಿಮಾನಗಳನ್ನು ನಿರ್ಬಂಧಿಸಿದ ಭಾರತ

ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿ. 31ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತೀಯ ಸರ್ಕಾರ ನಿರ್ಧರಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. 

- Advertisement -
- Advertisement -

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿದ್ದು, ಇಡೀ ವಿಶ್ವದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದೆ. ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಭಾರತದ ವಿಮಾನಯಾನ ಸಚಿವಾಲಯ ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆದೇಶಿಸಿದೆ.

ತೀವ್ರವಾಗಿ ಹಬ್ಬುತ್ತಿರುವ ಹೊಸ ಕೊರೊನಾ ವೈರಸ್ ಹಿನ್ನೆಲೆ, ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತೀಯ ಸರ್ಕಾರ ನಿರ್ಧರಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ಹೊಸ ಸ್ವರೂಪದ ವೈರಸ್, ಮೂಲ ವೈರಸ್‌ಗಿಂತ 70 ರಷ್ಟು ಹೆಚ್ಚು ವೇಗವಾಗಿ ಹರಡುತ್ತಿರುವ ಕಾರಣ ಹಲವು ದೇಶಗಳು ಕೂಡ ಬ್ರಿಟನ್‌ಗೆ ವಿಮಾನಯಾನವನ್ನು ನಿರ್ಬಂಧಿಸಿವೆ.

ಇದನ್ನೂ ಓದಿ: 1 ಕೋಟಿ ದಾಟಿದ ಕೊರೊನಾ ಪ್ರಕರಣಗಳು! – ಪ್ರಧಾನಿ ಹೇಳಿಕೆ ಸುಳ್ಳಾಗಿದೆ ಎಂದ ರಾಹುಲ್ ಗಾಂಧಿ

ಇಂದು ಬೆಳಗ್ಗೆ ಈ ವೈರಸ್ ಕುರಿತು ಚರ್ಚೆ ನಡೆಸಲು ಕೇಂದ್ರ ಆರೋಗ್ಯ ಸಚಿವಾಲಯ ತುರ್ತು ಸಭೆ ನಡೆಸಿತ್ತು. ನಂತರ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್, ಆತಂಕ ಪಡುವ ಅಗತ್ಯವಿಲ್ಲ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಿದೆ ಎಂದು ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಇಂಗ್ಲೆಂಡ್‌ ಸರ್ಕಾರ ಈಗಾಗಲೇ ನಾಲ್ಕನೇ ಹಂತದ ಲಾಕ್‌ಡೌನ್ ಘೋಷಿಸಿ, ಜನರನ್ನು ಮನೆಯಲ್ಲಿಯೇ ಇರುವಂತೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಮತ್ತೊಂದು ಅಲೆ ಆರಂಭವಾಗಿರುವ ಬ್ರಿಟೀಷ್​ ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಲಿದೆ ಎನ್ನಲಾಗುತ್ತಿದೆ.

ಅಲ್ಲದೆ, ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ನಿಯಂತ್ರಣದಲ್ಲಿಲ್ಲ. ಅದರ ಹರಡುವಿಕೆಯ ವೇಗ ತೀವ್ರವಾಗಿದೆ. ಈ ಹಿನ್ನೆಲೆ ಈಗ ದೇಶದಲ್ಲಿ ಹೇರಲಾಗಿರುವ ಲಾಕ್‌ಡೌನ್ ತಿಂಗಳುಗಳವರೆಗೆ ಉಳಿಯಬಹುದು ಎಂದು ಬ್ರಿಟನ್ ಆರೋಗ್ಯ ಸಚಿವರು ಎಚ್ಚರಿಸಿದ್ದಾರೆ.

“ಲಕ್ಷಾಂತರ ಜನರು ಕ್ರಿಸ್ಮಸ್ ಯೋಜನೆಗಳನ್ನು ರದ್ದುಗೊಳಿಸಬೇಕು ಮತ್ತು ಭಾನುವಾರದಿಂದ ಮನೆಯಲ್ಲಿಯೇ ಇರಬೇಕು” ಎಂದು ಪ್ರಧಾನಿ ಬೋರಿಸ್ ಜಾನ್ಸನ್ ಕೂಡ ಪ್ರಕಟಣೆ ಹೊರಡಿಸಿದ್ದರು.

ಇದನ್ನೂ ಓದಿ: 60 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲು ಸಿದ್ದವಾಗಿರುವ ಭಾರತ

ಈಗಾಗಲೇ ಬೆಲ್ಜಿಯಂ, ಡೆನ್ಮಾರ್ಕ್, ಸ್ಪೇನ್ ಸೇರಿದಂತೆ ಹಲವು ದೇಶಗಳು ಯುಕೆಗೆ ವಿಮಾನಯಾನವನ್ನು ಬಂದ್ ಮಾಡಿದೆ. ಅಲ್ಲಿಗೆ ಹೋಗುವ ಮತ್ತು ಅಲ್ಲಿಂದ ವಾಪಸ್ ಬರುವ ವಿಮಾನಗಳ ಮೇಲೆ ನಿರ್ಬಂಧ ಹೇರಿವೆ. ಕೆನಡಾವು ಪ್ರಯಾಣಿಕರ ವಿಮಾನಯಾನವನ್ನು 72 ಗಂಟೆಗಳ ಕಾಲ ಸ್ಥಗಿತಗೊಳಿಸುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಯುಕೆಯಿಂದ ಬರುವ ಎಲ್ಲಾ ವಿಮಾನಗಳನ್ನು ತಕ್ಷಣ ನಿಷೇಧಿಸುವಂತೆ ಸರ್ಕಾರವನ್ನು ಕೋರಿದ್ದರು.

ಇಂಗ್ಲೆಂಡ್‌ನ ವಿಜ್ಞಾನಿಗಳು, ಕಳೆದ ಸೆಪ್ಟೆಂಬರ್‌ನಲ್ಲಿ ರೋಗಿಯೊಬ್ಬರಲ್ಲಿ ಹೊಸ ರೂಪದ ಕೊರೊನಾ ವೈರಸ್ ಅನ್ನು ಕಂಡು ಹಿಡಿದಿದ್ದರು. ಬ್ರಿಟನ್‌ನಲ್ಲಿ ನವೆಂಬರ್‌ ತಿಂಗಳಲ್ಲಿ ಹೆಚ್ಚಾದ ಕೊರೊನಾ ಪ್ರಕರಣಗಳಲ್ಲಿ ಈ ವೈರಸ್ ಹೆಚ್ಚಾಗಿದ್ದರಿಂದ ಡಿಸೆಂಬರ್ 11 ರಂದು ಸರ್ಕಾರಕ್ಕೆ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...