Homeಮುಖಪುಟಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

ಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

- Advertisement -
- Advertisement -

ಬ್ರಿಟನ್‌ನ ಭಾರತೀಯರು ಅಥವಾ ಆ ದೇಶದಲ್ಲಿ ನೆಲೆಸಿರುವ ಭಾರತೀಯರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ.52ರಷ್ಟು ಮಂದಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಭಾರತೀಯತೆಯನ್ನು ರಕ್ಷಿಸಲು ಪ್ರಯತ್ನಿಸುವ ಸಮುದಾಯ ನೇತೃತ್ವದ ಸಂಸ್ಥೆ ಎಂದು ಗುರುತಿಸಿಕೊಂಡಿರುವ ‘ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ’ ಬ್ರಿಟಿಷ್ ಭಾರತೀಯರಾದ 500 ಜನರ ಮೇಲೆ ಬ್ರಿಟನ್‌ನಲ್ಲಿ ಸಮೀಕ್ಷೆ ನಡೆಸಿದೆ. ಸಮೀಕ್ಷೆಗೆ ಒಳಗಾದವರಲ್ಲಿ ಶೇಕಡಾ 50ರಷ್ಟು ಹಿಂದೂಗಳು ಹಿಂದುತ್ವ ತತ್ವಗಳನ್ನು ತಿರಸ್ಕರಿಸಿದ್ದಾರೆ.

ಶೇ.50ರಷ್ಟು ಮಹಿಳೆಯರು ಮತ್ತು ಶೇ.50ರಷ್ಟು ಪುರುಷರ ಮೇಲೆ ಸಮೀಕ್ಷೇ ನಡೆಸಲಾಗಿದೆ. ಈ ಸಮೀಕ್ಷೆಗೆ ಒಳಗಾದವರಲ್ಲಿ 18 ರಿಂದ 44 ವರ್ಷ ವಯಸ್ಸಿನವರು 57%, ಹಿಂದೂಗಳು 43%, ಪದವೀದರರು 62% ಮತ್ತು ಬ್ರಿಟನ್‌ನಿಂದ ಹೊರಗೆ ಜನಿಸಿದವರು 56% ಇದ್ದಾರೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಜನರು ನಾಲ್ಕು ವರ್ಷಗಳವರೆಗೆ ಬ್ರಿಟನ್‌ನಲ್ಲಿ ವಾಸಿಸುತ್ತಿದ್ದರೆ, ಉಳಿದ ಅರ್ಧದಷ್ಟು ಜನರು ಕನಿಷ್ಠ ಐದು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದಾರೆ.

ಒಟ್ಟು ಪ್ರತಿಕ್ರಿಯಿಸಿದವರಲ್ಲಿ 35 ಶೇ. ಜನರು ಮೋದಿಯವರ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಮತ್ತು ಶೇ.52ರಷ್ಟು ಜನರು ನಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಹಿಂದೂಗಳಲ್ಲಿ, ಶೇ.57ರಷ್ಟು ಜನರು ಭಾರತದ ಪ್ರಧಾನಿಯ ಪರ ಒಲವು ತೋರಿದ್ದಾರೆ, ಆದರೆ ಶೇ. 71ರಷ್ಟು ಹಿಂದೂಯೇತರರು ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಭಾರತದಲ್ಲಿ ಜನಿಸಿದವರು, ವಯಸ್ಸಾದವರು ಮತ್ತು ಇಂಗ್ಲಿಷ್ ಮಾತನಾಡಲು ಬಾರದ ಮನೆಯಲ್ಲಿರುವವರು ಮೋದಿಯವರ ಬಗ್ಗೆ ಹೆಚ್ಚು ಒಲವು ತೋರಿದ್ದಾರೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಪ್ರಕಟಣೆಯಲ್ಲಿ ಹೇಳಿದೆ.

ಪುರುಷರಿಗಿಂತ ಹೆಚ್ಚು ಶೇ.34ರಷ್ಟು ಮಹಿಳೆಯರು ಮೋದಿಯವರ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.28ರಷ್ಟು ಪುರುಷರು ಮೋದಿ ಪರ ಮಾತನಾಡಿದ್ದಾರೆ.

