Homeಮುಖಪುಟಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

ಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

- Advertisement -
- Advertisement -

ಬ್ರಿಟನ್‌ನ ಭಾರತೀಯರು ಅಥವಾ ಆ ದೇಶದಲ್ಲಿ ನೆಲೆಸಿರುವ ಭಾರತೀಯರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ.52ರಷ್ಟು ಮಂದಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಭಾರತೀಯತೆಯನ್ನು ರಕ್ಷಿಸಲು ಪ್ರಯತ್ನಿಸುವ ಸಮುದಾಯ ನೇತೃತ್ವದ ಸಂಸ್ಥೆ ಎಂದು ಗುರುತಿಸಿಕೊಂಡಿರುವ ‘ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ’ ಬ್ರಿಟಿಷ್ ಭಾರತೀಯರಾದ 500 ಜನರ ಮೇಲೆ ಬ್ರಿಟನ್‌ನಲ್ಲಿ ಸಮೀಕ್ಷೆ ನಡೆಸಿದೆ. ಸಮೀಕ್ಷೆಗೆ ಒಳಗಾದವರಲ್ಲಿ ಶೇಕಡಾ 50ರಷ್ಟು ಹಿಂದೂಗಳು ಹಿಂದುತ್ವ ತತ್ವಗಳನ್ನು ತಿರಸ್ಕರಿಸಿದ್ದಾರೆ.

ಶೇ.50ರಷ್ಟು ಮಹಿಳೆಯರು ಮತ್ತು ಶೇ.50ರಷ್ಟು ಪುರುಷರ ಮೇಲೆ ಸಮೀಕ್ಷೇ ನಡೆಸಲಾಗಿದೆ. ಈ ಸಮೀಕ್ಷೆಗೆ ಒಳಗಾದವರಲ್ಲಿ 18 ರಿಂದ 44 ವರ್ಷ ವಯಸ್ಸಿನವರು 57%, ಹಿಂದೂಗಳು 43%, ಪದವೀದರರು 62% ಮತ್ತು ಬ್ರಿಟನ್‌ನಿಂದ ಹೊರಗೆ ಜನಿಸಿದವರು 56% ಇದ್ದಾರೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಜನರು ನಾಲ್ಕು ವರ್ಷಗಳವರೆಗೆ ಬ್ರಿಟನ್‌ನಲ್ಲಿ ವಾಸಿಸುತ್ತಿದ್ದರೆ, ಉಳಿದ ಅರ್ಧದಷ್ಟು ಜನರು ಕನಿಷ್ಠ ಐದು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದಾರೆ.

ಒಟ್ಟು ಪ್ರತಿಕ್ರಿಯಿಸಿದವರಲ್ಲಿ 35 ಶೇ. ಜನರು ಮೋದಿಯವರ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಮತ್ತು ಶೇ.52ರಷ್ಟು ಜನರು ನಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಹಿಂದೂಗಳಲ್ಲಿ, ಶೇ.57ರಷ್ಟು ಜನರು ಭಾರತದ ಪ್ರಧಾನಿಯ ಪರ ಒಲವು ತೋರಿದ್ದಾರೆ, ಆದರೆ ಶೇ. 71ರಷ್ಟು ಹಿಂದೂಯೇತರರು ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಭಾರತದಲ್ಲಿ ಜನಿಸಿದವರು, ವಯಸ್ಸಾದವರು ಮತ್ತು ಇಂಗ್ಲಿಷ್ ಮಾತನಾಡಲು ಬಾರದ ಮನೆಯಲ್ಲಿರುವವರು ಮೋದಿಯವರ ಬಗ್ಗೆ ಹೆಚ್ಚು ಒಲವು ತೋರಿದ್ದಾರೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಪ್ರಕಟಣೆಯಲ್ಲಿ ಹೇಳಿದೆ.

ಪುರುಷರಿಗಿಂತ ಹೆಚ್ಚು ಶೇ.34ರಷ್ಟು ಮಹಿಳೆಯರು ಮೋದಿಯವರ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.28ರಷ್ಟು ಪುರುಷರು ಮೋದಿ ಪರ ಮಾತನಾಡಿದ್ದಾರೆ.

