Homeಮುಖಪುಟಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

ಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

- Advertisement -
- Advertisement -

ಬ್ರಿಟನ್‌ನ ಭಾರತೀಯರು ಅಥವಾ ಆ ದೇಶದಲ್ಲಿ ನೆಲೆಸಿರುವ ಭಾರತೀಯರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ.52ರಷ್ಟು ಮಂದಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಭಾರತೀಯತೆಯನ್ನು ರಕ್ಷಿಸಲು ಪ್ರಯತ್ನಿಸುವ ಸಮುದಾಯ ನೇತೃತ್ವದ ಸಂಸ್ಥೆ ಎಂದು ಗುರುತಿಸಿಕೊಂಡಿರುವ ‘ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ’ ಬ್ರಿಟಿಷ್ ಭಾರತೀಯರಾದ 500 ಜನರ ಮೇಲೆ ಬ್ರಿಟನ್‌ನಲ್ಲಿ ಸಮೀಕ್ಷೆ ನಡೆಸಿದೆ. ಸಮೀಕ್ಷೆಗೆ ಒಳಗಾದವರಲ್ಲಿ ಶೇಕಡಾ 50ರಷ್ಟು ಹಿಂದೂಗಳು ಹಿಂದುತ್ವ ತತ್ವಗಳನ್ನು ತಿರಸ್ಕರಿಸಿದ್ದಾರೆ.

ಶೇ.50ರಷ್ಟು ಮಹಿಳೆಯರು ಮತ್ತು ಶೇ.50ರಷ್ಟು ಪುರುಷರ ಮೇಲೆ ಸಮೀಕ್ಷೇ ನಡೆಸಲಾಗಿದೆ. ಈ ಸಮೀಕ್ಷೆಗೆ ಒಳಗಾದವರಲ್ಲಿ 18 ರಿಂದ 44 ವರ್ಷ ವಯಸ್ಸಿನವರು 57%, ಹಿಂದೂಗಳು 43%, ಪದವೀದರರು 62% ಮತ್ತು ಬ್ರಿಟನ್‌ನಿಂದ ಹೊರಗೆ ಜನಿಸಿದವರು 56% ಇದ್ದಾರೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಜನರು ನಾಲ್ಕು ವರ್ಷಗಳವರೆಗೆ ಬ್ರಿಟನ್‌ನಲ್ಲಿ ವಾಸಿಸುತ್ತಿದ್ದರೆ, ಉಳಿದ ಅರ್ಧದಷ್ಟು ಜನರು ಕನಿಷ್ಠ ಐದು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದಾರೆ.

ಒಟ್ಟು ಪ್ರತಿಕ್ರಿಯಿಸಿದವರಲ್ಲಿ 35 ಶೇ. ಜನರು ಮೋದಿಯವರ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಮತ್ತು ಶೇ.52ರಷ್ಟು ಜನರು ನಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಹಿಂದೂಗಳಲ್ಲಿ, ಶೇ.57ರಷ್ಟು ಜನರು ಭಾರತದ ಪ್ರಧಾನಿಯ ಪರ ಒಲವು ತೋರಿದ್ದಾರೆ, ಆದರೆ ಶೇ. 71ರಷ್ಟು ಹಿಂದೂಯೇತರರು ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಭಾರತದಲ್ಲಿ ಜನಿಸಿದವರು, ವಯಸ್ಸಾದವರು ಮತ್ತು ಇಂಗ್ಲಿಷ್ ಮಾತನಾಡಲು ಬಾರದ ಮನೆಯಲ್ಲಿರುವವರು ಮೋದಿಯವರ ಬಗ್ಗೆ ಹೆಚ್ಚು ಒಲವು ತೋರಿದ್ದಾರೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಪ್ರಕಟಣೆಯಲ್ಲಿ ಹೇಳಿದೆ.

ಪುರುಷರಿಗಿಂತ ಹೆಚ್ಚು ಶೇ.34ರಷ್ಟು ಮಹಿಳೆಯರು ಮೋದಿಯವರ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.28ರಷ್ಟು ಪುರುಷರು ಮೋದಿ ಪರ ಮಾತನಾಡಿದ್ದಾರೆ.