ಭಾರತದ ಪಥ (ಭಾರತ ಮುನ್ನಡೆಯುತ್ತಿರುವ ಹಾದಿ)ದ ಬಗ್ಗೆ ಕೇಳಿದಾಗ, ಶೇ. 68ರಷ್ಟು ಹಿಂದೂಗಳು ಭಾರತವು ಸರಿಯಾದ ಹಾದಿಯಲ್ಲಿದೆ ಎಂದು ಹೇಳಿದ್ದಾರೆ. ಆದರೆ, ಶೇ. 73ರಷ್ಟು ಹಿಂದೂಯೇತರರು ಮತ್ತು ಶೇ. 81ರಷ್ಟು ಮುಸ್ಲಿಮರು ಇದನ್ನು ಒಪ್ಪಿಲ್ಲ.

ಸಮೀಕ್ಷೆಯ ಸಾರಾಂಶವು, ಉತ್ತರಿಸಿದ ಬಹುಪಾಲು ಜನರು “ಮೋದಿಯಿಂದ ಪ್ರಚಾರಗೊಂಡ ಧಾರ್ಮಿಕ ಹಿಂಸಾಚಾರವು ಬ್ರಿಟನ್‌ಗೆ ವ್ಯಾಪಿಸುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದೆ. ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಹಿಂದೂಗಳು, ಅಂದರೆ ಶೇ. 65ರಷ್ಟು ಜನರು ಸಂಬಂಧಿತ ಘಟನೆಗಳಿಗೆ ಮೋದಿಯನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ಇನ್ನು ಈ ಕುರಿತು ಶೇ.65ರಷ್ಟು ಜನರು 1ರಿಂದ 10ರೊಳಗಿನ ರೇಟಿಂಗ್ಸ್‌ನಲ್ಲಿ 8 ರೇಟಿಂಗ್ ನೀಡಿದ್ದಾರೆ. ಇದು ಗಂಭೀರ ಕಳವಳವನ್ನು ಸೂಚಿಸುತ್ತದೆ. 2022ರಲ್ಲಿ ಲೀಸೆಸ್ಟರ್‌ನಲ್ಲಿ ಹಿಂದೂ-ಮುಸ್ಲಿಮರ ನಡುವೆ ನಡೆದ ಹಿಂಸಾಚಾರವನ್ನು ಹೆಚ್ಚಿನ ಜನರು ಉಲ್ಲೇಖಿಸಿದ್ದಾರೆ.

ಈ ಸಮೀಕ್ಷೆಯು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಕಾರ್ಯಸೂಚಿಯನ್ನು ಇಡೀ ಬ್ರಿಟಿಷ್ ಭಾರತೀಯ ಸಮುದಾಯ ಬೆಂಬಲಿಸುತ್ತಿದೆ ಎಂಬ ಚಾಲ್ತಿಯಲ್ಲಿರುವ ನಂಬಿಕೆಯನ್ನು ಸುಳ್ಳಾಗಿಸಿದೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಹೇಳಿದೆ.

ಹಿಂದುತ್ವದ ಬಗೆಗಿನ ಧೋರಣೆಗಳು ಮತ್ತು ಭಾರತದ ಬಗ್ಗೆ ಕಾಳಜಿ

ಶೇ. 50ರಷ್ಟು ಹಿಂದೂ ಪ್ರತಿಕ್ರಿಯಿಸಿದವರು ಸೇರಿದಂತೆ ಬಹುಪಾಲು ಪ್ರತಿಕ್ರಿಯಿಸಿದವರು ತಾವು ಹಿಂದುತ್ವದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ತಿಳಿಸಿರುವುದಾಗಿ ಸಮೀಕ್ಷೆ ಹೇಳಿದೆ. ಹಿಂದುತ್ವದ ಕಡೆ ಒಲವು ಹೊಂದಿರುವವರಲ್ಲಿ ಹೆಚ್ಚಿನವರು ಪುರುಷರು, ಅವರು ಜಾತಿ, ಅರೇಂಜ್ ಮ್ಯಾರೇಜ್, ಗೋಮಾಂಸ ನಿಷೇಧ ಇತ್ಯಾದಿ ವಿಚಾರಗಳಲ್ಲಿ ಹಿಂದುತ್ವದ ಕಡೆ ಒಲವು ತೋರಿಸಿದ್ದಾರೆ.

ಪ್ರತಿಕ್ರಿಯಿಸಿದವರಲ್ಲಿ ಮೋದಿ ಪರವಾಗಿ ಒಲವು ತೋರಿಸದವರು ‘ಧಾರ್ಮಿಕ ಉದ್ವಿಗ್ನತೆ ಮತ್ತು ಪ್ರಜಾಪ್ರಭುತ್ವದ ನಿರ್ಬಂಧಗಳು ಭಾರತ ಎದುರಿಸುತ್ತಿದೆ’ ಎಂದು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ : ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...