ಭಾರತದ ಪಥ (ಭಾರತ ಮುನ್ನಡೆಯುತ್ತಿರುವ ಹಾದಿ)ದ ಬಗ್ಗೆ ಕೇಳಿದಾಗ, ಶೇ. 68ರಷ್ಟು ಹಿಂದೂಗಳು ಭಾರತವು ಸರಿಯಾದ ಹಾದಿಯಲ್ಲಿದೆ ಎಂದು ಹೇಳಿದ್ದಾರೆ. ಆದರೆ, ಶೇ. 73ರಷ್ಟು ಹಿಂದೂಯೇತರರು ಮತ್ತು ಶೇ. 81ರಷ್ಟು ಮುಸ್ಲಿಮರು ಇದನ್ನು ಒಪ್ಪಿಲ್ಲ.

ಸಮೀಕ್ಷೆಯ ಸಾರಾಂಶವು, ಉತ್ತರಿಸಿದ ಬಹುಪಾಲು ಜನರು “ಮೋದಿಯಿಂದ ಪ್ರಚಾರಗೊಂಡ ಧಾರ್ಮಿಕ ಹಿಂಸಾಚಾರವು ಬ್ರಿಟನ್‌ಗೆ ವ್ಯಾಪಿಸುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದೆ. ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಹಿಂದೂಗಳು, ಅಂದರೆ ಶೇ. 65ರಷ್ಟು ಜನರು ಸಂಬಂಧಿತ ಘಟನೆಗಳಿಗೆ ಮೋದಿಯನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ಇನ್ನು ಈ ಕುರಿತು ಶೇ.65ರಷ್ಟು ಜನರು 1ರಿಂದ 10ರೊಳಗಿನ ರೇಟಿಂಗ್ಸ್‌ನಲ್ಲಿ 8 ರೇಟಿಂಗ್ ನೀಡಿದ್ದಾರೆ. ಇದು ಗಂಭೀರ ಕಳವಳವನ್ನು ಸೂಚಿಸುತ್ತದೆ. 2022ರಲ್ಲಿ ಲೀಸೆಸ್ಟರ್‌ನಲ್ಲಿ ಹಿಂದೂ-ಮುಸ್ಲಿಮರ ನಡುವೆ ನಡೆದ ಹಿಂಸಾಚಾರವನ್ನು ಹೆಚ್ಚಿನ ಜನರು ಉಲ್ಲೇಖಿಸಿದ್ದಾರೆ.

ಈ ಸಮೀಕ್ಷೆಯು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಕಾರ್ಯಸೂಚಿಯನ್ನು ಇಡೀ ಬ್ರಿಟಿಷ್ ಭಾರತೀಯ ಸಮುದಾಯ ಬೆಂಬಲಿಸುತ್ತಿದೆ ಎಂಬ ಚಾಲ್ತಿಯಲ್ಲಿರುವ ನಂಬಿಕೆಯನ್ನು ಸುಳ್ಳಾಗಿಸಿದೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಹೇಳಿದೆ.

ಹಿಂದುತ್ವದ ಬಗೆಗಿನ ಧೋರಣೆಗಳು ಮತ್ತು ಭಾರತದ ಬಗ್ಗೆ ಕಾಳಜಿ

ಶೇ. 50ರಷ್ಟು ಹಿಂದೂ ಪ್ರತಿಕ್ರಿಯಿಸಿದವರು ಸೇರಿದಂತೆ ಬಹುಪಾಲು ಪ್ರತಿಕ್ರಿಯಿಸಿದವರು ತಾವು ಹಿಂದುತ್ವದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ತಿಳಿಸಿರುವುದಾಗಿ ಸಮೀಕ್ಷೆ ಹೇಳಿದೆ. ಹಿಂದುತ್ವದ ಕಡೆ ಒಲವು ಹೊಂದಿರುವವರಲ್ಲಿ ಹೆಚ್ಚಿನವರು ಪುರುಷರು, ಅವರು ಜಾತಿ, ಅರೇಂಜ್ ಮ್ಯಾರೇಜ್, ಗೋಮಾಂಸ ನಿಷೇಧ ಇತ್ಯಾದಿ ವಿಚಾರಗಳಲ್ಲಿ ಹಿಂದುತ್ವದ ಕಡೆ ಒಲವು ತೋರಿಸಿದ್ದಾರೆ.

ಪ್ರತಿಕ್ರಿಯಿಸಿದವರಲ್ಲಿ ಮೋದಿ ಪರವಾಗಿ ಒಲವು ತೋರಿಸದವರು ‘ಧಾರ್ಮಿಕ ಉದ್ವಿಗ್ನತೆ ಮತ್ತು ಪ್ರಜಾಪ್ರಭುತ್ವದ ನಿರ್ಬಂಧಗಳು ಭಾರತ ಎದುರಿಸುತ್ತಿದೆ’ ಎಂದು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ : ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...