ಭಾರತದ ಪಥ (ಭಾರತ ಮುನ್ನಡೆಯುತ್ತಿರುವ ಹಾದಿ)ದ ಬಗ್ಗೆ ಕೇಳಿದಾಗ, ಶೇ. 68ರಷ್ಟು ಹಿಂದೂಗಳು ಭಾರತವು ಸರಿಯಾದ ಹಾದಿಯಲ್ಲಿದೆ ಎಂದು ಹೇಳಿದ್ದಾರೆ. ಆದರೆ, ಶೇ. 73ರಷ್ಟು ಹಿಂದೂಯೇತರರು ಮತ್ತು ಶೇ. 81ರಷ್ಟು ಮುಸ್ಲಿಮರು ಇದನ್ನು ಒಪ್ಪಿಲ್ಲ.

ಸಮೀಕ್ಷೆಯ ಸಾರಾಂಶವು, ಉತ್ತರಿಸಿದ ಬಹುಪಾಲು ಜನರು “ಮೋದಿಯಿಂದ ಪ್ರಚಾರಗೊಂಡ ಧಾರ್ಮಿಕ ಹಿಂಸಾಚಾರವು ಬ್ರಿಟನ್‌ಗೆ ವ್ಯಾಪಿಸುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದೆ. ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಹಿಂದೂಗಳು, ಅಂದರೆ ಶೇ. 65ರಷ್ಟು ಜನರು ಸಂಬಂಧಿತ ಘಟನೆಗಳಿಗೆ ಮೋದಿಯನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ಇನ್ನು ಈ ಕುರಿತು ಶೇ.65ರಷ್ಟು ಜನರು 1ರಿಂದ 10ರೊಳಗಿನ ರೇಟಿಂಗ್ಸ್‌ನಲ್ಲಿ 8 ರೇಟಿಂಗ್ ನೀಡಿದ್ದಾರೆ. ಇದು ಗಂಭೀರ ಕಳವಳವನ್ನು ಸೂಚಿಸುತ್ತದೆ. 2022ರಲ್ಲಿ ಲೀಸೆಸ್ಟರ್‌ನಲ್ಲಿ ಹಿಂದೂ-ಮುಸ್ಲಿಮರ ನಡುವೆ ನಡೆದ ಹಿಂಸಾಚಾರವನ್ನು ಹೆಚ್ಚಿನ ಜನರು ಉಲ್ಲೇಖಿಸಿದ್ದಾರೆ.

ಈ ಸಮೀಕ್ಷೆಯು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಕಾರ್ಯಸೂಚಿಯನ್ನು ಇಡೀ ಬ್ರಿಟಿಷ್ ಭಾರತೀಯ ಸಮುದಾಯ ಬೆಂಬಲಿಸುತ್ತಿದೆ ಎಂಬ ಚಾಲ್ತಿಯಲ್ಲಿರುವ ನಂಬಿಕೆಯನ್ನು ಸುಳ್ಳಾಗಿಸಿದೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಹೇಳಿದೆ.

ಹಿಂದುತ್ವದ ಬಗೆಗಿನ ಧೋರಣೆಗಳು ಮತ್ತು ಭಾರತದ ಬಗ್ಗೆ ಕಾಳಜಿ

ಶೇ. 50ರಷ್ಟು ಹಿಂದೂ ಪ್ರತಿಕ್ರಿಯಿಸಿದವರು ಸೇರಿದಂತೆ ಬಹುಪಾಲು ಪ್ರತಿಕ್ರಿಯಿಸಿದವರು ತಾವು ಹಿಂದುತ್ವದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ತಿಳಿಸಿರುವುದಾಗಿ ಸಮೀಕ್ಷೆ ಹೇಳಿದೆ. ಹಿಂದುತ್ವದ ಕಡೆ ಒಲವು ಹೊಂದಿರುವವರಲ್ಲಿ ಹೆಚ್ಚಿನವರು ಪುರುಷರು, ಅವರು ಜಾತಿ, ಅರೇಂಜ್ ಮ್ಯಾರೇಜ್, ಗೋಮಾಂಸ ನಿಷೇಧ ಇತ್ಯಾದಿ ವಿಚಾರಗಳಲ್ಲಿ ಹಿಂದುತ್ವದ ಕಡೆ ಒಲವು ತೋರಿಸಿದ್ದಾರೆ.

ಪ್ರತಿಕ್ರಿಯಿಸಿದವರಲ್ಲಿ ಮೋದಿ ಪರವಾಗಿ ಒಲವು ತೋರಿಸದವರು ‘ಧಾರ್ಮಿಕ ಉದ್ವಿಗ್ನತೆ ಮತ್ತು ಪ್ರಜಾಪ್ರಭುತ್ವದ ನಿರ್ಬಂಧಗಳು ಭಾರತ ಎದುರಿಸುತ್ತಿದೆ’ ಎಂದು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ : ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...