Homeಮುಖಪುಟನೈಜ ಸಮಸ್ಯೆಗಳ ಗಮನ ಬೇರೆಡೆ ಸೆಳೆಯಲು ಮೋದಿಯಿಂದ ಹೊಸ ತಂತ್ರ: ಕಾಂಗ್ರೆಸ್

ನೈಜ ಸಮಸ್ಯೆಗಳ ಗಮನ ಬೇರೆಡೆ ಸೆಳೆಯಲು ಮೋದಿಯಿಂದ ಹೊಸ ತಂತ್ರ: ಕಾಂಗ್ರೆಸ್

- Advertisement -
- Advertisement -

‘ಪ್ರಧಾನಿ ನರೇಂದ್ರ ಮೋದಿ ಅವರು ವಿಷಕಾರಿ ಭಾಷೆಯಲ್ಲಿ ಮಾತನಾಡುತ್ತಿದ್ದು, ಅವರು ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಹಲವಾರು ಹೊಸ ತಂತ್ರಗಳನ್ನು ಹೊಂದಿದ್ದಾರೆ. ಆದರೆ, ಸುಳ್ಳಿನ ವ್ಯವಹಾರದ ಅಂತ್ಯವು ಹತ್ತಿರದಲ್ಲಿದೆ’ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಭರವಸೆಗಳಲ್ಲಿ ಒಂದಾಗಿರುವ ‘ಸಂಪತ್ತಿನ ಮರುಹಂಚಿಕೆ’ ಘೋಷಣೆ ಬಗ್ಗೆ ಪ್ರಧಾನಿ ಮೋದಿ ಟೀಕೆಯ ವಿರುದ್ಧ ಕಾಂಗ್ರೆಸ್ ಭಾನುವಾರ ರಾತ್ರಿ ತಿರುಗೇಟು ನೀಡಿದೆ. “ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ “ನಿರಾಶೆ” ಎದುರಿಸಿದ ನಂತರ, ಪ್ರಧಾನಿ ಈಗ ಸುಳ್ಳನ್ನು ಆಶ್ರಯಿಸಿದ್ದಾರೆ; ನಿಜವಾದ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ತಿರುಗಿಸಲು “ದ್ವೇಷ ಭಾಷಣ” ಮಾಡುತ್ತಿದ್ದಾರೆ ಎಂದು ಆರೋಪಿಸಿದೆ.

ಏರುತ್ತಿರುವ ಬೆಲೆಗಳು ಮತ್ತು ನಿರುದ್ಯೋಗದ ಮೇಲೆ ಕೇಂದ್ರೀಕರಿಸುವ ಕಾಂಗ್ರೆಸ್‌ನ ಇತ್ತೀಚಿನ ಜಾಹೀರಾತನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, “ದೇಶದಲ್ಲಿ ನಿರುದ್ಯೋಗ ಮತ್ತು ಹಣದುಬ್ಬರವು ಉತ್ತುಂಗದಲ್ಲಿದೆ. ನರೇಂದ್ರ ಮೋದಿ ಅವರು ‘ಎಲ್ಲವೂ ಚೆನ್ನಾಗಿದೆ’ ಎಂದು ಹೇಳುತ್ತಾರೆ. ಅವರು (ಮೋದಿ) ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸಲು ಹಲವಾರು ಹೊಸ ತಂತ್ರಗಳನ್ನು ಹೊಂದಿದ್ದಾರೆ. ಆದರೆ, ಸುಳ್ಳಿನ ವ್ಯವಹಾರದ ಅಂತ್ಯವು ಹತ್ತಿರದಲ್ಲಿದೆ” ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

rahu

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದು, “ಪ್ರಧಾನಿ ಅವರು ಬಹಳಷ್ಟು ವಿಷಯಗಳ ಬಗ್ಗೆ ವಿಷಕಾರಿ ಭಾಷೆಯಲ್ಲಿ ಮಾತನಾಡುತ್ತಾರೆ. ಅವರು ಸರಳವಾದ ಪ್ರಶ್ನೆಗೂ ಉತ್ತರಿಸಬೇಕು. 1951 ರಿಂದ ಪ್ರತಿ ಹತ್ತು ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತಿದೆ. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಯ ನೈಜ ಡೇಟಾವನ್ನು ಬಹಿರಂಗಪಡಿಸುತ್ತದೆ. 2021 ರಲ್ಲಿ ಮಾಡಲಾಗಿತ್ತು. ಆದರೆ ಇಲ್ಲಿಯವರೆಗೆ ಮಾಡಿಲ್ಲ ಈ ಬಗ್ಗೆ ಪ್ರಧಾನಿ ಏಕೆ ಮೌನವಾಗಿದ್ದಾರೆ” ಅವರು ಪ್ರಶ್ನಿಸಿದ್ದಾರೆ.

ಇದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ನಾಶ ಮಾಡುವ ಷಡ್ಯಂತ್ರ ಎಂದು ರಮೇಶ್ ಆರೋಪಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮುಸ್ಲಿಮರಿಗೆ ಜನರ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ಅವರು ಸಲಹೆ ನೀಡಿದ ನಂತರ ಕಾಂಗ್ರೆಸ್ ತನ್ನ ದಾಳಿಯನ್ನು ಹೆಚ್ಚಿಸಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಇದೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿದೆ.

ರಾಜಸ್ಥಾನದ ಬನ್ಸ್ವಾರಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, “ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು “ನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ನೀಡಲು ಕಾಂಗ್ರೆಸ್ ಯೋಜಿಸಿದೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ; FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...